ಕಸ ಸಂಗ್ರಹ ಮಾಸಿಕ ಶುಲ್ಕಕ್ಕೆ ವಿರೋಧ


Team Udayavani, Jun 12, 2020, 6:06 AM IST

kasa-sangraha

ಬೆಂಗಳೂರು: ನಗರದಲ್ಲಿ ಪ್ರತಿ ಮನೆಯಿಂದ ಕಸ ಸಂಗ್ರಹಕ್ಕೆ ಮಾಸಿಕ 200 ರೂ. ವಿಧಿಸುವ ಪ್ರಸ್ತಾವನೆಗೆ  ಸಾರ್ವಜನಿಕ ವಲಯದಿಂದ ವಿರೋಧ ವ್ಯಕ್ತವಾಗಿದೆ. ಸರ್ಕಾರ ಇತ್ತೀಚೆಗೆ ಅನುಮೋದನೆ ನೀಡಿದ್ದ “ಬಿಬಿಎಂಪಿಯ ಕಸ  ನಿರ್ವಹಣೆ ಉಪ ನಿಯಮ-2020’ರ ಅನ್ವಯ ನಗರದ ಪ್ರತಿ ಮನೆಯಿಂದ ತಿಂಗಳಿಗೆ 200 ರೂ. ಶುಲ್ಕ ಸಂಗ್ರಹ ಮಾಡುವುದಕ್ಕೆ ಪಾಲಿಕೆ ಮುಂದಾ ಗಿದ್ದು, ಜುಲೈನಿಂದ ಇದು ಜಾರಿಗೆ ಬರುವ ಸಾಧ್ಯತೆ ಇದೆ.

ಇದಕ್ಕೆ ತೀವ್ರ ವಿರೋಧ  ವ್ಯಕ್ತವಾಗಿದೆ. ಪಾಲಿಕೆ ಸದಸ್ಯೆ ಲತಾ ಕುಮಾರ್‌ ರಾಥೋಡ್‌ ಸೇರಿದಂತೆ ಗಾಂಧಿ  ನಗರದ ಕಾಂಗ್ರೆಸ್‌ ಮುಖಂಡರು, ವಿವಿಧ ಸಂಘ ಸಂಸ್ಥೆ ಪದಾಧಿಕಾರಿಗಳು ಗುರುವಾರ ಪಶ್ಚಿಮ ವಲಯದ ಜಂಟಿ ಆಯುಕ್ತರ ಕಚೇರಿಯ ಮುಂಭಾಗ  ಪ್ರತಿಭಟನೆ ನಡೆಸಿದ್ದು, ತ್ಯಾಜ್ಯಸಂಗ್ರಹಣೆಗೆ ಮಾಸಿಕ ಶುಲ್ಕ ವಿಧಿಸದಂತೆ ಜಂಟಿ ಆಯುಕ್ತರಿಗೆ ಮನವಿ ಸಲ್ಲಿಸಿದ್ದಾರೆ. ಈ ಸಂಬಂಧ ಪ್ರತಿಕ್ರಿಯಿಸಿದ ಘನತ್ಯಾಜ್ಯ ವಿಭಾಗದ ವಿಶೇಷ ಆಯುಕ್ತ ಡಿ.ರಂದೀಪ್‌, ಬಿಬಿಎಂಪಿಯು ಈಗಾಗಲೇ ಕಸ  ನಿರ್ವಹಣೆಗೆ ಕೋಟ್ಯಂತರ ರೂ. ವೆಚ್ಚ ಮಾಡುತ್ತಿದೆ. ಇದನ್ನು ಸರಿದೂಗಿಸುವ ಉದ್ದೇಶ ದಿಂದ ಕಸ ಸಂಗ್ರಹಕ್ಕೆ ಶುಲ್ಕ ವಿಧಿಸುವು ದು ಅನಿವಾರ್ಯ.

ಇನ್ನು ಕೇಂದ್ರ ಸರ್ಕಾರದ ಘನತ್ಯಾಜ್ಯ ನಿರ್ವಹಣೆ 2016ರ ನಿಯಮದ ಪ್ರಕಾರ ಬಿಬಿಎಂಪಿಯ ಕಸ ನಿರ್ವಹಣೆ ಉಪ ನಿಯಮ ರೂಪಿಸಲಾಗಿದೆ ಎಂದು ತಿಳಿಸಿದ್ದಾರೆ. ಕಸ ಶುಲ್ಕ ನೀಡದಿದ್ದರೆ ಸಂಬಂಧ  ಪಟ್ಟವರಿಂದ ಕಸ ಸಂಗ್ರಹ ಮಾಡುವುದಿಲ್ಲ. ಜಲಮಂಡಳಿಯ ನೀರಿನ ಶುಲ್ಕ ಸಂಗ್ರಹಿಸುವ ಮಾದರಿಯಲ್ಲಿ ಕಸದ ಮಾಸಿಕ ಶುಲ್ಕ ಸಂಗ್ರಹಿಸುವ  ಚಿಂತನೆ ಇದೆ. ಈ ಸಂಬಂಧ ಮೇಯರ್‌, ಆಯುಕ್ತರೊಂದಿಗೆ ಚರ್ಚೆ ಮಾಡಿ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ಹೇಳಿದರು.

