2 ತಿಂಗಳ ಬಳಿಕ ಹೈಕೋರ್ಟ್‌ ಕಲಾಪ ಆರಂಭ


Team Udayavani, Jun 2, 2020, 6:06 AM IST

2tingala

ಬೆಂಗಳೂರು: ಲಾಕ್‌ಡೌನ್‌ನಿಂದ ಕಳೆದ ಎರಡು ತಿಂಗಳಿಂದ ಸ್ಥಗಿತಗೊಂಡಿದ್ದ ಹೈಕೋರ್ಟ್‌ ಕಲಾಪಗಳು ಸೋಮವಾರದಿಂದ ಪುನಾರಂಭವಾಗಿದ್ದು, ವಕೀಲರು ಹಾಗೂ ಅವರ ಸಹಾಯಕ ಸಿಬ್ಬಂದಿ ಹೆಚ್ಚಿನ ಸಂಖ್ಯೆಯಲ್ಲಿ ಕೋರ್ಟ್‌ಗೆ  ಆಗಮಿಸಿದ್ದರಿಂದ ಗೊಂದಲದ ವಾತಾವರಣ ನಿರ್ಮಾಣಗೊಂಡಿತ್ತು. ಬೆಳಗ್ಗೆ 10 ಗಂಟೆಯಿಂದಲೇ ವಕೀಲರು ಕೋಟ್‌ ìಗೆ ಬರಲಾರಂಭಿಸಿದರು.

ಈ ಮಧ್ಯೆ ವಕೀಲರು ಹೆಚ್ಚಿನ ಸಂಖ್ಯೆಯಲ್ಲಿದ್ದು, ಸಾಮಾಜಿಕ ಅಂತರ ಕಾಯ್ದುಕೊಳ್ಳದೇ  ಇರುವುದಕ್ಕೆ ತೀವ್ರ ಅಸಮಧಾನ ವ್ಯಕ್ತಪಡಿಸಿದ ಮುಖ್ಯ ನ್ಯಾ. ಎ.ಎಸ್‌. ಓಕಾ ಸ್ವತಃ ಹೈಕೋರ್ಟ್‌ ಪ್ರವೇಶ ದ್ವಾರಕ್ಕೆ ಆಗಮಿಸಿ ಅಲ್ಲಿನ ಅವ್ಯವಸ್ಥೆ ಕಂಡು ಬೇಸರ ವ್ಯಕ್ತಪಡಿಸಿದರು. ಭಾನುವಾರ ಒಂದೇ ದಿನ ರಾಜ್ಯದಲ್ಲಿ 300 ಕೊರೊನಾ  ಪಾಸಿಟಿವ್‌ ಪ್ರಕರಣಗಳು ಪತ್ತೆಯವಾಗಿದೆ.

ಛತ್ತೀಸಗಡ್‌ ಹಾಗೂ ದೆಹಲಿ ಹೈಕೋರ್ಟ್‌ಗಳು ಕಲಾಪ ಆರಂಭ ಮಾಡಿದರೂ ನಂತರ ಸ್ಥಗಿತಗೊಳಿಸಲಾಗಿದೆ. ಸದ್ಯ ದೇಶದಲ್ಲಿ ಎಲ್ಲಿಯೂ ಹೈಕೋರ್ಟ್‌ ಕಾರ್ಯ ನಿರ್ವಹಣೆ ಮಾಡುತ್ತಿಲ್ಲ.  ಆದರೆ, ಕರ್ನಾಟಕ ಹೈಕೋರ್ಟ್‌ ಕಾರ್ಯಾರಂಭಿಸಿದ್ದು, ನ್ಯಾಯಮೂರ್ತಿಗಳು ತಮ್ಮ ಜೀವವನ್ನು ಪಣಕ್ಕಿಟ್ಟು ಕಲಾಪ ನಡೆಸುತ್ತಿದ್ದಾರೆ. ಈ ಸಂದರ್ಭದಲ್ಲಿ ವಕೀಲರು ಬೆಂಬಲ ನೀಡದೆ ಹೋದರೆ ಕಲಾಪ ನಡೆಸಲು ಹೇಗೆ  ಸಾಧ್ಯವಾಗುತ್ತದೆ ಎಂದು ಬೇಸರ ಹೊರ ಹಾಕಿದರು.

ಕಲಾಪ ಸ್ಥಗಿತದ ಎಚ್ಚರಿಕೆ: ವಕೀಲರು ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು. ಅನವಶ್ಯಕಾಗಿ ಗುಂಪು ಸೇರಬಾರದು. ಕೋರ್ಟ್‌ ಆವರಣ ಪ್ರವೇಶಿಸುವ ಪ್ರತಿಯೊಬ್ಬರೂ ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು. ನಿಯಮ ಪಾಲನೆ  ಮಾಡಬೇಕು. ಯಾರಿಗೆ ಅನುಮತಿ ನೀಡಲಾಗಿದೆಯೇ ಅವರು ಮಾತ್ರ ಕೋರ್ಟ್‌ ಆವರಣ ಪ್ರವೇಶಿಸಬೇಕು. ಇಲ್ಲದೇ ಹೋದರೆ ಕೋರ್ಟ್‌ ಕಲಾಪವನ್ನೇ ಸ್ಥಗಿತಗೊಳಿಸುವುದಾಗಿ ಮುಖ್ಯ ನ್ಯಾಯಮೂರ್ತಿಗಳು ಎಚ್ಚರಿಕೆ ನೀಡಿದರು. ಹಾಗೆಯೇ, ಯಾರಿಗೆ ಅನುಮತಿ ನೀಡಲಾಗಿದೆಯೋ ಅವರನ್ನು ಮಾತ್ರ ಕೋರ್ಟ್‌ ಆವರಣ ಪ್ರವೇಶ ಮಾಡಲು ಅವಕಾಶ ನೀಡಬೇಕು.

