ಸೋಂಕು ತಡೆಗೆ ಹೊಸ ಮಾರ್ಗಸೂಚಿ


Team Udayavani, May 26, 2020, 6:15 AM IST

bbpm palike

ಬೆಂಗಳೂರು: ನಗರದಲ್ಲಿ ಲಾಕ್‌ಡೌನ್‌ ಸಡಿಲಿಕೆ ಬೆನ್ನಲ್ಲೇ ಕೆಲವು ಮಾರ್ಗಸೂಚಿಗಳಲ್ಲೂ ಪಾಲಿಕೆ ಬದಲಾವಣೆ ಮಾಡಿಕೊಂಡಿದೆ. ಕಂಟೈನ್ಮೆಂಟ್‌ ಝೋನ್‌ ಪ್ರದೇಶದ ಕಾರ್ಯಾಚರಣೆ, ಬಫ‌ರ್‌ ಝೋನ್‌ ವ್ಯಾಪ್ತಿ ಮಿತಿ ಸೇರಿದಂತೆ  ಹಲವು ಬದಲಾವಣೆಗಳನ್ನು ಮಾಡಿಕೊಳ್ಳಲಾಗಿದೆ. ರಾಜ್ಯ ಸರ್ಕಾರದ ಆದೇಶದ ಅನುಸಾರ ಬಫ‌ರ್‌ಝೋನ್‌ ವ್ಯಾಪ್ತಿ, ಆರೋಗ್ಯ ತಪಾಸಣೆ ಕಾರ್ಯಾಚರಣೆ ಹಾಗೂ ಕಂಟೈನ್ಮೆಂಟ್‌ ಝೋನ್‌ಗಳಲ್ಲಿ ಮತ್ತಷ್ಟು ಮುಂಜಾಗ್ರತಾ ಕ್ರಮ  ತೆಗೆದುಕೊಳ್ಳಲಾಗಿದೆ ಎಂದು ಬಿಬಿಎಂಪಿ ಆಯುಕ್ತ ಬಿ.ಎಚ್‌. ಅನಿಲ್‌ಕುಮಾರ್‌ ತಿಳಿಸಿದ್ದಾರೆ.

ನಿಯಂತ್ರಿತ ವಲಯ: ಸೋಂಕು ದೃಢಪಟ್ಟ ಪ್ರದೇಶ (ಕಂಟೈನ್ಮೆಂಟ್‌ ಝೋನ್‌)ಗಳಲ್ಲಿ ಕಟ್ಟುನಿಟ್ಟಿನ ಕ್ರಮಕ್ಕೆ ಸೂಚನೆ ನೀಡಲಾಗಿದೆ. ಅಲ್ಲದೆ, ನಿಯಂತ್ರಿತ ವಲಯದಲ್ಲಿ ಯಾವುದೇ ಹೊಸ ಪ್ರಕರಣ ದೃಢಪಟ್ಟರೂ, ಆ ಪ್ರಕರಣ  ದೃಢಪಟ್ಟ ದಿನದಿಂದ 28 ದಿನಗಳ ಕಾಲ ಸೋಂಕು ದೃಢಪಟ್ಟ ನಿರ್ದಿಷ್ಟ ವಾರ್ಡ್‌ ಕಂಟೈನ್ಮೆಂಟ್‌ ಆಗಿರಲಿದೆ. ಹತ್ತು ಜನ ಅಥವಾ ಅದಕ್ಕಿಂತ ಕಡಿಮೆ ಪ್ರಾಥಮಿಕ ಹಾಗೂ ದ್ವಿತೀಯ ಸಂಪರ್ಕಿತರು ಕ್ವಾರಂಟೈನ್‌ ನಲ್ಲಿದ್ದರೆ, ಆ ವಾರ್ಡ್‌  ಕಂಟೈನ್ಮೆಂಟ್‌ ಆಗಲಿದೆ. ಹೊಸ ಮಾರ್ಗಸೂಚಿಯ ಅನುಸಾರ ಬಫ‌ರ್‌ಝೋನ್‌ ವ್ಯಾಪ್ತಿಯನ್ನು 1 ಕಿ.ಮೀ ನಿಂದ 200 ಮೀ.ಗೆ ಸೀಮಿತ ಮಾಡಲಾಗಿದೆ.

