ತಾಜಾ ಮಾವು, ಹಲಸು ಬೇಕಾ?ಮೇಳಕ್ಕೆ ಬನ್ನಿ;ಲಾಲ್‌ಬಾಗ್‌ನಲ್ಲಿ ಜೂ.13ರವರೆಗೆ ಪ್ರದರ್ಶನ, ಮಾರಾಟ

ಹಲಸಿನ ತಳಿಗಳು ವಿವಿಧ ಗಾತ್ರ, ಹಳದಿ, ಕೇಸರಿ, ಕೆಂಪು ಬಣ್ಣ ತೊಳೆಗಳು ಹಾಗೂ ಪ್ರಸಿದ್ಧ ತಳಿಗಳು ದೊರಕಲಿವೆ

Team Udayavani, May 27, 2022, 1:09 PM IST

ತಾಜಾ ಮಾವು, ಹಲಸು ಬೇಕಾ?ಮೇಳಕ್ಕೆ ಬನ್ನಿ;ಲಾಲ್‌ಬಾಗ್‌ನಲ್ಲಿ ಜೂ.13ರವರೆಗೆ ಪ್ರದರ್ಶನ, ಮಾರಾಟ

ಬೆಂಗಳೂರು: ತೋಟಗಾರಿಕೆ ಇಲಾಖೆ ಹಾಗೂ ರಾಜ್ಯ ಮಾವು ಅಭಿವೃದ್ಧಿ ಮತ್ತು ಮಾರುಕಟ್ಟೆ ನಿಗಮದ ವತಿಯಿಂದ ಲಾಲ್‌ ಬಾಗ್‌ನಲ್ಲಿ ಮೇ 27ರಿಂದ ಜೂ.13ರ ವರೆಗೆ ಮಾವು-ಹಲಸು ಹಣ್ಣು ಪ್ರದರ್ಶನ ಮತ್ತು ಮಾರಾಟ ಮೇಳ 2022ನ್ನು ಹಮ್ಮಿಕೊಳ್ಳಲಾಗಿದೆ ಎಂದು ನಿಗಮದ ವ್ಯವಸ್ಥಾಪಕ ನಿರ್ದೇಶಕ ಡಾ.ಸಿ.ಜಿ ನಾಗರಾಜು ತಿಳಿಸಿದರು.

ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಶುಕ್ರವಾರ ಸಂಜೆ 4.30ಕ್ಕೆ ಮೇಳವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಮಾರಾಟ ಮಳಿಗೆಯನ್ನು ತೋಟಗಾರಿಕೆ ಸಚಿವ ಮುನಿರತ್ನ ಚಾಲನೆ ನೀಡಲಿದ್ದಾರೆ ಎಂದರು.

ಮಾವು ಅಭಿವೃದ್ಧಿ ಮತ್ತು ಮಾರುಕಟ್ಟೆ ಮಂಡಳಿ ಅಧ್ಯಕ್ಷ ಕೆ.ವಿ.ನಾಗರಾಜ್‌ ಮಾತನಾಡಿ, ರಾಮನಗರ ಮತ್ತು ಕೋಲಾರ ಜಿಲ್ಲೆಗಳ 108 ರೈತರು ಮಳಿಗೆ ಹಾಗೂ ರೈತ ಉತ್ಪಾದಕ ಸಂಘಗಳಿಂದಲೂ ಮಳಿಗೆ ಪ್ರಾರಂಭಿಸಲಾಗುತ್ತಿದೆ. ಗ್ರಾಹಕರಿಗೆ ಹೊರೆಯಾಗದಂತೆ ಹಾಗೂ ರೈತರಿಗೆ ನಷ್ಟವಾಗದಂತೆ ಬೆಲೆ ನಿಗದಿ ಮಾಡಲಾಗಿದೆ. 16 ಮಳಿಗೆಗಳನ್ನು ಹಲಸು ಬೆಳೆಗಾರರಿಗಾಗಿ, 8 ಮಳಿಗೆಗಳನ್ನು ಹಲಸು-ಮಾವು ಉತ್ಪನ್ನಗಳಿಗೆ ನೀಡಲಾಗಿದೆ. ಗ್ರಾಹಕರಿಗೆ ಮಾರುಕಟ್ಟೆ ಗಿಂತಲೂ ಕಡಿಮೆ ಬೆಲೆಗೆ ಉತ್ತಮ ಮತ್ತು ಗುಣಮಟ್ಟದ ಮಾವಿನ ಹಣ್ಣನ್ನು ಒದಗಿಸಲಾಗುವುದು ಎಂದರು.