ಇತರರಿಗೆ ಪ್ರವೇಶವಕಾಶ ನೀಡಬಾರದು ಎಂದು ಮುಖ್ಯ ನ್ಯಾಯಮೂರ್ತಿಗಳು ಇದೇ ವೇಳೆ ಭದ್ರತಾ ಸಿಬ್ಬಂದಿಗೆ ಸೂಚಿಸಿದರು. ಮತ್ತೂಂದೆಡೆ ವೈದ್ಯಕೀಯ ಸಿಬ್ಬಂದಿಯು ಅನುಮತಿ ಪಡೆದಿದ್ದ ವಕೀಲರಿಗೆ ಥರ್ಮಲ್‌ ಸ್ಕ್ರೀನಿಂಗ್‌ ಮಾಡಿದರು. ಉಷ್ಣಾಂಶ ಕಡಿಮೆಯಿದ್ದ ವಕೀಲರಿಗೆ ಕೋರ್ಟ್‌ ಪ್ರವೇಶಿಸಲು ಅವಕಾಶ ನೀಡಿದರು. ಕೋರ್ಟ್‌ಗೆ  ಭೇಟಿ ಕೊಟ್ಟವರ ಹೆಸರು ಹಾಗೂ ಇತರೆ ವಿವರಗಳನ್ನು ನಮೂದು ಮಾಡಿಕೊಂಡರು. ಸಾರ್ವಜನಿಕರು, ವ್ಯಾಜ್ಯದಾರರಿಗೆ ಕೋರ್ಟ್‌ ಪ್ರವೇಶ ನಿರ್ಬಂಧ ವಿಧಿಸಲಾಗಿತ್ತು.

ಎಂಟು ಕೋರ್ಟ್‌ಗಳು ಕಾರ್ಯನಿರ್ವಹಣೆ: ಸೋಮವಾರ ಹೈಕೋರ್ಟ್‌ನ ಎರಡು ವಿಭಾಗೀಯ ಪೀಠ ಸೇರಿದಂತೆ ಒಟ್ಟು 8 ಪೀಠಗಳು ಮಾತ್ರ ಕಾರ್ಯ ನಿರ್ವಹಿಸಿದವು. ಬೆಳಗಿನ ಕಲಾಪದಲ್ಲಿ ವಿಡಿಯೋ ಕಾನ್ಫರೆನ್ಸ್‌ ವಿಚಾರಣೆ ನಡೆಯಿತು.  ಮಧ್ಯಾಹ್ನ ತೆರೆದ ನ್ಯಾಯಾಲಯದಲ್ಲಿ ಕಲಾಪ ನಡೆಯಿತು. ವಕೀಲರು ಖುದ್ದು ಹಾಜರಾಗಿ ವಾದ ಮಂಡಿಸಿದರು. ವಕೀಲರು 15ರಿಂದ 20 ನಿಮಿಷಗಳ ಒಳಗೆ ವಾದ ಮಂಡನೆ ಪೂರ್ಣಗೊಳಿಸಲು ಅವಕಾಶ ನೀಡಲಾಗಿತ್ತು.

ವಕೀಲರು  ಹಾಗೂ ನ್ಯಾಯಮೂರ್ತಿ, ಕೋರ್ಟ್‌ ಸಿಬ್ಬಂದಿ ಮಾಸ್ಕ್ ಹಾಗೂ ಕೈಗವಸು ಧರಿಸಿದ್ದು ಸಾಮಾನ್ಯವಾಗಿತ್ತು. ಪ್ರತಿ ಕೋರ್ಟ್‌ ಹಾಲ್‌ನಲ್ಲಿಯೂ ಸ್ಯಾನಿಟೈಸರ್‌ ಸೇರಿದಂತೆ ಮುಂಜಾಗ್ರತಾ ಕ್ರಮಕ್ಕೆ ವ್ಯವಸ್ಥೆ ಮಾಡಲಾಗಿತ್ತು. ಆರೋಗ್ಯ ಇಲಾಖೆ  ಹೊರಡಿಸಿರುವ ಮಾರ್ಗ ಸೂಚಿಗಳ ಫಲಕಗಳನ್ನು ಕೋರ್ಟ್‌ ಆವರಣದ ಪ್ರಮುಖ ಸ್ಥಳದಲ್ಲಿ ಪ್ರದರ್ಶನ ಮಾಡಲಾಗಿತ್ತು.

ಟಾಪ್ ನ್ಯೂಸ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

11-srrest

Bengaluru: ಅತಿಕ್ರಮಿಸಿ ಏರ್‌ಪೋರ್ಟ್‌ನಲ್ಲಿ ವಿಡಿಯೋ: ಯುಟ್ಯೂಬರ್‌ ಬಂಧನ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Mangaluru; ಪೆಟ್ರೋಲ್‌ ಬದಲು ಡೀಸೆಲ್‌ ತುಂಬಿಸಿದ ಆರೋಪ: ಕೋರ್ಟ್‌ಗೆ ಮೊರೆ

Mangaluru; ಪೆಟ್ರೋಲ್‌ ಬದಲು ಡೀಸೆಲ್‌ ತುಂಬಿಸಿದ ಆರೋಪ: ಕೋರ್ಟ್‌ಗೆ ಮೊರೆ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ

Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ

ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್‌ ಸಿಟಿ ಅಧಿಕಾರಿ ಶ್ರೀನಿವಾಸ

ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್‌ ಸಿಟಿ ಅಧಿಕಾರಿ ಶ್ರೀನಿವಾಸ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.