ಸಿಎಂ ಮಹತ್ವದ ಸಭೆಗೆ ಮೇಯರ್ ಗೈರು
Team Udayavani, Jun 23, 2020, 5:28 AM IST
ಬೆಂಗಳೂರು: ನಗರದಲ್ಲಿ ಕೊರೊನಾ ಸೋಂಕಿಗೆ ಕಡಿವಾಣ ಹಾಕುವುದು, ನಿರ್ದಿಷ್ಟ ಪ್ರದೇಶಗಳ ಲಾಕ್ಡೌನ್ ಸೇರಿದಂತೆ ವಿವಿಧ ಮಹತ್ವದ ವಿಚಾರಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಯಡಿಯೂರಪ್ಪ ಸೋಮವಾರ ನಡೆಸಿದ ಸಭೆಗೆ ಮೇಯರ್ ಎಂ.ಗೌತಮ್ಕುಮಾರ್ ಗೈರಾಗಿರುವುದನ್ನು ವಿರೋಧ ಪಕ್ಷದ ನಾಯಕ ಅಬ್ದುಲ್ ವಾಜಿದ್ ಟೀಕಿಸಿದ್ದಾರೆ.
ನಗರದಲ್ಲಿ ಸೋಂಕಿತರ ಸಂಖ್ಯೆ ಗಣನೀಯವಾಗಿ ಏರಿಕೆಯಾಗುತ್ತಿದೆ. ಇದರ ಮೂಲ ಏನು ಎನ್ನುವುದೇ ತಿಳಿಯುತ್ತಿಲ್ಲ. ಇದಕ್ಕೆ ಕಡಿವಾಣ ಹಾಕಲು ಮುಖ್ಯಮಂತ್ರಿಗಳು ನಗರದ ಎಲ್ಲ ಅಧಿಕಾರಿಗಳ ಸಭೆ ಕರೆದಿರುವಾಗ ಜವಾಬ್ದಾರಿ ಸ್ಥಾನದಲ್ಲಿರುವ ಮೇಯರ್ ಗೈರಾಗುವುದು ಎಷ್ಟು ಸರಿ, ಮೇಯರ್ ಅವರನ್ನು ಕರೆದಿಲ್ಲವೋ ಅಥವಾ ಗೈರಾಗಿದ್ದಾರೋ ಎನ್ನುವುದನ್ನು ಅವರೇ ಹೇಳಬೇಕು.
ಕೋವಿಡ್ 19 ಸಂಕಷ್ಟದ ಸಂದರ್ಭದಲ್ಲಿ ಮೇಯರ್ ಆಗಿರುವವರು ಈ ರೀತಿ ವರ್ತಿಸುವುದು ಮೇಯರ್ ಸ್ಥಾನಕ್ಕೆ ಶೋಭೆ ತರುವುದಿಲ್ಲ. ಮೇಯರ್ ಹಾಗೂ ಕೆಲವು ನಾಯಕರ ಬಣ ರಾಜಕೀಯದಿಂದ ಬಜೆಟ್ ಅನುಮೋದನೆಯಾಗಿ ಒಂದು ತಿಂಗಳಾದರೂ ಬಜೆಟ್ ಪುಸ್ತಕ ಬಿಡುಗಡೆಯಾಗಿಲ್ಲ ಎಂದು ದೂರಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CN Ashwath Narayan: ಕಾಂಗ್ರೆಸ್ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ
Bengaluru: ಅತಿಕ್ರಮಿಸಿ ಏರ್ಪೋರ್ಟ್ನಲ್ಲಿ ವಿಡಿಯೋ: ಯುಟ್ಯೂಬರ್ ಬಂಧನ
Bengaluru: ಮಕ್ಕಳ ಅಶ್ಲೀಲ ಫೋಟೋ, ವಿಡಿಯೋ ವೀಕ್ಷಿಸುತ್ತಿದ್ದ ಸೆಕ್ಯೂರಿಟಿ ಗಾರ್ಡ್ ಸೆರೆ
Jai Shri Ram ಎಂದು ಕೂಗಿದ್ದಕ್ಕೆ ಅನ್ಯಕೋಮಿನ ಯುವಕರಿಂದ ಹಲ್ಲೆ
ಗ್ಯಾರಂಟಿ ಯೋಜನೆಗಳ ಟೀಕೆಗೆ ತಾಯಂದಿರೇ ಉತ್ತರ ನೀಡುತ್ತಾರೆ: ಡಿಕೆ ಶಿವಕುಮಾರ್