ಮೆಟ್ರೋ; ಹೆಚ್ಚುವರಿ ಭೂಸ್ವಾಧೀನಕ್ಕೆ ಒತ್ತು
Team Udayavani, Jun 2, 2020, 6:17 AM IST
ಬೆಂಗಳೂರು: ಸರ್ಕಾರದ ಬಹು ನಿರೀಕ್ಷಿತ ಕೆ.ಆರ್. ಪುರದಿಂದ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ (ರೀಚ್-2ಬಿ) ನಡುವೆ “ನಮ್ಮ ಮೆಟ್ರೋ’ ನಿರ್ಮಾಣಕ್ಕೆ ಸಂಬಂಧಿಸಿ ದಂತೆ ಅಗತ್ಯವಿರುವ 3,723 ಚ.ಮೀ. ಹೆಚ್ಚುವರಿ ಭೂಸ್ವಾಧೀನಕ್ಕೆ ಸರ್ಕಾರ ಅಧಿಸೂಚನೆ ಹೊರಡಿಸಿದೆ. ಕೆ.ಆರ್. ಪುರ ಮೆಟ್ರೋ ನಿಲ್ದಾಣದಿಂದ ಹೆಬ್ಟಾಳ ಮಾರ್ಗವಾಗಿ ವಿಮಾನ ನಿಲ್ದಾಣದವರೆಗೆ ಮೆಟ್ರೊ ರೈಲು ಮಾರ್ಗ ನಿರ್ಮಾಣಗೊಳ್ಳಲಿದೆ.
ಒಟ್ಟು 10,584 ಕೋಟಿ ವೆಚ್ಚದ ಈ ಮಾರ್ಗ ನಿರ್ಮಾಣಕ್ಕೆ ಈಗಾಗಲೇ ಭೂಸ್ವಾಧೀನ ಕಾರ್ಯ ನಡೆದಿದೆ. ಅಗತ್ಯವಿದ್ದ ಹೆಚ್ಚುವರಿ ಭೂಸ್ವಾಧೀನಕ್ಕೆ ಸರ್ಕಾರ ಒಪ್ಪಿಗೆ ಸೂಚಿಸಿತ್ತು. ಈಗ ಅಧಿಸೂಚನೆ ಹೊರಡಿಸಿದ್ದು, ಇದರಿಂದ ಕಾಮಗಾರಿ ಚುರುಕುಗೊಳ್ಳಲಿದೆ. ಬೈಯಪ್ಪನಹಳ್ಳಿಯಿಂದ ವೀರಣ್ಣನ ಪಾಳ್ಯದವರೆಗೆ ಮೆಟ್ರೋ ರೈಲು ಮಾರ್ಗದ ನಿರ್ಮಾಣದ ಉದ್ದೇಶಕ್ಕಾಗಿ ಹೆಚ್ಚುವರಿ ಭೂಮಿ ಬೇಕಾಗಿದ್ದು, ಬೆಂಗಳೂರು ಪೂರ್ವ ತಾಲೂಕಿನ ಬೆನ್ನಿಗಾನಹಳ್ಳಿ, ಕೆ.ಜಿ. ಬಾಣಸವಾಡಿ, ಹೊರಮಾವು, ಬೆಂಗ ಳೂರು ಉತ್ತರ ತಾಲ್ಲೂಕಿನ ಹೆಣ್ಣೂರು, ನಾಗವಾರದಲ್ಲಿ ಭೂಮಿಯನ್ನು ಸ್ವಾಧೀನ ಮಾಡಿಕೊಳ್ಳಲಾಗುತ್ತದೆ.
ಈ ಮಾರ್ಗಕ್ಕಾಗಿ ಸರ್ಕಾರದ 58 ಹಾಗೂ 203 ಖಾಸಗಿ ಆಸ್ತಿ ಸೇರಿ ಒಟ್ಟು 261 ಆಸ್ತಿಗಳನ್ನು ಸ್ವಾಧೀನ ಪಡಿಸಿಕೊಳ್ಳಬೇಕಾಗಿತ್ತು. ಕಳೆದ ಮಾಚ್ವರೆಗೆ ಒಟ್ಟು 190 ಆಸ್ತಿಗಳನ್ನು ಸ್ವಾಧೀನ ಮಾಡಿಕೊಳ್ಳಲಾಗಿದೆ. ಈ ಪ್ರಕ್ರಿಯೆ ಮುಗಿಯುತ್ತಿದ್ದಂತೆ ಹೆಚ್ಚುವರಿ ಭೂಸ್ವಾಧೀನಕ್ಕೆ ಬೆಂಗಳೂರು ಮೆಟ್ರೋ ರೈಲು ನಿಗಮ (ಬಿಎಂಆರ್ಸಿಎಲ್) ಕೈಹಾಕಲಿದೆ. ಅಂದಹಾಗೆ, ಬೆಂಗಳೂರು ಹೊರವರ್ತುಲ ದ ಪ್ರಮುಖ ಪ್ರದೇಶಗಳನ್ನು ಸಂಪರ್ಕಿಸುವ ಬಹುನಿರೀಕ್ಷಿತ ಈ ಮಾರ್ಗದ ನಿರ್ಮಾಣ ಕಾರ್ಯವನ್ನು 2024ರ ವೇಳೆಗೆ ಪೂರ್ಣಗೊಳಿಸುವ ಗುರಿಯನ್ನು ಬಿಎಂಆರ್ಸಿಎಲ್ ಹೊಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CN Ashwath Narayan: ಕಾಂಗ್ರೆಸ್ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ
Bengaluru: ಅತಿಕ್ರಮಿಸಿ ಏರ್ಪೋರ್ಟ್ನಲ್ಲಿ ವಿಡಿಯೋ: ಯುಟ್ಯೂಬರ್ ಬಂಧನ
Bengaluru: ಮಕ್ಕಳ ಅಶ್ಲೀಲ ಫೋಟೋ, ವಿಡಿಯೋ ವೀಕ್ಷಿಸುತ್ತಿದ್ದ ಸೆಕ್ಯೂರಿಟಿ ಗಾರ್ಡ್ ಸೆರೆ
Jai Shri Ram ಎಂದು ಕೂಗಿದ್ದಕ್ಕೆ ಅನ್ಯಕೋಮಿನ ಯುವಕರಿಂದ ಹಲ್ಲೆ
ಗ್ಯಾರಂಟಿ ಯೋಜನೆಗಳ ಟೀಕೆಗೆ ತಾಯಂದಿರೇ ಉತ್ತರ ನೀಡುತ್ತಾರೆ: ಡಿಕೆ ಶಿವಕುಮಾರ್
MUST WATCH
ಹೊಸ ಸೇರ್ಪಡೆ
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ
Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