ಕಳೆದ ಇಪ್ಪತ್ತು ದಿನದಲ್ಲಿ ಸಂಗ್ರಹ ಪಾಲಿಕೆಯ ಆರ್ಥಿಕ ಸಂಜೀವಿನಿ “ಆಸ್ತಿ ತೆರಿಗೆ’

ಆಸ್ತಿ ತೆರಿಗೆ ಸಂಗ್ರಹವೇ 135 ಕೋಟಿ ರೂ.!

Team Udayavani, Apr 23, 2020, 11:49 AM IST

ಕಳೆದ ಇಪ್ಪತ್ತು ದಿನದಲ್ಲಿ ಸಂಗ್ರಹ ಪಾಲಿಕೆಯ ಆರ್ಥಿಕ ಸಂಜೀವಿನಿ “ಆಸ್ತಿ ತೆರಿಗೆ’

ಸಾಂದರ್ಭಿಕ ಚಿತ್ರ

ಬೆಂಗಳೂರು: ಪಾಲಿಕೆಗೆ ಬರುವ ಎಲ್ಲ ಆದಾಯ ಮೂಲಗಳು ತಾತ್ಕಾಲಿಕವಾಗಿ ನಿಂತಿದೆ. ಆದರೆ, ಪಾಲಿಕೆಯ ಆರ್ಥಿಕ ಸಂಜೀವಿನಿ ಎಂದೇ ಗುರುತಿಸಲ್ಪಟ್ಟಿರುವ “”ಆಸ್ತಿ ತೆರಿಗೆ”ಯಿಂದ ಕಳೆದ 20 ದಿನಗಳಲ್ಲಿ 135 ಕೋಟಿ ರೂ. ಸಂಗ್ರಹವಾಗಿದೆ! ವಿಶೇಷವೆಂದರೆ ಇದರಲ್ಲಿ 124 ಕೋಟಿ ರೂ. ಆಸ್ತಿ ತೆರಿಗೆ ಆನ್‌ಲೈನ್‌ ಮೂಲಕವೇ ಆಗಿದೆ. ಬಿಬಿಎಂಪಿಯು ಪ್ರತಿ ಆರ್ಥಿಕ ವರ್ಷದ ಪ್ರಾರಂಭ ಅಂದರೆ ಏಪ್ರಿಲ್‌ನಲ್ಲಿ ಆಸ್ತಿ ತೆರಿಗೆಯ ಮೇಲೆ ಶೇ. 5ರಷ್ಟು ಆಸ್ತಿ ತೆರಿಗೆ ವಿನಾಯಿತಿ ನೀಡುತ್ತದೆ. ಕೋವಿಡ್ ದಿಂದ ಉಂಟಾಗಿರುವ ಆರ್ಥಿಕ ಸಂಕಷ್ಟದ ಮಧ್ಯೆಯೂ ಸಾರ್ವಜನಿಕರು ಈ ಪ್ರಮಾಣದಲ್ಲಿ ಆಸ್ತಿ ತೆರಿಗೆ ಪಾವತಿಸುತ್ತಿರುವುದಕ್ಕೆ ವಿನಾಯಿತಿಯೂ ಕಾರಣವಾಗಿದೆ.

ವಿನಾಯಿತಿ ಮುಂದುವರಿಕೆ ಸಾಧ್ಯತೆ ಕಡಿಮೆ:  ಬಿಬಿಎಂಪಿಯು ಆಸ್ತಿ ತೆರಿಗೆ ಸಂಗ್ರಹದ ಮೇಲೆ ನೀಡುವ ಶೇ.5ರಷ್ಟು ವಿನಾಯಿತಿಯನ್ನು ಮೇ ತಿಂಗಳಿಗೂ ವಿಸ್ತರಿಸುವ ಸಾಧ್ಯತೆ ಕಡಿಮೆ ಇದೆ. ಈಗಾಗಲೇ ಪಾಲಿಕೆ ಆರ್ಥಿಕವಾಗಿ ನಷ್ಟದಲ್ಲಿದ್ದು, ಹೆಚ್ಚಿನ ಆದಾಯ ಮೂಲವಾಗಿರುವ ಆಸ್ತಿ ತೆರಿಗೆಯಲ್ಲಿ ವಿನಾಯಿತಿ ನೀಡುವ ಸಾಧ್ಯತೆ ಇಲ್ಲ ಎನ್ನಲಾಗಿದೆ. ಇದಕ್ಕೆ ಪುಷ್ಠಿ ನೀಡುವಂತೆ ಬಿಬಿಎಂಪಿಯ ಅಧಿಕೃತ ವೆಬ್‌ಸೈಟ್‌ನಲ್ಲಿಯೂ ಆಸ್ತಿ ತೆರಿಗೆ ಮೇಲೆ ಶೇ.5 ರಷ್ಟು ವಿನಾಯಿತಿ ಪಾವತಿ ಮಾಡುವುದಕ್ಕೆ ಏ.30 ಕೊನೆಯ ದಿನ ಎಂದು ಎಚ್ಚರಿಕೆ ಸಂದೇಶ ಇದೆ. ಆಸ್ತಿ ತೆರಿಗೆ ಸಂಗ್ರಹದ ಮೇಲೆ ಶೇ.5ರಷ್ಟು ವಿನಾಯಿತಿ ಏ.30ಕ್ಕೆ ಕೊನೆಯಾಗುವ ಬಗ್ಗೆ ಪಾಲಿಕೆ ಎಲ್ಲಿಯೂ ಜಾಹೀರಾತು ಮೂಲಕ ಜಾಗೃತಿ ಮೂಡಿಸಿಲ್ಲ.

ಅವಕಾಶ ತಪ್ಪುವ ಸಾಧ್ಯತೆ: ಆನ್‌ಲೈನ್‌ ಬಳಕೆದಾರಿರಿಗೆ ತೆರಿಗೆ ಪಾವತಿಯಿಂದ ಶೇ.5ರಷ್ಟು ವಿನಾಯಿತಿ ಸಿಕ್ಕಿದೆಯಾದರೂ, ಬಿಬಿಎಂಪಿ ವಿನಾಯಿತಿಯನ್ನು ಮೇ ತಿಂಗಳಿಗೂ ಮುಂದುವರಿಸದೆ ಇದ್ದಲ್ಲಿ ಆನ್‌ಲೈನ್‌ ವ್ಯವಸ್ಥೆಯ ಬಗ್ಗೆ ತಿಳವಳಿಕೆ ಇಲ್ಲದವರು ಅಥವಾ ಇದನ್ನು ಇಲ್ಲಿಯವರೆಗೆ ಬಳಸದೆ ಇರುವವರು ಶೇ.5ರಷ್ಟು ತೆರಿಗೆ ವಿನಾಯಿತಿ ಅವಕಾಶವನ್ನು ಕಳೆದುಕೊಳ್ಳಲಿದ್ದಾರೆ. ಏ.30ಕ್ಕೆ ಈ ಅವಕಾಶ ಮುಕ್ತಾಯವಾಗಲಿದೆ. ಲಾಕ್‌ಡೌನ್‌ ಮೇ.3ಕ್ಕೆ ಮುಕ್ತಾಯವಾಗಲಿದೆ.

