ಇಂದಿರಾ ಕ್ಯಾಂಟೀನ್‌ಗೆ ಇಸ್ಕಾನ್‌ ಊಟ; ನಗರಾಭಿವೃದ್ಧಿ ಇಲಾಖೆಗೆ ಪ್ರಸ್ತಾವನೆ

ಶೆಫ್‌ಟಾಕ್‌, ರಿವಾರ್ಡ್ಸ್‌ ಮತ್ತು ಅದಮ್ಯ ಚೇತನ ಸಂಸ್ಥೆಗಳು ಊಟ ಸರಬರಾಜು ಮಾಡುತ್ತಿವೆ.

Team Udayavani, May 27, 2022, 1:15 PM IST

ಇಂದಿರಾ ಕ್ಯಾಂಟೀನ್‌ಗೆ ಇಸ್ಕಾನ್‌ ಊಟ; ನಗರಾಭಿವೃದ್ಧಿ ಇಲಾಖೆಗೆ ಪ್ರಸ್ತಾವನೆ

ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯ ಇಂದಿರಾ ಕ್ಯಾಂಟೀನ್‌ಗಳಿಗೆ ಆಹಾರ ಪೂರೈಕೆ ಗುತ್ತಿಗೆಯನ್ನು ಇಸ್ಕಾನ್‌ ಸಂಸ್ಥೆಗೆ ವಹಿಸುವಂತೆ ಇನ್ನೆರಡು ದಿನಗಳಲ್ಲಿ ನಗರಾಭಿವೃದ್ಧಿ ಇಲಾಖೆಗೆ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದು ಬಿಬಿಎಂಪಿ ಹಣಕಾಸು ವಿಭಾಗದ ವಿಶೇಷ ಆಯುಕ್ತೆ ತುಳಸಿ ಮದ್ದಿನೇನಿ ತಿಳಿಸಿದರು.

ಬಿಬಿಎಂಪಿ ಕೇಂದ್ರ ಕಚೇರಿಯಲ್ಲಿ ಗುರುವಾರಸುದ್ದಿಗಾರರೊಂದಿಗೆ ಮಾತನಾಡಿ, ಇಂದಿರಾ ಕ್ಯಾಂಟೀನ್‌ ಸಾಮಾಜಿಕ ಕಳಕಳಿಯ ಯೋಜನೆ.ಹೀಗಾಗಿ ಜನರಿಗೆ ಗುಣಮಟ್ಟದ ಆಹಾರ ನೀಡಲು ಕ್ರಮ ಕೈಗೊಳ್ಳಲಾಗುತ್ತಿದೆ. ಇಸ್ಕಾನ್‌ ಸಂಸ್ಥೆಯು ಅಕ್ಷಯಪಾತ್ರೆ, ಅಕ್ಷಯ ನಿಧಿ ಸೇರಿ 3 ಸಂಸ್ಥೆಗಳಿಂದ ವಿವಿಧೆಡೆ ಆಹಾರ ಪೂರೈಸುತ್ತಿದೆ. ಹೀಗಾಗಿ ಇಂದಿರಾ ಕ್ಯಾಂಟೀನ್‌ಗಳಿಗೂ ಆಹಾರ ಪೂರೈಸಲು ಗುತ್ತಿಗೆ ನೀಡುವಂತೆ ಪ್ರಸ್ತಾವನೆ ಸಿದ್ಧಪಡಿಸಿ ನಗರಾಭಿವೃದ್ಧಿ ಇಲಾಖೆಗೆ
ಕಳುಹಿಸಲಾಗುವುದು ಎಂದು ಹೇಳಿದರು.

ಇಸ್ಕಾನ್‌ ಊಟದಲ್ಲಿ ಬೆಳ್ಳುಳ್ಳಿ ಹಾಕುವುದಿಲ್ಲ ಎಂಬ ಮಾತಿದೆ. ಆದರೆ, ಅದಕ್ಕೆ ಸಂಬಂಧಿಸಿದಂತೆ ಬಿಬಿಎಂಪಿಯಿಂದ ಇಸ್ಕಾನ್‌ಗೆ ಯಾವುದೇ ಸೂಚನೆ ನೀಡುವುದಿಲ್ಲ. ಆದರೆ ಆಹಾರದ ಗುಣಮಟ್ಟದಲ್ಲಿ ಯಾವುದೇ ರಾಜಿ ಮಾಡದಂತೆ ಪೂರೈಸಲು ಸೂಚಿಸಲಾಗುವುದು ಎಂದರು.

