ಕಂದಾಯ ನ್ಯಾಯಾಲಯಗಳಲ್ಲಿ ಲಕ್ಷ ಅರೆ ನ್ಯಾಯಿಕ ಪ್ರಕರಣ ಬಾಕಿ

1.05 ಲಕ್ಷ ಪ್ರಕರಣಗಳು ಬಾಕಿ

Team Udayavani, Apr 20, 2022, 11:31 AM IST

7

ಬೆಂಗಳೂರು: ರಾಜ್ಯದಲ್ಲಿ ಕಂದಾಯ ನ್ಯಾಯಾಲಯಗಳಲ್ಲಿನ ಬಾಕಿ ಪ್ರಕರಣಗಳ ಭಾರ ಹೆಚ್ಚಾಗುತ್ತಲೇ ಇದ್ದು ಪ್ರಸ್ತುತ ಜಿಲ್ಲಾಧಿಕಾರಿಗಳು, ಉಪವಿಭಾಗಾಧಿಕಾರಿ ಹಾಗೂ ತಹಶೀಲ್ದಾರರ ಕಂದಾಯ ನ್ಯಾಯಾಲಯಗಳಲ್ಲಿ 1 ಲಕ್ಷಕ್ಕೂ ಅಧಿಕ ಅರೆ ನ್ಯಾಯಿಕ ಪ್ರಕರಣಗಳು ಬಾಕಿ ಇವೆ.

ಜಮೀನಿನ ಹಕ್ಕು ವರ್ಗಾವಣೆ, ಮ್ಯುಟೇಷನ್‌, ಖಾತಾ ಮತ್ತು ಆರ್‌.ಟಿ.ಸಿ ಬದಲಾವಣೆಗಳಿಗೆ ಸಂಬಂಧಿಸಿದ ಅರೆ ನ್ಯಾಯಿಕ ಪ್ರಕರಣಗಳನ್ನು ಜಿಲ್ಲಾಧಿಕಾರಿಗಳು, ಉಪವಿಭಾಗಾಧಿಕಾರಿ ಮತ್ತು ತಹಶೀಲ್ದಾರರ ಕಂದಾಯ ನ್ಯಾಯಾಲಯಗಳಲ್ಲಿ ಇತ್ಯರ್ಥಪಡಿಸುತ್ತಾರಾದರೂ ಅಧಿಕಾರಿಗಳ ಕಾರ್ಯಬಾಹುಳ್ಯದ ಪರಿಣಾಮ ಅರೆ ನ್ಯಾಯಿಕ ಪ್ರಕರಣಗಳ ಬಾಕಿ ಹೆಚ್ಚುತ್ತಲೇ ಇದೆ.

ಅದಕ್ಕಾಗಿ ಈ ಬಾಕಿ ಪ್ರಕರಣಗಳ ಭಾರ ಇಳಿಸಲು ಕಂದಾಯ ಇಲಾಖೆ ಹಲವು ಕ್ರಮಗಳನ್ನು ಕೈಗೊಂಡಿದೆ. ಅದರಂತೆ, ಅರೆ ನ್ಯಾಯಿಕ ಪ್ರಕರಣಗಳನ್ನು ಶೀಘ್ರವಾಗಿ ಇತ್ಯರ್ಥಪಡಿಸುವ ದೃಷ್ಟಿಯಿಂದ ಎಲ್ಲಾ ಅರೆ ನ್ಯಾಯಿಕ ಕಂದಾಯ ನ್ಯಾಯಾಲಯಗಳು ಪ್ರಕರಣಗಳ ವಿಚಾರಣೆಯನ್ನು ವಾರದ ಪ್ರತಿ ಮಂಗಳವಾರ ಮತ್ತು ಗುರುವಾರಗಳಂದು ಪೂರ್ಣದಿನ ಕಡ್ಡಾಯವಾಗಿ ನಡೆಸಲು ನಿರ್ದೇಶನ ನೀಡಿದೆ.