ಕಸ ಸಂಗ್ರಹಕ್ಕೆ ವಿಧಿಸಲಾಗುವ ಶುಲ್ಕ: ನಗರದಲ್ಲಿ ಕಸ ನೀಡುವ ಎಲ್ಲ ಮನೆಗಳಿಂದ ಮಾಸಿಕ 200 ರೂ. (ತ್ಯಾಜ್ಯಉತ್ಪಾದಕರಿಂದ) ಹಾಗೂ ವಾಣಿಜ್ಯ ಉತ್ಪಾದಕರಿಂದ ಕಸದ ಪ್ರಮಾಣ ಆಧರಿಸಿ ಶುಲ್ಕ ಸಂಗ್ರಹಿಸಲು ನಿರ್ಧರಿಸಲಾಗಿದೆ.  ಅದರಂತೆ, (ದಿನಕ್ಕೆ) 5 ಕೆ.ಜಿ. ಗಿಂತ ಕಡಿಮೆ ಕಸ ಉತ್ಪಾದಕರಿಗೆ 500 ರೂ., 5 ರಿಂದ 10 ಕೆ.ಜಿ. ಕಸ ಉತ್ಪಾದಕರಿಗೆ 1,400 ರೂ., 11 ರಿಂದ 25 ಕೆ.ಜಿ. ಕಸ ಉತ್ಪಾದಕರಿಗೆ 3,500 ರೂ., 26 ರಿಂದ 50 ಕೆ.ಜಿ. ಕಸ ಉತ್ಪಾದಕರಿಗೆ 7,000 ರೂ. ಹಾಗೂ  100 ಅಥವಾ ಹೆಚ್ಚಿನ ಕಸ ಉತ್ಪಾದಕರಿಗೆ 14,000 ರೂ. ಶುಲ್ಕ ಸಂಗ್ರಹಿಸಲು ನಿರ್ಧರಿಸಲಾಗಿದೆ.

ಟಾಪ್ ನ್ಯೂಸ್

Kohli IPL 2024

IPL; ಇಂದು ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

arrested

Bangaluru cafe ಸ್ಫೋಟದ ಸಂಚುಕೋರ ಎನ್‌ಐಎ ಬಲೆಗೆ: ಯಾರಿದು ಷರೀಫ್?

1-qeqewqeqwe

IPL ಉದ್ಘಾಟನ ಸಮಾರಂಭ ವೀಕ್ಷಣೆ: ಹೊಸ ದಾಖಲೆ

1-wqweqeqweqweqeeqeqwe

ILO ವರದಿ; ಭಾರತದಲ್ಲಿ ನಿರುದ್ಯೋಗ ಉಲ್ಬಣ

Anant KUmar Hegde

Uttara Kannada BJP; ಅನಂತ್‌ ಕುಮಾರ ಹೆಗಡೆ ತಟಸ್ಥ?: ಪ್ರಚಾರದಿಂದಲೂ ದೂರ

1-wqeweeqwqewq

MGNREGA; ಉದ್ಯೋಗ ಖಾತ್ರಿ ಯೋಜನೆ: ಕಾರ್ಮಿಕರ ವೇತನ ಹೆಚ್ಚಳ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-bng

Bengaluru: ಸಾಲ ವಸೂಲಿ ಹೆಸರಲ್ಲಿ ಆಟೋ ವಶ, ಧರ್ಮ ನಿಂದನೆ: ಬಂಧನ

6-bng

Bengaluru: ಪೇಂಟರ್‌ ಕೊಂದು ಪೊಲೀಸ್‌ ಠಾಣೆಗೆ ಬಂದು ಸಿಕ್ಕಿಬಿದ್ದ ಸ್ನೇಹಿತರು

5-bng

Bengaluru: ಪ್ರೀತಿಸಿ ಮದುವೆ ಆಗುವುದಾಗಿ ಅಂಗವಿಕಲ ಯುವತಿಗೆ ವಂಚನೆ

4-bng

Bengaluru: 290 ರೌಡಿಶೀಟರ್‌ಮನೆಗಳ ಮೇಲೆ ದಾಳಿ 

3-crime

Bengaluru: ಸ್ನೇಹಿತರಿಂದಲೇ ಸುಪಾರಿ ಕಿಲ್ಲರ್‌ನ ಹತ್ಯೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Kohli IPL 2024

IPL; ಇಂದು ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Subramanya: ಮಗು ಮಲಗಿದೆ ಜೋರಾಗಿ ಮಾತನಾಡಬೇಡಿ ಎಂದಿದಕ್ಕೆ ಕತ್ತಿಯಿಂದ ಹಲ್ಲೆ

Subramanya: ಮಗು ಮಲಗಿದೆ ಜೋರಾಗಿ ಮಾತನಾಡಬೇಡಿ ಎಂದಿದಕ್ಕೆ ಕತ್ತಿಯಿಂದ ಹಲ್ಲೆ

Politics: ಸುಮಲತಾ – ನಾವು ಶಾಶ್ವತ  ಶತ್ರುಗಳಲ್ಲ: ಕುಮಾರಸ್ವಾಮಿ

Politics: ಸುಮಲತಾ – ನಾವು ಶಾಶ್ವತ  ಶತ್ರುಗಳಲ್ಲ: ಕುಮಾರಸ್ವಾಮಿ

Sullia: ಕೂಜಿಮಲೆ ಪ್ರದೇಶದಲ್ಲಿ ಕಾಣಿಸಿಕೊಂಡಾಕೆ ನಕ್ಸಲ್‌ ಅಲ್ಲ

Sullia: ಕೂಜಿಮಲೆ ಪ್ರದೇಶದಲ್ಲಿ ಕಾಣಿಸಿಕೊಂಡಾಕೆ ನಕ್ಸಲ್‌ ಅಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.