ಭಾರತ 2047 ನೀಲನಕ್ಷೆ: ಕೃಷಿ ಯೋಜನೆಗೆ ಸಿದ್ಧ


Team Udayavani, Jun 12, 2022, 12:29 PM IST

8

ಬೆಂಗಳೂರು: ಸ್ವಾತಂತ್ರ್ಯದ ಶತಮಾನೋತ್ಸವದ ಹೊತ್ತಿಗೆ ಜಗತ್ತಿನ ಮೊದಲ ಮೂರು ಅಭಿವೃದ್ಧಿ ಹೊಂದಿದ ರಾಷ್ಟ್ರಗಳ ಸಾಲಿಗೆ ಸೇರಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ರೂಪಿಸುತ್ತಿರುವ “ಭಾರತ 2047′ ನೀಲನಕ್ಷೆಗೆ ಪೂರಕವಾಗಿ ರಾಜ್ಯ ಕೂಡ ಮುಂದಿನ 25 ವರ್ಷಗಳ ದೂರದೃಷ್ಟಿ ಇಟ್ಟುಕೊಂಡು ಕೃಷಿ ಯೋಜನೆಗೆ ಸಿದ್ಧತೆ ನಡೆಸಿದೆ.

ಇದಕ್ಕಾಗಿ ಭೂ ಆಧಾರಿತ ಚಟುವಟಿಕೆಗಳು ಮತ್ತು ಅದಕ್ಕೆ ಸಂಬಂಧಪಟ್ಟ ಎಲ್ಲ ಇಲಾಖೆಗಳನ್ನೂ ಒಂದೇ ಸೂರಿನಡಿ ತಂದು, ಮುಂದಿನ ಎರಡೂವರೆ ದಶಕಗಳಲ್ಲಿ ಕೃಷಿ ಹಾಗೂ ಪೂರಕ ಚಟುವಟಿಕೆಗಳನ್ನು ಅಭಿವೃದ್ಧಿಪಡಿಸಲು ಕೃಷಿ ಇಲಾಖೆ ಯೋಜನೆಯ ನೀಲನಕ್ಷೆ ಸಿದ್ಧಪಡಿಸುವಲ್ಲಿ ನಿರತವಾಗಿದೆ. ರಾಜ್ಯದ ರೈತರ ಆದಾಯವನ್ನು ಮೂರರಿಂದ ನಾಲ್ಕುಪಟ್ಟು ಹೆಚ್ಚಿಸುವ ಗುರಿಯನ್ನೂ ಈ ಯೋಜನೆ ಒಳಗೊಂಡಿದೆ.

“ಭಾರತ 2047’ಗೆ ಪೂರಕವಾಗಿ ಆಯಾ ರಾಜ್ಯಗಳಿಂದ ಸಮಗ್ರ ಯೋಜನೆ ಸಿದ್ಧಪಡಿಸಿ ಕಳುಹಿಸುವಂತೆ ಕೇಂದ್ರ ಸರ್ಕಾರವು ರಾಜ್ಯದ ವಿವಿಧ ಇಲಾಖೆಗಳಿಗೆ ಸೂಚಿಸಿದೆ. ಅದರಂತೆ ಕೃಷಿ ಇಲಾಖೆಗೂ ನಿರ್ದೇಶನ ನೀಡಲಾಗಿದ್ದು, ರಾಜ್ಯ ಕೃಷಿ ಯೋಜನೆ ಹಾಗೂ ಜಿಲ್ಲಾಮಟ್ಟದ ಕೃಷಿ ಯೋಜನೆ ಸಿದ್ಧತೆಯಲ್ಲಿ ಸರ್ಕಾರ ಸಕ್ರಿಯವಾಗಿದೆ. ಇದು ನೀರಾವರಿ, ಕೃಷಿ ಮಾರುಕಟ್ಟೆ, ಸಹಕಾರ, ಜಲಾನಯನ, ಅಗತ್ಯಬಿದ್ದರೆ ಲೋಕೋಪಯೋಗಿ ಸೇರಿ ವಿವಿಧ ಇಲಾಖೆಗಳು ಒಂದೇ ವೇದಿಕೆಯಲ್ಲಿ ಬಂದು ಕೆಲಸ ಮಾಡಲಿವೆ. ನೀಲನಕ್ಷೆ ರೂಪಿಸುವ ಕಾರ್ಯ ಇನ್ನೂ ಆರಂಭಿಕ ಹಂತದಲ್ಲಿದ್ದು, 2-3 ಸಭೆಗಳೂ ನಡೆದಿವೆ. ಶೀಘ್ರ ಯೋಜನಾ ವರದಿಯನ್ನು ಕೇಂದ್ರಕ್ಕೆ ಸಲ್ಲಿಸಲಾಗುವುದು ಎಂದು ಕೃಷಿ ಇಲಾಖೆ ಕಾರ್ಯದರ್ಶಿ ಶಿವಯೋಗಿ ಕಳಸದ ತಿಳಿಸಿದರು.

