ಆಹಾರ ಪಾರ್ಸೆಲ್‌ ಹೆಚ್ಚಿದರೆ ಅನುಕೂಲ

2ನೇ ಹಂತದ ಲಾಕ್‌ಡೌನ್‌ ಬಳಿಕ ದಾನಿಗಳ ಸಂಖ್ಯೆ ಇಳಿಕೆ | ನಿರ್ಗತಿಕರಿಗೆ ಆಹಾರ ಸಮಸ್ಯೆ ಸಾಧ್ಯತೆ

Team Udayavani, Apr 22, 2020, 5:17 PM IST

ಆಹಾರ ಪಾರ್ಸೆಲ್‌ ಹೆಚ್ಚಿದರೆ ಅನುಕೂಲ

ಸಾಂದರ್ಭಿಕ ಚಿತ್ರ

ಬೆಂಗಳೂರು: ಲಾಕ್‌ಡೌನ್‌ ಅವಧಿ ಹೆಚ್ಚು-ಕಡಿಮೆ ದುಪ್ಪಟ್ಟಾದ ಬೆನ್ನಲ್ಲೇ ನಗರದಲ್ಲಿ ಸ್ವಯಂಪ್ರೇರಿತ ಆಹಾರ ವಿತರಣೆ ಮಾಡುವ ದಾನಿಗಳ ಪ್ರಮಾಣ ಕೊಂಚ ಕಡಿಮೆಯಾಗಿದೆ. ಇದರಿಂದ ಮುಂದಿನ ದಿನಗಳಲ್ಲಿ ನಿರಾಶ್ರಿತರು ಮತ್ತು ನಿರ್ಗತಿಕರಿಗೆ ಆಹಾರ ಸಮಸ್ಯೆ ಬಿಸಿ ಜೋರಾಗಿ ತಟ್ಟುವ ಸಾಧ್ಯತೆ ಇದೆ.

