ಕೆಎಸ್‌ಆರ್‌ಪಿ: ಐವರಿಗೆ ಕೋವಿಡ್‌ 19 ಪಾಸಿಟಿವ್‌


Team Udayavani, Jun 18, 2020, 5:47 AM IST

rskp 5

ಬೆಂಗಳೂರು: ಪಾದರಾಯನಪುರ ವಾರ್ಡ್‌ನಲ್ಲಿ ಕರ್ತವ್ಯ ನಿರ್ವಹಿಸಿದ ಕೆಎಸ್‌ಆರ್‌ಪಿಯ ಐವರು ಕಾನ್ಸ್‌ಸ್ಟೇಬಲ್‌ಗ‌ಳಿಗೆ ಕೋವಿಡ್‌ 19 ಮಹಾಮಾರಿ ಸೋಂಕು ತಗುಲಿದ್ದು, ನಿಗದಿತ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಿಸಲಾಗಿದೆ. ಕೋರಮಂಗಲದಲ್ಲಿ 4ನೇ ಕೆಎಸ್‌ಆರ್‌ಪಿ ಬೆಟಾಲಿಯನ್‌ನ ಈ ಐವರು ಸಿಬ್ಬಂದಿಯ ಪ್ರಾಥಮಿಕ ಸಂಪರ್ಕದಲ್ಲಿದ್ದ ಸುಮಾರು 30 ಮಂದಿ ಪಟ್ಟಿ ಮಾಡಿದ್ದು, ಪ್ರತಿಯೊಬ್ಬರನ್ನೂ ಕ್ವಾರಂಟೈನ್‌ ಮಾಡಲಾಗಿದೆ.

ಇನ್ನಷ್ಟು ಮಂದಿ ಇರುವ  ಸಾಧ್ಯತೆಯಿದ್ದು, ಪಟ್ಟಿ ಸಿದ್ಧಪಡಿಸಲಾಗುತ್ತಿದೆ ಎಂದು ಕೆಎಸ್‌ಆರ್‌ಪಿ ಮೂಲಗಳು ತಿಳಿಸಿವೆ. ಕೆಲ ದಿನಗಳ ಹಿಂದೆ ಕೆಎಸ್‌ಆರ್‌ಪಿ ತುಕಡಿಗಳನ್ನು ಪಾದರಾಯಯನಪುರ ಹಾಗೂ ಕಂಟೈನ್ಮೆಂಟ್‌ ಜೋನ್‌ನಲ್ಲಿ ಭದ್ರತೆಗೆ  ಯೋಜಿಸಲಾಗಿತ್ತು.  ಈ ಸಂದರ್ಭದಲ್ಲಿ ಸೋಂಕು ತಗುಲಿರುವ ಸಾಧ್ಯತೆಯಿದೆ. ಕೆಲವೊಂದು ರೋಗ ಲಕ್ಷಣಗಳು ಕಂಡು ಬಂದಿದ್ದವು. ಹೀಗಾಗಿ ಪ್ರತಿಯೊಬ್ಬರಿಗೂ ಪರೀಕ್ಷೆ ನಡೆಸಲಾಗಿತ್ತು.