ಅದಮ್ಯ ಚೇತನದಿಂದಲೂ ಮನವಿ: ಪಾಲಿಕೆ ವ್ಯಾಪ್ತಿಯಲ್ಲಿ 178 ಇಂದಿರಾ ಕ್ಯಾಂಟೀನ್‌ ಹಾಗೂ ಉಳಿದವು ಮೊಬೈಲ್‌ ಕ್ಯಾಂಟೀನ್‌ಗಳು ಕಾರ್ಯ ನಿರ್ವಹಿಸುತ್ತಿವೆ. ಇದರಲ್ಲಿ ಶೆಫ್‌ಟಾಕ್‌, ರಿವಾರ್ಡ್ಸ್‌ ಮತ್ತು ಅದಮ್ಯ ಚೇತನ ಸಂಸ್ಥೆಗಳು ಊಟ ಸರಬರಾಜು ಮಾಡುತ್ತಿವೆ. ಇದೀಗ ಸಾಮಾಜಿಕ ಹೊಣೆಗಾರಿಗೆ ಆಧಾರದಲ್ಲಿ ಆಹಾರ ಪೂರೈಕೆ ಅವಧಿಯನ್ನು ವಿಸ್ತರಿಸುವಂತೆ ಅದಮ್ಯ ಚೇತನ ಸಂಸ್ಥೆ ಕೋರಿದೆ. ಈ ಬಗ್ಗೆ ಸರ್ಕಾರ ಅಂತಿಮ ತೀರ್ಮಾನ ತೆಗೆದುಕೊಳ್ಳಲಿದೆ ಎಂದರು.

ಹಿಂದಿನ ಸಂಸ್ಥೆಗಳ ಬಿಲ್‌ ಪಾವತಿ: ಇಂದಿರಾ ಕ್ಯಾಂಟೀನ್‌ಗೆ ಆಹಾರ ಸರಬರಾಜು ಮಾಡುತ್ತಿದ್ದ ಶೆಫ್‌ಟಾಕ್‌ ಮತ್ತು ರಿವಾರ್ಡ್ಸ್‌ ಸಂಸ್ಥೆಗೆ ಹಲವು ವರ್ಷಗಳಿಂದ ಬಿಲ್‌ ಬಾಕಿ ಉಳಿಸಿಕೊಳ್ಳಲಾಗಿತ್ತು. ಕಳೆದ ಮೇ 20ರ ಒಳಗಿನ ಎಲ್ಲ ಬಾಕಿ ಬಿಲ್‌ ಗಳನ್ನು ಪಾವತಿಸಲಾಗಿದೆ. ನಿತ್ಯ ಊಟ ಸರಬರಾಜು ಮಾಡುತ್ತಿದ್ದ ಮಾಹಿತಿಯನ್ನು ಪಾಲಿಕೆಯ ಮಾರ್ಷಲ್‌ಗ‌ಳು ವರದಿ ನೀಡಿದ್ದಾರೆ. ಈ ಆಧಾರದಲ್ಲಿ ಗುತ್ತಿಗೆ ಸಂಸ್ಥೆಗಳಿಗೆ ಬಿಲ್‌ ಪಾವತಿಸಲಾಗಿದೆ. ಕೆಲವೆಡೆ ಗುತ್ತಿಗೆ ಸಂಸ್ಥೆಗಳು ನೀಡಿದ ಊಟ ಸರಬರಾಜು ಲೆಕ್ಕ ಮತ್ತು ಮಾರ್ಷಲ್‌ಗ‌ಳು ನೀಡಿದ ಲೆಕ್ಕದಲ್ಲಿ ವ್ಯತ್ಯಾಸ ಕಂಡುಬಂದಿದ್ದು, ಅದನ್ನು ಪರಿಶೀಲಿಸಿ ಬಿಲ್‌ ಪಾವತಿ ಮಾಡುವುದಾಗಿ ಆದೇಶಿಸಲಾಗಿದೆ ಎಂದು ತುಳಸಿ ಮದ್ದಿನೇನಿ ತಿಳಿಸಿದರು.

