ಕೊಯಿರ ಪಶು ಚಿಕಿತ್ಸಾಲಯ ವೈದ್ಯರನ್ನು ನೇಮಿಸಿ


Team Udayavani, Apr 29, 2022, 5:27 PM IST

20docters

ದೇವನಹಳ್ಳಿ: ತಾಲೂಕಿನ ಕೊಯಿರ ಗ್ರಾಮದಲ್ಲಿರುವ ಪಶು ಚಿಕಿತ್ಸಾಲಯಕ್ಕೆ ಕಳೆದ ಒಂದು ತಿಂಗಳಿನಿಂದ ವೈದ್ಯರಿಲ್ಲ. ಕೊಯಿರ ಪಶು ಚಿಕಿತ್ಸಾಲಯ ವ್ಯಾಪ್ತಿಗೆ 15 ಹಳ್ಳಿಗಳು ಸಂಪರ್ಕದಲ್ಲಿದ್ದು, ಕಳೆದ ಫೆಬ್ರವರಿಯಲ್ಲಿ ವೈದ್ಯ ಡಾ.ಅಭಿಷೇಕ್‌ ವರ್ಗಾವಣೆ ನಂತರ ಈ ಆಸ್ಪತ್ರೆಗೆ ವೈದ್ಯರಿಲ್ಲದೆ ಬಿಕೋ ಎನ್ನುತ್ತಿದೆ.

ಕಳೆದ ಒಂದೂವರೆ ತಿಂಗಳಿನಿಂದ ಇಲ್ಲಿನ ಸ್ಥಳೀಯರಿಗೆ ವೈದ್ಯರಿಲ್ಲದೆ ತುರ್ತು ಸೇವೆಯಿಂದ ವಂಚಿತರಾಗುತ್ತಿದ್ದಾರೆ. ಸಂಬಂಧಪಟ್ಟ ಪಶು ಇಲಾಖಾಧಿಕಾರಿಗಳು ಕೊಯಿರ ಗ್ರಾಮದಲ್ಲಿನ ಪಶು ಚಿಕಿತ್ಸಾಲಯಕ್ಕೆ ವೈದ್ಯರನ್ನು ನೇಮಿಸಿ, ಈ ಭಾಗದ ರೈತಾಪಿ ಜನರಿಗೆ ಅನುಕೂಲ ಮಾಡಿಕೊಡಬೇಕೆಂದು ಸ್ಥಳೀಯರು ಒತ್ತಾಯಿಸಿದ್ದಾರೆ.

8,673 ಜಾನುವಾರು: ಆಸ್ಪತ್ರೆಯ ವ್ಯಾಪ್ತಿಯಲ್ಲಿ ಒಟ್ಟು 8,673 ಜಾನುವಾರುಗಳಿದ್ದು, ಕೊಯಿರ, ರಾಮನಾಥಪುರ, ಅರುವನಹಳ್ಳಿ, ರಬ್ಬನಹಳ್ಳಿ, ಮನಗೊಂಡನಹಳ್ಳಿ, ಮಾಯಸಂದ್ರ, ಚಿಕ್ಕಗೊಲ್ಲಹಳ್ಳಿ, ಕೆ.ಹೊಸೂರು, ಜ್ಯೋತಿಪುರ, ಚಿಕ್ಕೋ ಬದೇನಹಳ್ಳಿ, ದೊಡ್ಡಗೊಲ್ಲಹಳ್ಳಿ, ಬೈರದೇನಹಳ್ಳಿà, ಬೀರಸಂದ್ರ, ಆಲೂರು, ದುದ್ದನಹಳ್ಳಿ ಗ್ರಾಮಗಳಲ್ಲಿ 2,853 ದನ, 301 ಎಮ್ಮೆ, 2,174 ಕುರಿ, 1,208 ಮೇಕೆ, 27 ಹಂದಿ, 2,110 ಕೋಳಿ ಸಾಕಾಣಿಕೆ ನಡೆತ್ತಿದ್ದು, ಈ ಹಿಂದೆ ವೈದ್ಯರು ಗ್ರಾಮಗಳಿಂದ ಮೊಬೈಲ್‌ ಕರೆ ಸ್ವೀಕರಿಸಿ, ಗ್ರಾಮಕ್ಕೆ ತೆರಳಿ ಸ್ಥಳದಲ್ಲಿಯೇ ಚಿಕಿತ್ಸೆ ಅಥವಾ ಇತರೆ ಸಲಹೆ ಸೂಚನೆ ನೀಡುತ್ತಿದ್ದರು.

ಪ್ರಥಮ ಚಿಕಿತ್ಸೆ: ಸರ್ಕಾರದಿಂದ ಆಸ್ಪತ್ರೆಗೆ ವೈದ್ಯರನ್ನು ನೇಮಿಸಬೇಕು. ಇಲ್ಲಿಗೆ ಬರುವ ಜಾನುವಾರುಗಳಿಗೆ ಪ್ರಥಮ ಚಿಕಿತ್ಸೆ ನೀಡುತ್ತಿದ್ದೇವೆ. ತುರ್ತು ಇದ್ದಲ್ಲಿ ಕುಂದಾಣ ಪಶು ಆಸ್ಪತ್ರೆಯ ವೈದ್ಯರ ಗಮನಕ್ಕೆ ತರಲಾಗುತ್ತದೆ. ಅವರು ಬಂದು ನೋಡುತ್ತಾರೆ. ಪ್ರಸ್ತುತ ನಿಯೋಜನೆ ಮೇರೆಗೆ ಕುಂದಾಣ ವೈದ್ಯರೇ ನೋಡುತ್ತಿದ್ದಾರೆ ಎಂದು ಸಿಬ್ಬಂದಿ ಹೇಳುತ್ತಿದ್ದಾರೆ.

ಟಾಪ್ ನ್ಯೂಸ್

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

10

Electricity problem: ಬೇಸಿಗೆ ಬೆನ್ನಲ್ಲೇ ಕಾಡುತ್ತಿದೆ ವಿದ್ಯುತ್‌ ಸಮಸ್ಯೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

30

CET Exam: ಮೊದಲ ದಿನ ಸುಸೂತ್ರವಾಗಿ ನಡೆದ ಸಿಇಟಿ

1-wqeqwe

Maharashtra; ರತ್ನಾಗಿರಿ- ಸಿಂಧುದುರ್ಗದಲ್ಲಿ ರಾಣೆ vs ಠಾಕ್ರೆ ಕಾದಾಟ

1-HM

Mathura ನನ್ನನ್ನು ಗೋಪಿಕೆಯೆಂದು ಭಾವಿಸುವೆ: ಬಿಜೆಪಿ ಅಭ್ಯರ್ಥಿ ಹೇಮಾ

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.