ನಗರದಲ್ಲಿ ಹೆಚ್ಚಿದ ಕೋವಿಡ್‌ 19 ಆತಂಕ


Team Udayavani, Jun 14, 2020, 5:36 AM IST

anxity covids

ಬೆಂಗಳೂರು: ನಗರದಲ್ಲಿ ಶನಿವಾರ ಒಟ್ಟು 31ಜನರಲ್ಲಿ ಕೋವಿಡ್‌ 19 ದೃಢಪಟ್ಟಿದ್ದು, ಒಟ್ಟು ಸೋಂಕಿತರ ಸಂಖ್ಯೆ 648ಕ್ಕೆ ಏರಿಕೆಯಾದಂತಾಗಿದೆ. ಶನಿವಾರ ಸೋಂಕು ದೃಢಪಟ್ಟವರಲ್ಲಿ ತುಮಕೂರಿನಿಂದ ಬಂದವರೊಬ್ಬರಿದ್ದಾರೆ.  ಇತ್ತಿಚೆಗೆ ಕೊಡಗಿನಿಂದ ಬಂದ ಒಬ್ಬರು ಬಿಟ್ಟರೆ ಉಳಿದ ಜಿಲ್ಲೆಗಳಿಂದ ಬಂದವರಲ್ಲಿ ಸೋಂಕು ದೃಢಪಟ್ಟಿರಲಿಲ್ಲ. ಮಂಡ್ಯದಿಂದ ಬಂದ ಒಬ್ಬ ಆರೋಪಿ, ನಿಮ್ಹಾನ್ಸ್‌ನಲ್ಲಿನ ಸಹಾಯಕ ಸಿಬ್ಬಂದಿ (ಹೌಸ್‌ಕೀಪಿಂಗ್‌)ಗೂ ಸೋಂಕು ದೃಢಪಟ್ಟಿದೆ.

ಇದು ಈ ವಲಯಗಳಲ್ಲಿನ ಇತರ ಸಿಬ್ಬಂದಿಗಳಲ್ಲೂ ಆತಂಕ ಮೂಡಿಸಿದೆ. ಸೋಂಕು ದೃಢಪಟ್ಟವರ ಪ್ರಾಥಮಿಕ ಹಾಗೂ ದ್ವಿತೀಯ ಸಂಪರ್ಕದಲ್ಲಿದ್ದ ಒಟ್ಟು ಹತ್ತು ಮಂದಿಯಲ್ಲಿ, ಮಹಾರಾಷ್ಟ್ರ ಮತ್ತು ದೆಹಲಿಯಿಂದ  ಬಂದ ತಲಾ ಒಬ್ಬರಲ್ಲಿ ಸೋಂಕು ಇರುವುದು ಖಚಿತವಾಗಿದೆ. ಕೋವಿಡ್‌ 19 ಲಕ್ಷಣವಿದ್ದು, ಸೋಂಕು ಪರೀಕ್ಷಗೆ ಒಳಪಟ್ಟ 12 ಜನರಲ್ಲಿ ಹಾಗೂ ಉಸಿರಾಟದ ಸಮಸ್ಯೆ ಎದುರಿಸುತ್ತಿದ್ದ ಇಬ್ಬರಲ್ಲಿ ಸೋಂಕು ದೃಢಪಟ್ಟಿದೆ. ಉಳಿದಂತೆ  ಮೂರು ಸೋಂಕು ಪ್ರಕರಣಗಳಲ್ಲಿ ಸಂಪರ್ಕ ಪತ್ತೆಯಾಗಿಲ್ಲ.

ಶನಿವಾರ ಎಲ್ಲೆಲ್ಲಿ ಸೋಂಕು ಪ್ರಕರಣಗಳು ಪತ್ತೆ: ಜಯನಗರ ಮೊದಲ ಬ್ಲಾಕ್‌ ನ 53 ವರ್ಷದ ಮಹಿಳೆ, ಸೋಮೇಶ್ವರ ನಗರದ 63 ವರ್ಷದ ಪುರುಷ, ಕಾಮರಾಜ ನಗರದ 57  ವರ್ಷದ ಪುರುಷ, ಶ್ರೀನಗರದಲ್ಲಿನ 54 ವರ್ಷದ ಪುರುಷ, ನ್ಯೂ ಗುಡ್ಡದಹಳ್ಳಿಯಲ್ಲಿ ಒಂದು ವರ್ಷದ ಮಗುವಿಗೆ ಸೋಂಕು ದೃಢಪಟ್ಟಿದೆ. ಪ್ಯಾಲೇಸ್‌ ರಸ್ತೆಯ 68 ವರ್ಷದ ಪುರುಷ, ನೀಲಸಂದ್ರದ 68 ವರ್ಷದ ಪುರುಷರೊಬ್ಬರಿಗೆ ಸೋಂಕು ಇರುವುದು ದೃಢಪಟ್ಟಿದೆ.

