ಗರ್ಭಿಣಿಗೆ ಸೋಂಕು: ಹೆಚ್ಚಿದ ಆತಂಕ


Team Udayavani, May 9, 2020, 10:05 AM IST

ಗರ್ಭಿಣಿಗೆ ಸೋಂಕು: ಹೆಚ್ಚಿದ ಆತಂಕ

ಸಾಂದರ್ಭಿಕ ಚಿತ್ರ

ಬೆಂಗಳೂರು: ಪಾದರಾಯನಪುರದಲ್ಲಿ ಕೋವಿಡ್ ಸೋಂಕು ದೃಢಪಟ್ಟ ಗರ್ಭಿಣಿಯೊಬ್ಬರು ಶುಕ್ರವಾರ ಚಾಮರಾಜಪೇಟೆಯ ಬಿಬಿಎಂಪಿ ಹೆರಿಗೆ ಆಸ್ಪತ್ರೆಗೆ ಭೇಟಿ ನೀಡಿ ಪರೀಕ್ಷೆಗೆ ಒಳಗಾದ ಹಿನ್ನೆಲೆಯಲ್ಲಿ ಈ ಭಾಗದಲ್ಲಿ ಆತಂಕ ಸೃಷ್ಟಿಯಾಗಿದೆ. ಸೋಂಕು ದೃಢಪಟ್ಟ ಮಹಿಳೆ ನಿಂತಿದ್ದ ಸರತಿ ಸಾಲಿನಲ್ಲಿ 30ಕ್ಕೂ ಹೆಚ್ಚು ಗರ್ಭಿಣಿಯರು ತಪಾಸಣೆಗೆ ಕಾಯುತ್ತಿದ್ದರು.

ಮುಂಜಾ ಗ್ರತಾ ಕ್ರಮವಾಗಿ ಚಾಮರಾಜ ಪೇಟೆಯ ಬಿಬಿಎಂಪಿ ಆಸ್ಪತ್ರೆಯನ್ನು ಸೀಲ್ ಡೌನ್‌ ಮಾಡಲಾಗಿದ್ದು, ಸೋಂಕು ನಿವಾರಕ ದ್ರಾವಣ ಸಿಂಪಡಣೆ ಸೇರಿದಂತೆ ಮುನ್ನೆಚ್ಚರಿಕಾ ಕ್ರಮ ತೆಗೆದುಕೊಳ್ಳಲಾಗಿದೆ ಎಂದು ಬಿಬಿಎಂಪಿ ಅಧಿಕಾರಿಗಳು ತಿಳಿಸಿದ್ದಾರೆ. ಈ ಕುರಿತು ಪಶ್ಚಿಮ ವಲಯದ ಆರೋಗ್ಯಾಧಿಕಾರಿ ಮನೋರಂಜನ್‌ ಹೆಗಡೆ ಪ್ರತಿಕ್ರಿಯಿಸಿ, ಇತ್ತೀಚೆಗೆ ಪಾದರಾಯನಪುರದಲ್ಲಿ 48 ಜನರಿಗೆ ರ್‍ಯಾಂಡಮ್‌ ಪರೀಕ್ಷೆ ನಡೆಸಲಾಗಿತ್ತು. ಇದರಲ್ಲಿ ಇಬ್ಬರು ಮಹಿಳೆಯರು ಹಾಗೂ ಒಬ್ಬ ಪುರುಷ ಸೇರಿ ಒಟ್ಟು ಮೂರು ಮಂದಿಗೆ ಸೋಂಕು ದೃಢಪಟ್ಟಿದೆ. ಇದರಲ್ಲಿ ಒಬ್ಬರು ಗರ್ಭಿಣಿಗೂ ಸೋಂಕಿದೆ. ಕ್ವಾರೆಂಟೈನ್‌ ಮಾಡಲು ಶುಕ್ರವಾರ ಪಾದರಾಯನಪುರಕ್ಕೆ ಹೋಗುವಷ್ಟರಲ್ಲಿ ಮಹಿಳೆ ಚಾಮರಾಜ ಪೇಟೆಯಲ್ಲಿರುವ ಬಿಬಿಎಂಪಿ ಹೆರಿಗೆ ಆಸ್ಪತ್ರೆಯಲ್ಲಿ ತಪಾಸಣೆಗೆ ಒಳಗಾಗಿದ್ದರು. ಕೂಡಲೇ ಅವರನ್ನು ಕ್ವಾರೆಂಟೈನ್‌ ಮಾಡಿ ವಿಕ್ಟೋರಿಯಾ ಆಸ್ಪತ್ರೆ ಸ್ಥಳಾಂತರಿಸಲಾಗಿದೆ ಎಂದರು.

