ಬೆಂಗಳೂರು: ಕಪಾಲಿ ಥಿಯೇಟರ್ ಬಳಿ ಬಹುಮಹಡಿ ಕಟ್ಟಡ ಕುಸಿತ ; ತಪ್ಪಿದ ಅನಾಹುತ


Team Udayavani, Jul 28, 2020, 11:50 PM IST

Building-Collapse

ಬೆಂಗಳೂರು: ನಗರದ ಮೆಜೆಸ್ಟಿಕ್ ನ ಹೃದಯ ಬಾಗದಲ್ಲಿರುವ ಕಪಾಲಿ ಚಿತ್ರಮಂದಿರದ ಸಮೀಪ ಎರಡು ಬಹುಮಹಡಿ ಕಟ್ಟಡಗಳು ಇಂದು ರಾತ್ರಿ ಇದ್ದಕ್ಕಿದ್ದಂತೆ ಉರುಳಿಬಿದ್ದಿವೆ.

ಕಪಾಲಿ ಥಿಯೇಟರ್ ಬಳಿ ಇದ್ದ ಅರೆವಾಣಿಜ್ಯ ಕಟ್ಟಡಗಳೆರಡು ಮಂಗಳವಾರ ರಾತ್ರಿ ನೋಡನೋಡುತ್ತಿದ್ದಂತೆ ಕುಸಿದು ಬಿತ್ತು. ಅದೃಷ್ಟವಶಾತ್ ಯಾವುದೇ ಅನಾಹುತ ಸಂಭವಿಸಿಲ್ಲ.

ನಾಲ್ಕು ಮಹಡಿಯ ಒಂದು ಕಟ್ಟಡ ಹಾಗೂ ಅದಕ್ಕೆ ಹೊಂದಿಕೊಂಡ ಇನ್ನೊಂದು ಚಿಕ್ಕ ಕಟ್ಟಡ ಕುಸಿದಿದೆ. ಈ ಕಟ್ಟಡಗಳು ಕುಸಿಯುತ್ತಿರುವ ದೃಶ್ಯ ಮೊಬೈಲ್ ಕೆಮರಾದಲ್ಲಿ ಸೆರೆಯಾಗಿದ್ದು ಇದೀಗ ಎಲ್ಲೆಡೆ ವೈರಲ್ ಆಗುತ್ತಿದೆ.

ಒಂದು ಕಾಲದಲ್ಲಿ ನಗರದ ಪ್ರತಿಷ್ಠಿತ ಹಾಗೂ ಅತೀ ದೊಡ್ಡ ಚಿತ್ರ ಮಂದಿರಗಳಲ್ಲಿ ಒಂದಾಗಿದ್ದ ಕಪಾಲಿ ಥಿಯೇಟರ್ ಬಹಳ ಸಮಯಗಳಿಂದ ಮುಚ್ಚಲ್ಪಟ್ಟಿತ್ತು. ಈ ಥಿಯೇಟರ್ ಒಡೆದು ಅಲ್ಲಿ ಮಲ್ಟಿಪ್ಲೆಕ್ಸ್ ಕಾಂಪ್ಲೆಕ್ಸ್ ನಿರ್ಮಿಸಲು ನಿರ್ಧರಿಸಲಾಗಿತ್ತು. ಅದಕ್ಕಾಗಿ 80 ಅಡಿ ಆಳದಲ್ಲಿ ಹೊಂಡ ತೆಗೆಯಲಾಗಿದ್ದು, ಈ ಕಾರಣದಿಂದ ಸಮೀಪದ ಕಟ್ಟಡಗಳು ಅಪಾಯದಲ್ಲಿದ್ದವು.

ಇಲ್ಲಿ ಹೊಸ ಕಟ್ಟಡವನ್ನು ನಿರ್ಮಿಸುವ ಕೆಲಸ ಹಗಲಿರುಳು ನಡೆಯುತ್ತಿತ್ತು ಎನ್ನಲಾಗಿದ್ದು ಸಮೀಪದ ಬಹುಮಹಡಿ ಕಟ್ಟಡಗಳು ಉರುಳುವ ಸಂದರ್ಭದಲ್ಲಿ ನಿರ್ಮಾಣ ಸ್ಥಳದಲ್ಲಿ ಕಾರ್ಮಿಕರು ಇದ್ದರೋ ಇಲ್ಲವೋ ಎಂಬ ಕುರಿತಾದ ಮಾಹಿತಿ ಸದ್ಯಕ್ಕೆ ಲಭ್ಯವಾಗಿಲ್ಲ.ಹಾಗೊಂದು ವೇಳೆ ಆಳದ ಹೊಂಡದಲ್ಲಿ ಕಾರ್ಮಿಕರು ಕೆಲಸ ಮಾಡುತ್ತಿದ್ದಲ್ಲಿ ಬಹುದೊಡ್ಡ ಅನಾಹುತ ಸಂಭವಿಸಿರಬಹುದಾದ ಭಯ ಇದೀಗ ವ್ಯಕ್ತವಾಗಿದೆ.

ಕಪಾಲಿ ಥಿಯೇಟರ್ ಬಹುಮಹಡಿ ವಾಹನ ನಿಲುಡೆ ಕಡ್ಟಡ ನಿರ್ಮಿಸುವ ಕಾಮಗಾರಿ ಕೈಗೆತ್ತಿಕೊಂಡಿತ್ತು. ಈ ಸಂಬಂಧ ಸುಮಾರು ೪೦ ಅಡಿ ಆಳ ಭೂಮಿಯನ್ನು ಅಗೆಯಲಾಗಿತ್ತು. ಕಟ್ಟಡ ಬಿರುಕು ಬಿಟ್ಟ ಹಿನ್ನೆಲೆಯಲ್ಲಿ ಮೂರು ದಿನ ಮುಂಚಿತವಾಗಿಯೇ ಕಟ್ಟಡದಲ್ಲಿದ್ದವರನ್ನು ತೆರವುಗೊಳಿಸಲಾಗಿತ್ತು. ಉದ್ದೇಶಿತ ಕಟ್ಟಡವು ಹೋಟೆಲ್ ಮತ್ತು ಪಿಜಿಗೆ ಬಳಕೆ ಆಗುತ್ತಿತ್ತು.

ಟಾಪ್ ನ್ಯೂಸ್

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು

18-uv-fusion

Clay Pot: ಬಡವರ ಫ್ರಿಡ್ಜ್ ಮಣ್ಣಿನ ಮಡಕೆ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

17-uv-fusion

UV Fusion: ನಿನ್ನೊಳಗೆ ನೀ ಇರುವಾಗ…

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.