ಬಿಬಿಎಂಪಿ ಕೇಂದ್ರ ಕಚೇರಿಗೆ ಅನೌಪಚಾರಿಕ ನಿರ್ಬಂಧ!
Team Udayavani, Jun 29, 2020, 6:34 AM IST
ಬೆಂಗಳೂರು: ಬಿಬಿಎಂಪಿ ಕೇಂದ್ರ ಕಚೇರಿಗೆ ಸದ್ಯ ಸಾರ್ವಜನಿಕರ ಪ್ರವೇಶವನ್ನು ಪಾಲಿಕೆ ಅನೌಪಚಾರಿಕವಾಗಿ ನಿಷೇಧಿಸಿದೆ. ಕೋವಿಡ್ 19 ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಅತ್ಯಂತ ತುರ್ತು ಕೆಲಸಗಳಿದ್ದರೆ ಮಾತ್ರ ಸಾರ್ವಜನಿಕರಿಗೆ ಪಾಲಿಕೆ ಕಚೇರಿಯ ಒಳಗೆ ಪ್ರವೇಶ ನೀಡಲಾಗು ತ್ತಿದೆ. ಅರ್ಜಿಗಳನ್ನು ಪಾಲಿಕೆಯ ಮುಖ್ಯ ದ್ವಾರಗಳ ಬಳಿಯೇ ತೆಗೆದುಕೊಳ್ಳಲಾಗುತ್ತಿದೆ. ಮುಖ್ಯದ್ವಾರದಲ್ಲಿ ಟಪಾಲು ಮತ್ತು ಒಂದು ಬಾಕ್ಸ್ ಇರಿಸಲಾಗಿದೆ.
ಬಿಬಿಎಂಪಿಯ ಅಧಿಕಾರಿಗಳು ಸಿಬ್ಬಂದಿ ಹಾಗೂ ಸುದ್ದಿಗಾರರಿಗೆ ಮಾತ್ರ ಸದ್ಯ ಅವಕಾಶ ನೀಡಲಾಗಿ ದ್ದು, ಉಳಿದವರನ್ನು ಮಾರ್ಷಲ್ ಹಾಗೂ ಭದ್ರತಾ ಸಿಬ್ಬಂದಿ ಪಾಲಿಕೆಯ ಕೇಂದ್ರ ಕಚೇರಿಯ ಮುಖ್ಯದ್ವಾರದಲ್ಲೇ ತಡೆಯುತ್ತಿದ್ದು, ಒಳಗೆ ಹೋಗಲೇ ಬೇಕಾದ ತುರ್ತು ಇದ್ದರೆ ಮಾತ್ರ ಬಿಡುತ್ತಿದ್ದಾರೆ. ರಾಜಕೀಯ ನಾಯಕರ ಬೆಂಬಲಿಗರನ್ನೂ ಮುಖ್ಯ ದ್ವಾರದಲ್ಲೇ ತಡೆಹಿಡಿಯಲಾಗುತ್ತಿದೆ. ಈ ಸಂಬಂಧ ಪ್ರತಿಕ್ರಿಯಿಸಿದ ಅನ್ಬುಕುಮಾರ್ ಅವರು, ನಗರದಲ್ಲಿ ಸೋಂಕು ಹೆಚ್ಚಾಗುತ್ತಿರುವ ಮಧ್ಯೆಯೇ ಬಿಬಿಎಂಪಿ ಕೇಂದ್ರ ಕಚೇರಿಗೆ ಬರುವವರ ಸಂಖ್ಯೆಯೂ ಹೆಚ್ಚಾಗುತ್ತಿದೆ.
ಇದರಿಂದ ಸೋಂಕು ಹೆಚ್ಚಾಗುವ ಆತಂಕ ಎದುರಾಗಿದೆ. ಅಲ್ಲದೆ, ಪಾಲಿಕೆಯ ಆವರಣದಲ್ಲಿ ಪಾರ್ಕಿಂಗ್ ಮಾಡುವುದು ಹಾಗೂ ಹೆಚ್ಚು ಸಾಮಾಜಿಕ ಅಂತರ ಕಾಪಾಡಿಕೊಳ್ಳದೆ ಗುಂಪು ಸೇರುವುದು ಆಗುತ್ತಿದೆ. ಹೀಗಾಗಿ, ಅಗತ್ಯ ಇದ್ದರೆ ಮಾತ್ರ ಒಳಗೆ ಬಿಡುವಂತೆ ಸೂಚನೆ ನೀಡಲಾಗಿದೆ. ನಿರ್ಬಂಧ ವಿಧಿಸಿಲ್ಲ ಎಂದು ಸ್ಪಷ್ಟಪಡಿಸಿದರು. ಜನ ಕೇಂದ್ರ ಕಚೇರಿಗೆ ಬರುವುದನ್ನು ತಪ್ಪಿಸುವ ಉದ್ದೇಶದಿಂದ ಬಿಬಿಎಂಪಿ ಸಹಾಯ, ಸಕಾಲ ಹಾಗೂ ಸಹಾಯವಾಣಿಗೆ ಬರುವ ಎಲ್ಲ ದೂರುಗಳನ್ನು ಶೀಘ್ರವಾಗಿ ಪರಿಹರಿಸಲಾಗುತ್ತಿದೆ.
ಸದ್ಯ ಸಹಾಯದಲ್ಲಿ ಮೂರು ಸಾವಿರ ದೂರುಗಳಿವೆ. ಸಾರ್ವಜನಿಕರು ಸಾಧ್ಯವಾದಷ್ಟು ಆನ್ಲೈನ್ ಸೇವೆಗಳನ್ನು ಬಳಸಿಕೊಂಡು ಸೋಂಕು ನಿಯಂತ್ರಣಕ್ಕೆ ಸಹಕರಿಸಬೇಕು. ಕೆಲವರು ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಿ ಅದರ ಪ್ರಗತಿಯ ಬಗ್ಗೆ ಕಚೇರಿಗೆ ಬಂದು ಪರಿಶೀಲಿಸುತ್ತಿದ್ದಾರೆ. ಇದನ್ನು ತಪ್ಪಿಸಲು ಅವರ ಮೊಬೈಲ್ಗೆ ಕಡತದ ವಿವರ ಮತ್ತು ಪ್ರಗತಿ ಮೆಸೇಜ್ ಮಾಡಲು ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ
Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್ ಸುಲಿಗೆ; ಮೂವರ ಬಂಧನ
Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ
Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್ ಬಾತ್ಮೀದಾರ ಸೆರೆ
Arrested: ಸುಲಿಗೆ ಸೇರಿ 42 ಕೇಸ್ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ
MUST WATCH
ಹೊಸ ಸೇರ್ಪಡೆ
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