ಈ ಹಿಂದೆ ಲಾಕ್‌ಡೌನ್‌ ಅವಧಿ 21 ದಿನಗಳು ಇತ್ತು. ಅದಕ್ಕೂ ಮುನ್ನ ಅಂದರೆ ಮಾ. 14ರಿಂದಲೇ ನಗರದಲ್ಲಿ ಲಾಕ್‌ಡೌನ್‌ ಜಾರಿಯಾಗಿತ್ತು. ಈಚೆಗೆ ಮತ್ತೆ 19 ದಿನಗಳು ಮುಂದುವರಿಸಲಾಗಿದೆ. ಕೆಲ ಸಂಘ-ಸಂಸ್ಥೆಗಳು, ವ್ಯಕ್ತಿಗಳು ನಿರಂತರ ಮೂರು ವಾರಗಳು ಯಾವುದೇ ಸಮಸ್ಯೆ ಇಲ್ಲದೆ ನಿರಾಶ್ರಿತರಿಗೆ ಆಹಾರ ಪೂರೈಕೆ ಮಾಡಿದರು. ಆದರೆ, ಮತ್ತೆ ಮೂರು ವಾರ ವಿಸ್ತರಣೆಯಿಂದ ಕೆಲವು ಸಂಘಗಳು ಸಹಜವಾಗಿ ಆರ್ಥಿಕ ಸಮಸ್ಯೆ ಎದುರಿಸುತ್ತಿವೆ. ಹಾಗಾಗಿ, ಆಹಾರ ವಿತರಣೆ ಪ್ರಮಾಣ ಕಡಿಮೆಯಾಗಿದೆ. ಪರಿಣಾಮ ಅಲ್ಲಲ್ಲಿ ನಿರಾಶ್ರಿತರು ಆಹಾರದ ಸಮಸ್ಯೆ ಎದುರಿಸುತ್ತಿದ್ದಾರೆ. ಸರ್ಕಾರ, ಸ್ಥಳೀಯ ಸಂಸ್ಥೆಗಳು ಅದಮ್ಯ ಚೇತನ, ಅಕ್ಷಯಪಾತ್ರೆ ಪ್ರತಿಷ್ಠಾನ ಮೊದಲಾದ ಸಂಘಟನೆಗಳ ಸಹಯೋಗದಲ್ಲಿ ಆಹಾರ ವಿತರಣೆಗೆ ವ್ಯವಸ್ಥೆ ಮಾಡಿವೆ.  ಆದಾಗ್ಯೂ ಇದು ಸಾಲದು; ನಗರದ “ರೆಡ್‌ ಝೋನ್‌’ ಹೊರತುಪಡಿಸಿ ಉಳಿದೆಡೆ ಆಯ್ದ ಭಾಗಗಳಲ್ಲಿ ಹೋಟೆಲ್‌ಗ‌ಳ ಪಾರ್ಸೆಲ್‌ ಸೇವೆ ಹೆಚ್ಚಿಸುವ ಅವಶ್ಯಕತೆ ಇದೆ ಎಂಬ ಒತ್ತಾಯ ಕೇಳಿಬಂದಿದೆ. ಹೀಗೆ ಹೋಟೆಲ್‌ ತೆರೆಯುವುದರಿಂದ ಕಾರ್ಮಿಕರಿಗೆ, ನಿರಾಶ್ರಿತರು ಮತ್ತು ನಿರ್ಗತಿಕರಿಗೆ ಆಹಾರ ಪೂರೈಕೆ ಜತೆಗೆ ತರಕಾರಿ ಪೂರೈಕೆ ಆಗುವುದರಿಂದ ರೈತರಿಗೂ ಅನುಕೂಲ ಆಗಲಿದೆ. ಹೋಟೆಲ್‌ ಉದ್ಯಮಕ್ಕೂ ನೆರವಾಗಲಿದೆ. ಸಾಮಾಜಿಕ ಅಂತರ ವ್ಯವಸ್ಥೆಗೆ ಮಾತ್ರ ಕ್ರಮ ಕೈಗೊಳ್ಳಬೇಕಾಗುತ್ತದೆ ಎಂದು ನಿರಾಶ್ರಿತರು ಒತ್ತಾಯಿಸುತ್ತಾರೆ. ಸದ್ಯ ನಗರದ ಕೆಲವೇ ಕೆಲವು ದೊಡ್ಡ ಪ್ರಮಾಣದ ಹೋಟೆಲ್‌ಗ‌ಳಲ್ಲಿ ಮಾತ್ರ ಪಾರ್ಸೆಲ್‌ ವ್ಯವಸ್ಥೆ ಇದೆ. ಆದರೆ, ಮಧ್ಯಮ ಗಾತ್ರದ ಮತ್ತು ಉಪಹಾರ ದರ್ಶಿನಿಗಳಲ್ಲಿ ಪಾರ್ಸೆಲ್‌ ವ್ಯವಸ್ಥೆ ಇಲ್ಲ.

ಸಿಬ್ಬಂದಿ ಕೊರತೆ: ಹೋಟೆಲ್‌ಗ‌ಳಲ್ಲಿ ಪಾರ್ಸೆಲ್‌
ನೀಡಲು ಅವಕಾಶ ಇದೆ. ಆದರೆ, ಸದ್ಯದ ಪರಿಸ್ಥಿತಿಯಲ್ಲಿ ಸಿಬ್ಬಂದಿ ಕೊರತೆ ಇದೆ. ಹೋಟೆಲ್‌ ಗಳಲ್ಲಿ ಸೇವೆ ಸಲ್ಲಿಸುತ್ತಿದ್ದವರು ಈಗ ಊರು ಸೇರಿದ್ದಾರೆ. ಅವರಿಗ ಊರಿಂದ ಬರಲು ಸಾಗುತ್ತಿಲ್ಲ. ಲಾಕ್‌ಡೌನ್‌ ಮುಗಿದ ನಂತರವೇ ಹೋಟೆಲ್‌ ತೆರೆಯಬೇಕಾಗುತ್ತದೆ. ಜನರೇ ಬರದಿದ್ದರೆ ಹೋಟೆಲ್‌ ತೆರೆಯುವುದು ಕಷ್ಟವಾಗುತ್ತಿದೆ ಎಂದು ಬೃಹತ್‌ ಬೆಂಗಳೂರು ಹೋಟೆಲ್‌ ಮಾಲಿಕರ ಸಂಘದ ಕಾರ್ಯದರ್ಶಿ ಸುಬ್ರಹ್ಮಣ್ಯ ಹೊಳ್ಳ ತಿಳಿಸುತ್ತಾರೆ.

