ಸಚಿವ ಬೈರತಿ ಬಸವರಾಜ ಆಪ್ತನ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ
Team Udayavani, Jan 15, 2022, 11:22 AM IST
ಬೆಂಗಳೂರು: ಸಚಿವ ಬೈರತಿ ಬಸವರಾಜ ಅವರ ಆಪ್ತನ ಮೇಲೆ ಇಬ್ಬರು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿರುವ ಘಟನೆ ರಾಮಮೂರ್ತಿನಗರ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಈ ಸಂಬಂಧ ಸಚಿವ ಬೈರತಿ ಬಸವರಾಜ ಅವರ ಆಪ್ತ ವಿಜ್ಞಾನಪುರ ಪುಷ್ಪರಾಜ್ ಅವರ ಪತ್ನಿ ಮಾಲತಿ ಅವರು ದೂರು ನೀಡಿದ್ದು, ತನಿಖೆ ನಡೆ ಯುತ್ತಿದೆ ಎಂದು ಪೊಲೀಸರು ಹೇಳಿದರು.
ಜ.6ರಂದ ರಾತ್ರಿ 8.30ರ ಸುಮಾರಿಗೆ ವಿಜ್ಞಾ ನಪುರ ನಿವಾಸಿ ಪುಷ್ಪರಾಜ್ ಅವರು ಹೋಗುವಾಗ ಹೆಲ್ಮೆಟ್ ಧರಿಸಿ ಬಂದಿದ್ದ ನಾಲ್ವರು ಆರೋ ಪಿಗಳು ಅವರನ್ನು ಅಡ್ಡಗಟ್ಟಿ ಹಲ್ಲೆ ನಡೆಸಿದ್ದಾರೆ. ಅದರಿಂದ ಅವರ ಮುಖ ಹಾಗೂ ದೇಹದ ಇತರೆ ಭಾಗಗಳಿಗೆ ಪೆಟ್ಟು ಬಿದ್ದಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಪುಷ್ಪರಾಜ್ ಅವರು ಬೈರತಿ ಬಸವರಾಜ ಅವರ ಆಪ್ತರಾಗಿದ್ದು, ಏರಿ ಯಾದಲ್ಲಿ ಸಣ್ಣ-ಪುಟ್ಟ ಕೆಲಸ ಮಾಡಿಕೊಂಡಿ ದ್ದರು ಎಂದು ಪೊಲೀಸರು ಹೇಳಿದರು. ಅನುಮಾನ: ಹಲ್ಲೆ ಸಂಬಂಧ ಪುಷ್ಪರಾಜ್ ಅವರ ಬಳಿ ಹೇಳಿಕೆ ದಾಖಲಿಸಿಕೊಂಡಿದ್ದು, ಈ ಹಿಂದೆ ಮಾಜಿ ಕಾರ್ಪೊರೇಟರ್ ಎಸ್.ರಾಜು ಅವರ ಜತೆ ಕೆಲವೊಂದು ವಿಚಾರಗಳಿಗೆ ವಾಗ್ವಾದ ನಡೆದಿತ್ತು. ಹೀಗಾಗಿ ಅವರೇ ಹಲ್ಲೆ ನಡೆಸಿರುವ ಸಾಧ್ಯತೆ ಎಂದು ಪುಷ್ಪರಾಜ್ ಅನುಮಾನ ವ್ಯಕ್ತಪಡಿಸಿದ್ದಾರೆ. ಆದರೆ, ಈ ಬಗ್ಗೆ ಸ್ಪಷ್ಟ ಮಾಹಿತಿ ಇಲ್ಲ. ತನಿಖೆ ಮುಂದುವರಿದಿದೆ ಎಂದು ಪೊಲೀಸರು ಹೇಳಿದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್
Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್ ಕೋಡ್ ಅಂಟಿಸಿದ್ದ ಉದ್ಯಮಿ ಸೆರೆ
Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್ ನೀಚ ಕೃತ್ಯ
ಚಾಕೋಲೆಟ್ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ
Bengaluru: ಚೆಕ್ ದುರ್ಬಳಕೆ; ಕ್ಯಾಷಿಯರ್, ಎಲ್ಐಸಿ ಏಜೆಂಟ್ಗೆ ಜೈಲು
MUST WATCH
ಹೊಸ ಸೇರ್ಪಡೆ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು
Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ
BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ
Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್
Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು