ಬಿಎಂಟಿಸಿಯ ಇಬ್ಬರು ಸಿಬ್ಬಂದಿಗೆ ಸೋಂಕು: ಆತಂಕ


Team Udayavani, Jun 15, 2020, 6:13 AM IST

bmtc-staffa

ಬೆಂಗಳೂರು: ಕೇವಲ ಮೂರು ದಿನಗಳ ಅಂತರದಲ್ಲಿ ಬಿಎಂಟಿಸಿಯಲ್ಲಿ ಮತ್ತೆ ಇಬ್ಬರು ಸಿಬ್ಬಂದಿಯಲ್ಲಿ ಕೋವಿಡ್‌ 19 ದೃಢಪಟ್ಟಿದ್ದು, ಮತ್ತಷ್ಟು ಆತಂಕಕ್ಕೆ ಕಾರಣ ವಾಗಿದೆ. ಇದು ಮುಂದಿನ ದಿನಗಳಲ್ಲಿ ಬಿಎಂಟಿಸಿ ಕಾರ್ಯಾಚರಣೆ  ಮೇಲೆ ಪರಿಣಾಮ ಬೀರಲಿದೆ. ಕೋರಮಂಗಲ ಡಿಪೋದ ಚಾಲಕ ಮತ್ತು ಇಂದಿರಾನಗರ ಡಿಪೋದ ಸಂಚಾರ ನಿಯಂತ್ರಕರೊಬ್ಬರಿಗೆ ಸೋಂಕು ಕಾಣಿಸಿಕೊಂಡಿದ್ದು, ಬೆನ್ನಲ್ಲೇ ಉಳಿದ ಸಿಬ್ಬಂದಿಯಲ್ಲಿ ತಲ್ಲಣ ಸೃಷ್ಟಿಸಿದೆ.

ಪರಿಣಾಮ  ಸಂಜೆಯಿಂದಲೇ ಬಸ್‌ಗಳ ಕಾರ್ಯಾಚರಣೆಯಲ್ಲಿ ಇಳಿಮುಖ ಕಂಡುಬಂದಿದೆ. ಸೋಮವಾರ ಈ ಆತಂಕ ಉಳಿದ ಘಟಕಗಳ ಮೇಲೂ ಪ್ರಭಾವ ಬೀರುವ ಸಾಧ್ಯತೆ ಇದೆ. ಎರಡೂ ಸೋಂಕಿನ ಮೂಲಗಳು ಸದ್ಯಕ್ಕೆ ತಿಳಿದುಬಂದಿಲ್ಲ. ಆದರೆ,  ಇಬ್ಬರೂ ಹೆಚ್ಚು-ಕಡಿಮೆ ಮೂರ್‍ನಾಲ್ಕು ದಿನಗಳಿಂದ ಅನಾರೋಗ್ಯ ಕಾರಣ ರಜೆಯಲ್ಲಿದ್ದರು. ಹಾಗಾಗಿ, ಇವರೊಂದಿಗೆ ಸಂಪರ್ಕದಲ್ಲಿದ್ದವರ ಸಂಖ್ಯೆ ವಿರಳ.

ಸೋಂಕಿನ ಲಕ್ಷಣಗಳು ಕಂಡುಬಂದ ಹಿನ್ನೆಲೆಯಲ್ಲಿ ಇಬ್ಬರ ಗಂಟಲು  ದ್ರವ ಮಾದರಿ ಪರೀಕ್ಷೆಗೊಳಗಪಡಿಸಲಾಗಿತ್ತು. “ಪಾಸಿಟಿವ್‌’ ಇರುವುದು ಗೊತ್ತಾಗುತ್ತಿದ್ದಂತೆ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರ ಕುಟುಂಬಗಳನ್ನು ಕ್ವಾರಂಟೈನ್‌ ಮಾಡಲಾಗಿದೆ. ಪ್ರಾಥಮಿಕ ಮತ್ತು ದ್ವಿತೀಯ  ಸಂಪರ್ಕಿತರ ಪತ್ತೆಕಾರ್ಯವನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮುಂದುವರಿಸಿದೆ. ಸಂಚಾರ ನಿಯಂತ್ರಕರು ಜೂ.6ರವರೆಗೆ ಕಾರ್ಯನಿರ್ವಹಿಸಿದ್ದರು. ನಂತರ ಅನಾರೋಗ್ಯದ ಕಾರಣ ರಜೆಯಲ್ಲಿದ್ದರು. ಅದೇ ರೀತಿ,  ಕೋರಮಂಗಲದ ಚಾಲಕ ಜೂ.11ರವರೆಗೆ ಕರ್ತವ್ಯ ನಿರ್ವಹಿಸಿದ್ದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಸುರಕ್ಷತೆ ನಗಣ್ಯ: ಆರೋಪ: ಈ ಮಧ್ಯೆ ಪಾಸಿಟಿವ್‌ ಪ್ರಕರಣ ದೃಢಪಟ್ಟ ಹಿನ್ನೆಲೆಯಲ್ಲಿ ತಮಗೆ ಸುರಕ್ಷತೆಯೇ ಇಲ್ಲದಂತಾಗಿದೆ  ಎಂದು ಕೋರಮಂಗಲ ಡಿಪೋದಲ್ಲಿ ಚಾಲನಾ ಸಿಬ್ಬಂದಿ  ಭಾನುವಾರ ಪ್ರತಿಭಟನೆ ನಡೆಸಿದರು. “ಸೂಕ್ತ ಮಾಸ್ಕ್ ಮತ್ತು ಸ್ಯಾನಿಟೈಸರ್‌ ವ್ಯವಸ್ಥೆಯೇ  ಇಲ್ಲ. ನಿತ್ಯ ನೂರಾರು ಜನರೊಂದಿಗೆ ಪ್ರಯಾಣಿಸುವ ಚಾಲಕರು ಮತ್ತು  ನಿರ್ವಾಹಕರು ಆತಂಕದಲ್ಲಿ ಕರ್ತವ್ಯ ನಿರ್ವಹಿಸುವಂತಾಗಿದೆ.

