ಜೆ.ಬಿ.ನಗರ ಠಾಣೆ ಸಂಪೂರ್ಣ ಸೀಲ್‌ಡೌನ್‌


Team Udayavani, Jun 6, 2020, 5:27 AM IST

station jbnagar

ಬೆಂಗಳೂರು: ಪೊಲೀಸ್‌ ವಶದಲ್ಲಿದ್ದ ಮೂವರು ಆರೋಪಿಗಳ ಪೈಕಿ ಒಬ್ಬನಿಗೆ ಕೋವಿಡ್‌ 19 ದೃಢಪಟ್ಟ ಹಿನ್ನೆಲೆಯಲ್ಲಿ ಜೀವನ್‌ ಭೀಮಾ ನಗರ(ಜೆ.ಬಿ.ನಗರ) ಠಾಣೆಯನ್ನು ಸಂಪೂರ್ಣವಾಗಿ ಸೀಲ್‌ಡೌನ್‌ ಮಾಡಲಾಗಿದ್ದು, ಇಡೀ  ಠಾಣೆಯನ್ನೇ ಇಂದಿರಾನಗರ ಪೊಲೀಸ್‌ ಠಾಣೆಗೆ ವರ್ಗಾವಣೆ ಮಾಡಲಾಗಿದೆ. ಕೆಲ ದಿನಗಳ ಹಿಂದೆ ಯುವತಿಯೊಬ್ಬಳಿಗೆ ಕಿರುಕುಳ ನೀಡಿದ ಆರೋಪದಲ್ಲಿ ಡೆಲಿವರಿ ಬಾಯ್‌ ಒಬ್ಬನನ್ನು ಬಂಧಿಸಲಾಗಿತ್ತು.

ಇದರೊಂದಿಗೆ ಇತರೆ ಇಬ್ಬರು  ಆರೋಪಿಗಳನ್ನು ಬಂಧಿಸಿ ಹೆಚ್ಚಿನ ವಿಚಾರಣೆಗಾಗಿ ಎರಡು ದಿನ ಪೊಲೀಸ್‌ ವಶದಲ್ಲಿ ಇಡಲಾಗಿತ್ತು. ಅಲ್ಲದೆ, ಜೂನ್‌ 2 ರಂದು ಮೂವರು ಆರೋಪಿಗಳಿಗೆ ಕೋವಿಡ್‌ 19 ಪರೀಕ್ಷೆ ನಡೆಸಲಾಗಿತ್ತು. ಶುಕ್ರವಾರ ವರದಿ ಬಂದಿದ್ದು,  ಡೆಲಿವರಿ ಬಾಯ್‌ಗೆ ಸೋಂಕು ದೃಢಪಟ್ಟಿದೆ. ಇಬ್ಬರಿಗೆ ನೆಗೆಟಿವ್‌ ಬಂದಿದೆ ಎಂಬುದು ಗೊತ್ತಾಗಿದೆ ಎಂದು ಠಾಣೆಯ ಮೂಲಗಳು ತಿಳಿಸಿವೆ.

ಇಂದಿರಾನಗರ ಠಾಣೆಗೆ ಜವಾಬ್ದಾರಿ: ಜೀವನ್‌ ಭೀಮಾ ನಗರ ಪೊಲೀಸ್‌ ಠಾಣೆಯನ್ನು ಸಂಪೂರ್ಣವಾಗಿ  ಸೀಲ್‌ಡೌನ್‌ ಮಾಡಲಾಗಿದ್ದು, ಸ್ಯಾನಿಟೈಸರ್‌ ಸಿಂಪಡಣೆಗೆ ಸೂಚಿಸಲಾಗಿದೆ. ಜತೆಗೆ ಇಡೀ ಪೊಲೀಸ್‌ ಠಾಣೆಯ ಕಾರ್ಯನಿರ್ವಹಣೆಯನ್ನು ಇಂದಿರಾನಗರ ಪೊಲೀಸ್‌ ಠಾಣೆಗೆ ವರ್ಗಾವಣೆ ಮಾಡಲಾಗಿದೆ ಎಂದು ಹಿರಿಯ ಅಧಿಕಾರಿಗಳು  ಮಾಹಿತಿ ನೀಡಿದರು.