ನಗರ ಜಿಲ್ಲಾ ವ್ಯಾಪ್ತಿಯಲ್ಲಿ  ಸರ್ಜಾಪುರ ರಸ್ತೆ ವ್ಯಾಪ್ತಿಯ 49 ವರ್ಷದ ಪುರುಷ, ನಗನಟ್ಟಗಾಪುರದ 52 ವರ್ಷದ ಮಹಿಳೆ, ರಾಜೀವ್‌ ಗಾಂಧಿ ನಗರದ 54 ವರ್ಷದ ಪುರುಷ, ತನಿಸಂದ್ರ 49 ವರ್ಷದ ಮಹಿಳೆ, ಎಲೆಕ್ಟ್ರಾನಿಕ್‌ ಸಿಟಿ (ದೆಹಲಿ ಪ್ರಯಾಣ)ಯ 40 ವರ್ಷದ ಪುರುಷ, ನಾಗರಬಾವಿಯ (ಮಹಾರಾಷ್ಟ್ರ ಪ್ರಯಾಣ ಹಿನ್ನೆಲೆ)21 ವರ್ಷದ ಯುವತಿ, ಬಾಲಾಜಿ ಲೇಔಟ್‌ನ 38 ವರ್ಷದ ಯುವತಿಯೊಬ್ಬರಿಗೆ ಸೋಂಕು ದೃಢಪಟ್ಟಿದೆ.

ಸಂಪರ್ಕ, ಪ್ರಯಾಣದ ಇಲ್ಲದವರಲ್ಲಿ ಸೋಂಕು!: ಪ್ರಯಾಣದ ಹಿನ್ನೆಲೆಯೂ ಇಲ್ಲ ಹಾಗೂ ಸೋಂಕಿತರ ಸಂಪರ್ಕದಲ್ಲೂ ಇಲ್ಲದ ಆರ್‌ಟಿ ನಗರದ ಎರಡನೇ ಬ್ಲಾಕ್‌ ನ 40 ವರ್ಷದ ಮಹಿಳೆಯೊಬ್ಬರಿಗೆ ಸೋಂಕು ದೃಢಪಟ್ಟಿರುವುದು  ಸದ್ಯ ಆತಂಕಕ್ಕೆ ಕಾರಣವಾಗಿದೆ.

ಸೋಂಕಿತರ ಸಂಪರ್ಕದಲ್ಲಿದ್ದವರಿಗೆ ಸೋಂಕು: ನಗರದಲ್ಲಿ ಶನಿವಾರ ಒಂದೇ ದಿನ 12ಜನ ಸೋಂಕಿತರ ಸಂರ್ಪಕಿತರಿಗೆ ಸೋಂಕು ದೃಢಪಟ್ಟಿದೆ. ಇದರಲ್ಲಿ ದ್ವಿತೀಯ ಸಂರ್ಪಕಿತರೂ ಒಬ್ಬರಿದ್ದಾರೆ. ಪೌಟ್ರಿಟೌನ್‌ನಲ್ಲಿ ಸೋಂಕು ದೃಢಪಟ್ಟ  ಸೋಂಕಿತರ ದ್ವಿತೀಯ ಸಂಪರ್ಕದಲ್ಲಿದ್ದ  62 ವರ್ಷದ ಮಹಿಳೆ. ಕಲಾಸಿಪಾಳ್ಯದಲ್ಲಿ ಸೋಂಕು ದೃಢಪಟ್ಟವರ ಪ್ರಾಥಮಿಕ  ಸಂಪರ್ಕದಲ್ಲಿದ್ದ ಕಲಾಸಿಪಾಳ್ಯದ 19  ವರ್ಷದ ಯುವಕ ಹಾಗೂ ನಾರಾಯಣ ಸ್ವಾಮಿ ರಸ್ತೆಯ 18  ವರ್ಷದ ಯುವಕನಿಗೆ ಸೋಂಕು ತಗುಲಿದೆ.

