ಮಹದೇವಪುರ: ಕ್ರೇನ್ ಹರಿದು ಬಿ.ಕಾಂ.ವಿದ್ಯಾರ್ಥಿನಿ ಸಾವು
Team Udayavani, Nov 3, 2022, 10:29 PM IST
ಮಹದೇವಪುರ: ಕ್ರೇನ್ ವಾಹನ ಹರಿದ ಪರಿಣಾಮ ಕಾಲೇಜು ವಿದ್ಯಾರ್ಥಿನಿ ಮೃತಪಟ್ಟಿರುವ ದಾರುಣ ಘಟನೆ ವೈಟ್ಫೀಲ್ಡ್ ಸಂಚಾರ ಠಾಣೆ ವ್ಯಾಪ್ತಿಯ ಕನ್ನಮಂಗಲ ಗೈಟ್ ಸಮೀಪ ಜರುಗಿದೆ.
ಕನ್ನಮಂಗಲ ಗ್ರಾಮದಲ್ಲಿ ಪೋಷಕರೊಂದಿಗೆ ವಾಸವಾಗಿದ್ದ ನೂರ್ ಫಿಜ (19) ಮೃತ ದುರ್ದೈವಿ. ಖಾಸಗಿ ಕಾಲೇಜಿನಲ್ಲಿ ಬಿ.ಕಾಂ. ಪದವಿ ವ್ಯಾಸಂಗ ಮಾಡುತ್ತಿದ್ದ ನೂರ್ ಫಿಜ ಕನ್ನಮಂಗಲ ಬಸ್ಸು ನಿಲ್ದಾಣದಿಂದ ಮನೆಗೆ ನಡೆದುಕೊಂಡು ಹೋಗುವ ಸಂದರ್ಭದಲ್ಲಿ ಹಿಂದಿನಿಂದ ಬಂದ ಕ್ರೇನ್ ವಾಹನದ ಚಾಲಕನ ಅಜಾಗರೂಕತೆಯಿಂದ ಮೇಲೆ ನೂರ್ ಫಿಜ ದೇಹದ ಮೇಲೆ ಹರಿದಿದೆ. ಘಟನೆ ಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ನೂರ್ ಫಿಜ ಅವ ರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅದರೆ, ಚಿಕಿತ್ಸೆ ಫಲಕಾರಿಯಾಗದೆ ಮೆದುಳು ನಿಷ್ಕ್ರಿಯಗೊಂಡು ಸಾವನ್ನಪ್ಪಿದ್ದಾರೆ.
ಚಾಲಕನ ಅಜಾಗರೂಕತೆಯಿಂದ ಯುವತಿಯ ಮೇಲೆ ಕ್ರೇನ್ ವಾಹನ ಹರಿದಿರುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಕನ್ನಮಂಗಲ ಗ್ರಾಮದ ಕ್ರೇನ್ ವಾಹನವನ್ನು ಜಪ್ತಿ ಮಾಡಲಾಗಿದ್ದು, ಚಾಲಕನನ್ನು ಸಹ ವಶಕ್ಕೆ ಪಡೆಯಲಾಗಿದೆ ಎಂದು ಪೋಲಿಸರು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Extortion: ಆನ್ಲೈನ್ ಗೇಮ್; ಬಾಲಕನ ಬೆದರಿಸಿ ಸುಲಿಗೆ
Kushtagi: ಕಾಣೆಯಾಗಿದ್ದ ಪುರಸಭೆ ನೌಕರ ಪತ್ತೆ; ಆತಂಕ ದೂರ
Politics: ಕೇಂದ್ರ ಬರ ಪರಿಹಾರ ನೀಡದಿರಲು ವಿಧಾನಸಭೆ ಚುನವಾಣೆ ಸೋಲಿನ ಸೇಡು: ರಾಮಲಿಂಗಾರೆಡ್ಡಿ
LPG Cylinders: ವಾಣಿಜ್ಯ ಬಳಕೆಯ ಎಲ್ ಪಿಜಿ ಸಿಲಿಂಡರ್ ಬೆಲೆ ಮತ್ತೆ ಇಳಿಕೆ; ಹೊಸ ದರ ಎಷ್ಟು?
ಧ್ರುವ್ ರಾಠಿ ಮುಸ್ಲಿಂ, ಆತನ ಪತ್ನಿ ಪಾಕಿಸ್ತಾನಿ: ವೈರಲ್ ಪೋಸ್ಟ್ನ ಸತ್ಯಾಸತ್ಯತೆ ಏನು?