ಕ್ಲರ್ಕ್ಗಳ ನೆರವಿಗೆ ಜಂಟಿ ಸಭೆ ನಡೆಸಿ
Team Udayavani, May 24, 2020, 4:10 AM IST
ಬೆಂಗಳೂರು: ಲಾಕ್ಡೌನ್ನಿಂದ ಆರ್ಥಿಕ ಸಂಕಷ್ಟ ಎದುರಿಸುತ್ತಿರುವ ವಕೀಲರ ಬಳಿ ಸೇವೆ ಸಲ್ಲಿಸುತ್ತಿರುವ ನೋಂದಾಯಿತ ಕ್ಲರ್ಕ್ಗಳಿಗೆ ನೆರವು ನೀಡುವ ದೃಷ್ಟಿಯಿಂದ ಯೋಜನೆ ರೂಪಿಸುವ ಸಂಬಂಧ ಬೆಂಗಳೂರು ವಕೀಲರ ಸಂಘ ಹಾಗೂ ಕರ್ನಾಟಕ ರಾಜ್ಯ ವಕೀಲರ ಕ್ಲರ್ಕ್ಗಳ ಸಂಘದ ಜಂಟಿ ಸಭೆ ಏರ್ಪಡಿಸುವಂತೆ ರಾಜ್ಯ ವಕೀಲರ ಪರಿಷತ್ಗೆ ಹೈಕೋರ್ಟ್ ಸೂಚನೆ ನೀಡಿದೆ.
ಲಾಕ್ಡೌನ್ ಪರಿಣಾಮ ಕೋರ್ಟ್ ಕಲಾಪಗಳು ಸ್ಥಗಿತಗೊಂಡ ಹಿನ್ನೆಲೆಯಲ್ಲಿ ಕೆಲಸವಿಲ್ಲದೆ ಆರ್ಥಿಕ ಸಂಕಷ್ಟ ಎದುರಿಸುತ್ತಿರುವ ಕ್ಲರ್ಕ್ಗಳಿಗೆ ನೆರವು ನೀಡಲು 5 ಕೋಟಿ ರೂ. ಮೊತ್ತದ ಕಾರ್ಪಸ್ ನಿಧಿ ಸ್ಥಾಪಿಸುವಂತೆ ಕರ್ನಾಟಕ ರಾಜ್ಯ ವಕೀಲರ ಕ್ಲರ್ಕ್ಗಳ ಸಂಘ ಸಲ್ಲಿಸಿದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾ. ಎ.ಎಸ್. ಓಕಾ ನೇತೃತ್ವದ ವಿಭಾಗೀಯ ನ್ಯಾಯಪೀಠ ಈ ಸೂಚನೆ ನೀಡಿತು. ವಾದ ಆಲಿಸಿದ ನ್ಯಾಯಪೀಠ, ವಕೀಲರ ಸಮರ್ಪಕ ಕಾರ್ಯ ನಿರ್ವಹಣೆ ಯಲ್ಲಿ ಕ್ಲರ್ಕ್ಗಳ ಪಾತ್ರ ಮಹತ್ವದ್ದಾಗಿದೆ.
ಲಾಕ್ಡೌನ್ ಹಿನ್ನೆಲೆ ಯಲ್ಲಿ ಕ್ಲರ್ಕ್ಗಳು ಆರ್ಥಿಕ ಸಂಕಷ್ಟಕ್ಕೆ ಗುರಿಯಾಗಿದ್ದಾರೆ ಅನ್ನುವುದರಲ್ಲಿ ಎರಡು ಮಾತಿಲ್ಲ. ಇವರ ಆರ್ಥಿಕ ನೆರ ವಿಗೆ ಯೋಜನೆಯೊಂದು ರೂಪಿಸುವ ಅವಶ್ಯಕತೆಯಿದೆ. ಇದಕ್ಕಾಗಿ, ರಾಜ್ಯ ವಕೀಲರ ಪರಿಷತ್ ವತಿಯಿಂದ ಬೆಂಗ ಳೂರು ವಕೀಲರ ಸಂಘ ಹಾಗೂ ವಕೀಲರ ಕ್ಲರ್ಕ್ಗಳ ಸಂಘದ ಜಂಟಿ ಸಭೆ ಏರ್ಪಡಿಸಬೇಕು ಎಂದು ಹೇಳಿತು.ಇದೇ ವೇಳೆ ಬೆಂಗಳೂರು ವಕೀಲರ ಸಂಘವನ್ನು ಅರ್ಜಿಯಲ್ಲಿ ಪ್ರತಿವಾದಿಯ ನ್ನಾಗಿ ಸೇರಿಸುವಂತೆ ಅರ್ಜಿದಾರರಿಗೆ ಸೂಚಿಸಿದ ನ್ಯಾಯಪೀಠ ವಿಚಾರಣೆ ಯನ್ನು ಮುಂದೂಡಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್ ಸುಲಿಗೆ; ಮೂವರ ಬಂಧನ
Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ
Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್ ಬಾತ್ಮೀದಾರ ಸೆರೆ
Arrested: ಸುಲಿಗೆ ಸೇರಿ 42 ಕೇಸ್ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ
Arrested: 17 ಕೇಸ್ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್ ಬಂಧನ
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