ಹನುಮಂತ ನಗರದಲ್ಲಿ ಸೋಂಕು ದೃಢಪಟ್ಟ ವ್ಯಕ್ತಿಯ ಸಂಪರ್ಕದಲ್ಲಿದ್ದ 20 ವರ್ಷದ ಯುವಕ ಹಾಗೂ 46 ವರ್ಷದ  ಮಹಿಳೆಗೆ ಸೋಂಕು ಹಬ್ಬಿದೆ. ಅನ್ನೈಪ್ಪ ಬ್ಲಾಕ್‌ನ ಕುಮಾರ ಪಾರ್ಕ್‌  ವ್ಯಾಪ್ತಿಯಲ್ಲಿ ಸೋಂಕು ದೃಢಪಟ್ಟವರ ಸಂಪರ್ಕದಲ್ಲಿದ್ದ 4 ವರ್ಷದ ಹೆಣ್ಣುಮಗುವಿಗೆ ಹಾಗೂ 6368 ರೋಗಿಯ ಸಂಪರ್ಕದಲ್ಲಿದ್ದ ಶೇಷಾದ್ರಿಪುರಂನ ಇಬ್ಬರು ಮಹಿಳೆಯರಲ್ಲಿ ಸೋಂಕು ದೃಢಪಟ್ಟಿದೆ.

ರೋಗಿ ಸಂಖ್ಯೆ 6169  ಸಂಪರ್ಕದಲ್ಲಿದ್ದ ಹೊಂಗಸಂದ್ರದ 54 ವರ್ಷದ ಪುರುಷ, ಐದು ವರ್ಷದ ಹೆಣ್ಣು ಮಗು ಹಾಗೂ 24 ವರ್ಷದ ಯುವತಿ ಸೇರಿ ಮೂವರಲ್ಲಿ ಸೋಂಕು ದೃಢಪಟ್ಟಿದೆ. ರೋಗಿ ಸಂಖ್ಯೆ 4848ರ ಸಂಪರ್ಕದಲ್ಲಿದ್ದ ಚೊಕ್ಕ ಸಂದ್ರದ 35 ವರ್ಷದ  ಪುರುಷರೊಬ್ಬರಲ್ಲಿ ಸೋಂಕು ದೃಢಪಟ್ಟಿದೆ.

ಮೂರು ಜನ ಮೃತ: ಸೋಂಕಿನಿಂದ ಮೃತರ ಸಂಖ್ಯೆ ಹೆಚ್ಚುತ್ತಿದ್ದು, ಶನಿವಾರ ಮೂವರು ಮೃತಪಟ್ಟಿದ್ದಾರೆ. 23 ವರ್ಷದ ಯುವಕ ಹಾಗೂ 62 ವರ್ಷದ ಪುರುಷರೊಬ್ಬರು ಸೋಂಕಿನಿಂದ ಸಾವಿಗೀಡಾಗಿದ್ದಾರೆ. ಯಾವುದೇ ಪ್ರಯಾಣದ  ಇತಿಹಾಸವಿಲ್ಲದ, ಸೋಂಕಿತರ ಸಂಪರ್ಕವೂ ಇಲ್ಲದ ನಾರಾಯಣ ಪಿಳ್ಳೆç ಸ್ಟ್ರೀಟ್‌ನ 70 ವರ್ಷದ ಮಹಿಳೆ ಕೋವಿಡ್‌ 19ಗೆ ಬಲಿಯಾಗಿದ್ದಾರೆ. ಆದರೆ, ಇವರ ವಿವರ ಬುಲೆಟಿನ್‌ಗೆ ಸೇರ್ಪಡೆಯಾಗಿಲ್ಲ. ನಗರದಲ್ಲಿ ಒಟ್ಟು 31 ಜನ  ಸಾವಿಗೀಡಾದಂತಾಗಿದೆ.

ಟಾಪ್ ನ್ಯೂಸ್

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.