ಹಾಸಿಗೆಗಳಿಗೆ ನಂಬರ್‌, ಸೋಂಕಿತರಿಗೆ ಟ್ಯಾಗ್‌


Team Udayavani, Jun 29, 2020, 6:36 AM IST

tagging

ಬೆಂಗಳೂರು: ನಗರದಲ್ಲಿ ಕೋವಿಡ್‌ ರೋಗಿಗಳ ಚಿಕಿತ್ಸೆಗೆ ಸಂಬಂಧಪಟ್ಟಂತೆ ಹಾಸಿಗೆಗಳಿಗೆ ನಂಬರ್‌ ಅಳವಡಿಕೆ, ರೋಗಿಗಳು ಹಾಗೂ ಕ್ವಾರೆಂಟೈನ್‌ ನಲ್ಲಿರುವವರ ಮೇಲೆ ನಿಗಾ ವಹಿಸಲು ಟ್ಯಾಗ್‌ ಕಟ್ಟುವುದು, ತ್ವರಿತವಾಗಿ ವರದಿ  ಪಡೆಯುವ ಪರೀಕ್ಷಾ ವ್ಯವಸ್ಥೆ ಅಳವಡಿಕೆ ಬಗ್ಗೆಯೂ ಸರ್ಕಾರ ಗಂಭೀರ ಚಿಂತನೆ ನಡೆಸಿದ್ದು, ಹಂತ ಹಂತವಾಗಿ ಜಾರಿಗೊಳಿಸಲು ಸಜ್ಜಾಗಿದೆ.

ಈ ಕುರಿತು ಭಾನುವಾರ ಮಾಹಿತಿ ನೀಡಿದ ಸಚಿವ ಆರ್‌.ಅಶೋಕ್‌, ಬಹಳ ಮಂದಿ ರಾತ್ರಿ  ಔತಣ ಕೂಟ ನಡೆಸುತ್ತಿರುವುದು ಗಮನಕ್ಕೆ ಬಂದಿದ್ದು, ಈ ರೀತಿಯ ಔತಣ ಕೂಟಗಳಿಂದ ಸೋಂಕು ಹರಡುವ ಆತಂಕವಿತ್ತು. ಆ ಹಿನ್ನೆಲೆಯಲ್ಲಿ ರಾತ್ರಿ ಕರ್ಫ್ಯೂ ಅವಧಿಯನ್ನು ರಾತ್ರಿ 8ರಿಂದಲೇ ಜಾರಿಗೊಳಿಸಲಾಗಿದೆ ಎಂದು ಹೇಳಿದರು. ವಿಕ್ಟೋರಿಯಾ ಆಸ್ಪತ್ರೆಯಲ್ಲಿನ ಕೋವಿಡ್‌ ರೋಗಿಗಳಿಗೆ ಮೂರು ಬಗೆಯ ಆರೋಗ್ಯವರ್ಧಕ ಆಹಾರ ಪೂರೈಸಲಾಗುತ್ತಿದೆ. ಚಪಾತಿ ತಯಾರಿಕೆಗಾಗಿ 8 ಲಕ್ಷ ರೂ. ಮೊತ್ತದ ಯಂತ್ರ ಅಳವಡಿಸಲಾಗಿದೆ. ಈ ಯಂತ್ರದಿಂದ ಗಂಟೆಗೆ 1000  ಚಪಾತಿ ಸಿದಪಡಿಸಬಹುದಾಗಿದೆ . ಮಧುಮೇಹಿಗಳಿಗೆ ಪ್ರತ್ಯೇಕ ಆರೋಗ್ಯವರ್ಧಕ ಊಟ ನೀಡಲಾಗುತ್ತಿದೆ ಎಂದು ತಿಳಿಸಿದರು.