ಮಂಗಳವಾರವಷ್ಟೇ ವರದಿ ಬಂದಿದ್ದು, ಐವರಿಗೆ ಸೋಂಕು ದೃಢಪಟ್ಟಿದೆ ಎಂದು ಕೆಎಸ್‌ಆರ್‌ಪಿ  ಅಧಿಕಾರಿಗಳು ಮಾಹಿತಿ ನೀಡಿದರು. ಪ್ರತಿಕ್ರಿಯೆ ನೀಡಿದ ಕೆಎಸ್‌ಆರ್‌ಪಿ ಎಡಿಜಿಪಿ ಅಲೋಕ್‌ ಕುಮಾರ್‌, ಐವರಲ್ಲಿ ಕೋವಿಡ್‌ 19 ಪಾಸಿಟಿವ್‌ ಬಂದಿದೆ. ಎಲ್ಲರನ್ನು ಕ್ವಾರಂಟೈನ್‌  ಮಾಡಲಾಗಿದೆ. ಅವರ ಪ್ರಾಥಮಿಕ ಮತ್ತು ದ್ವಿತೀಯ ಸಂಪರ್ಕದಲ್ಲಿದ್ದವರ ಪಟ್ಟಿ ಸಿದಟಛಿಪಡಿಸಲಾಗುತ್ತಿದೆ. ಪ್ರತಿಯೊಬ್ಬರೂ ಬಿಸಿ ನೀರನ್ನೆ ಕುಡಿಯಬೇಕು. ನಿಮ್ಮ ಕುಟುಂಬ ಸದಸ್ಯರಿಗೂ ಅದೇ ಸಲಹೆ ನೀಡಬೇಕು ಸೂಚಿಸಲಾಗಿದೆ  ಎಂದು ಮಾಹಿತಿ ನೀಡಿದರು.

ಇಲಾಖೆಯಿಂದಲೇ ಪರೀಕ್ಷೆ: ಕೆಎಸ್‌ಆರ್‌ಪಿ ಸಿಬ್ಬಂದಿಗೆ ಇಲಾಖೆಯಿಂದಲೇ ಕೋವಿಡ್‌ 19 ಪರೀಕ್ಷೆ ಮಾಡಿಸಲಾಗುತ್ತಿದೆ. ಒಂದು ವೇಳೆ ವೈಯಕ್ತಿಕ ಕಾರಣ ನೀಡಿ ಹೊರ ಜಿಲ್ಲೆಗಳಿಗೆ ತೆರಳಿದ್ದರೆ ಮಾತ್ರ ಸ್ವಂತ  ಹಣದಲ್ಲಿ ಪರೀಕ್ಷೆ ಮಾಡಿಸಿಕೊಂಡು ಪ್ರಮಾಣ ಪತ್ರ ತರಬೇಕು ಎಂದು ಹೇಳಿದರು.

ಮನೆ ಮಾಡಿದ ಕೋವಿಡ್‌ 19 ಆತಂಕ: ಕೆಎಸ್‌ಆರ್‌ಪಿ 4ನೇ ಬೆಟಾಲಿಯನ್‌ನಲ್ಲಿ ಕೋವಿಡ್‌ 19 ಕಾಣಿಸಿಕೊಂಡಿ ರುವುದರಿಂದ ಇಡೀ ಆವರಣದಲ್ಲಿ ಆತಂಕ ಮನೆ ಮಾಡಿದೆ. ಸೋಂಕಿತರ ಮನೆಗಳ ಬಳಿ ಯಾರೂ  ಹೋಗದಂತೆ ಸೂಚಿಸಲಾಗಿದ್ದು, ಅವರಿಗೆ ಅಗತ್ಯ  ವಸ್ತುಗಳ ಪೂರೈಕೆಗೆ ಕ್ರಮಕೈಗೊಳ್ಳಲಾಗಿದೆ. ಇನ್ನು ತರಬೇತಿ ಪಡೆಯು ತ್ತಿರುವ ಸಿಬ್ಬಂದಿಗೂ ಆರೋಗ್ಯದ ಬಗ್ಗೆ ಎಚ್ಚರಿಕೆಯಿಂದ ಇರುವಂತೆ ಸೂಚಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ಸಿ.ಟಿ.ಮಾರುಕಟ್ಟೆ ಸಂಚಾರ ಠಾಣೆ ಸೀಲ್‌ಡೌನ್‌: ಸಿ.ಟಿ.ಮಾರುಕಟ್ಟೆ ಸಂಚಾರ ವಿಭಾಗ ಪೊಲೀಸ್‌ ಠಾಣೆ ಎಎಸ್‌ಐ ಸೇರಿ ಮೂವರಿಗೆ ಕೋವಿಡ್‌ 19 ಸೋಂಕು ತಗುಲಿದ್ದು, ಪೊಲೀಸ್‌ ಠಾಣೆಯನ್ನು 5 ದಿನ ಸೀಲ್‌ಡೌನ್‌ ಮಾಡಲಾಗಿದೆ. ಈ ಹಿಂದೆ ಸಿ.ಟಿ.ಮಾರುಕಟ್ಟೆ ಕಾನೂನು ಸುವ್ಯವಸ್ಥೆ ಠಾಣೆಯ ಎಎಸ್‌ಐವೊಬ್ಬರಿಗೆ ಕೋವಿಡ್‌ 19 ದೃಢಪಟ್ಟಿತ್ತು. ಅವರ ದ್ವಿತೀಯ ಸಂಪರ್ಕದಲ್ಲಿದ್ದ 59 ವರ್ಷದ ಎಎಸ್‌ಐ, 48 ವರ್ಷದ ಇಬ್ಬರು ಕಾನ್ಸ್‌ಸ್ಟೇಬಲ್‌ಗ‌ಳಿಗೆ ಪರೀಕ್ಷೆ ನಡೆಸಿದಾಗ  ಸೋಂಕು ಪತ್ತೆಯಾಗಿದೆ.

