ಜಗಳ ಬಿಡಿಸಲು ಹೋದವರಿಗೆ ಲಾಂಗ್‌ ಬೀಸಿದ್ರು


Team Udayavani, Mar 25, 2021, 9:05 PM IST

ascb

ಕುದೂರು: ರಸ್ತೆ ಬದಿಯಲ್ಲಿ ಕಾರಿನಲ್ಲಿ ಕಿತ್ತಾಡುತ್ತಿದ್ದ ಯುವಕರನ್ನು ಪ್ರಶ್ನೆ ಮಾಡಿದ ಸ್ಥಳೀಯರ ಮೇಲೆ, ಮಾರಕಾಸ್ತ್ರದಿಂದ ಹಲ್ಲೆ ಮಾಡಿದ ಯುವಕರನ್ನು ಕಂಬಕ್ಕೆ ಕಟ್ಟಿಹಾಕಿ ಥಳಿಸಿದ ಘಟನೆ ಕುದೂರು ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ರಾಷ್ಟ್ರೀಯ ಹೆದ್ದಾರಿ ಸೂರಪ್ಪನಹಳ್ಳಿ ಬಳಿ ಮಂಗಳೂರು ಮೂಲದ ಹಲ್ಲೆಕೋರರಿಗೆ ಗ್ರಾಮದ ಜನರೇ ಮರಕ್ಕೆ ಕಟ್ಟಿ ಹಾಕಿ, ತಕ್ಕ ಪಾಠ ಕಲಿಸಿ, ಪೊಲೀಸರಿಗೆ ಒಪ್ಪಿಸಿದ್ದಾರೆ.

ಘಟನೆ ವಿವರ: ಬೆಂಗಳೂರು -ಮಂಗಳೂರು ರಾಷ್ಟ್ರೀಯ ಹೆದ್ದಾರಿ -75ರಲ್ಲಿ ಬರುವ ಸೂರಪ್ಪನ ಹಳ್ಳಿಯಲ್ಲಿ ಮಂಗಳೂರಿನ ಸುದರ್ಶನ್‌ ಪೈ ಮತ್ತು ಮಹಮದ್‌ ಅನ್ನೀಸ್‌ ಎಂಬುವರು ರಸ್ತೆ ಬದಿಯಲ್ಲಿ ಕಾರಿನಲ್ಲಿ ಒಬ್ಬರಿಗೊಬ್ಬರು ಕಿತ್ತಾಡುತ್ತಿದ್ದರು. ಆಗ ಸ್ಥಳೀಯರಾದ ರಾಮಾಂಜನೇಯ ಮತ್ತು ಮುದ್ದಹನುಮಯ್ಯ ತಮ್ಮ ಜಮೀನಿನಲ್ಲಿ ಕೆಲಸ ಮಾಡುತ್ತಿದ್ದನ್ನು ಬಿಟ್ಟು ಬಂದು, ಕಿತ್ತಾಡುತ್ತಿದ್ದ ಈ ಯುವಕರನ್ನು ನೋಡಿ, ಏನಪ್ಪ ಇದು ? ಕಾರಲ್ಲಿ ಹೀಗೆ ಕಿತ್ತಾಡುತ್ತಿದ್ದೀರಾ..? ಎಂದು ಪ್ರಶ್ನೆ ಮಾಡಿದ್ದಾರೆ. ಪ್ರಶ್ನೆ ಮಾಡಿದ್ದೇ ತಡ ಇಬ್ಬರು ಯುವಕರು ಸೂರಪ್ಪನಹಳ್ಳಿ ಅಪ್ಪ, ಮಕ್ಕಳಿಗೆ ಮಾರಕಾಸ್ತ್ರದಿಂದ ಬೆದರಿಸಿ ಹಲ್ಲೆ ಮಾಡಿದರು.

ಸೂರಪ್ಪನಹಳ್ಳಿ ಸ್ಥಳೀಯರಿಗೆ ಈ ವಿಚಾರ ತಿಳಿದು, ಸ್ಥಳಕ್ಕೆ ದೌಡಾ ಯಿಸಿದ್ದು, ಮಂಗಳೂರು ಮೂಲದ ಇಬ್ಬರು ಹಲ್ಲೆಕೋರರನ್ನು ಮರಕ್ಕೆ ಕಟ್ಟಿ ಹಾಕಿ, ಹಿಗ್ಗಾ-ಮುಗ್ಗಾ ಜಾಡಿಸಿದ್ದಾರೆ. ಬಳಿಕ ಕುದೂರು ಪೊಲೀಸರಿಗೆ ಒಪ್ಪಿಸಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ತೀವ್ರವಾಗಿ ಗಾಯಗೊಂಡ ಸೂರಪ್ಪನಹಳ್ಳಿ ಅಪ್ಪ – ಮಕ್ಕಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೋಡಿಸಲಾಗುತ್ತಿದೆ. ಕಾರಲ್ಲಿ ಏಕ ಲಾಂಗು..?: ಕಾರಿನಲ್ಲಿ ಲಾಂಗಿಟ್ಟುಕೊಂಡು ಬಂದವರನ್ನು ಸುಮ್ಮನೆ ಬಿಡಬಾರದು. ಪೊಲೀಸರು ಈ ವಿಚಾರವಾಗಿ ಸಂಪೂರ್ಣ ತನಿಖೆ ನಡೆಸಬೇಕು, ಜೊತೆಗೆ ಏಕಾಏಕಿ ರೈತರ ಮೇಲೆ ಹಲ್ಲೆ ಮಾಡಿದವರ ಮೇಲೆ ರೌಡಿ ಶೀಟರ್‌ ಪ್ರಕರಣ ಹಾಕಿ ಕಾನೂನಿನ ಬಿಸಿಮುಟ್ಟಿಸಬೇಕು ಎಂದು ಸೂರಪ್ಪನಹಳ್ಳಿ ಗ್ರಾಮಸ್ಥರು ಆಗ್ರಹಿಸಿದ್ದಾರೆ.

ಕಾರಿನಲ್ಲಿ ಲಾಂಗು ಇಟ್ಟುಕೊಂಡ ವಿಚಾರವಾಗಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತೇವೆ. ಹೆದ್ದಾರಿ ಪೊಲೀಸರಿಗೆ ಕಟ್ಟುನಿಟ್ಟನಲ್ಲಿ ಗಸ್ತು ತಿರುಗುವಂತೆ ಸೂಚನೆ ನೀಡುತ್ತೇನೆ.

  • ಮಂಜುನಾಥ್‌, ವೃತ್ತ ನಿರೀಕ್ಷಕ, ಮಾಗಡಿ

ಟಾಪ್ ನ್ಯೂಸ್

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

1-qqwewqeeqwe

Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

1-qeeqwewqwqe

Sirsi ; ಪ್ರಧಾನಿ ಮುಡಿಗೇರಿದ ಬೇಡರ ವೇಷದ ಕಿರೀಟ!

1-qqwewqeeqwe

Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

1-qeeqwewqwqe

Sirsi ; ಪ್ರಧಾನಿ ಮುಡಿಗೇರಿದ ಬೇಡರ ವೇಷದ ಕಿರೀಟ!

1-qqwewqeeqwe

Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.