“ನಂದನ ಗ್ರೂಪ್‌ ಕಾರ್ಪೊರೇಟ್‌ ಸಾಮಾಜಿಕ ಹೊಣೆಗಾರಿಕೆ (ಸಿಎಸ್‌ಆರ್‌) ಅಡಿ ನಿತ್ಯ ಹತ್ತು ಸಾವಿರ ಊಟದ ಪ್ಯಾಕೆಟ್‌ ಸಿದ್ಧಪಡಿಸಿ ಏಟ್ರಿಯಾ ಟ್ರಸ್ಟ್ ಗೆ ನೀಡಲಾಗುತ್ತಿದೆ. ಇವರು ಬಡವರು, ನಿರ್ಗತಿಕರಿಗೆ ಈ ಪ್ಯಾಕೆಟ್‌ಗಳನ್ನು ವಿತರಿಸುತ್ತಿದ್ದಾರೆ. ಇಲ್ಲಿ ಪೌಷ್ಟಿಕಾಂಶಕ್ಕೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ. ನಂದನಾ ಗ್ರೂಪ್‌ನಲ್ಲಿ 1300 ಕಾರ್ಮಿಕರು ಕೆಲಸ ಮಾಡುತ್ತಿದ್ದಾರೆ. ಇವರೆಲ್ಲರಿಗೂ ನಮ್ಮ ಸಂಸ್ಥೆಯ ವತಿಯಿಂದ ಉಚಿತ ಊಟ ಮತ್ತು ವಸತಿ ವ್ಯವಸ್ಥೆ ಕಲ್ಪಿಸಿದ್ದೇವೆ. ಊಟದ ಪಾರ್ಸೆಲ್‌ ಜತೆಗೆ ಆಯುಷ್‌ ಇಲಾಖೆಯ ಮಾರ್ಗದರ್ಶನದಂತೆ ಜೀರಿಗೆ, ಮೆಣಸು, ಶುಂಠಿ, ಅಶ್ವಗಂಧದಿಂದ ತಯಾರಿಸಿದ ಕಷಾಯವನ್ನು ಗ್ರಾಹಕರಿಗೆ ಉಚಿತವಾಗಿ ನೀಡುತ್ತಿದ್ದೇವೆ’ ಎಂದು ನಂದನ ಪ್ಯಾಲೇಸ್‌ ಹೋಟೆಲ್‌ ಮಾಲಿಕ ಡಾ. ರವಿಚಂದ್ರನ್‌ ಮಾಹಿತಿ ನೀಡಿದರು.

ಕೊರತೆ ಇಲ್ಲ: ಸೇವಾಕಾರ್ಯ ವ್ಯಾಪಕವಾಗಿ ನಡೆಯುತ್ತಿದೆ. ಆರೆಸ್ಸೆಸ್‌ ವತಿಯಿಂದ ನಿರ್ಗತಿಕರಿಗೆ, ಬಡವರಿಗೆ, ಕೊಳೆಗೇರಿಗಳಲ್ಲಿರುವ ಅಗತ್ಯ ಆಹಾರ ಸಾಮಗ್ರಿ ಪೂರೈಕೆ ಮಾಡುತ್ತಿದೆ. ಸೇವಾ ಕಾರ್ಯಕ್ಕೆ ಯಾವುದೇ ಕೊರತೆ ಇಲ್ಲ. ಅಗತ್ಯವಿರುವರಿಗೆ ಊಟಕ್ಕೆ ಬೇಕಾದ ವಸ್ತುಗಳನ್ನು ನೀಡಲಾಗುತ್ತಿದೆ ಎಂದು ಆರೆಸ್ಸೆಸ್‌ ಮೂಲಗಳು ತಿಳಿಸಿವೆ.

