ಸಮೂಹ ಸಾರಿಗೆ ಸಹವಾಸವೇ ಬೇಡ


Team Udayavani, May 21, 2020, 5:46 AM IST

samooha-saarige

ಬೆಂಗಳೂರು: ಲಾಕ್‌ಡೌನ್‌ ಬಹುತೇಕ ತೆರವಾಗಿ ಎರಡು ದಿನಗಳಾಗಿವೆ. ಬಸ್‌ ಸಂಚಾರ ಕೂಡ ಆರಂಭವಾಗಿದೆ. ಆದರೆ, ಪ್ರಯಾಣಿಕರು ಈ ಬಸ್‌ಗಳತ್ತ ಮುಖಮಾಡಲು ತಿಂಗಳುಗಟ್ಟಲೆ ಕಾಯಬೇಕಾಗುತ್ತದೆ. ಯಾಕೆಂದರೆ, ನಗರದ  ಅರ್ಧಕ್ಕರ್ಧ ಜನ ಮುಂದಿನ ಇನ್ನೂ ಮೂರು ತಿಂಗಳು ಈ ಬಸ್‌, ಮೆಟ್ರೋ ರೈಲು ಸಹವಾಸವೇ ಬೇಡ ಎಂಬ ಮನಃಸ್ಥಿತಿಯಲ್ಲಿದ್ದಾರೆ!

ಹೌದು, ಸ್ವತಃ ಜನರೇ ಈ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.  ಬಿ.ಪ್ಯಾಕ್‌ (ಬೆಂಗಳೂರು ರಾಜಕೀಯ  ಕ್ರಿಯಾ ಸಮಿತಿ) ನಡೆಸಿದ ಆನ್‌ಲೈನ್‌ ಸಮೀಕ್ಷೆಯ ವರದಿಯಿಂದ ತಿಳಿದುಬಂದಿದೆ. ಹಾಗಾಗಿ, ಬಸ್‌ಗಳು ರಸ್ತೆಗಿಳಿದರೂ ಅವುಗಳಲ್ಲಿ ಪ್ರಯಾಣಿಸಲು ಜನ ಹಿಂದೇಟು ಹಾಕುತ್ತಿದ್ದಾರೆ. ಇನ್ನೂ ಒಂದರಿಂದ ಮೂರು ತಿಂಗಳು ಇದೇ ಅಂತರ ಕಾಯ್ದುಕೊಳ್ಳುವ ಸಾಧ್ಯತೆ ಇದೆ.

ಸಮೀಕ್ಷೆಯಲ್ಲಿ ಭಾಗವಹಿಸಿದವರಲ್ಲಿ ಶೇ. 50ರಷ್ಟು ಜನ ಮುಂದಿನ ಕನಿಷ್ಠ ಮೂರು ತಿಂಗಳು ಬಸ್‌, ನಮ್ಮ ಮೆಟ್ರೋ, ರೈಲು ಸೇರಿದಂತೆ ಸಮೂಹ ಸಾರಿಗೆ ಬಳಸದಿರಲು ನಿರ್ಧರಿಸಿದ್ದಾರೆ. ಈ ಪೈಕಿ ಶೇ.  36ರಷ್ಟು ಜನ ಸದ್ಯಕ್ಕಂತು ವೈಯಕ್ತಿಕ ಅಥವಾ ಖಾಸಗಿ ವಾಹನದಿಂದ ಸಮೂಹ ಸಾರಿಗೆಗೆ “ಶಿಫ್ಟ್’ ಆಗುವ ಯಾವುದೇ ಚಿಂತನೆ ಇಲ್ಲ ಎಂದು ತಿಳಿಸಿದ್ದು, ಕೆಲಸದ ಉದ್ದೇಶಕ್ಕಾಗಿ ರಸ್ತೆಗಿಳಿಯುವವರಲ್ಲಿ ಶೇ. 50ರಷ್ಟು ಜನ ಕನಿಷ್ಠ ಒಂದು  ತಿಂಗಳು ಸಮೂಹ ಸಾರಿಗೆ ಕಡೆಗೆ ಹೋಗುವುದಿಲ್ಲ ಎಂದು ಹೇಳಿದ್ದಾರೆ.

1,072 ಜನ ಸಮೀಕ್ಷೆಯಲ್ಲಿ ಭಾಗಿ: “ಕೋವಿಡ್‌-19 ಲಾಕ್‌ಡೌನ್‌ ನಂತರ ಸುರಕ್ಷಿತ ಸಮೂಹ ಸಾರಿಗೆ ವ್ಯವಸ್ಥೆಗಳು’ ಶೀರ್ಷಿಕೆ ಅಡಿ ಬಿ.ಪ್ಯಾಕ್‌ ಈಚೆಗೆ ಆನ್‌ಲೈನ್‌ ಸಮೀಕ್ಷೆ ನಡೆಸಿತ್ತು. ಅದರಲ್ಲಿ 1,072 ಜನ ಭಾಗವಹಿಸಿದ್ದರು. ಶೇ. 58ರಷ್ಟು  ಜನ 5 ಕಿ.ಮೀ.ಗೂ ಕಡಿಮೆ ಪ್ರಯಾಣ ಮಾಡಿದರೆ. ಶೇ. 49ರಷ್ಟು ಜನ 5 ಕಿ. ಮೀ.ಗಿಂತ ಹೆಚ್ಚು ಪ್ರಯಾಣ ಮಾಡುವವರಾಗಿದ್ದಾರೆ.

