ಕೆರೆ ಅಭಿವೃದ್ಧಿ ಕಾಮಗಾರಿ ವಿಳಂಬ?


Team Udayavani, Jul 4, 2020, 5:59 AM IST

kere-abhivruddi

ಬೆಂಗಳೂರು: ಬೆಳ್ಳಂದೂರು ಹಾಗೂ ವರ್ತೂರು ಕೆರೆ ಸಂಬಂಧ ಹಲವು ಬಾರಿ ಹಸಿರು ನ್ಯಾಯಮಂಡಳಿ ಕೆಂಗಣ್ಣಿಗೆ ಗುರಿಯಾದ ಬಿಡಿಎ, ಕೊನೆಗೂ ಆಡಳಿತ ಮಂಡಳಿ ಸಭೆಯಲ್ಲಿ ಕಾಮಗಾರಿ ಆರಂಭಿಸಲು ಒಪ್ಪಿಗೆ ಪಡೆದಿದೆ. ಆದರೆ ಕಾಮಗಾರಿ ವಿಳಂಬವಾಗುವ ಸಾಧ್ಯತೆ ಇದೆ.  ಕೋವಿಡ್‌ 19 ಹಾವಳಿ ಮತ್ತು ಮಳೆಗಾಲದ ಹಿನ್ನೆಲೆಯಲ್ಲಿ ಸಕಾಲದಲ್ಲಿ ನಿರೀಕ್ಷಿತ ಗುರಿ ಸಾಧನೆ ಅನುಮಾನವಾಗಿದ್ದು, ಇದು ಕಾಮಗಾರಿ ವಿಳಂಬ ರೂಪದಲ್ಲಿ ಪರಿಣಮಿಸಲಿದೆ.

ಪ್ರಾಧಿಕಾರವು  245.89 ಕೋಟಿ ರೂ. ವೆಚ್ಚದಲ್ಲಿ ಬೆಳ್ಳಂದೂರು ಕೆರೆ ಹಾಗೂ 116.95 ಕೋಟಿ ರೂ. ವೆಚ್ಚದಲ್ಲಿ ವರ್ತೂರು ಕೆರೆ ಅಭಿವೃದ್ಧಿಗೆ ಜನವರಿಯಲ್ಲಿಯೇ ಟೆಂಡರ್‌ ಆಹ್ವಾನಿಸಿತ್ತು. 18 ತಿಂಗಳಲ್ಲಿ ಕಾಮಗಾರಿ ಪೂರ್ಣಗೊಳಿಸಲು ತಿಳಿಸಲಾಗಿತ್ತು.  ಆದರೆ, ಕೋವಿಡ್‌ 19 ಹಿನ್ನೆಲೆ ಲಾಕ್‌ಡೌನ್‌ ನಿಂದ ಕಾಮಗಾರಿ ವಿಳಂಬವಾಯಿತು. ಆದರೆ ಈಗ ಮುಂಗಾರು ಮಳೆ ಶುರುವಾಗಿದ್ದು, ಹೂಳೆತ್ತುವುದು ಸವಾಲಿನ ಕೆಲಸವಾಗಿದೆ.

ಕೆರೆಗಳ ಅಭಿವೃದ್ಧಿಗೆ ರೂಪುರೇಷೆ ಸಿದ್ಧಪಡಿಸಿ ಈಗಾಗಲೇ  ಆರು ತಿಂಗಳು ಕಳೆದಿದ್ದು, ಪೂರ್ಣ ಪ್ರಮಾಣದಲ್ಲಿ ಕಾಮಗಾರಿ ಕೈಗೆತ್ತಿಕೊಳ್ಳಲು ಇನ್ನಷ್ಟು ತಿಂಗಳು ಬೇಕಾಗುತ್ತದೆ. ಬೆಳ್ಳಂದೂರು ಕೆರೆ ಅಭಿವೃದ್ಧಿಗೆ ಆರ್‌ಎಂಎನ್‌ ಇನ್‌ಫ್ರಾಸ್ಟ್ರಕ್ಚರ್‌ ಸಂಸ್ಥೆ ಹಾಗೂ ವರ್ತೂರು ಕೆರೆ ಅಭಿವೃದ್ಧಿಗೆ ಸ್ಟಾರ್‌  ಇನ್‌ಫ್ರಾಸ್ಟ್ರಕ್ಚರ್‌ ಸಂಸ್ಥೆ ಟೆಂಡರ್‌ ಪಡೆದಿದ್ದು, ಪ್ರಾಧಿಕಾರ ಆಡಳಿತ ಮಂಡಳಿ ಅನುಮೋದನೆ ನೀಡಿದೆ. ಇನ್ನೂ ಈ ಕಂಪನಿಗಳಿಗೆ ಕಾಮಗಾರಿಯ ಕಾರ್ಯಾದೇಶ ನೀಡಿಲ್ಲ. ಆದರೂ, ಎನ್‌ಜಿಟಿಗೆ ಅನುಪಾಲನಾ ವರದಿ  ಸಲ್ಲಿಸಬೇಕಾಗಿರುವುದರಿಂದ ಕೆಟಿಪಿಪಿ ಕಾಯ್ದೆಯಡಿ 4ಜಿ ವಿನಾಯಿತಿ ಪಡೆದು ಕೆಲವು ಕಾಮಗಾರಿಗಳಿಗೆ ಚಾಲನೆ ನೀಡಲಾಗಿದೆ.