ದಿನಕ್ಕೆ 78 ರೂ. ಬೇಡಿಕೆ
ಪ್ರಸ್ತುತ 2017ರಲ್ಲಿ ನಿಗದಿಯಾದ ದರದಂತೆ ಇಂದಿರಾ ಕ್ಯಾಂಟೀನ್‌ಗೆ ಆಹಾರ ಸರಬರಾಜು ಮಾಡಲಾಗುತ್ತಿದೆ. ಅದರಂತೆ ಒಂದು ದಿನದ ಊಟಕ್ಕೆ (2 ಊಟ, 1 ಉಪಹಾರ) 55.30 ರೂ. ದರವಿದ್ದು, ಅದರಲ್ಲಿ ಫಲಾನುಭವಿಗಳು 25 ರೂ. (ಬೆಳಗ್ಗೆ ತಿಂಡಿಗೆ 5 ರೂ., ಮಧ್ಯಾಹ್ನ ಮತ್ತು ರಾತ್ರಿ ಊಟಕ್ಕೆ ತಲಾ 10 ರೂ.) ಪಾವತಿಸುತ್ತಿದ್ದಾರೆ. ಇದೀಗ ಇಸ್ಕಾನ್‌ ಸಂಸ್ಥೆ 78 ರೂ.ಗೆ ಬೇಡಿಕೆ ಇಟ್ಟಿದೆ. ಆ ಕುರಿತು ಮಾತುಕತೆ ನಡೆಸಿ ದರ ನಿಗದಿ ಮಾಡಲಾಗುವುದು ಎಂದರು.

ಟಾಪ್ ನ್ಯೂಸ್

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

ವಿಜಯಪುರ: ಗಂಡನಿಂದ ಕಿತ್ತು ಹೆಂಡತಿಗೆ ಕೊಡುವುದೇ ಸಿದ್ದು ಗ್ಯಾರಂಟಿ: ಸಿ.ಟಿ.ರವಿ ವಾಗ್ದಾಳಿ

ವಿಜಯಪುರ: ಗಂಡನಿಂದ ಕಿತ್ತು ಹೆಂಡತಿಗೆ ಕೊಡುವುದೇ ಸಿದ್ದು ಗ್ಯಾರಂಟಿ: ಸಿ.ಟಿ.ರವಿ ವಾಗ್ದಾಳಿ

Bigg Boss OTT ಸೀಸನ್‌ -3 ಅನೌನ್ಸ್:‌ ಈ ಬಾರಿ ಮತ್ತೆ ಸಲ್ಮಾನ್‌ ಖಾನ್ ನಿರೂಪಣೆ

Bigg Boss OTT ಸೀಸನ್‌ -3 ಅನೌನ್ಸ್:‌ ಈ ಬಾರಿ ಮತ್ತೆ ಸಲ್ಮಾನ್‌ ಖಾನ್ ನಿರೂಪಣೆ

Dwarakish:ಸೋಲು, ಗೆಲುವಿನ ಪಯಣ; ವ್ಯಾಪಾರ ಬಿಟ್ಟು ಖ್ಯಾತ ನಟನಾದ ಪ್ರಚಂಡ ಕುಳ್ಳ ದ್ವಾರಕೀಶ್!

Dwarakish:ಸೋಲು, ಗೆಲುವಿನ ಪಯಣ; ವ್ಯಾಪಾರ ಬಿಟ್ಟು ಖ್ಯಾತ ನಟನಾದ ಪ್ರಚಂಡ ಕುಳ್ಳ ದ್ವಾರಕೀಶ್!

19

Aamir Khan: ರಾಜಕೀಯ ಪಕ್ಷದ ಪರ ಪ್ರಚಾರ; ನಕಲಿ ವಿಡಿಯೋ ವಿರುದ್ಧ FIR ದಾಖಲಿಸಿದ ಆಮಿರ್‌

BCCI instructions to share photos of the IPL match day ground!

IPL 2024 ಪಂದ್ಯ ದಿನ ಮೈದಾನದ ಫೋಟೋ ಹಂಚದಂತೆ ಬಿಸಿಸಿಐ ಸೂಚನೆ!

