ಕಂಟೈನ್ಮೆಂಟ್‌ ಕಸ; ಎಡವುತ್ತಿರುವ ಪಾಲಿಕೆ

ವೈದ್ಯಕೀಯ ತ್ಯಾಜ್ಯ, ಮಾಸ್ಕ್ ಪ್ರತ್ಯೇಕ ಸಂಗ್ರಹವಿಲ್ಲ; ಪೌರಕಾರ್ಮಿಕರಲ್ಲೂ ಕೋವಿಡ್ ಭೀತಿ

Team Udayavani, Apr 28, 2020, 3:42 PM IST

ಕಂಟೈನ್ಮೆಂಟ್‌ ಕಸ; ಎಡವುತ್ತಿರುವ ಪಾಲಿಕೆ

ಬೆಂಗಳೂರು: ನಗರದ ಕಂಟೈನ್ಮೆಂಟ್‌ ಝೋನ್‌ಗಳಲ್ಲಿನ ಮನೆಗಳಿಂದ ಉತ್ಪತ್ತಿಯಾಗುತ್ತಿರುವ ವೈದ್ಯಕೀಯ ತ್ಯಾಜ್ಯ, ಮಾಸ್ಕ್ಗಳನ್ನು ಬಿಬಿಎಂಪಿ ಪ್ರತ್ಯೇಕವಾಗಿ ಸಂಗ್ರಹಿಸದೆ ಇರುವುದು ಹಾಗೂ ವಿಲೇವಾರಿ ಲೋಪದಿಂದ ಪೌರಕಾರ್ಮಿಕರಲ್ಲೂ ಕೋವಿಡ್ ಭೀತಿ ಎದುರಾಗಿದೆ. ಕಂಟೈನ್‌ಮೆಂಟ್‌ ಝೋನ್‌ ವ್ಯಾಪ್ತಿಯಲ್ಲಿ ವರದಿ ಮಾಡಿದ್ದ ಖಾಸಗಿ ಸುದ್ದಿವಾಹಿನಿ ಪತ್ರಕರ್ತರೊಬ್ಬರಿಗೆ ಹಾಗೂ ಈ ಭಾಗದಲ್ಲಿ ಸಂಚರಿಸಿದ್ದರು ಎನ್ನಲಾದ ಬಿಹಾರಿ ಮೂಲದ ಕಟ್ಟಡ ಕಾರ್ಮಿಕರೊಬ್ಬರಲ್ಲಿ ಕೋವಿಡ್ ದೃಢಪಟ್ಟಿರುವುದು ಈಗ ಪೌರಕಾರ್ಮಿಕರಲ್ಲಿ ಆತಂಕಕ್ಕೆ ಕಾರಣವಾಗಿದೆ. ಈಗಾ
ಗಲೇ ಪಾದರಾಯನಪುರ, ಹೊಂಗಸಂದ್ರದಲ್ಲಿ ಕೋವಿಡ್  ಸೋಂಕು ಸಮುದಾಯಕ್ಕೆ ಹಬ್ಬಿರುವ ಸಾಧ್ಯತೆಗಳ ಬಗ್ಗೆ ಅಧಿಕಾರಿಗಳೇ ಆತಂಕ ವ್ಯಕ್ತಪಡಿಸಿದ್ದಾರೆ. ಇಷ್ಟಾದರೂ ಕಂಟೈನ್ಮೆಂಟ್‌ ವಲಯಗಳಲ್ಲಿ ಜನ ಬಳಸುವ ಮಾಸ್ಕ್, ವೈದ್ಯಕೀಯ ತ್ಯಾಜ್ಯವನ್ನು ಈ ಹಿಂದಿನಂತೆಯೇ ಸಂಗ್ರಹಿಸುತ್ತಿದೆ.

ಟ್ವಿಟರ್‌ನಲ್ಲಿ ಈ ಸಂಬಂಧ ಬಿಬಿಎಂಪಿ ಒಂದೆರಡು ಪೋಸ್ಟ್‌ ಮಾಡಿರುವುದು ಬಿಟ್ಟರೆ, ಯಾವುದೇ ಜಾಗೃತಿ ಮೂಡಿಸಿಲ್ಲ. ಸರ್ಕಾರವೇ ಈಗ ಅಧಿಕೃತವಾಗಿ ಎಲ್ಲರೂ ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು ಎಂದು ನಿರ್ದೇಶನ ನೀಡಿದೆ. ಆದರೆ, ಇದರ ಸಂಗ್ರಹ ಮತ್ತು ವಿಲೇವಾರಿಯಲ್ಲಿ ವ್ಯಾಪಕ ಲೋಪ ಕಂಡುಬರುತ್ತಿದೆ. ನಗರದಲ್ಲಿ ನಿತ್ಯ ಲಕ್ಷಾಂತರ ಜನ ಮಾಸ್ಕ್ ಬಳಸುತ್ತಿದ್ದು, ಇದನ್ನು ಕನಿಷ್ಠ ಪೇಪರ್‌ನಲ್ಲಿ ಸುತ್ತಿಕೊಡುವ ಕೆಲಸವೂ ಆಗುತ್ತಿಲ್ಲ. ಇದನ್ನು ಹಸಿ ಕಸದೊಂದಿಗೇ ನೀಡುತ್ತಿರುವುದೂ ಕಾಣಸಿಗುತ್ತಿದೆ. ಕೆಲವರು ಮಿಶ್ರ ತ್ಯಾಜ್ಯದೊಂದಿಗೂ ನೀಡುತ್ತಿದ್ದು, ಇದನ್ನು
ಪೌರಕಾರ್ಮಿರು ಪ್ರತ್ಯೇಕಿಸಬೇಕಾಗಿದೆ. ಕೆಲವಡೆ ಇದನ್ನು ಪ್ರತ್ಯೇಕಿಸುವ ಕೆಲಸವೂ ಆಗುತ್ತಿಲ್ಲ. ಹೀಗಾಗಿ, ನೇರವಾಗಿ ಭೂಭರ್ತಿ ಸೇರುತ್ತಿದೆ.

