ಹೆಲ್ಮೆಟ್‌ನಿಂದ ಹೊಡೆದು ಪ್ರಿಯತಮೆಗೆ ಹಲ್ಲೆ


Team Udayavani, Jun 11, 2020, 5:17 AM IST

helmet-halle

ಬೆಂಗಳೂರು: ವೈಮನಸ್ಸಿನಿಂದ ದೂರವಾಗಿದ್ದ ಯುವತಿ ಬೇರೆ ಯುವಕನೊಂದಿಗೆ ಸಲುಗೆ ಬೆಳೆಸಿದ ಕಾರಣಕ್ಕೆ ಹಳೆಯ ಪ್ರಿಯಕರ ಹೆಲ್ಮೆಟ್‌ನಿಂದ ಆಕೆಯ ತಲೆಗೆ ಹಲ್ಲೆ ಮಾಡಿದ ಪರಿಣಾಮ ಯುವತಿ ಗಂಭೀರ ಗಾಯಗೊಂಡು ಆಸ್ಪತ್ರೆ ಸೇರಿದ ಘಟನೆ ಸೋಲದೇವನಹಳ್ಳಿ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಗಾಯಾಳು ಯುವತಿಗೆ (21) ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿದಿದೆ.

ಯುವತಿ ಹರ್ಷಿತಾ (ಹೆಸರು ಬದಲಿಸಲಾಗಿದೆ) ಮೇಲೆ ಹಲ್ಲೆ ನಡೆಸಿದ ಆಕೆಯ ಹಳೆಯ ಪ್ರಿಯಕರ ಬಬಿತ್‌ ಹಾಗೂ ಆತನ ಸ್ನೇಹಿತ ರಾಹುಲ್‌ ಎಂಬಾತನನ್ನು ಬಂಧಿಸಿರುವ ಪೊಲೀಸರು ತನಿಖೆ ನಡೆಸಿದ್ದಾರೆ. ಸಿಡದೇನಹಳ್ಳಿ ನಿವಾಸಿ ಹರ್ಷಿತಾ ಬಿಕಾಂ ವಿದ್ಯಾರ್ಥಿನಿಯಾಗಿದ್ದು, ಕಳೆದ ನಾಲ್ಕು ವರ್ಷಗಳಿಂದ ಬಬಿತ್‌ ಹಾಗೂ ಆಕೆ  ಪರಸ್ಪರ ಪ್ರೀತಿಸುತ್ತಿದ್ದರು. ಆದರೆ ಕೆಲ ತಿಂಗಳಿಂದ ವೈಮನಸ್ಸಿನಿಂದ ದೂರವಾಗಿದ್ದರು.

ಹರ್ಷಿತಾ ಇತ್ತೀಚೆಗೆಬಬಿತ್‌ನ ಸ್ನೇಹಿತ ರಾಹುಲ್‌ ಎಂಬಾತನ ಜತೆ ಸಲುಗೆಯಿಂದ ಇದ್ದಳು. ಇಬ್ಬರೂ ಸುತ್ತಾಡುತ್ತಿದ್ದುದನ್ನು ನೋಡಿದ್ದ ಬಬಿತ್‌ ಕೋಪಗೊಂಡು ರಾಹುಲ್‌ಗೆ ಹರ್ಷಿತಾ ಜತೆ ಸುತ್ತಾಡದಂತೆ ಎಚ್ಚರಿಕೆ ನೀಡಿದ್ದ. ಭಾನುವಾರ ರಾಹುಲ್‌ ಮನೆಯಲ್ಲಿ ಹರ್ಷಿತಾ ಇರುವುದನ್ನು ತಿಳಿದುಕೊಂಡಿದ್ದ ಬಬಿತ್‌, ಬೈಕ್‌ನಲ್ಲಿ ಅಲ್ಲಿಗೆ ತೆರಳಿದ್ದಾನೆ. ರಾಹುಲ್‌ ಮನೆಯಲ್ಲಿ ಜಗಳ  ಮಾಡಿದ ಬಬಿತ್‌, ರಾಹುಲ್‌ ಎದುರಿನಲ್ಲೇ ಆಕೆಯ ಮೇಲೆ ಹಲ್ಲೆ ಮಾಡಿ ಅಲ್ಲಿಂದ ತನ್ನ ಮನೆಗೆ ಬೈಕ್‌ನಲ್ಲಿ ಕರೆದೊಯ್ದಿದ್ದಾನೆ.

