ಪಾದಚಾರಿಗಳ ಕಾಡುತ್ತಿವೆ ಒಎಫ್ಸಿ
Team Udayavani, May 10, 2019, 11:43 AM IST
ಬೆಂಗಳೂರು: ಬೇತಾಳನಂತೆ ಮರ, ಕಂಬಗಳು ಎಲ್ಲೆಂದರಲ್ಲಿ ನೇತಾಡುತ್ತಿವೆ, ರಂಗೋಲಿಯಂತೆ ಪಾದಚಾರಿ ಮಾರ್ಗಗಳಲ್ಲಿ ಹರಡಿಕೊಂಡಿವೆ, ಯಾಮಾರಿದರೆ ನಿಮ್ಮನ್ನು ನೆಲಕ್ಕುರುಳಿಸಿ ಪ್ರಾಣಕ್ಕೆ ಸಂಚಕಾರ ತರುವ ಒಎಫ್ಸಿ ವೈರುಗಳಿವು.
ನಗರದ ಪ್ರತಿಷ್ಠಿತ ಮಹಾತ್ಮ ಗಾಂಧಿ (ಎಂ.ಜಿ. ರಸ್ತೆ)ಯ ಸುತ್ತಮುತ್ತಲಿನ ಭಾಗಗಳ ಪಾದಚಾರಿ ಮಾರ್ಗಗಳು, ಮರಗಳು, ಟೆಲಿಕಾಂ, ವಿದ್ಯುತ್ ಕಂಬಗಳಲ್ಲಿ ಆಪ್ಟಿಕಲ್ ಫೈಬರ್ ಕೇಬಲ್ (ಒಎಫ್ಸಿ) ಗಳು ಹರಡಿಕೊಂಡಿರುವ ಪರಿಯಿದು.
ಅನಧಿಕೃತ ಒಎಫ್ಸಿ, ಟಿ.ವಿ.ಕೇಬಲ್ಗಳು ಪಾದಚಾರಿ ಮಾರ್ಗಗಳು, ಮರಗಳು ಸೇರಿದಂತೆ ಸಾರ್ವಜನಿಕ ಸ್ಥಳಗಳನ್ನು ಆವರಿಸಿಕೊಂಡಿದ್ದು, ಪಾದಚಾರಿಗಳು ಹಾಗೂ ವಾಹನ ಸವಾರರಿಗೆ ಕಂಟಕವಾಗಿ ಪರಿಗಣಿಸಿವೆ. ಪಾಲಿಕೆಯಿಂದ ಕೆಲ ಕೇಬಲ್ಗಳಿಗೆ ಮರಗಳ ಮೂಲಕ ತೆಗೆದುಕೊಂಡು ಹೋಗಲು ಅವಕಾಶ ನೀಡುವುದನ್ನೇ ದುರ್ಬಳಕೆ ಮಾಡಿಕೊಂಡಿರುವ ಏಜೆನ್ಸಿಗಳು, ಬೇಕಾಬಿಟ್ಟಿ ಅಳವಡಿಸುತ್ತಿರುವ ಕೇಬಲ್ಗಳು ರಸ್ತೆಯಲ್ಲಿ ಇಳಿಬಿದ್ದು, ಅಪಘಾತಗಳಿಗೂ ಕಾರಣವಾಗುತ್ತಿವೆ.
ಇತ್ತೀಚೆಗೆ ಅನಧಿಕೃತ ನಗರದಲ್ಲಿ ಅಳವಡಿಸಿದ ಅನಧಿಕೃತ ಒಎಫ್ಸಿ ಕೇಬಲ್ಗಳ ವಿರುದ್ಧ ಸಮರ ಸಾರಿದ ಪಾಲಿಕೆಯ ಅಧಿಕಾರಿಗಳು ವಿವಿಧೆಡೆಗಳಲ್ಲಿ ನೂರಾರು ಮೀಟರ್ ಒಎಫ್ಸಿ ಕೇಬಲ್ಗಳನ್ನು ತೆರವುಗೊಳಿಸಿದ್ದಾರೆ. ಆದರೆ, ತುಂಡರಿಸಿರುವ ಕೇಬಲ್ಗಳನ್ನು ವಿಲೇವಾರಿ ಮಾಡದೆ ಪಾದಚಾರಿ ಮಾರ್ಗದಲ್ಲಿ ರಾಶಿ ಹಾಕಿರುವುದರಿಂದ ಜನರು ತೊಂದರೆ ಅನುಭವಿಸುವಂತಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್
Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ
MUST WATCH
ಹೊಸ ಸೇರ್ಪಡೆ
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್
Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