ಪತ್ರಕರ್ತರಿಗೂ ವಿಮಾ ರಕ್ಷಣೆ: ಸಿಎಂ ಭರವಸೆ


Team Udayavani, Jul 4, 2020, 5:53 AM IST

patrakarta

ಬೆಂಗಳೂರು: ಕೋವಿಡ್‌ 19 ನಡುವೆಯೂ ಕಾರ್ಯನಿರ್ವಹಿಸುತ್ತಿರುವ ಪತ್ರಕರ್ತರನ್ನು ಕೋವಿಡ್‌ 19 ವಾರಿಯರ್ಸ್‌ ಎಂದು ಪರಿಗಣಿಸಿ ಪತ್ರಕರ್ತರನ್ನು ವಿಮಾ ವ್ಯಾಪ್ತಿಗೆ ಒಳಪಡಿಸಬೇಕು ಎಂದು ಕರ್ನಾಟಕ ಕಾರ್ಯ ನಿರತ ಪತ್ರಕರ್ತರ  ಸಂಘ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರಿಗೆ ಮನವಿ ಸಲ್ಲಿಸಿತು.

ಕೋವಿಡ್‌ 19 ಮೊದಲ ಲಾಕ್‌ಡೌನ್‌ ಸಂದರ್ಭದಲ್ಲಿ ರಾಷ್ಟ್ರವ ದ್ದೇಶಿಸಿ ಪ್ರಧಾನಿ ಮೋದಿ ಭಾಷಣ ಮಾಡುವ ವೇಳೆ ವೈದ್ಯರು, ದಾದಿಯರು, ಸೈನಿಕರು,  ಪೊಲೀಸರ ಜೊತೆಗೆ ಪತ್ರಕರ್ತರೂ ಕೋವಿಡ್‌ 19 ವಾರಿಯರ್ಸ್‌ ಎಂಬ ಹೆಚ್ಚುಗಾರಿಕೆ ಮಾತನಾಡಿ ಮೆಚ್ಚುಗೆ ಸೂಚಿಸಿದ್ದರು. ಪ್ರಧಾನಿ ಮಾತಿನಂತೆಯೇ ಈ ಎಲ್ಲ ವರ್ಗ ವಾರಿಯರ್ಸ್‌ಗಳು ಕಳೆದ ನಾಲ್ಕು ತಿಂಗಳಿಂದ ಹಗಲಿರುಳೆನ್ನದೆ  ಕರ್ತವ್ಯ ನಿರ್ವಹಣೆ ಮಾಡುತ್ತಿದ್ದಾರೆ. ಆದರೆ ಜೀವದ ಹಂಗು ತೊರೆದು ಸುದ್ದಿ ಸೇವೆಯಲ್ಲಿ ನಿರತ ಪತ್ರಕರ್ತರು ಕರ್ತವ್ಯ ದಲ್ಲಿರುವಾಗಲೇ ಪ್ರಾಣ ಕಳೆದುಕೊಂಡರೆ ಅವರ ನೆರವಿಗೆ ಕೆಲವೇ ಕೆಲವು ಸರಕಾರಗಳು ಮುಂದೆ ಬಂದಿರುವುದು  ವಿಪರ್ಯಾಸ.

50 ಲಕ್ಷ ರೂ ವಿಮೆ: ಕೋವಿಡ್‌ 19 ಸಂದರ್ಭದಲ್ಲಿ ಮರಣ ಹೊಂದಿದ ಕರ್ತವ್ಯ ನಿರತ ಪತ್ರಕರ್ತರಿಗೆ ಅಸ್ಸಾಂ ಸರಕಾರ 50 ಲಕ್ಷ ರೂ., ಹರಿಯಾಣ ಸರಕಾರ 25 ಲಕ್ಷ ರೂ.ಗಳ ಪರಿಹಾರ ಯೊಜನೆ ಪ್ರಕಟಿಸಿದೆ. ಜತೆಗೆ ದೆಹಲಿ, ಕೇರಳ ತೆಲಂಗಾಣ ಸರಕಾರಗಳೂ ಕೂಡ ಯೋಜನೆ ರೂಪಿಸಿರುವುದು ವಿಶೇಷ.

ಕರ್ನಾಟಕ ಸರಕಾರಕ್ಕೆ ಮನವಿ: ಅಸ್ಸಾಂ,ಹರಿಯಾಣ ಹಾಗೂ ಇತರ ರಾಜ್ಯಗಳ ಮಾದರಿಯಲ್ಲೇ ಕರ್ನಾಟಕದಲ್ಲೂ ಕಾರ್ಯನಿರತ ಪತ್ರಕರ್ತರಿಗೆ ವಿಮೆ, ಇತರ  ಸೌಕರ್ಯ ಒದಗಿಸುವಂತೆ ಮುಖ್ಯಮಂತ್ರಿ ಬಿಎಸ್‌ ಯಡಿಯೂರಪ್ಪ ಅವರಿಗೆ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘ ಕಳೆದ ಮೇ 16ರಂದು ಮಾಡಿದ ಮನವಿಗೆ ಸ್ಪಂದಿಸಿ ಯೋಜನೆ ರೂಪಿಸಲು ಅಧಿಕಾರಿಗಳಿಗೆ ಸೂಚಿಸಿದ್ದರು.