24 ಮಂದಿ ಕ್ವಾರಂಟೈನ್‌: ವರದಿ ಬಂದ ಹಿನ್ನೆಲೆಯಲ್ಲಿ ಜೆ.ಬಿ.ನಗರ ಪೊಲೀಸ್‌ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ನಾಲ್ವರು ಸಬ್‌ ಇನ್‌ಸ್ಪೆಕ್ಟರ್‌ ಸೇರಿ 24 ಮಂದಿಯನ್ನು ಹೋಮ್‌  ಕ್ವಾರಂಟೈನ್‌  ಮಾಡಲಾಗಿದ್ದು, ಚಿಕಿತ್ಸೆಗೂ ಸೂಚಿಸಲಾಗಿದೆ. ಈಅಧಿಕಾರಿ-ಸಿಬ್ಬಂದಿ ಆರೋಪಿಯ ಪ್ರಾಥಮಿಕ ಸಂಪರ್ಕ ದಲ್ಲಿ  ದ್ದರು. ಹೀಗಾಗಿ ಕ್ವಾರಂಟೈನ್‌ ಮಾಡಲಾಗಿದೆ ಎಂದು ಪೊಲೀಸರು  ಹೇಳಿದರು.

ನಗರದ ಹತ್ತು ಮಂದಿಗೆ ಕೋವಿಡ್‌ 19 ಸೋಂಕು ದೃಢ: ನಗರದಲ್ಲಿ ಶುಕ್ರವಾರ 10 ಕೋವಿಡ್‌ 19 ವೈರಸ್‌ ಸೋಂಕು ಪ್ರಕರಣ  ಗಳು ದೃಢಪಟ್ಟಿದ್ದು, ಒಟ್ಟಾರೆ ಸೋಂಕಿಗೊಳಗಾದವರ ಸಂಖ್ಯೆ 434ಕ್ಕೆ ಏರಿಕೆಯಾಗಿದೆ. ಈ ಪೈಕಿ 271 ಮಂದಿ ಸೋಂಕಿತರು ಗುಣಮುಖರಾಗಿ ದ್ದು, 149 ಮಂದಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಬಾಕಿ 13 ಪ್ರಕರಣಗಳಲ್ಲಿ ಸೋಂಕಿತರು ಚಿಕಿತ್ಸೆ ಫ‌ಲಕಾರಿಯಾಗದೇ, ಒಬ್ಬ ಆತ್ಮಹತ್ಯೆ ಮಾಡಿಕೊಂಡು ಸಾವಿಗೀಡಾಗಿದ್ದಾರೆ. ಶುಕ್ರವಾರದ 10  ಸೋಂಕಿತರಲ್ಲಿ ಐದು ಮಂದಿ ಹೊರರಾಜ್ಯದಿಂದ, ಒಬ್ಬರು ಹೊರದೇಶದಿಂದ ಬಂದಿದ್ದಾರೆ.

ನಾಲ್ವರಿಗೆ ಸ್ಥಳೀಯ ಸೋಂಕಿತ ಸಂಪರ್ಕದಿಂದ ಸೋಂಕು ತಗುಲಿದೆ. ಈ ಎಲ್ಲಾ ಸೋಂಕಿತರನ್ನು ಕೋವಿಡ್‌ 19 ನಿಗದಿತ ಆಸ್ಪತ್ರೆಗೆ ದಾಖಲಿಸಿ  ಚಿಕಿತ್ಸೆ ನೀಡಲಾಗುತ್ತಿದ್ದು, ಪ್ರಾಥಮಿಕ ಸಂಪರ್ಕಿತರನ್ನು ಕ್ವಾರಂಟೈನ್‌ ಮಾಡಲಾಗಿದೆ. ಇನ್ನು ಬಿಬಿಎಂಪಿ ವ್ಯಾಪ್ತಿಯ ಪೂರ್ವ, ದಕ್ಷಿಣ, ಪಶ್ಚಿಮ ವಲಯದಲ್ಲಿ ದಿನ ಎಲ್ಲಾ ಸೋಂಕು ಪ್ರಕರಣಗಳು ದೃಢಪಟ್ಟಿವೆ. ಹೊರರಾಜ್ಯದಿಂದ  ಬಂದು ಸೋಂಕಿತರಾದ 5 ಮಂದಿಯಲ್ಲಿ ಮೂವರು  ದೆಹಲಿಯಿಂದ, ತಮಿಳುನಾಡು ಮತ್ತು ಮಹಾರಾಷ್ಟ್ರದಿಂದ ತಲಾ ಒಬ್ಬರು ಆಗಮಿಸಿದ್ದರು. ಇದರಲ್ಲಿ ಮಹಾರಾಷ್ಟ್ರದಿಂದ ಬಂದವರು ಮಾತ್ರ ಸಾಂಸ್ಥಿಕ ಕ್ವಾರಂಟೈನ್‌ನಲ್ಲಿದ್ದು,  ಬೇರೆ ರಾಜ್ಯದಿಂದ ಬಂದವರು ಹೋಂ ಕ್ವಾರಂಟೈನ್‌ನಲ್ಲಿದ್ದರು. ಇಂಡೋನೇಷಿಯಾದಿಂದ ಬಂದು ಕ್ವಾರಂಟೈನ್‌ನಲ್ಲಿದ್ದ ಒಬ್ಬರಿಗೆ ಸೋಂಕು ತಗುಲಿದೆ.