Mishap: ಭೀಕರ ರಸ್ತೆ ಅಪಘಾತ: ಕ್ರೇನ್ ಗೆ ಡಿಕ್ಕಿ ಹೊಡೆದ ರಿಕ್ಷಾ 7 ಮಂದಿ ಸ್ಥಳದಲ್ಲೇ ಮೃತ್ಯು

Mishap: ಭೀಕರ ರಸ್ತೆ ಅಪಘಾತ: ಕ್ರೇನ್ ಗೆ ಡಿಕ್ಕಿ ಹೊಡೆದ ರಿಕ್ಷಾ 7 ಮಂದಿ ಸ್ಥಳದಲ್ಲೇ ಮೃತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Fraud: ಮದುವೆ ಆಗದೇ ದೈಹಿಕ ಸಂಪರ್ಕ ಬೆಳೆಸಿ ಮಹಿಳಾ ಟೆಕಿಗೆ ವಂಚನೆ

Fraud: ಮದುವೆ ಆಗದೇ ದೈಹಿಕ ಸಂಪರ್ಕ ಬೆಳೆಸಿ ಮಹಿಳಾ ಟೆಕಿಗೆ ವಂಚನೆ

Bengaluru: ಸೆ*ಕ್ಸ್‌ ವಿಡಿಯೋ ಮಾದರಿ ಲೈಂಗಿಕ ಕ್ರಿಯೆಗೆ ಒತ್ತಾಯ

Bengaluru: ಸೆ*ಕ್ಸ್‌ ವಿಡಿಯೋ ಮಾದರಿ ಲೈಂಗಿಕ ಕ್ರಿಯೆಗೆ ಒತ್ತಾಯ

15

ವೃದ್ಧಾಶ್ರಮ ಸ್ವಚ್ಛತೆ ಬಂದು ಮಾಲೀಕರ ಮನೆಗೇ ಕನ್ನ

Bengaluru: ಶಾರ್ಟ್‌ ಸರ್ಕ್ಯೂಟ್‌ನಿಂದ ಬೆಂಕಿ; ನಾಲ್ಕು ವರ್ಷದ ಮಗು ಆಹುತಿ

Bengaluru: ಶಾರ್ಟ್‌ ಸರ್ಕ್ಯೂಟ್‌ನಿಂದ ಬೆಂಕಿ; ನಾಲ್ಕು ವರ್ಷದ ಮಗು ಆಹುತಿ

Fraud: ಫ್ಲ್ಯಾಟ್‌ ಖರೀದಿ ಹೆಸರಲ್ಲಿ ಖಾಸಗಿ ಫೈನಾನ್ಸ್‌ ಕಂಪನಿಗೆ 60.8 ಲಕ್ಷ ವಂಚನೆ

Fraud: ಫ್ಲ್ಯಾಟ್‌ ಖರೀದಿ ಹೆಸರಲ್ಲಿ ಖಾಸಗಿ ಫೈನಾನ್ಸ್‌ ಕಂಪನಿಗೆ 60.8 ಲಕ್ಷ ವಂಚನೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

6-thyroid

Thyroid Disease: ಥೈರಾಯ್ಡ್ ಅನಾರೋಗ್ಯ ನಿರ್ಲಕ್ಷಿಸಿದರೆ ಮಾರಕವಾದೀತು ಎಚ್ಚರ!

5-shirva

ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇವಸ್ಥಾನ

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

4-health

Nutritional Foods: ಹದಿಹರಯದಲ್ಲಿ ಪೌಷ್ಟಿಕಾಂಶ ಅಗತ್ಯಗಳು

ವಿಜಯಪುರ: ಗಂಡನಿಂದ ಕಿತ್ತು ಹೆಂಡತಿಗೆ ಕೊಡುವುದೇ ಸಿದ್ದು ಗ್ಯಾರಂಟಿ: ಸಿ.ಟಿ.ರವಿ ವಾಗ್ದಾಳಿ

ವಿಜಯಪುರ: ಗಂಡನಿಂದ ಕಿತ್ತು ಹೆಂಡತಿಗೆ ಕೊಡುವುದೇ ಸಿದ್ದು ಗ್ಯಾರಂಟಿ: ಸಿ.ಟಿ.ರವಿ ವಾಗ್ದಾಳಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.