ನಕಲಿ ಖಾತೆಗಳ ಮೂಲಕ ಸಾಲ; ದಾಖಲೆ ವಶ
Team Udayavani, Jun 23, 2020, 5:26 AM IST
ಬೆಂಗಳೂರು: ಶ್ರೀಗುರು ರಾಘವೇಂದ್ರ ಸಹಕಾರ ಬ್ಯಾಂಕ್ನಲ್ಲಿ ನಕಲಿ ಖಾತೆಗಳ ಮೂಲಕ ಸಾಲ ಪಡೆದು ವಂಚಿಸಿದ ಮೂವರು ಖಾಸಗಿ ವ್ಯಕ್ತಿಗಳ ಮನೆಗಳ ಮೇಲೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿ ಮಹತ್ವದ ದಾಖಲೆಗಳನ್ನು ವಶಪಡಿಸಿಕೊಂಡಿದ್ದಾರೆ.
ಭ್ರಷ್ಟಾಚಾರ ನಿಗ್ರಹ ದಳ(ಎಸಿಬಿ)ಯ ವರಿಷ್ಠಾಧಿಕಾರಿ ಅಬ್ದುಲ್ ಅಹದ್ ನೇತೃತ್ವದಲ್ಲಿ ಉಪಾಧೀಕ್ಷಕರಾದ ಎಂ.ಕೆ.ತಮ್ಮಯ್ಯ, ಡಿ.ಎಸ್.ರಾಜೇಂದ್ರ, ಸಿ.ಬಾಲಕೃಷ್ಣ ತಂಡ ಯಶವಂತಪುರದ ಓರಾಯನ್ ಮಾಲ್ ಸಮೀಪದ ಬ್ರಿಗೈಟ್ ಗೈಟ್ ವೇಯಲ್ಲಿ ಫ್ಲ್ಯಾಟ್ ನಲ್ಲಿ ರಘುನಾಥ್, ಎಚ್.ಬಿ.ಆರ್. ಲೇಔಟ್ ಗಣೇಶ್ ಬ್ಲಾಕ್ ನ ಜಸ್ವಂತ್ ರೆಡ್ಡಿ, ಚಿಕ್ಕಲಸಂದ್ರದ ರಾಮಾಂಜನೇಯನಗರದ ರಾಮಕೃಷ್ಣ ಮನೆಗಳ ಮೇಲೆ ದಾಳಿ ನಡೆಸಲಾಗಿದೆ.
ಎಸಿಬಿ ಮೂಲಗಳ ಪ್ರಕಾರ, ಬ್ಯಾಂಕ್ ನಿಂದ ರಘುನಾಥ್ 139 ಕೋಟಿ ರೂ, ಜಸ್ವಂತ್ ರೆಡ್ಡಿ 153 ಕೋಟಿ ರೂ., ರಾಮಕೃಷ್ಣ 43 ಕೋಟಿ ರೂ. ಗಳನ್ನು ಸಾಲವನ್ನು ಬೇರೇ ಬೇರೆ ನಕಲಿ ಖಾತೆಗಳ ಮೂಲಕ ಪಡೆದು ಹಿಂತಿರುಗಿಸದೆ ಹಣ ದುರುಪಯೋಗ ಪಡಿಸಿಕೊಂಡಿರುವುದು ಕಂಡು ಬರುತ್ತದೆ. ಈ ಹಿನ್ನೆಲೆಯಲ್ಲಿ ದಾಳಿ ನಡೆಸಲಾಗಿದೆ ಎಂದು ಎಸಿಬಿ ಮೂಲಗಳು ತಿಳಿಸಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್ ಸುಲಿಗೆ; ಮೂವರ ಬಂಧನ
Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ
Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್ ಬಾತ್ಮೀದಾರ ಸೆರೆ
Arrested: ಸುಲಿಗೆ ಸೇರಿ 42 ಕೇಸ್ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ
Arrested: 17 ಕೇಸ್ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್ ಬಂಧನ
MUST WATCH
ಹೊಸ ಸೇರ್ಪಡೆ
MOTHER: ತಾಯಿಗಿಂತ ಮಿಗಿಲಾದ ದೇವರಿಲ್ಲ
Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ
Village Life: ಅಪರೂಪವೆನಿಸುತ್ತಿರುವ ಹಳ್ಳಿಗಾಡಿನ ಜೀವನ
ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್ಗೆ ಸೂಚನೆ
IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