ಮತ್ತೆರಡು ವಾರ್ಡ್‌ ಕಂಟೈನ್ಮೆಂಟ್‌?: ನಗರದಲ್ಲಿ ಶುಕ್ರವಾರ ಹತ್ತು ಸೋಂಕಿತ ಪ್ರಕರಣಗಳು ಪತ್ತೆಯಾಗಿದ್ದು, ಇದರಲ್ಲಿ ಹೊಸದಾಗಿ ರಾಜಮಹಲ್‌ ಗುಟ್ಟಹಳ್ಳಿ  ಹಾಗೂ ಚಲವಾದಿಪಾಳ್ಯಕ್ಕೂ ಸೋಂಕು ವಿಸ್ತರಣೆಯಾಗಿದೆ. ಈ  ಹಿನ್ನೆಲೆಯಲ್ಲಿ ಆ ಎರಡೂ ವಾರ್ಡ್‌ಗಳು ನಿರ್ಬಂಧಿತ ವಲಯ (ಕಂಟೈನ್ಮೆಂಟ್‌ ಝೋನ್‌) ವ್ಯಾಪ್ತಿಗೆ ಒಳಪಡುವ ಸಾಧ್ಯತೆ ಇದೆ. ಚಲವಾದಿಪಾಳ್ಯದಲ್ಲಿ ಖಾಸಗಿ ಆಸ್ಪತ್ರೆಯ ನರ್ಸ್‌ ಹಾಗೂ ಖಾಸಗಿ ಕಂಪನಿ ಮಹಿಳಾ ಉದ್ಯೋಗಿಯೊಬ್ಬರಿಗೆ  ಸೋಂಕು ದೃಢಪಟ್ಟಿದೆ.

ಅದೇ ರೀತಿ, ರಾಜಮಹಲ್‌ ಗುಟ್ಟಹಳ್ಳಿಯ  ನಿವಾಸಿಯೊಬ್ಬರಲ್ಲಿ ಸೋಂಕು ಪತ್ತೆಯಾಗಿದೆ. ಒಂದುವೇಳೆ ಕಂಟೈನ್ಮೆಂಟ್‌ ವಲಯಗಳಿಗೆ ಇವೆರಡೂ  ಸೇರ್ಪಡೆಗೊಂಡರೆ, ಕಂಟೈನ್ಮೆಂಟ್‌ ವಲಯಗಳ ಸಂಖ್ಯೆ 42ಕ್ಕೆ  ಏರಿಕೆ ಆಗಲಿದೆ. ಇನ್ನು ಉಳಿದಂತೆ ಅಂಜನಪ್ಪ ಗಾರ್ಡನ್‌ ಹಾಗೂ ಅಗ್ರಹಾರ ದಾಸರಹಳ್ಳಿಯಲ್ಲಿ ತಲಾ ಎರಡು ಪ್ರಕರಣಗಳು ದಾಖಲಾಗಿವೆ ಎಂದು ಬಿಬಿಎಂಪಿ ಮೂಲಗಳು ತಿಳಿಸಿವೆ. ಈ ಮಧ್ಯೆ 60 ದಿನಗಳ ನಂತರ  ಪಾದರಾಯನಪುರ  11ನೇ ಕ್ರಾಸ್‌ನಲ್ಲಿದ್ದ ಸೀಲ್‌ ಡೌನ್‌ ತೆರವುಗೊಳಿಸಲಾಗಿದೆ.

