Theft: ಚಿಕಿತ್ಸೆಗೆಂದು ಹೋದ ಮಹಿಳೆಯ ಮಾಂಗಲ್ಯ ಸರ ಕದ್ದರಾ ನರ್ಸ್‌ಗಳು?

ಸರ ತೆಗೆದಿಡುವಂತೆ ಹೇಳಿದ್ದ ನರ್ಸ್‌; ಬೇಡ ಎಂದರೂ ಒತ್ತಾಯಿಸಿ ದಿಂಬಿನಡಿ ಇರಿಸಿದ್ದ ಶುಶ್ರೂಷಕಿ

Team Udayavani, Feb 13, 2024, 8:01 AM IST

2-bng

ಸಾಂದರ್ಭಿಕ ಚಿತ್ರ

ಬೆಂಗಳೂರು: ಎದೆನೋವು ಎಂದು ಚಿಕಿತ್ಸೆಗೆ ಬಂದಿದ್ದ ಮಹಿಳೆಯ ಮಾಂಗಲ್ಯ ಸರ ಕದ್ದ ಆರೋಪದಡಿ ಖಾಸಗಿ ಆಸ್ಪತ್ರೆಯ ಮೂವರು ಸಿಬ್ಬಂದಿ ವಿರುದ್ಧ ಗೋವಿಂದರಾಜನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪಟ್ಟೇಗಾರಪಾಳ್ಯ ನಿವಾಸಿ ರಾಜೇಶ್ವರಿ(36) ಎಂಬವರು ನೀಡಿದ ದೂರಿನ ಮೇರೆಗೆ ಮೂಡಲಪಾಳ್ಯ ಮುಖ್ಯರಸ್ತೆಯ ಖಾಸಗಿ ಆಸ್ಪತ್ರೆಯ ಶುಶ್ರೂಕಿಯರಾದ ಅಕ್ಷತಾ, ಅದೀನಾ, ಹೌಸ್‌ ಕೀಪಿಂಗ್‌ ಕೆಲಸ ಮಾಡುವ ಪ್ರೇಮಮ್ಮಾ ಎಂಬುವರ ವಿರುದ್ಧ ಎಫ್ಐಆರ್‌ ದಾಖಲಿಸಿ ತನಿಖೆ ಕೈಗೊಳ್ಳಲಾಗಿದೆ ಎಂದು ಪೊಲೀಸರು ಹೇಳಿದರು.

ಫೆ.8ರ ಮಧ್ಯಾಹ್ನ ದೂರುದಾರರಾದ ರಾಜೇಶ್ವರಿಗೆ ಎದೆನೋವು ಕಾಣಿಸಿಕೊಂಡಿದ್ದು, ರಾತ್ರಿ ನೋವು ಹೆಚ್ಚಾಗಿದೆ. ಕೂಡಲೇ ಪತಿ ವೆಂಕಟೇಶಮೂರ್ತಿ ಪತ್ನಿ ರಾಜೇಶ್ವರಿಯನ್ನು ತಡರಾತ್ರಿ ಮೂಡಲಪಾಳ್ಯ ಮುಖ್ಯರಸ್ತೆಯ ಖಾಸಗಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ.

ಈ ವೇಳೆ ವೈದ್ಯರು ಆರೋಗ್ಯ ತಪಾಸಣೆ ಮಾಡಿ, ಇಸಿಜಿ ಮಾಡಿಸಲು ಸೂಚಿಸಿದ್ದಾರೆ. ಆಗ ಕರ್ತವ್ಯದಲ್ಲಿದ್ದ ನರ್ಸ್‌ ಅಕ್ಷತಾ ಇಸಿಜಿ ಮಾಡಬೇಕೆಂದು, ಮಾಂಗಲ್ಯ ಸರ ತೆಗೆಯಲು ಹೇಳಿದ್ದಾರೆ. ಸುಮಾರು 2.50 ಲಕ್ಷ ರೂ. ಮೌಲ್ಯದ 50 ಗ್ರಾಂ ತೂಕದ ಸರ ಬಿಚ್ಚಿ ತಮ್ಮ ಪತಿಯ ಕೈಗೆ ನೀಡಲು ರಾಜೇಶ್ವರಿ ಮುಂದಾಗಿದ್ದಾರೆ. ಆಗ ನರ್ಸ್‌ ಅಕ್ಷತಾ ಮಾಂಗಲ್ಯ ಸರವನ್ನು ತಲೆದಿಂಬಿನ ಕೆಳಗೆ ಇರಿಸುವಂತೆ ಹೇಳಿದ್ದಾರೆ. ಆದರೂ ರಾಜೇಶ್ವರಿ ಪತಿಯ ಕೈಗೆ ಕೊಡುವೆ. ಅವರನ್ನು ಕರೆಯಿರಿ ಎಂದಾಗ, ಅಕ್ಷತಾ ದಿಂಬಿನ ಕೆಳಗೆ ಇಡುವಂತೆ ಒತ್ತಾಯಿಸಿದ್ದಾರೆ. ಹೀಗಾಗಿ ದಿಂಬಿನ ಕೆಳಗೆ ಮಾಂಗಲ್ಯ ಸರ ಇಟ್ಟಿದ್ದಾರೆ.