ಆನ್‌ಲೈನ್‌ ಮೂಲಕವೇ ಪಾವತಿಸಲು ಮನವಿ
ಬಿಬಿಎಂಪಿಯ ಅಧಿಕೃತ ವೆಬ್‌ಸೈಟ್‌ www. bbmp.gov.in ತೆರೆಯುತ್ತಿದ್ದಂತೆಯೇ ನೋಟ್‌ ಎಂಬ ಅಂಶ ಬರುತ್ತಿದ್ದು, ಕೋವಿಡ್ ಲಾಕ್‌ಡೌನ್‌ನಿಂದಾಗಿ ಬ್ಯಾಂಕ್‌ಗಳಲ್ಲಿ ನಿರ್ದಿಷ್ಟ ಸಿಬ್ಬಂದಿ ಮಾತ್ರ ಸೇವೆ ನೀಡುತ್ತಿದ್ದಾರೆ. ಹೀಗಾಗಿ, ಸಾಧ್ಯವಾದಷ್ಟು ಆನ್‌ಲೈನ್‌ನ ಮೂಲಕವೇ ವ್ಯವಹರಿಸಲು ಕೋರಲಾಗುತ್ತಿದೆ. ಆನ್‌ಲೈನ್‌ ಮೂಲಕ ತೆರಿಗೆ ಪಾವತಿ ಮಾಡುವುದು ಹೇಗೆ? ಬಿಬಿಎಂಪಿಯ ಅಧಿಕೃತ ವೆಬ್‌ಸೈಟ್‌ಗೆ www. bbmp.gov.in ಗೆ ಭೇಟಿ ನೀಡಿದರೆ ಅದರಲ್ಲಿ ನಾಗರೀಕ ಸೇವೆಗಳು ಎಂಬ ವಿಭಾಗವಿದ್ದು, ಇದರಲ್ಲಿ ಮೊದಲ ಆಯ್ಕೆ ಆಸ್ತಿ ತೆರಿಗೆ ಪಾವತಿ ಎಂದಿದೆ. ಇದನ್ನು ಕ್ಲಿಕ್ಕಿಸಿದರೆ ಆಸ್ತಿ ಪಾವತಿಸುವುದು ಹೇಗೆ, ಕಂದಾಯ ಅಧಿಕಾರಿಗಳು, ಸಹಾಯ ಕಂದಾಯ ಅಧಿಕಾರಿಗಳ ವಿವರ ಲಭ್ಯವಾಗಲಿದೆ. ಇದರೊಂದಿಗೆ ನಿಮ್ಮ ಆಸ್ತಿ ತೆರಿಗೆ ಪಾವತಿಸಲು ಇಲ್ಲಿ ಕ್ಲಿಕ್‌ ಮಾಡಿ ಎಂಬ ಆಯ್ಕೆಯೂ ಕಾಣಿಸುತ್ತದೆ. ಆಸ್ತಿ ತೆರಿಗೆ ಪಾವತಿ ಮೇಲೆ ಕ್ಲಿಕ್‌ ಮಾಡಿದರೆ, ತೆರಿಗೆ ಪಾವತಿಸುವ ಆಯ್ಕೆಯು ಮುಖಪುಟದಲ್ಲಿ ಆಸ್ತಿ ತೆರಿಗೆ ಪಾವತಿದಾರರು
ತಮ್ಮ ಖಾತೆ ಸಂಖ್ಯೆಯನ್ನು ನಮೂದಿಸಿ ಆನ್‌ಲೈನ್‌ ಮೂಲಕ ಆಸ್ತಿ ತೆರಿಗೆ ಪಾವತಿಸಬಹುದಾಗಿದೆ. ಇದಾದ ನಂತರ ಆಸ್ತಿ ತೆರಿಗೆ ಪಾವತಿಸಿದ ಖಾತ್ರಿ ಮಾಹಿತಿ ಸಿಗಲಿ¨

– ಏಪ್ರಿಲ್‌ನಲ್ಲಿ ಆಸ್ತಿ ತೆರಿಗೆಯ ಮೇಲೆ ಶೇ. 5ರಷ್ಟು ಆಸ್ತಿ ತೆರಿಗೆ ವಿನಾಯಿತಿ
– ಏ.30 ಕೊನೆಯ ದಿನ ಎಂದು ಎಚ್ಚರಿಕೆ ಸಂದೇಶ

ಹಿತೇಶ್‌ ವೈ.

ಟಾಪ್ ನ್ಯೂಸ್

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಬ್ರೇಕ್‌ ಬದಲು ಆ್ಯಕ್ಸಿಲೇಟರ್‌ ಒತ್ತಿದ ಆ್ಯಂಬುಲೆನ್ಸ್‌ ಚಾಲಕ: ಸರಣಿ ಅಪಘಾತ

Bengaluru: ಬ್ರೇಕ್‌ ಬದಲು ಆ್ಯಕ್ಸಿಲೇಟರ್‌ ಒತ್ತಿದ ಆ್ಯಂಬುಲೆನ್ಸ್‌ ಚಾಲಕ: ಸರಣಿ ಅಪಘಾತ

2

Bengaluru: ಬಿಸಿಲು; ಹೋಟೆಲ್‌ ವ್ಯಾಪಾರ ಶೇ.30 ಕುಸಿತ

Bengaluru: ನಗರದಲ್ಲಿ ಕಸದ ಬ್ಲಾಕ್‌ ಸ್ಪಾಟ್‌ ಹೆಚ್ಚಳ

Bengaluru: ನಗರದಲ್ಲಿ ಕಸದ ಬ್ಲಾಕ್‌ ಸ್ಪಾಟ್‌ ಹೆಚ್ಚಳ

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.