ಆದರೆ ಈಗ ಕೋವಿಡ್‌ 19 ಭೀತಿ ಹಾಗೂ ಮಳೆಗಾಲದಿಂದ ನಿರ್ದಿಷ್ಟ ಅವಧಿಯೊಳಗೆ ಕಾಮಗಾರಿ  ಪೂರ್ಣಗೊಳ್ಳುವುದು ಅನುಮಾನವಾಗಿದೆ. ಕೆರೆಗಳ ಹೂಳು ಬಳಸಿ ಇಟ್ಟಿಗೆ ತಯಾರಿ:ಬೆಳ್ಳಂದೂರು ಹಾಗೂ ವರ್ತೂರು ಕೆರೆಗಳಲ್ಲಿ ಹೆಚ್ಚಾಗಿ ಹೂಳು ತುಂಬಿಕೊಂಡಿದ್ದು, ಅದನ್ನು ಬಳಸಿ ಇಟ್ಟಿಗೆ ತಯಾರಿಸಲು ಬಿಡಿಎ ಅವಕಾಶ ನೀಡಿತ್ತು.  ಈ ಸಂಬಂಧ ಇಟ್ಟಿಗೆ ತಯಾರಿಕಾ ಘಟಕಗಳಿಗೆ ತಿಳಿಸಿತ್ತು. ಮಳೆಗಾಲದಲ್ಲಿ ಹೂಳೆತ್ತಲು ಮುಂದಾದರೂ, ಇಟ್ಟಿಗೆ ತಯಾರಿಗೆ ಕಷ್ಟವಾಗಲಿದೆ.

ಏನೆಲ್ಲಾ ಅಭಿವದ್ಧಿ: ಬೆಳ್ಳಂದೂರು ಕೆರೆ, ವರ್ತೂರು ಕೆರೆಯಲ್ಲಿ ಹೂಳೆತ್ತುವುದು, ಜೌಗು ಪ್ರದೇಶ (ವೆಟ್‌ಲ್ಯಾಂಡ್‌) ಅಭಿವೃದ್ಧಿ, ಕೊಳಗಳ ನಿರ್ಮಾಣ, ನೀರು ಸಂಸ್ಕರಣಾ ಘಟಕ ನಿರ್ಮಾಣ, ದಂಡೆಗಳನ್ನು ಬಲಪಡಿಸು ವುದು,  ನಡಿಗೆ ಪಥ, ಸೈಕಲ್‌ ಪಥ, ಬಯಲು ರಂಗಮಂದಿರಗಳನ್ನು ನಿರ್ಮಾಣ ಕಾಮಗಾರಿ ಕೈಗೊಳ್ಳಲು ಬಿಡಿಎ ವಿಸ್ತೃತ ಯೋಜನಾ ವರದಿ (ಡಿಪಿಆರ್‌) ಸಿದ್ಧಪಡಿಸಿತ್ತು. ಆದರೆ, ಹಸಿರು ನ್ಯಾಯಮಂಡಳಿ ಸೂಚಿಸಿರುವ ಕೆಲವು  ಕಾಮಗಾರಿಗಳನ್ನೂ ಸೇರ್ಪಡೆಗೊಳಿಸಲು ಚಿಂತನೆ ನಡೆಸಲಾಗಿದೆ ಎಂದು ಪ್ರಾಧಿಕಾರದ ಅಧಿಕಾರಿಯೊಬ್ಬರು ತಿಳಿಸಿದರು.

ಬೆಳ್ಳಂದೂರು ಹಾಗೂ ವರ್ತೂರು ಕೆರೆ ಸಮಗ್ರ ಅಭಿವೃದ್ಧಿಗೆ ಆಡಳಿತ ಮಂಡಳಿಯಲ್ಲಿ ಒಪ್ಪಿಗೆ ನೀಡಲಾಗಿದೆ. ಇನ್ನೆರಡು ತಿಂಗಳಲ್ಲಿ ಪೂರ್ಣ ಕಾಮಗಾರಿ ಆರಂಭಿಸಲಾ ಗುವುದು. ಮಳೆಗಾಲ ಆರಂಭ ಹಾಗೂ ಕೋವಿಡ್‌ 19 ಹಿನ್ನೆಲೆ  ಹೂಳೆತ್ತುವ ಕಾರ್ಯ ಮುಂದೂಡ ಲಾಗುವುದು. ಈ ಸಮಯದಲ್ಲಿ ಉಳಿದ ಕಾರ್ಯ ನಿರಂತರವಾಗಿ ನಡೆಯಲಿವೆ. ನಿಗದಿತ ಸಮಯದಲ್ಲಿ ಕಾಮಗಾರಿ ಪೂರ್ಣಗೊಳಿಸಲು ಸೂಚಿಸಲಾಗಿದೆ.
-ಡಾ.ಎಚ್‌.ಆರ್‌.ಮಹಾದೇವ್,‌ ಬಿಡಿಎ ಆಯುಕ್ತರು

* ಮಂಜುನಾಥ ಗಂಗಾವತಿ

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.