ಆತಂಕ ಪಡುವ ಅಗತ್ಯ ಇಲ್ಲ: ಸೋಂಕು ದೃಢಪಟ್ಟ ಗರ್ಭಿಣಿ ಜತೆ ಹೆರಿಗೆ ಆಸ್ಪತ್ರೆಯಲ್ಲಿ ಸಾಲಿನಲ್ಲಿದ್ದ ಇತರೆ ಗರ್ಭಿಣಿಯರು ಆತಂಕಕ್ಕೆ ಒಳಗಾಗುವ ಅವಶ್ಯಕತೆ ಇಲ್ಲ. ಆದರೂ ಮುಂಜಾಗ್ರತೆಗಾಗಿ ಮಾಹಿತಿ ಸಂಗ್ರಹಿಸಲಾಗುತ್ತಿದೆ. ಇವರನ್ನು ಕ್ವಾರಂಟೈನ್‌ ಮಾಡುವ ಬಗ್ಗೆ ಇನ್ನಷ್ಟೇ ನಿರ್ಧಾರವಾಗಬೇಕಿದೆ. ಇನ್ನು ಪಾದರಾಯನಪುರ ದಲ್ಲಿ ರ್‍ಯಾಂಡಮ್‌ ಪರೀಕ್ಷೆ ಮೇಲೆ ಸೋಂಕು ದೃಢಪಟ್ಟ ಮೂವರರೊಂದಿಗೆ ಸಂಪರ್ಕದಲ್ಲಿದ್ದ 30 ಜನರನ್ನು ಕ್ವಾರಂಟೈನ್‌ ಮಾಡಲಾಗಿದೆ ಎಂದು ಮಾಹಿತಿ ನೀಡಿದರು.

ಅಧಿಕಾರಿಗಳು ತಬ್ಬಿಬ್ಬು
ಪಾದರಾಯನಪುರದಲ್ಲಿ ಗುರುವಾರ ರಾತ್ರಿಯೇ ಗರ್ಭಿಣಿಗೆ ಸೋಂಕು ದೃಢಪಟ್ಟಿತ್ತು. ಆದರೆ, ಬಿಬಿಎಂಪಿ ಆಕೆ ಆಸ್ಪತ್ರೆಗೆ ದಾಖಲಾಗುವ ಸಂಬಂಧ ಮಾಹಿತಿ ನೀಡಿರಲಿಲ್ಲ. ಆಕೆ,
ಶುಕ್ರವಾರ ಬೆಳಗ್ಗೆ ಹೆರಿಗೆ ಆಸ್ಪತ್ರೆಯೊಂದಕ್ಕೆ ತೆರಳಿ ತನ್ನ ಆರೋಗ್ಯ ತಪಾಸಣೆಗೋಸ್ಕರ ಸರತಿ ಸಾಲಿನಲ್ಲಿ ನಿಂತಿದ್ದರು. ಅತ್ತ ಬಿಬಿಎಂಪಿ ಆರೋಗ್ಯಾಧಿಕಾರಿಗಳು ಗರ್ಭಿಣಿ ಮನೆಗೆ ತೆರಳಿ ವಿಚಾರಿಸಿದಾಗ ಅಲ್ಲಿರಲಿಲ್ಲ. ಆಕೆ ಆಸ್ಪತ್ರೆಗೆ ತೆರಳಿದರೆಂಬ ಮಾಹಿತಿ ಗೊತ್ತಾಗುತ್ತಿದ್ದಂತೆ ತಬ್ಬಿಬ್ಟಾದ ಅಧಿಕಾರಿಗಳು ವಿವಿಧ ಆಸ್ಪತ್ರೆಗಳಿಗೆ ಅಲೆದಾಡಿದರು. ಸುಮಾರು ಮೂರು ತಾಸು ಬಳಿಕ ಆ ಮಹಿಳೆ ಹೆರಿಗೆ ಆಸ್ಪತ್ರೆಯೊಂದರ ಬಳಿ ಕಂಡುಬಂದರು!

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.