ಇದರಲ್ಲಿ ಶೇ. 65ರಷ್ಟು ಜನ ಸಾರ್ವಜನಿಕ ಸಾರಿಗೆಯನ್ನು ತಿಂಗಳ ನಂತರ ಅಥವಾ ತಿಂಗಳ ಕೊನೆಯಲ್ಲಿ ಬಳಸಲು ನಿರ್ಧರಿಸಿದ್ದಾರೆ. ಇನ್ನು ಭಾಗವಹಿಸಿದವರಲ್ಲಿ ಶೇ. 41 ಜನ ನಿತ್ಯ ಸಾರ್ವಜನಿಕ ಸಾರಿಗೆ ಬಳಕೆ ಮಾಡುವವರಾಗಿದ್ದಾರೆ. ಮೂರು ತಿಂಗಳ ನಂತರ ಸಮೂಹ ಸಾರಿಗೆಗೆ ಮುಖಮಾಡುವವರಲ್ಲಿ ಶೇ. 55 ಜನ 30 ವರ್ಷ ಮೇಲ್ಪಟ್ಟವರಾಗಿದ್ದಾರೆ. ಅದೇ ರೀತಿ, ತಿಂಗಳ ನಂತರ  ಬಸ್‌ ಕಡೆಗೆ ಮುಖಮಾಡುವವರು 18-30 ವರ್ಷದ ಒಳಗಿನವರಾಗಿದ್ದಾರೆ.

ನಗರ ಸಾರಿಗೆ ಸಂಸ್ಥೆಗಳಾದ ಬಿಎಂಟಿಸಿ, ಬೆಂಗಳೂರು ಮೆಟ್ರೋ ರೈಲು ನಿಗಮ (ಬಿಎಂಆರ್‌ಸಿಎಲ್‌) ಹಾಗೂ  ನೈರುತ್ಯ ರೈಲ್ವೆಯು ಸಾರಿಗೆ ಸೇವೆ ಪ್ರಾರಂಭಿಸುವ ಮುನ್ನ ಸುರಕ್ಷತೆ ಸೇರಿದಂತೆ ಎಲ್ಲ ಅಗತ್ಯ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಬೇಕು. ಜನರನ್ನು ವಿಶ್ವಾಸಕ್ಕೆ ತೆಗೆದು ಕೊಳ್ಳಲು ಕಾರ್ಯತಂತ್ರಗಳನ್ನು ರೂಪಿಸುವ ಅವಶ್ಯಕತೆ ಇದೆ ಎಂದು  ಬಿ.ಪ್ಯಾಕ್‌ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರೇವತಿ ಅಶೋಕ್‌ ತಿಳಿಸುತ್ತಾರೆ.

ಕಾರ್ಯತಂತ್ರ ಅಗತ್ಯ: ಬೆಂಗಳೂರು ನಗರದಲ್ಲಿ ಸಾರ್ವಜನಿಕ ಸಾರಿಗೆ ಬಳಕೆದಾರರಿಗಿಂತ ಖಾಸಗಿ ವಾಹನ ಬಳಕೆದಾರರ ಪ್ರಮಾಣ ಶೇ.3ರಷ್ಟು ಹೆಚ್ಚಿದೆ (ಖಾಸಗಿ ವಾಹನ ಬಳಕೆದಾರರು ಶೇ. 51ಮತ್ತು ಸಮೂಹ ಸಾರಿಗೆ ಬಳಕೆದಾರರ  ಪ್ರಮಾಣ ಶೇ. 48). ಇದರ ನಿರ್ವಹಣೆ ಮೊದಲಿನಿಂದಲೂ ಸವಾಲಾಗಿದೆ. ಕೊರೊನಾ ತಡೆಗೆ ಸಾಮಾಜಿಕ ಅಂತರ ಅಗತ್ಯವಾಗಿದ್ದು, ಈಗ ಈ ಅಂತರ ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇದೆ. ಮುಂದೆ ನಿರ್ವಹಣೆ ಕಷ್ಟವಾಗಲಿದೆ. ಈ ಬಿಕ್ಕಟ್ಟಿನ  ಸಮಯದಲ್ಲಿ ಕಾರ್ಯತಂತ್ರ ರೂಪಿಸಿವುದು ಅಗತ್ಯ ಎನ್ನುತ್ತದೆ ಬಿ-ಪ್ಯಾಕ್‌.

ಟಾಪ್ ನ್ಯೂಸ್

1—ewqewqe

IPL; ಅಗ್ರಸ್ಥಾನಿ ರಾಜಸ್ಥಾನ್‌-ಲಕ್ನೋ: ಬಲಿಷ್ಠರ ಸೆಣಸಾಟ

congress

BJP ಅಭ್ಯರ್ಥಿ ಅವಿರೋಧ ಆಯ್ಕೆ: ಸೂರತ್‌ನ ಕಾಂಗ್ರೆಸ್‌ ಅಭ್ಯರ್ಥಿ ಉಚ್ಚಾಟನೆ

1-visa

India VISA ನೀತಿ ಬಗ್ಗೆ ಅಲ್ಲಿನ ಸರಕಾರ ಮಾತನಾಡಲಿ: ಅಮೆರಿಕ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1—ewqewqe

IPL; ಅಗ್ರಸ್ಥಾನಿ ರಾಜಸ್ಥಾನ್‌-ಲಕ್ನೋ: ಬಲಿಷ್ಠರ ಸೆಣಸಾಟ

congress

BJP ಅಭ್ಯರ್ಥಿ ಅವಿರೋಧ ಆಯ್ಕೆ: ಸೂರತ್‌ನ ಕಾಂಗ್ರೆಸ್‌ ಅಭ್ಯರ್ಥಿ ಉಚ್ಚಾಟನೆ

1-visa

India VISA ನೀತಿ ಬಗ್ಗೆ ಅಲ್ಲಿನ ಸರಕಾರ ಮಾತನಾಡಲಿ: ಅಮೆರಿಕ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.