ಹೋಟೆಲ್‌ ಕಾರ್ಯಾರಂಭ ವಿಳಂಬ
ಲಾಕ್‌ಡೌನ್‌ ಅವಧಿ ಮುಗಿದ ನಂತರವೂ ನಗರದ ಹೋಟೆಲ್‌ಗ‌ಳ ಕಾರ್ಯಾರಂಭ ವಿಳಂಬವಾಗುವ ಸಾಧ್ಯತೆ ಇದೆ. ನಗರದ ಸಾವಿರಾರು ಸಣ್ಣ ಮತ್ತು ಮಧ್ಯಮ ಗಾತ್ರದ ಹೋಟೆಲ್‌ಗ‌ಳಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕರು ಲಾಕ್‌ಡೌನ್‌ಗೂ ಮೊದಲೇ ತಮ್ಮ ಊರುಗಳಿಗೆ ತೆರಳಿದ್ದಾರೆ. ಲಾಕ್‌ಡೌನ್‌ ತೆರವಾದರೂ ಕೆಲವೊಂದು ಜಿಲ್ಲೆಗಳ ಸಂಚಾರ ಮುಕ್ತವಾಗುವ ಸಾಧ್ಯತೆ ಕಡಿಮೆ. ಹೀಗಾಗಿ ಹೋಟೆಲ್‌ನಲ್ಲಿ ಸೇವೆ ಸಲ್ಲಿಸಿತ್ತಿದ್ದವರು ವಾಪಸ್‌ ಬರಲು ಕಷ್ಟವಾಗಬಹುದು. ಇನ್ನು ಕೆಲವರು ಬೆಂಗಳೂರಿಗೆ ತಕ್ಷಣವೇ ಬರಲು ಭಯಪಡಬಹುದು. ಇದರಿಂದ ಹೋಟೆಲ್‌ ಕಾರ್ಯಾರಂಭ ವಿಳಂಬ ಆಗಬಹುದು. ಅದೇ ರೀತಿ, ಲಾಕ್‌ಡೌನ್‌ ನಂತರದಲ್ಲೂ ಹೋಟೆಲ್‌ಗೆ ಜನ ಬರುತ್ತಾರೆ ಎಂಬುದು ನಿರೀಕ್ಷೆ ಮಾಡುವುದು ಕಷ್ಟ. ಹೀಗಾಗಿ, ಹೋಟೆಲ್‌ ಉದ್ಯಮ ಲಾಕ್‌ಡೌನ್‌ ನಂತರ ಹೇಗಾಗುತ್ತದೆ ಹೇಳಲಾಗದು ಎಂದು ಹೋಟೆಲ್‌ ಉದ್ಯಮಿಯೊಬ್ಬರು ತಿಳಿಸಿದರು.

● ರಾಜು ಖಾರ್ವಿ ಕೊಡೇರಿ

ಟಾಪ್ ನ್ಯೂಸ್

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

Bengaluru: ಚೆಕ್‌ ದುರ್ಬಳಕೆ; ಕ್ಯಾಷಿಯರ್‌, ಎಲ್‌ಐಸಿ ಏಜೆಂಟ್‌ಗೆ ಜೈಲು

Bengaluru: ಚೆಕ್‌ ದುರ್ಬಳಕೆ; ಕ್ಯಾಷಿಯರ್‌, ಎಲ್‌ಐಸಿ ಏಜೆಂಟ್‌ಗೆ ಜೈಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.