ಅಷ್ಟೇ ಅಲ್ಲದೆ ಪುನಃ ಅಲ್ಲಿಯೂ ಗಲಾಟೆ ಮಾಡಿ ಕೈ ಮತ್ತು ಹೆಲ್ಮೆಟ್‌ನಿಂದ ಹರ್ಷಿತಾಳ ಮೇಲೆ ಹಲ್ಲೆ  ಮಾಡಿದ್ದಾನೆ. ಇದರಿಂದ ಗಂಭೀರವಾಗಿ ಗಾಯಗೊಂಡಿದ್ದ ಹರ್ಷಿತಾ ಪ್ರಜ್ಞೆ ತಪ್ಪಿ ಬಿದ್ದಿದ್ದಾಳೆ. ಇದನ್ನು ಗಮನಿಸಿದ ಬಬಿತ್‌, ಹರ್ಷಿತಾ ಪೋಷಕರಿಗೆ ಕರೆ ಮಾಡಿ ಹರ್ಷಿತಾ ಕುಸಿದು ಬಿದ್ದಿರುವುದಾಗಿ ತಿಳಿಸಿ ಪರಾರಿಯಾಗಿದ್ದಾನೆ. ಕೂಡಲೇ  ಅಲ್ಲಿಗೆ ತೆರಳಿದ ಆಕೆಯ ತಂದೆ ಆಸ್ಪತ್ರೆಗೆ ದಾಖಲಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಹರ್ಷಿತಾ ಮೇಲಿನ ಹಲ್ಲೆಗೆ ಸಂಬಂಧಿಸಿದ ದೂರು ಆಧರಿಸಿ ಆರೋಪಿ ಬಬಿತ್‌ನನ್ನು ಬಂಧಿಸಲಾಗಿದೆ. ಜತೆಗೆ ಘಟನೆ ವೇಳೆ ಜತೆಯಲ್ಲಿದ್ದ  ರಾಹುಲ್‌ನನ್ನು ಬಂಧಿಸಲಾಗಿದೆ. ಆರೋಪಿಗಳ ವಿಚಾರಣೆ ವೇಳೆ ಹರ್ಷಿತಾ ಜತೆಗಿನ ಪ್ರೇಮ ವಿಚಾರಗಳನ್ನು ಬಾಯ್ಬಿಟ್ಟಿದ್ದಾರೆ. ಆರೋಪಿ ಬಬಿತ್‌ ಪಿಯುಸಿ ಅನುತ್ತೀರ್ಣನಾಗಿದ್ದು, ಸಣ್ಣ-ಪುಟ್ಟ ಕೆಲಸ ಮಾಡಿಕೊಂಡಿದ್ದಾನೆ ಎಂದು  ಪೊಲೀಸರು ಹೇಳಿದ್ದಾರೆ.