ಆದರೆ ಅಧಿಕಾರಿಗಳು ಕ್ರಮ ಕೈಗೊಳ್ಳದೆ ವಿಳಂಬ ಧೋರಣೆ ಅನುಸರಿಸಿದ್ದಾರೆ. ನಿಯೋಗದಲ್ಲಿ ಕೆಯುಡಬ್ಲೂಜೆ ಅಧ್ಯಕ್ಷ ಶಿವಾನಂದ ತಗಡೂರು,ಎಡಿಟರ್ ಗಿಲ್ಡ ಪರವಾಗಿ ವಿಜಯ ಕರ್ನಾಟಕ ಸಂಪಾದಕ ಹರಿಪ್ರಕಾಶ ಕೋಣೆಮನೆ, ವಿಜಯ  ಕರ್ನಾಟಕ ಪತ್ರಿಕೆ ಬೆಂಗಳೂರು ರೆಸಿಡೆಂಟ್‌ ಎಡಿಟರ್‌ ಸುದರ್ಶನ್‌ ಚನ್ನಂಗಿಹಳ್ಳಿ ನಿಯೋಗದಲ್ಲಿದ್ದರು.

ವಿಮೆಗೆ ಸುಧಾಕರ್‌ ಆಗ್ರಹ: ಪತ್ರಕರ್ತರಿಗೆ ವಿಮಾ ಸೌಲಭ್ಯ ಕಲ್ಪಿಸಬೇಕೆಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಸುಧಾಕರ್‌ ಸರಕಾರಕ್ಕೆ ಒತ್ತಾಯಿಸಿದ್ದಾರೆ.

ಇಬ್ಬರು ಪತ್ರಕರ್ತರಿಗೆ ಪರಿಹಾರ: ಕೋವಿಡ್‌ 19 ಸಂದರ್ಭದಲ್ಲಿ ಮೃತಪಟ್ಟ ಹಿರಿಯ ಪತ್ರಕರ್ತ ಜಿ.ಪಿ.ಚಂದ್ರಶೇಖರ ಹಾಗೂ ಆಕಸ್ಮಿಕವಾಗಿ ಮೃತರಾದ ಪತ್ರಕರ್ತ ಜಿಎಂ ರವೀಶ ಅವರಿಗೆ ಪರಿಹಾರ ನೀಡುವ ಸಂಬಂಧ ಶುಕ್ರವಾರ ರಾಜ್ಯ  ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ಎಡಿಟರ್ ಗಿಲ್ಡ ನಿಯೋಗ ಸಿಎಂ ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿತು.ಮನವಿಗೆ ಸ್ಪಂದಿಸಿದ ಯಡಿಯೂರಪ್ಪ ಇಬ್ಬರಿಗೂ ತಲಾ 5 ಲಕ್ಷ ರೂ.ಪರಿಹಾರಕ್ಕೆ ಸೂಚಿಸಿ ಕೋವಿಡ್‌ 19 ವಿಮೆ ಯೋಜನೆ ರೂಪಿಸುವ ಸಂಬಂಧ ಕ್ರಮ ತೆಗೆದುಕೊಳ್ಳುವ ಭರವಸೆ ನೀಡಿದರು.

ಟಾಪ್ ನ್ಯೂಸ್

ಹಂತ-1: ಬಹಿರಂಗ ಪ್ರಚಾರಕ್ಕೆ ಇಂದು ತೆರೆ, ನಾಳೆ ಮನೆ ಪ್ರಚಾರ

Lok Sabha Election ಹಂತ-1: ಬಹಿರಂಗ ಪ್ರಚಾರಕ್ಕೆ ಇಂದು ತೆರೆ, ನಾಳೆ ಮನೆ ಪ್ರಚಾರ

arvind kejriwal aap

Lok Sabha Election; ಕೇಜ್ರಿವಾಲ್‌ ಸೆರೆ‌ ಆಪ್‌ಗೆ ವರವೇ? ಶಾಪವೇ?