ಅದೇ ರೀತಿ ಮ್ಯುಟೇಷನ್‌, ಖಾತಾ ಮತ್ತು ಆರ್‌ಟಿಸಿ ಬದಲಾವಣೆಗೆ ಸಲ್ಲಿಕೆಯಾಗುವ ಅರ್ಜಿಗಳು ವಿವಾದ ರಹಿತವಾದ ಪ್ರಕರಣಗಳಿದ್ದಲ್ಲಿ ಖಾತೆ ಬದಲಾವಣೆಯನ್ನು 60 ದಿನಗಳಲ್ಲಿ ಭೂಮಿ ತಂತ್ರಾಂಶದ ಮೂಲಕ ಸಕಾಲ ಸೇವೆಗಳಡಿ ವಿಲೇವಾರಿ ಮಾಡಲಾಗುತ್ತಿದೆ. ಅಲ್ಲದೇ ಅರ್ಜಿಯು ಆಸ್ತಿಯ ಹಕ್ಕಿನ ಹೊರತಾದ ವಿವಾದಿತ ಪ್ರಕರಣವಾಗಿದ್ದಲ್ಲಿ ಕರ್ನಾಟಕ ಭೂ ಕಂದಾಯ ಅಧಿನಿಯಮದ ಪ್ರಕಾರ ತಹಶೀಲ್ದಾರರು ಮೂರು ತಿಂಗಳಲ್ಲಿ ಇತ್ಯರ್ಥಪಡಿಸಬೇಕು. ಮೇಲ್ಮನವಿಗಳನ್ನು ಜಿಲ್ಲಾಧಿಕಾರಿಗಳು ಮತ್ತು ಉಪವಿಭಾಗಾಧಿಕಾರಿಗಳು 6 ತಿಂಗಳಲ್ಲಿ ಇತ್ಯರ್ಥಪಡಿಸಲು ಸೂಚಿಸಲಾಗಿದೆ.

ಬಾಕಿ ಪ್ರಕರಣಗಳ ವಿಲೇವಾರಿಯನ್ನು ಕಾಲಮಿತಿಯೊಳಗೆ ಇತ್ಯರ್ಥಪಡಿಸಲು ಜಿಲ್ಲಾಧಿಕಾರಿಗಳು ಮತ್ತು ಉಪವಿಭಾಗಾಧಿಕಾರಿಗಳಿಗೆ ಸರ್ಕಾರ ತಿಂಗಳ ಗುರಿ ನೀಡಿದೆ. ಅದರಂತೆ, ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿಯವರ ಅಧ್ಯಕ್ಷತೆಯಲ್ಲಿ ಅರೆ ನ್ಯಾಯಿಕ ಪ್ರಕರಣಗಳಿಗೆ ಸಂಬಂಧಿಸಿದಂತೆ ಪ್ರಗತಿ ಪರಿಶೀಲನಾ ಸಭೆ ನಡೆಸಿ, ಪ್ರತಿ ಜಿಲ್ಲಾಧಿಕಾರಿ ಪ್ರತಿ ತಿಂಗಳು 75 ಪ್ರಕರಣಗಳನ್ನು ಹಾಗೂ ಉಪ ವಿಭಾಗಾಧಿಕಾರಿಗಳು ಪ್ರತಿ ತಿಂಗಳು 100 ಪ್ರಕರಣಗಳನ್ನು ಇತ್ಯರ್ಥಪಡಿಸುವಂತೆ ಗುರಿ ನಿಗದಿಪಡಿಸಲಾಗಿದೆ.