ಹಾಸಿಗೆಗಳಿಗೆ ನಂಬರ್‌: ಕೋವಿಡ್‌ ಚಿಕಿತ್ಸಾ ಹಾಸಿಗೆಗಳಿಗೆ ಎರಡು ದಿನದಲ್ಲಿ ನಿರ್ದಿಷ್ಟ ಸಂಖ್ಯೆ  ನೀಡಲಾಗುವುದು. ಇದರಿಂದ ಯಾವ ಆಸ್ಪತ್ರೆಯಲ್ಲಿ ಎಷ್ಟು ಹಾಸಿಗೆಗಳು ಖಾಲಿ ಇವೆ ಎಂಬ ಮಾಹಿತಿ ತಕ್ಷಣ ವಾರ್‌ರೂಮ್‌ಗೆ ಗೊತ್ತಾಗಲಿದೆ ಎಂದರು. ಸುಧಾರಿತ “ಲಂಗ್‌ ಕಂಜೆಷನ್‌’ ಪರೀಕ್ಷೆಯಲ್ಲಿ ಕೇವಲ ಎರಡು ನಿಮಿಷದಲ್ಲಿ ವರದಿ ಸಿಗಲಿದೆ. ಸಂಬಂಧಪಟ್ಟ ಕಂಪನಿಯವರು ಶನಿವಾರ ಸಿಎಂ ಬಿ.ಎಸ್‌.ಯಡಿಯೂರಪ್ಪ ಅವರಿಗೆ ಪ್ರಾತ್ಯಕ್ಷಿಕೆ ನೀಡಿದ್ದಾರೆ. ಈ ಯಂತ್ರದ ಮೂಲಕ ಆಟೋ ಚಾಲಕರು, ಪೊಲೀಸರು, ಆಶಾ ಕಾರ್ಯಕರ್ತೆಯರು, ವೈದ್ಯ ಸಿಬ್ಬಂದಿಗೆ ಪರೀಕ್ಷೆ ನಡೆಸಲಾಗುವುದು ಎಂದು ತಿಳಿಸಿದರು.

ಸಮುದಾಯಕ್ಕೆ ಹರಡಿದೆಯೇ? ತಜ್ಞರ ವರದಿ: ನಗರದಲ್ಲಿ ಶನಿವಾರ ಒಂದೇ ದಿನ 596 ಸೋಂಕು ಪ್ರಕರಣಗಳು ದೃಢಪಟ್ಟಿದ್ದು, ಒಂದೇ ದಿನ ಇಷ್ಟು ಪ್ರಕರಣಗಳು ಹೇಗೆ ದೃಢಪಟ್ಟವು, ಸೋಂಕು ಸಮುದಾಯಕ್ಕೆ ಹಬ್ಬಿತೇ ಎನ್ನುವ ಬಗ್ಗೆ  ಪರಿಶೀಲಿಸಿ ವರದಿ ನೀಡುವಂತೆ ತಜ್ಞರ ಸಮಿತಿಗೆ ಸರ್ಕಾರ ಶನಿವಾರ ಸೂಚನೆ ನೀಡಿದೆ ಎಂದು ¸ ಆರ್‌. ಅಶೋಕ್‌ ಹೇಳಿದ್ದಾರೆ. ಇಂದಿರಾನಗರದ ಸಿ.ವಿ. ರಾಮನ್‌ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ನಂತರ ಮಾತನಾಡಿದರು.

ತಜ್ಞರು  ಸರ್ವೆ ಮಾಡಿ ಮೂರುದಿನಗಳಲ್ಲಿ ವರದಿ ನೀಡಲಿದ್ದಾರೆ ಎಂದರು.ಸೋಂಕಿತರಿಗೆ ಕೇವಲ ಅನ್ನ ಮತ್ತು ಸಾಂಬಾರ್‌ ನೀಡುತ್ತಿರುವುದನ್ನು ಬದಲಾಯಿಸುವಂತೆ ಮತ್ತು ಚಪಾತಿ, ಪಲ್ಯ, ಮೊಸರು, ತುಪ್ಪ ಹಾಗೂ ಹಣ್ಣುಗಳನ್ನೂ ನೀಡಬೇಕು.  ಪ್ರತಿ ಎರಡು ವಾಡ್‌ ìಗಳಿಗೆ ಒಂದೊಂದು ಆಂಬ್ಯುಲೆನ್ಸ್‌ಗಳನ್ನು ಈಗಾಗಲೇ ಮೀಸಲಿಡಲಾಗಿದೆ. ಕೆಲವೇ ದಿನಗಳಲ್ಲಿ ಪ್ರತಿ ವಾರ್ಡ್‌ಗೆ ಒಂದು ಆಂಬ್ಯುಲೆನ್ಸ್‌ ಮೀಸಲಿಡಲಾಗುತ್ತದೆ ಎಂದರು.

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.