ಬಿಬಿಎಂಪಿ ವಿಶೇಷ ಆಯುಕ್ತ ರಂದೀಪ್‌ (ಘನತ್ಯಾಜ್ಯ ನಿರ್ವಹಣೆ) ಪ್ರತಿಕ್ರಿಯಿಸಿ, ಸಾರ್ವಜನಿಕರು ಜವಾಬ್ದಾರಿ ಅರಿತು ವ್ಯವಸ್ಥಿತ ಮತ್ತು ಮುಂಜಾಗ್ರತೆ ಕ್ರಮಗಳೊಂದಿಗೆ ಕಸ ವಿಲೇವಾರಿ ಮಾಡಬೇಕು. ಕಠಿಣ ಸಂದರ್ಭದಲ್ಲೂ ಪೌರಕಾರ್ಮಿಕರು ಕೆಲಸ ಮಾಡುತ್ತಿದ್ದಾರೆ. ಇವರ ಆರೋಗ್ಯ ಕಾಳಜಿ ಬಗ್ಗೆ ಬಿಬಿಎಂಪಿಯೊಂದಿಗೆ ಸಾರ್ವಜನಿಕರು ಯೋಚಿಸಬೇಕು. ಇನ್ನು ಕಂಟೈನ್ಮೆಂಟ್‌ ಝೊàನ್‌ಗಳಿಂದ ಕಸ ಸಂಗ್ರಹಿಸುವ ಪೌರಕಾರ್ಮಿಕರಿಗೆ ಸಂಪೂರ್ಣ ರಕ್ಷಣಾ ಕವಚ ನೀಡುವ ಕೆಲಸ ಪ್ರಾರಂಭಿಸಿದ್ದೇವೆ. ಪ್ರತ್ಯೇಕವಾಗಿ ವೈದ್ಯಕೀಯ ತ್ಯಾಜ್ಯ ಸಂಗ್ರಹವಾಗದೆ ಇರುವ ಬಗ್ಗೆ ಪರಿಶೀಲನೆ ಮಾಡಲಾಗುವುದು ಎಂದರು.

ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿ ನಿರ್ದೇಶನಗಳು
– ಮಾಸ್ಕ್ ಬಳಕೆ ನಂತರ 72 ಗಂಟೆ ಮಾಸ್ಕ್ ಅನ್ನು ಪೇಪರ್‌ನಲ್ಲಿ ಸುತ್ತಿಡಬೇಕು.
– ಸಾಮಾನ್ಯ ಕಸದೊಂದಿಗೆ ವಿಲೇವಾರಿ ಮಾಡಬಾರದು.
– ಮಾಸ್ಕ್ ಅನ್ನು 2ಭಾಗವಾಗಿ ತುಂಡು ಮಾಡಬೇಕು.
– 74 ಗಂಟೆ ನಂತರ 2-3 ಭಾಗಮಾಡಿ ವಿಲೇವಾರಿ ಮಾಡಬೇಕು.
– ಹೋಮ್‌ಕ್ವಾರಂಟೈನ್‌, ಕಂಟೈನ್ಮೆಂಟ್‌ ಝೋನ್‌ಗಳಿಂದ ಸಂಗ್ರಹ ಮಾಡುವ ತ್ಯಾಜ್ಯವನ್ನು ಪ್ರತ್ಯೇಕವಾಗಿ ಹಳದಿ ಬ್ಯಾಗ್‌ನಲ್ಲೇ ಸಂಗ್ರಹಿಸಿಡಬೇಕು.

– ಹಿತೇಶ್‌ ವೈ

ಟಾಪ್ ನ್ಯೂಸ್

90 ದಿನಗಳಲ್ಲಿ ನೆಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೆವಾಲಾ

90 ದಿನದಲ್ಲಿ ನೆಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೆವಾಲಾ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

20-shirva-1

ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇಗುಲ

90 ದಿನಗಳಲ್ಲಿ ನೆಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೆವಾಲಾ

90 ದಿನದಲ್ಲಿ ನೆಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೆವಾಲಾ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

19-sagara

LS Polls: ರಾಜ್ಯದ ಜನರಿಗೆ ಈಶ್ವರಪ್ಪ ಸ್ಪರ್ಧೆ ವಿಷಯ ಈಗ ಖಚಿತ: ಈಶ್ವರಪ್ಪ

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.