1.05 ಲಕ್ಷ ಪ್ರಕರಣಗಳು ಬಾಕಿ: ರಾಜ್ಯದ ಎಲ್ಲಾ ಕಂದಾಯ ನ್ಯಾಯಾಲಯಗಳಲ್ಲಿ 1.05 ಲಕ್ಷ ಪ್ರಕರಣಗಳು ಬಾಕಿ ಇದ್ದಾವೆ. ಇದರಲ್ಲಿ ಉಪವಿಭಾಗಾಧಿಕಾರಿ ಹಂತದಲ್ಲಿ ಹೆಚ್ಚು ಬಾಕಿ ಪ್ರಕರಣಗಳು ಬಾಕಿ ಇದ್ದರೆ, ಜಿಲ್ಲಾ ಮಟ್ಟದಲ್ಲಿ ಬೆಂಗಳೂರು ನಗರ ಜಿಲ್ಲೆಯಲ್ಲಿ ಅತಿ ಹೆಚ್ಚು 19 ಸಾವಿರ ಪ್ರಕರಣಗಳು ಬಾಕಿ ಉಳಿದಿವೆ. ಉಳಿದಂತೆ ಬೆಂಗಳೂರು ಗ್ರಾಮಾಂತರ-6,887. ರಾಮನಗರ- 5,326. ಚಿಕ್ಕಬಳ್ಳಾಪುರ-5,302. ಕೋಲಾರ-6,212. ತುಮಕೂರು-13,865. ಚಿತ್ರದುರ್ಗ-3,091. ದಾವ ಣ ಗೆರೆ- 1,479. ಶಿವಮೊಗ್ಗ-1,686. ಮೈಸೂರು- 4,458. ಮಂಡ್ಯ-6,538. ಚಾಮರಾಜನಗರ-1,724. ಹಾಸನ-3,138. ಚಿಕ್ಕಮಗಳೂರು-2,265. ಕೊಡಗು- 651. ದಕ್ಷಿಣ ಕನ್ನಡ-3,558. ಉಡುಪಿ-1,891. ಬೆಳಗಾವಿ-3,861. ಬಾಗಲಕೋಟೆ-708. ವಿಜಯ ಪುರ-781, ಧಾರವಾಡ-357. ಗದಗ-311. ಹಾವೇರಿ -915. ಉತ್ತರ ಕನ್ನಡ-237. ಕಲಬುರಗಿ-1,136. ಬಳ್ಳಾರಿ-1,168. ಬೀದರ್‌ -1,594. ಕೊಪ್ಪಳ-774. ರಾಯಚೂರು-2,929. ಯಾದಗಿರಿ-1,273. ವಿಜ ಯನಗರ-1,155 ಪ್ರಕರಣಗಳು ಬಾಕಿ ಉಳಿದಿವೆ.

ಅಪರ ಜಿಲ್ಲಾಧಿಕಾರಿ, ಉಪ ತಹಶೀಲ್ದಾರ್‌ಗೆ ಹೊಣೆ? ಕಂದಾಯ ನ್ಯಾಯಾಲಯಗಳ ಅರೆ ನ್ಯಾಯಿಕ ಪ್ರಕರಣಗಳು ಹೆಚ್ಚಿನ ಸಂಖ್ಯೆಯಲ್ಲಿ ಬಾಕಿ ಉಳಿದಿರುವುದು ಹಾಗೂ ಮೇಲ್ಮನವಿಗಳ ಇತ್ಯರ್ಥ ವಿಳಂಬವಾಗುತ್ತಿರುವ ಹಿನ್ನೆಲೆಯಲ್ಲಿ ಪ್ರಕರಣಗಳ ಇತ್ಯರ್ಥದ ಜವಾಬ್ದಾರಿಯನ್ನು ಜಿಲ್ಲಾಧಿಕಾರಿಗಳು, ಉಪವಿಭಾಗಾಧಿಕಾರಿಗಳು ಮತ್ತು ತಹಶೀಲ್ದಾರರ ಜತೆಗೆ ಆಯಾ ಜಿಲ್ಲೆಗಳ ಅಪರ ಜಿಲ್ಲಾಧಿಕಾರಿ ಹಾಗೂ ಉಪತಹಶೀಲ್ದಾರರಿಗೆ ನೀಡಬೇಕೆಂಬ ಬೇಡಿಕೆ ಇದ್ದು, ಈ ನಿಟ್ಟಿನಲ್ಲಿ ಸರ್ಕಾರ ಪರಿಶೀಲಿಸುತ್ತಿದೆ ಎಂದು ಮೂಲಗಳು ತಿಳಿಸಿವೆ.

●ರಫೀಕ್‌ ಅಹ್ಮದ್‌

 

ಟಾಪ್ ನ್ಯೂಸ್

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

Bengaluru: ಚೆಕ್‌ ದುರ್ಬಳಕೆ; ಕ್ಯಾಷಿಯರ್‌, ಎಲ್‌ಐಸಿ ಏಜೆಂಟ್‌ಗೆ ಜೈಲು

Bengaluru: ಚೆಕ್‌ ದುರ್ಬಳಕೆ; ಕ್ಯಾಷಿಯರ್‌, ಎಲ್‌ಐಸಿ ಏಜೆಂಟ್‌ಗೆ ಜೈಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.