ಅತಿ ಹೆಚ್ಚು ಸೋಂಕಿತರು ಇದ್ದ ರಸ್ತೆ ಇದಾಗಿತ್ತು. ಸೋಂಕಿತರೆಲ್ಲರೂ ಗುಣಮುಖರಾಗಿದ್ದಾರೆ. ಅಲ್ಲದೆ ಈ ರಸ್ತೆಯಲ್ಲಿ ಕಳೆದ 28 ದಿನದಿಂದ ಹೊಸ ಪ್ರಕರಣ ಪತ್ತೆ ಆಗಿಲ್ಲ ಎಂಬ  ಕಾರಣಕ್ಕೆ ಮುಕ್ತಗೊಳಿಸಲಾಗಿದೆ ಎನ್ನಲಾಗಿದೆ. ಆದರೆ, ಇದನ್ನು ಅಧಿಕಾರಿಗಳು ತಳ್ಳಿಹಾಕಿದ್ದು, ಸೀಲ್‌ಡೌನ್‌ ವೇಳೆ ಹಾಕಿದ್ದ ಬ್ಯಾರಿಕೇಡ್‌ಗಳನ್ನು ಹಿಂದಕ್ಕೆ ಹಾಕಲಾಗಿದೆ. ಇದರಿಂದ ಎರಡು ರಸ್ತೆಗಳು ತೆರವಾಗಿವೆ ಅಷ್ಟೇ ಹೊರತು, ಇಡೀ ಕ್ರಾಸ್‌  ಮುಕ್ತವಾಗಿಲ್ಲ ಎಂದು ಸ್ಪಷ್ಟಪಡಿಸಿದರು.

ಟಾಪ್ ನ್ಯೂಸ್

1-weqewqe

Vasooli Titans;ಪ್ರಧಾನಿ, ಬಿಜೆಪಿ ವಿರೋಧಿ ಪೋಸ್ಟ್ ಗಾಗಿ ಕ್ಷಮೆ ಯಾಚಿಸಿದ ವಸ್ತ್ರಾಕರ್

Yatindra

Yathindra Siddaramaiah ಗೂಂಡಾ, ರೌಡಿ ಹೇಳಿಕೆ : EC ಗೆ ದೂರು ನೀಡಿದ ಬಿಜೆಪಿ

1-ewqeqwqe

AAP ‘ಮಹಾರ್‍ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ್ ನಾಯ್ಕ ಸೋನಿ ?

jds

JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ 10 ಲಕ್ಷ ಬಹುಮಾನ ಘೋಷಣೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ 10 ಲಕ್ಷ ಬಹುಮಾನ ಘೋಷಣೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA

20-

Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ

19-gobi

Gobi Manchurian ಬ್ಯಾನ್‌ ಎಫೆಕ್ಟ್: ಚಾಟ್ಸ್‌ ಮಾರಾಟ ಕುಸಿತ

18-

Book Brahma ಸ್ವಾತಂತ್ರ‍್ಯೋತ್ಸವ ಕಥಾ ಸ್ಪರ್ಧೆ, ಕಾದಂಬರಿ ಪುರಸ್ಕಾರ- 2024: ವಿವರಗಳು

7-bng

Bengaluru: ಸಾಲ ವಸೂಲಿ ಹೆಸರಲ್ಲಿ ಆಟೋ ವಶ, ಧರ್ಮ ನಿಂದನೆ: ಬಂಧನ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-weqewqe

Vasooli Titans;ಪ್ರಧಾನಿ, ಬಿಜೆಪಿ ವಿರೋಧಿ ಪೋಸ್ಟ್ ಗಾಗಿ ಕ್ಷಮೆ ಯಾಚಿಸಿದ ವಸ್ತ್ರಾಕರ್

Yatindra

Yathindra Siddaramaiah ಗೂಂಡಾ, ರೌಡಿ ಹೇಳಿಕೆ : EC ಗೆ ದೂರು ನೀಡಿದ ಬಿಜೆಪಿ

1-ewqeqwqe

AAP ‘ಮಹಾರ್‍ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್

Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ

Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ

Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’

Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.