ಮಾವು ಹೊರದೇಶ ಹಾಗೂ ರಾಜ್ಯಗಳಲ್ಲಿ ಪರಿಚಯಿಸಲು ರಾಜ್ಯದ ಮಾವಿಗೆ ಕರ್‌ಸಿರಿ ಎಂಬ ಹೆಸರು ಹಾಗೂ ಚಿಹ್ನೆಯನ್ನು ವಿನ್ಯಾಸಗೊಳಿಸಿ ಬ್ರಾಂಡ್‌ ಮೂಲಕ ಹಣ್ಣುಗಳನ್ನು ಮಾಡಲು ಉತ್ತೇಜಿಸಲಾಗುತ್ತಿದೆ. ಹಲಸಿನ ತಳಿಗಳು ವಿವಿಧ ಗಾತ್ರ, ಹಳದಿ, ಕೇಸರಿ, ಕೆಂಪು ಬಣ್ಣ ತೊಳೆಗಳು ಹಾಗೂ ಪ್ರಸಿದ್ಧ ತಳಿಗಳು ದೊರಕಲಿವೆ. ಹಪ್ಪಳ, ಚಿಪ್ಸ್‌ ಹಾಗೂ ಇತರೆ ಸಂಸ್ಕರಿಸಿದ ಹಲಸಿನ ಉತ್ಪನ್ನಗಳು ಲಭ್ಯವಿದೆ ಎಂದರು.

ಆಯುಕ್ತರಿಗೆ ಪತ್ರ: ಕಬ್ಬನ್‌ ಪಾರ್ಕ್‌ನಲ್ಲಿ ಮಾವು ಮೇಳ ಹಮ್ಮಿಕೊಳ್ಳುವುದಕ್ಕೆ ನಿರ್ಧರಿಸಿದೆ. ಈ ಸಂಬಂಧ ಅನುಮತಿ ನೀಡುವಂತೆ ಸರ್ಕಾರಕ್ಕೆ ಮನವಿ ಮಾಡಲಾಗಿದೆ. ಜತೆಗೆ ನಗರದ ಎಲ್ಲ ಭಾಗಗಳಲ್ಲಿ ರೈತರು ವಾಹನಗಳಲ್ಲಿ ಮಾವು ಮಾರಾಟಕ್ಕೆ ಅವಕಾಶ ನೀಡುವಂತೆ ಬಿಬಿಎಂಪಿ ಮುಖ್ಯ ಆಯುಕ್ತರಿಗೆ ಪತ್ರ ಬರೆದಿರುವುದಾಗಿ ಹೇಳಿದರು. ತೋಟಗಾರಿ ಇಲಾಖೆ ಹಿರಿಯ ಸಹಾಯ ನಿರ್ದೇಶಕಿ ಲಲಿತಾ ಉಪಸ್ಥಿತರಿದ್ದರು.

ಯಾವ ಮಾವು ತಳಿ ಲಭ್ಯ?
ಮೇಳದಲ್ಲಿ ಬಾದಾಮಿ, ರಸಪುರಿ, ಬೈಗನ್‌ಪಲ್ಲಿ, ಮಲ್ಲಿಕಾ, ಮಲಗೋವಾ, ಸಿಂಧೂರ, ಕೇಸರ್‌, ತೋತಾಪುರಿ ಸೇರಿದಂತೆ ವಿವಿಧ ತಳಿಗಳ ಮಾವು ಖರೀದಿಗೆ ಲಭ್ಯ. ಉಪ್ಪಿನಕಾಯಿ ತಯಾರಿಗೆ ಉಪಯೋಗಿಸುವ ವಿವಿಧ ಮಾವಿನಕಾಯಿ ಮಾರಾಟಕ್ಕೆ ಲಭ್ಯವಿದೆ.

ಬೆಳಗ್ಗೆ 8ರಿಂದ ರಾತ್ರಿ 8ರ ತನಕ ಅವಕಾಶ ಮೇಳವು ನಿತ್ಯ ಬೆಳಗ್ಗೆ 8ರಿಂದ ಸಂಜೆ 8ರವರೆಗೆ ಗ್ರಾಹಕರ ಖರೀದಿಗೆ ಮುಕ್ತ ಅವಕಾಶ ಕಲ್ಪಿಸಲಾಗಿದೆ. ಈ ಅವಧಿಯಲ್ಲಿ ತಾಜಾ ಹಣ್ಣುಗಳನ್ನು ಖರೀದಿಸ ಬಹುದಾಗಿದೆ. ಸಹಜವಾಗಿ ಮಾಗಿದ ಅಥವಾ ಇಥಲೀನ್‌ ಉಪಚರಿಸಿ ಮಾಗಿದ ಹಣ್ಣುಗಳನ್ನು ಮಾತ್ರ ಮಾರುವ ಅವಕಾಶ ಕಲ್ಪಿಸಲಾಗಿದೆ. ಕಾರ್ಬೈಡ್‌ನಿಂದ ಮಾಗಿಸಿದ ಹಣ್ಣುಗಳನ್ನು ಮಾರಾಟವನ್ನು ಸಂಪೂರ್ಣ ನಿಷೇಧಿಸಲಾಗಿದೆ.

ಟಾಪ್ ನ್ಯೂಸ್

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

8-uv-fusion

Photography: ನಿಮ್ಮ ಬೊಗಸೆಯಲ್ಲಿ ಇರಲಿ ನೆನಪುಗಳು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.