ವಸತಿ ಸಮುತ್ಛಯ: ಈ ಹಿಂದೆಯ ಮಾರ್ಗಸೂಚಿಯ ಅನುಸಾರ ಇಡೀ ಅರ್ಪಾಟ್‌ಮೆಂಟ್‌ ಅನ್ನು ಸೀಲ್‌ಡೌನ್‌ ಮಾಡಲಾಗುತ್ತಿತ್ತು. ಸದ್ಯ ಇದರಲ್ಲಿ ಸಡಿಲಿಕೆ ತರಲಾಗಿದ್ದು, ಸೋಂಕು ದೃಢಪಟ್ಟ ವ್ಯಕ್ತಿಯ ವಸತಿ ಸಮುತ್ಛಯದ ಅಂತಸ್ತಿನ  ಮೇಲ್ಭಾಗದಲ್ಲಿರುವವರು ಹಾಗೂ ಕೆಳಭಾಗದಲ್ಲಿ (ಮನೆಗಳಲ್ಲಿ) ಇರುವವರನ್ನು ಮಾತ್ರ ಕ್ವಾರಂಟೈನ್‌ ಮಾಡಲಾಗುತ್ತದೆ.

ಪ್ರತ್ಯೇಕ ಮನೆ ಅಥವಾ ವಿಲ್ಲಾ: ಸೋಂಕು ದೃಢಪಟ್ಟ ವ್ಯಕ್ತಿಯ ಮನೆ ಇರುವ ಬೀದಿ ನಿಯಂತ್ರಿತ ಪ್ರದೇಶವಾಗಿರಲಿದೆ. ವಾಣಿಜ್ಯ ಪ್ರದೇಶದಲ್ಲಿ ಇದ್ದಲ್ಲಿ ನಿರ್ದಿಷ್ಟ ಭಾಗ ಮಾತ್ರ ನಿಯಂತ್ರಿತ ವಲಯವಾಗಲಿದೆ. ಈ ಬಗ್ಗೆ ಮತ್ತಷ್ಟು ಸ್ಪಷ್ಟ ನಿರ್ದೇಶನ ನೀಡುವ ನಿಟ್ಟಿನಲ್ಲಿ ಚರ್ಚೆ ನಡೆದಿದೆ ಎಂದು  ಬಿಬಿಎಂಪಿಯ ಅಧಿಕಾರಿಗಳು ತಿಳಿಸಿದ್ದಾರೆ. ಕೊಳೆಗೇರಿ ಪ್ರದೇಶಗಳಲ್ಲಿ ಸೋಂಕು ದೃಢಪಟ್ಟ ವ್ಯಕ್ತಿ ವಾಸವಿರುವ ಮನೆಯ ಮುಂಭಾಗದ ರಸ್ತೆ ಹಾಗೂ ಹಿಂಭಾಗದ ರಸ್ತೆಗಳು  ಸಂಪೂರ್ಣ ನಿಯಂತ್ರಿತ ವಲಯ ವ್ಯಾಪ್ತಿಗೆ ಸೇರಲಿದ್ದು, ಈ ಪ್ರದೇಶಕ್ಕೆ ಯಾರು ಪ್ರವೇಶಿಸಲು ಅವಕಾಶ ಇರುವುದಿಲ್ಲ.

