ಮಳೆ ನಿಯಂತ್ರಣ: ವಿಪತ್ತು ನಿರ್ವಹಣಾ ತಂಡ ರಚನೆ
Team Udayavani, Jun 3, 2020, 5:50 AM IST
ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ ಮಳೆ ಅನಾಹುತ ತಪ್ಪಿಸುವ ಉದ್ದೇಶ ದಿಂದ ವಲಯವಾರು ವಿಪತ್ತು ನಿರ್ವಹಣಾ ತಂಡಗಳನ್ನು ರಚನೆ ಮಾಡಿ ಬಿಬಿಎಂಪಿ ಆಯುಕ್ತರು ಆದೇಶ ಮಾಡಿದ್ದಾರೆ. ಬಿಬಿಎಂಪಿಯ ಎಂಟು ವಲಯಗಳಲ್ಲಿ ಈಗಾಗಲೇ ವಲಯ ಆಯುಕ್ತರಾಗಿ ರುವವರನ್ನೇ ನೋಡಲ್ ಅಧಿಕಾರಿಗಳನ್ನಾಗಿ ನೇಮಕ ಮಾಡಲಾಗಿದೆ.
ಈ ತಂಡವು ನಗರದಲ್ಲಿ ಮಳೆ ಸಂದರ್ಭದಲ್ಲಿ ತೆಗೆದು ಕೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳಲಿದೆ. ಅಲ್ಲದೆ, ಮಳೆ ಸುರಿದ ಮೇಲೆ ನಗರದಲ್ಲಿ ಸೃಷ್ಟಿಯಾಗುವ ಸಮಸ್ಯೆಗಳಿಗೂ ಈ ತಂಡಗಳ ಮೂಲಕ ಪರಿಹಾರ ಕಾರ್ಯಾಚರಣೆ ನಡೆಸಲು ಪಾಲಿಕೆ ಮುಂದಾಗಿದೆ.
ಬಿಬಿಎಂಪಿ ವ್ಯಾಪ್ತಿಯ ಎಂಟು ವಲಯಗಳಲ್ಲಿಯೂ ಪತ್ಯೇಕ ವಿಪತ್ತು ನಿರ್ವಹಣಾ ತಂಡಗಳನ್ನು ರಚನೆ ಮಾಡಲಾಗಿದ್ದು, ಇದರಲ್ಲಿ ಬಿಬಿಎಂಪಿ, ಅರಣ್ಯ ಇಲಾಖೆ, ಬೆಸ್ಕಾಂ, ಅಗ್ನಿಶಾಮಕ ವಿಭಾಗ, ಬೆಂಗಳೂರು ಜಲಮಂಡಳಿ ಹಾಗೂ ಸಂಚಾರ ವಿಭಾಗದ ಹಿರಿಯ ಅಧಿಕಾರಿಗಳು ಈ ತಂಡದಲ್ಲಿ ಇದ್ದಾರೆ. ಈ ತಂಡಗಳಿಗೆ ಆಯಾ ವಲಯದ ವಿಶೇಷ ಆಯುಕ್ತರನ್ನು ನೋಡಲ್ ಅಧಿಕಾರಿಗಳ ನ್ನಾಗಿ ನೇಮಕ ಮಾಡಲಾಗಿದೆ. ಮಳೆ ಯಿಂದ ಸಾರ್ವಜನಿಕ ಹಾಗೂ ಸರ್ಕಾರಿ ಆಸ್ತಿಗೆ, ಸಾರ್ವಜನಿಕರಿಗೆ ಉಂಟಾಗಬಹು ದಾದ ಸವಾಲು ತಪ್ಪಿಸಲು ಈ ತಂಡ ನೆರವಾಗಲಿದೆ.
ಇನ್ನು ಮಳೆ ಅನಾಹುತ ಸಂದರ್ಭದಲ್ಲಿ ವಿವಿಧ ಇಲಾಖೆಯ ಅಧಿಕಾರಿಗಳ ಸಮನ್ವಯತೆ ಸಾಧಿಸುವು ದಕ್ಕಾಗಿ ವಿಪತ್ತು ನಿರ್ವಹಣಾ ತಂಡದಲ್ಲಿ ಬಿಬಿಎಂಪಿ, ಬೆಸ್ಕಾಂ, ಅಗ್ನಿಶಾಮಕ ವಿಭಾಗ, ಜಲಮಂಡಳಿ ಹಾಗೂ ಸಂಚಾರ ವಿಭಾಗದ ಹಿರಿಯ ಅಧಿಕಾರಿಗಳನ್ನು ಸೇರಿಸಲಾಗಿದೆ ಎಂದು ಬಿಬಿಎಂಪಿ ಪ್ರಕಟಣೆ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ
Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್ ಸುಲಿಗೆ; ಮೂವರ ಬಂಧನ
Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ
Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್ ಬಾತ್ಮೀದಾರ ಸೆರೆ
Arrested: ಸುಲಿಗೆ ಸೇರಿ 42 ಕೇಸ್ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ
MUST WATCH
ಹೊಸ ಸೇರ್ಪಡೆ
Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ ಕಾರ್ಯಕರ್ತರ ಘರ್ಷಣೆ…