ಟಾಪ್ ನ್ಯೂಸ್

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

ಕೋಟ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

ಕೋಟ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

ಚಿಕ್ಕಮಗಳೂರು-ಉಡುಪಿ ಕ್ಷೇತ್ರ: ಜನಹಿತ ಕಾರ್ಯಕ್ಕೆ ಸದಾ ಬದ್ಧ: ಹೆಗ್ಡೆ

ಚಿಕ್ಕಮಗಳೂರು-ಉಡುಪಿ ಕ್ಷೇತ್ರ: ಜನಹಿತ ಕಾರ್ಯಕ್ಕೆ ಸದಾ ಬದ್ಧ: ಹೆಗ್ಡೆ

Supreme Court

Supreme Courtನಲ್ಲಿ ಪಿವಿಎನ್‌, ಮನಮೋಹನ್‌ ಸಿಂಗ್‌ಗೆ ಕೇಂದ್ರ ಸರಕಾರ ಶ್ಲಾಘನೆ

Rajeev Chandrashekhar

Corrupt ಡಿಕೆಶಿ ಸರ್ಟಿಫಿಕೆಟ್‌ ಬೇಕಾಗಿಲ್ಲ: ಕೇಂದ್ರ ಸಚಿವ ರಾಜೀವ್‌ ತಿರುಗೇಟು

1-wqewqe

2014 ಭರವಸೆ, 2019 ನಂಬಿಕೆ, 2024ರಲ್ಲಿ ಗ್ಯಾರಂಟಿ: ಮೋದಿ

mamata

CAA, NRC ರದ್ದು: ದೀದಿ ಶಪಥ ಪ್ರಣಾಳಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗ್ಯಾರಂಟಿ ಯೋಜನೆಗಳ ಟೀಕೆಗೆ ತಾಯಂದಿರೇ ಉತ್ತರ ನೀಡುತ್ತಾರೆ: ಡಿಕೆ ಶಿವಕುಮಾರ್

ಗ್ಯಾರಂಟಿ ಯೋಜನೆಗಳ ಟೀಕೆಗೆ ತಾಯಂದಿರೇ ಉತ್ತರ ನೀಡುತ್ತಾರೆ: ಡಿಕೆ ಶಿವಕುಮಾರ್

Crime: ಅನೈತಿಕ ಸಂಬಂಧ; ವ್ಯಕ್ತಿ ಕೊಲೆಗೆ ಸುಪಾರಿ!

Crime: ಅನೈತಿಕ ಸಂಬಂಧ; ವ್ಯಕ್ತಿ ಕೊಲೆಗೆ ಸುಪಾರಿ!

CCB Raid: ಲೋಕ ಚುನಾವಣೆ ಹಿನ್ನೆಲೆ; ಪರಪ್ಪನ ಅಗ್ರಹಾರ ಜೈಲಿನ ಮೇಲೆ ಸಿಸಿಬಿ ದಾಳಿ

CCB Raid: ಲೋಕ ಚುನಾವಣೆ ಹಿನ್ನೆಲೆ; ಪರಪ್ಪನ ಅಗ್ರಹಾರ ಜೈಲಿನ ಮೇಲೆ ಸಿಸಿಬಿ ದಾಳಿ

Motivational: ಪಿಯುನಲ್ಲಿ 2 ಬಾರಿ ಫೇಲ್‌, ಯುಪಿಎಸ್ಸಿ ಪಾಸ್‌

Motivational: ಪಿಯುನಲ್ಲಿ 2 ಬಾರಿ ಫೇಲ್‌, ಯುಪಿಎಸ್ಸಿ ಪಾಸ್‌

Bike Theft: ಹಗಲಲ್ಲಿ ಫುಡ್‌ಡೆಲಿವರಿ ಕೆಲಸ, ರಾತ್ರಿ ಬೈಕ್‌ಗಳ ಕಳವು: ಆರೋಪಿ ಬಂಧನ

Bike Theft: ಹಗಲಲ್ಲಿ ಫುಡ್‌ಡೆಲಿವರಿ ಕೆಲಸ, ರಾತ್ರಿ ಬೈಕ್‌ಗಳ ಕಳವು: ಆರೋಪಿ ಬಂಧನ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

ಕೋಟ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

ಕೋಟ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

ಚಿಕ್ಕಮಗಳೂರು-ಉಡುಪಿ ಕ್ಷೇತ್ರ: ಜನಹಿತ ಕಾರ್ಯಕ್ಕೆ ಸದಾ ಬದ್ಧ: ಹೆಗ್ಡೆ

ಚಿಕ್ಕಮಗಳೂರು-ಉಡುಪಿ ಕ್ಷೇತ್ರ: ಜನಹಿತ ಕಾರ್ಯಕ್ಕೆ ಸದಾ ಬದ್ಧ: ಹೆಗ್ಡೆ

Supreme Court

Supreme Courtನಲ್ಲಿ ಪಿವಿಎನ್‌, ಮನಮೋಹನ್‌ ಸಿಂಗ್‌ಗೆ ಕೇಂದ್ರ ಸರಕಾರ ಶ್ಲಾಘನೆ

suicide

ಕಾಶ್ಮೀರದಲ್ಲಿ ಗುಂಡು ಹಾರಿಸಿ ಬಿಹಾರ ಕಾರ್ಮಿಕನ ಹತ್ಯೆ  

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.