ಬಳಿಕ ಎದೆಗೆ ಜೆಲ್‌ ಹಾಕಿ ಇಸಿಜಿ ಮಾಡಿದ ಅಕ್ಷತಾ, ಜೆಲ್‌ ಒರೆಸಿಕೊಂಡು ಹೊರಡಿ ಎಂದು ರಾಜೇಶ್ವರಿಯನ್ನು ಆತುರಾತುರವಾಗಿ ಹೊರಗೆ ಕಳುಹಿಸಿದ್ದಾರೆ. ಈ ವೇಳೆ ನರ್ಸ್‌ ಅದೀನಾ ಸಹ ಅಕ್ಷತಾ ಹಾಗೂ ಸ್ವತ್ಛತಾ ಸಿಬ್ಬಂದಿ ಪ್ರೇಮಮ್ಮಾ ಜತೆಗೆ ಇದ್ದರು.

ಬಳಿಕ ರಾಜೇಶ್ವರಿ ಮಾಂಗಲ್ಯ ಸರವನ್ನು ಮರೆತು ಪತಿಯ ಜತೆಗೆ ಮನೆಗೆ ತೆರಳಿದ್ದಾರೆ. ಚುಚ್ಚುಮದ್ದು ಪಡೆದುಕೊಂಡಿದ್ದರಿಂದ ರಾಜೇಶ್ವರಿ ಗಾಢ ನಿದ್ದೆಗೆ ಜಾರಿದ್ದಾರೆ. ಮರು ದಿನ ಸ್ನಾನ ಮಾಡುವಾಗ ಮಾಂಗಲ್ಯ ಸರ ನೆನಪಾಗಿ, ಕೆಲ ಹೊತ್ತಿನ ಬಳಿಕ ದಂಪತಿ ಆಸ್ಪತ್ರೆಗೆ ತೆರಳಿ ವಿಚಾರಿಸಿದಾಗ ಸಿಬ್ಬಂದಿ ಬೇಜವಾಬ್ದಾರಿ ಉತ್ತರ ನೀಡಿದ್ದಾರೆ. ಅಷ್ಟೇ ಅಲ್ಲದೆ ಜಗಳ ಮಾಡಿದ್ದಾರೆ, ಹೀಗಾಗಿ ಇಸಿಜಿ ವೇಳೆ ಸ್ಥಳದಲ್ಲಿ ನರ್ಸ್‌ ಗಳಾದ ಅಕ್ಷತಾ, ಅದೀನಾ, ಹೌಸ್‌ಕೀಪಿಂಗ್‌ ಕೆಲಸ ಮಾಡುವ ಪ್ರೇಮಮ್ಮಾ ಮೇಲೆ ಅನುಮಾನವಿದೆ ಎಂದು ರಾಜೇಶ್ವರಿ ದೂರಿನಲ್ಲಿ ಆರೋಪಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಯುತ್ತಿದೆ ಎಂದು ಪೊಲೀಸರು ಹೇಳಿದರು.

ಟಾಪ್ ನ್ಯೂಸ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

Bengaluru: ಚೆಕ್‌ ದುರ್ಬಳಕೆ; ಕ್ಯಾಷಿಯರ್‌, ಎಲ್‌ಐಸಿ ಏಜೆಂಟ್‌ಗೆ ಜೈಲು

Bengaluru: ಚೆಕ್‌ ದುರ್ಬಳಕೆ; ಕ್ಯಾಷಿಯರ್‌, ಎಲ್‌ಐಸಿ ಏಜೆಂಟ್‌ಗೆ ಜೈಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.