ಸಹವಾಸ ಬೇಡ ವೆಂದು ಮನೆಯಲ್ಲಿದ್ದರೆ, ವೇತನಕ್ಕೆ ಕತ್ತರಿ ಬೀಳುತ್ತದೆ. ಆಗ, ಕುಟುಂಬ ನಿರ್ವಹಣೆ ಕಷ್ಟವಾಗುತ್ತದೆ. ಕೆಲಸಕ್ಕೆ ಹಾಜರಾದರೆ, ಸಹೋದ್ಯೋಗಿಗಳಲ್ಲಿ  ಕಾಣಿಸುತ್ತಿರುವ ಕೋವಿಡ್‌ 19 ಭಯ ಹುಟ್ಟಿಸುತ್ತದೆ. ಸಮರ್ಪಕ ಸುರಕ್ಷಾ ಸಾಮಗ್ರಿಗಳನ್ನು ವಿತರಿಸಬೇಕು’ ಎಂದು ಆಗ್ರಹಿಸಿದರು. “ಇಬ್ಬರಲ್ಲಿ ಪಾಸಿಟಿವ್‌ ಇರುವುದು ಗೊತ್ತಾಗಿದೆ. ಆದರೆ, ಈ ಬಗ್ಗೆ ವರದಿಗಳು ಇನ್ನೂ ಸಂಸ್ಥೆಯ ಕೈಸೇರಿಲ್ಲ.

ಬೆನ್ನಲ್ಲೇ ಅಗತ್ಯ ಸುರಕ್ಷತಾ  ಕ್ರಮಗಳನ್ನು ಕೈಗೊಳ್ಳಲಾಗಿದೆ. ಮುಖಗವಸು, ಸ್ಯಾನಿಟೈಸರ್‌ ವ್ಯವಸ್ಥೆ ಕಲ್ಪಿಸಲಾಗಿದೆ. ಇಬ್ಬರೂ ವಾರದಿಂದ ರಜೆ ಇರುವುದರಿಂದ ಸಂಪರ್ಕಿತರ ಪ್ರಶ್ನೆ ಬರುವುದಿಲ್ಲ. ಕಾರ್ಯಾಚರಣೆ ಮೇಲೆಯೂ ಇದು ಪ್ರಭಾವ  ಬೀರುವುದಿಲ್ಲ’ ಎಂದು  ಬಿಎಂಟಿಸಿ ಅಧಿಕಾರಿಯೊಬ್ಬರು ಸ್ಪಷ್ಟಪಡಿಸಿದ್ದಾರೆ. ವಿಚಾರ ತಿಳಿದು ಸ್ಥಳಕ್ಕೆ ದೌಡಾಯಿಸಿದ ಸಂಸ್ಥೆಯ ಅಧಿಕಾರಿಯೊಬ್ಬರು ಸಿಬ್ಬಂದಿಯ ಅಹವಾಲು ಆಲಿಸಿ ಮನವೊಲಿಸುವ ಪ್ರಯತ್ನ ಮಾಡಿದರು.

ಟಾಪ್ ನ್ಯೂಸ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

17-voting

Vote: ಮತದಾನದ ಮಹತ್ವ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.