ಮುಂದಿನ 25 ವರ್ಷಗಳಲ್ಲಿ ಕೃಷಿ ಪಾತ್ರ ಏನಾಗಿರಬೇಕು? ಜಾಗತಿಕ ಮಟ್ಟದಲ್ಲಿ ಸ್ವಾವಲಂಬನೆ ಜತೆಗೆ ಆಹಾರ ರಫ್ತು, ಪೌಷ್ಟಿಕ ಆಹಾರ, ಪಾಳುಬಿದ್ದ ಜಮೀನು ಎಷ್ಟು? ಅದರ ಫ‌ಲವತ್ತತೆ ಕೈಗೊಳ್ಳಬೇಕಾದ ಕ್ರಮಗಳು ಏನು? ರೈತರಿಗೆ ನ್ಯಾಯಯುತ ಬೆಲೆ ಸಿಗುತ್ತಿಲ್ಲ ಎಂಬ ಕೂಗು ಇದೆ. ಈ ನಿಟ್ಟಿನಲ್ಲಿ ಕೈಗೊಳ್ಳಬಹುದಾದ ಕ್ರಮಗಳು ಏನು? ರಾಜ್ಯದ ವಿವಿಧ ಹವಾಮಾನ ವಲಯಗಳಿದ್ದು, ಒಂದೊಂದು ಕಡೆ ಕೃಷಿ ಚಟುವಟಿಕೆಗಳು ಭಿನ್ನವಾಗಿವೆ. ಅದಕ್ಕೆ ತಕ್ಕಂತೆ ಕಾರ್ಯಕ್ರಮಗಳನ್ನು ರೂಪಿಸುವುದು ಇದರ ಉದ್ದೇಶವಾಗಿದೆ. ಇದಕ್ಕಾಗಿ ರಾಜ್ಯವೂ ಸೇರಿ ನೆರೆ ರಾಜ್ಯಗಳ ಕೃಷಿ ಸಂಬಂಧಿತ ಸಂಶೋಧನಾ ಸಂಸ್ಥೆಗಳು, ವಿಶ್ವವಿದ್ಯಾಲಯಗಳು, ಕೃಷಿ ತಜ್ಞರು, ಪ್ರಗತಿಪರ ರೈತರು ಹೀಗೆ ವಿವಿಧ ವಲಯಗಳಿಂದ ಅಭಿಪ್ರಾಯ ಮತ್ತು ಸಲಹೆಗಳನ್ನು ಸಂಗ್ರಹಿಸಲಾಗುವುದು ಎಂದು ವಿವರಿಸಿದರು.

ಇದಲ್ಲದೆ, ನಗರೀಕರಣದ ಪರಿಣಾಮ ಕೃಷಿ ಭೂಮಿ ಪ್ರಮಾಣ ಕಡಿಮೆಯಾಗಿದೆ. 86 ಲಕ್ಷ ಕೃಷಿ ಕುಟುಂಬಗಳಿದ್ದು, ಸರಾಸರಿ 1.25 ಎಕರೆ ಕೃಷಿ ಭೂಮಿ ಇದೆ. ಸಣ್ಣ ಮತ್ತು ಅತಿಸಣ್ಣ ಹಿಡುವಳಿದಾರರ ಪ್ರಮಾಣ ರಾಜ್ಯದಲ್ಲಿ ಶೇ. 75ರಿಂದ 80ರಷ್ಟಿದ್ದರೂ, ಉತ್ಪಾದಕತೆ ಕೇವಲ ಶೇ.40ರಿಂದ 45ರಷ್ಟಿದೆ. ಮುಂದಿನ 25 ವರ್ಷಗಳಲ್ಲಿ ಈ ಭೂಮಿ ಇನ್ನೂ ಕಡಿಮೆಯಾಗಬಹುದು. ಆದ್ದರಿಂದ ತಂತ್ರಜ್ಞಾನ ಬಳಸಿ, ಉತ್ಪಾದಕತೆ ಹೆಚ್ಚಿಸಲು ಇರುವ ಅವಕಾಶಗಳ ಬಗ್ಗೆಯೂ ವರದಿ ಬೆಳಕು ಚೆಲ್ಲಲಿದೆ ಎಂದು ಮಾಹಿತಿ ನೀಡಿದರು.

