ಸ್ವಂತ ಜಮೀನಿನಲ್ಲಿ ಶವ ಸಂಸ್ಕಾರಕ್ಕೆ ಅವಕಾಶ
Team Udayavani, Apr 22, 2021, 12:33 PM IST
ಬೆಂಗಳೂರು: ಕೋವಿಡ್ ಸಂಬಂಧಿತ ಸಾವುಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಶವ ಸಂಸ್ಕಾರ ಸಂಬಂಧ ರಾಜ್ಯ ಸರ್ಕಾರ ಮಹತ್ವದ ಆದೇಶಹೊರಡಿಸಿದೆ.ಅದರಂತೆ ಮೃತಪಟ್ಟವರ ವಾರಸುದಾರರು ತಮ್ಮ ಮಾಲಿಕತ್ವದಭೂಮಿ/ ತೋಟದ ಮನೆಗಳ ಜಮೀನಿನಲ್ಲೂ ಕೋವಿಡ್ ನಿಯಮಾವಳಿಗಳನ್ನು ಪಾಲಿಸಿ ಶವಸಂಸ್ಕಾರ ಮಾಡಬಹುದು ಎಂದು ಹೇಳಿದೆ.
ಕೋವಿಡ್ನಿಂದ ಮೃತಪಟ್ಟವರ ಕುಟುಂಬಸ್ಥರು ತಮ್ಮ ಒಡೆತನಕ್ಕೆ ಸೇರಿದ ಜಮೀನಿನಲ್ಲೇ ಶವಸಂಸ್ಕಾರಕ್ಕೆ ಅವಕಾಶ ನೀಡಬೇಕೆಂದು ಬೇಡಿಕೆ ಇಟ್ಟಿರುವುದರಿಂದಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಕಂದಾಯ ಇಲಾಖೆ ಪ್ರಧಾನಕಾರ್ಯದರ್ಶಿ ಎನ್. ಮಂಜುನಾಥ ಪ್ರಸಾದ್ ಆದೇಶಿಸಿದ್ದಾರೆ.
ಬೆಂಗಳೂರು ಮಹಾನಗರ ಪಾಲಿಕೆ ಮುಖ್ಯ ಆಯುಕ್ತರು, ಎಲ್ಲಾಜಿಲ್ಲಾಧಿಕಾರಿಗಳು, ಆರೋಗ್ಯಾಧಿಕಾರಿಗಳು ಮತ್ತು ಸಂಬಂಧಿತ ಇಲಾಖೆಗಳು ಹೊರಡಿಸಿರುವ ಕೋವಿಡ್ ನಿಯಮಾವಳಿಗಳಂತೆ ಕ್ರಮ ಕೈಗೊಳ್ಳುವುದು ಎಂದು ಆದೇಶದಲ್ಲಿ ತಿಳಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ
Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್ ಸುಲಿಗೆ; ಮೂವರ ಬಂಧನ
Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ
Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್ ಬಾತ್ಮೀದಾರ ಸೆರೆ
Arrested: ಸುಲಿಗೆ ಸೇರಿ 42 ಕೇಸ್ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