ಮುರುಘಾ ಶ್ರೀ ಜಾಮೀನು ರದ್ದು: ವಾರದಲ್ಲಿ ಶರಣಾಗಲು ತಾಕೀತು

ಮುರುಘಾ ಶ್ರೀ ಜಾಮೀನು ರದ್ದು: ವಾರದಲ್ಲಿ ಶರಣಾಗಲು ತಾಕೀತು

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

Apologize for the size of the wrong ad: Supreme to Ramdev

Patanjali; ತಪ್ಪು ಜಾಹೀರಾತಿನ ಗಾತ್ರದಲ್ಲೇ ಕ್ಷಮೆ ಕೇಳಿ: ರಾಮದೇವ್‌ ಗೆ ಸುಪ್ರೀಂ

Lok Sabha Election ; ಪ್ರಚಾರ ಜೋರು, ಚರ್ಚಾ ವಿಷಯ ಮೂರು!

Lok Sabha Election ; ಪ್ರಚಾರ ಜೋರು, ಚರ್ಚಾ ವಿಷಯ ಮೂರು!

Lok Sabha Election; Vigorous fight of new faces in Dakshina Kannada

Lok Sabha Election; ದಕ್ಷಿಣ ಕನ್ನಡದಲ್ಲಿ ಹೊಸ ಮುಖಗಳ ಹುರುಪಿನ ಸೆಣಸಾಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಕದಂಬ ಹೋಟೆಲ್‌ ಸ್ಫೋಟ ಮಾಡುವುದಾಗಿ ಬೆದರಿಕೆ 

Bengaluru: ಕದಂಬ ಹೋಟೆಲ್‌ ಸ್ಫೋಟ ಮಾಡುವುದಾಗಿ ಬೆದರಿಕೆ 

Rameshwaram Cafe Case: ರಾಮೇಶ್ವರಂ ಕೆಫೆ ಸ್ಫೋಟ ಶಂಕಿತರು ಮತ್ತೆ 7 ದಿನ ಎನ್‌ಐಎ ವಶಕ್ಕೆ

Rameshwaram Cafe Case: ರಾಮೇಶ್ವರಂ ಕೆಫೆ ಸ್ಫೋಟ ಶಂಕಿತರು ಮತ್ತೆ 7 ದಿನ ಎನ್‌ಐಎ ವಶಕ್ಕೆ

FIR: ಬಾಲಕಿಗೆ ಲೈಂಗಿಕ ದೌರ್ಜನ್ಯ, ಆರೋಪಿ ಬಂಧನ: ಎಫ್ಐಆರ್‌

FIR: ಬಾಲಕಿಗೆ ಲೈಂಗಿಕ ದೌರ್ಜನ್ಯ, ಆರೋಪಿ ಬಂಧನ: ಎಫ್ಐಆರ್‌

Fraud: ಹೂಡಿಕೆ ನೆಪದಲ್ಲಿ ವ್ಯಾಪಾರಿಗೆ 5 ಕೋಟಿ ವಂಚನೆ

Fraud: ಹೂಡಿಕೆ ನೆಪದಲ್ಲಿ ವ್ಯಾಪಾರಿಗೆ 5 ಕೋಟಿ ವಂಚನೆ

Bengalur: ವೈದ್ಯರ ನಿರ್ಲಕ್ಷ್ಯಕ್ಕೆ ರೋಗಿ ಸಾವು; ಠಾಣೆ ಬಳಿ ಶವ ಇರಿಸಿ ಪ್ರತಿಭಟನೆ

Bengalur: ವೈದ್ಯರ ನಿರ್ಲಕ್ಷ್ಯಕ್ಕೆ ರೋಗಿ ಸಾವು; ಠಾಣೆ ಬಳಿ ಶವ ಇರಿಸಿ ಪ್ರತಿಭಟನೆ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

ಹಂತ-1: ಬಹಿರಂಗ ಪ್ರಚಾರಕ್ಕೆ ಇಂದು ತೆರೆ, ನಾಳೆ ಮನೆ ಪ್ರಚಾರ

Lok Sabha Election ಹಂತ-1: ಬಹಿರಂಗ ಪ್ರಚಾರಕ್ಕೆ ಇಂದು ತೆರೆ, ನಾಳೆ ಮನೆ ಪ್ರಚಾರ

arvind kejriwal aap

Lok Sabha Election; ಕೇಜ್ರಿವಾಲ್‌ ಸೆರೆ‌ ಆಪ್‌ಗೆ ವರವೇ? ಶಾಪವೇ?

ಮುರುಘಾ ಶ್ರೀ ಜಾಮೀನು ರದ್ದು: ವಾರದಲ್ಲಿ ಶರಣಾಗಲು ತಾಕೀತು

ಮುರುಘಾ ಶ್ರೀ ಜಾಮೀನು ರದ್ದು: ವಾರದಲ್ಲಿ ಶರಣಾಗಲು ತಾಕೀತು

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

Apologize for the size of the wrong ad: Supreme to Ramdev

Patanjali; ತಪ್ಪು ಜಾಹೀರಾತಿನ ಗಾತ್ರದಲ್ಲೇ ಕ್ಷಮೆ ಕೇಳಿ: ರಾಮದೇವ್‌ ಗೆ ಸುಪ್ರೀಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.