ಇನ್ನೂ ಚರ್ಚೆ ಕೂಡ ಆಗಿಲ್ಲ!? ಈ ಮಧ್ಯೆ, ರಾಜ್ಯ ಕೃಷಿ ಯೋಜನೆ ಸಿದ್ಧಪಡಿಸಿ ಸಲ್ಲಿಸುವಂತೆ ನಿರ್ದೇಶಿಸಿ ಹಲವು ತಿಂಗಳು ಕಳೆದರೂ, ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಈ ಬಗ್ಗೆ ಇಲಾಖೆಯು ಇನ್ನೂ ಚರ್ಚೆ ಕೂಡ ನಡೆಸಿಲ್ಲ! ರಾಜ್ಯ ಮತ್ತು ಜಿಲ್ಲಾ ಕೃಷಿ ಯೋಜನೆಯನ್ನು ಸಲ್ಲಿಸದಿರುವ ಈಚೆಗೆ ಸ್ವತಃ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಸಚಿವೆ ಶೋಭಾ ಕರಂದ್ಲಾಜೆ ಅವರು ಕೂಡ ಬೇಸರ ವ್ಯಕ್ತಪಡಿಸಿದ್ದರು. ಈ ಬಗ್ಗೆ ಶಿವಯೋಗಿ ಕಳಸದ ಅವರನ್ನು ಕೇಳಿದಾಗ, “ಸಿದ್ಧತೆಗಳು ನಡೆದಿದ್ದು, ಈಗಾಗಲೇ ಒಂದೆರಡು ಸಭೆಗಳು ಆಗಿವೆ. ವಾರದಲ್ಲಿ ಮತ್ತೂಂದು ಸುತ್ತಿನ ಸಭೆ ಕರೆಯಲಾಗಿದೆ. ಶೀಘ್ರ ಸಲ್ಲಿಸಲಾಗುವುದು’ ಎಂದರು. “ಯೋಜನಾ ವರದಿ ಸಲ್ಲಿಕೆಗೆ ಯಾವುದೇ ಗಡುವು ವಿಧಿಸಿಲ್ಲ. ಆದರೆ, ಆದಷ್ಟು ಬೇಗ ಸಲ್ಲಿಸುವಂತೆ ಸೂಚಿಸಲಾಗಿದೆ. ಇದುವರೆಗೆ ಯಾವುದೇ ರಾಜ್ಯಗಳಿಂದ ಯೋಜನಾ ವರದಿ ಸಲ್ಲಿಕೆಯಾಗಿಲ್ಲ. ಅಗತ್ಯಬಿದ್ದರೆ ಈ ಸಂಬಂಧ ಮತ್ತೂಮ್ಮೆ ಪತ್ರ ಬರೆಯಲಾಗುವುದು’ ಎಂದು ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಸಚಿವಾಲಯದ ರಾಷ್ಟ್ರೀಯ ಮಳೆಯಾಶ್ರಿತ ಪ್ರದೇಶ ಆಯೋಗ (ಎನ್‌ಆರ್‌ಎಎ)ದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಅಶೋಕ ದಳವಾಯಿ ತಿಳಿಸುತ್ತಾರೆ.

-ವಿಜಯಕುಮಾರ ಚಂದರಗಿ

ಟಾಪ್ ನ್ಯೂಸ್

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾಣೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

14

Tollywood: ಅಧಿಕೃತವಾಗಿ ರಿವೀಲ್‌ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್‌ ಡೇಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

4

ವಿಚ್ಛೇದನ ನೀಡದಿದ್ದರೆ ತಲೆಯನ್ನು ಕಡಿದು ಕುಕ್ಕರ್‌ನಲ್ಲಿ ಬೇಯಿಸುವೆ ಎಂದ ಪತಿ ವಿರುದ್ಧ FIR

Bangalore: ಕೇಸರಿ ಶರ್ಟ್‌ ಧರಿಸಿದ್ದಕ್ಕೆ ಯುವಕನಿಗೆ ಹಲ್ಲೆ; ಆರೋಪ

Bangalore: ಕೇಸರಿ ಶರ್ಟ್‌ ಧರಿಸಿದ್ದಕ್ಕೆ ಯುವಕನಿಗೆ ಹಲ್ಲೆ; ಆರೋಪ

Voting: ರಾಜಧಾನಿಯಲ್ಲಿ ಶಾಂತಿಯುತ ಮತದಾನ; ಬಿ.ದಯಾನಂದ್‌

Voting: ರಾಜಧಾನಿಯಲ್ಲಿ ಶಾಂತಿಯುತ ಮತದಾನ; ಬಿ.ದಯಾನಂದ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eewq-ewq

Yadgir; ಮೇ.1 ರಂದು ಕಾಂಗ್ರೆಸ್ ನಾಯಕರ ಸಮಾಗಮ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.