ಠಾಣೆಗೆ ಸೋಂಕು ನಿವಾರಕ ಸಿಂಪಡಿಸಲಾಗಿದೆ. ಜತೆಗೆ ಅವರ ಪ್ರಾಥಮಿಕ ಮತ್ತು ದ್ವಿತೀಯ ಸಂಪರ್ಕದಲ್ಲಿದ್ದ 62 ಮಂದಿಯನ್ನು ಕ್ವಾರಂ ಟೈನ್‌ ಮಾಡಲಾಗಿದೆ. ಠಾಣೆ ಕಾರ್ಯನಿರ್ವಹಣೆಯನ್ನು  .ಆರ್‌.ಮಾರುಕಟ್ಟೆ ಸಂಚಾರ ಠಾಣೆ ಹೊರ ಠಾಣೆ(ಔಟ್‌ ಪೋಸ್ಟ್‌)ಗೆ ವರ್ಗಾಹಿಸಲಾಗಿದೆ ಎಂದು ಸಂಚಾರ ಪೊಲೀಸರು ಮಾಹಿತಿ ನೀಡಿದರು.

ಟಾಪ್ ನ್ಯೂಸ್

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

it

Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

20-

Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

20-

Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ

19-gobi

Gobi Manchurian ಬ್ಯಾನ್‌ ಎಫೆಕ್ಟ್: ಚಾಟ್ಸ್‌ ಮಾರಾಟ ಕುಸಿತ

18-

Book Brahma ಸ್ವಾತಂತ್ರ‍್ಯೋತ್ಸವ ಕಥಾ ಸ್ಪರ್ಧೆ, ಕಾದಂಬರಿ ಪುರಸ್ಕಾರ- 2024: ವಿವರಗಳು

7-bng

Bengaluru: ಸಾಲ ವಸೂಲಿ ಹೆಸರಲ್ಲಿ ಆಟೋ ವಶ, ಧರ್ಮ ನಿಂದನೆ: ಬಂಧನ

6-bng

Bengaluru: ಪೇಂಟರ್‌ ಕೊಂದು ಪೊಲೀಸ್‌ ಠಾಣೆಗೆ ಬಂದು ಸಿಕ್ಕಿಬಿದ್ದ ಸ್ನೇಹಿತರು

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

partner kannada movie

Kannada Cinema; ಸ್ನೇಹಿತರ ಸುತ್ತ ‘ಪಾರ್ಟ್ನರ್‌’: ಟ್ರೇಲರ್‌, ಆಡಿಯೋದಲ್ಲಿ ಹೊಸಬರ ಚಿತ್ರ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.