ಮ್ಯಾಜಿಸ್ಟ್ರೇಟ್‌ ನೇಮಕ: ಸೋಂಕು ದೃಢಪಟ್ಟ ಪ್ರದೇಶ ಕಂಟೈನ್ಮೆಂಟ್‌ ಆದ ಮೇಲೆ ಅದಕ್ಕೆ ಒಬ್ಬರು ಎಕ್ಸಿಕ್ಯೂಟಿವ್‌ ಮ್ಯಾಜಿಸ್ಟ್ರೇಟ್‌ ನೇಮಕವಾಗಲಿದ್ದಾರೆ. ಇವರು ಈ ಭಾಗದಲ್ಲಿ ನಿಯಂತ್ರಕ ಅಧಿಕಾರಿಯಾಗಿ ಕಾರ್ಯನಿರ್ವಹಿಸಲಿದ್ದಾರೆ.  ಸೋಂಕು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸರ್ಕಾರ ಹಾಗೂ ಪಾಲಿಕೆ ತೆಗೆದುಕೊಳ್ಳುವ ನಿರ್ಧಾರಗಳನ್ನು ಈ ಕಮಾಂಡರ್‌ ಕಾರ್ಯರೂಪಕ್ಕೆ ತರಲಿದ್ದಾರೆ. ಅಲ್ಲದೆ, ಕಂಟೈನ್ಮೆಂಟ್‌ ಝೋನ್‌ನ ಕೂಗಳತೆಯ ದೂರಲ್ಲಿ ಕೇಂದ್ರ ಸ್ಥಾಪಿಸಿ  ಇಲ್ಲಿನ ಚಟುವಟಿಕೆಗಳ ಮೇಲೆ ಕಣ್ಣಿಡಬೇಕು ಎಂದು ನಿರ್ದೇಶನಗಳನ್ನು ನೀಡಲಾಗಿದೆ.

ಟಾಪ್ ನ್ಯೂಸ್

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

10-ramanagara

Ramanagara ಅಪಘಾತ; ವಿದ್ಯಾರ್ಥಿಗಳ ಪ್ರತಿಭಟನೆ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Patanjali Ads case:‌ಖುದ್ದು ಹಾಜರಾಗಿ- ಬಾಬಾ ರಾಮ್‌ ದೇವ್‌, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್

Patanjali Ads case:‌ಖುದ್ದು ಹಾಜರಾಗಿ- ಬಾಬಾ ರಾಮ್‌ ದೇವ್‌, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vande Bharat: 1.5 ವರ್ಷದಲ್ಲಿ ವಂದೇ ಭಾರತ್‌ಗೆ 50 ಬಾರಿ ಕಲ್ಲೆಸೆತ

Vande Bharat: 1.5 ವರ್ಷದಲ್ಲಿ ವಂದೇ ಭಾರತ್‌ಗೆ 50 ಬಾರಿ ಕಲ್ಲೆಸೆತ

Lok Sabha Elections: 10 ಲಕ್ಷ ಮೀರಿ ವಹಿವಾಟು ಮೇಲೆ ಐಟಿ ಕಣ್ಣು

Lok Sabha Elections: 10 ಲಕ್ಷ ಮೀರಿ ವಹಿವಾಟು ಮೇಲೆ ಐಟಿ ಕಣ್ಣು

Arrested: 3 ಕೋಟಿ ರೂ. ನಕಲಿ ಡೈಮಂಡ್‌ ತೋರಿಸಿ ವಂಚನೆಗೆ ಯತ್ನ; 4 ಸೆರೆ

Arrested: 3 ಕೋಟಿ ರೂ. ನಕಲಿ ಡೈಮಂಡ್‌ ತೋರಿಸಿ ವಂಚನೆಗೆ ಯತ್ನ; 4 ಸೆರೆ

Bangalore: ರಾಜಧಾನಿ 14 ಕೆರೆಗಳಿಗೆ ಕೆ.ಸಿ.ವ್ಯಾಲಿ ನೀರು

Bangalore: ರಾಜಧಾನಿ 14 ಕೆರೆಗಳಿಗೆ ಕೆ.ಸಿ.ವ್ಯಾಲಿ ನೀರು

2-bng-crime

Bengaluru: ಭಜನೆ ಹಾಕಿದಕ್ಕೆ ದಾಂಧಲೆ: ಮೂವರ ಬಂಧನ

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

10-ramanagara

Ramanagara ಅಪಘಾತ; ವಿದ್ಯಾರ್ಥಿಗಳ ಪ್ರತಿಭಟನೆ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

9-udupi

ಶ್ರೀ ನಿತ್ಯಾನಂದ ಸ್ವಾಮಿ ಮಂದಿರ ಮಠ; ಧ್ಯಾನ ಮಂದಿರ, ಭೋಜನ ಶಾಲೆ ನಿರ್ಮಾಣ ಕಾಮಗಾರಿಗೆ ಚಾಲನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.