ಮಳೆ; ತಂಪಾದ ಇಳೆ
Team Udayavani, May 18, 2020, 5:05 AM IST
ಬೆಂಗಳೂರು: ನಗರದಲ್ಲಿ ಭಾನುವಾರ ಗುಡುಗು ಸಹಿತ ಮಳೆ ಸುರಿದು ಇಳೆ ತಂಪಾಯಿತು. ಸೋಮವಾರವೂ ಮಳೆ ಮುಂದುವರಿಯುವ ಸಾಧ್ಯತೆ ಇದೆ. ಭಾನುವಾರ ರಾತ್ರಿ 9.30ರ ಸುಮಾರಿಗೆ ಶುರುವಾದ ಮಳೆ, ನಗರದ ವಿವಿಧೆಡೆ ಅರ್ಧಗಂಟೆಗೂ ಹೆಚ್ಚು ಕಾಲ ಸುರಿಯಿತು. ಇದರಿಂದ ಕೆಲ ರಸ್ತೆಗಳು, ಸುರಂಗ ಮಾರ್ಗಗಳು, ಮೇಲ್ಸೇತುವೆಗಳಲ್ಲಿ ನೀರು ನಿಲುಗಡೆಯಾಗಿತ್ತು.
ಆದರೆ, ಲಾಕ್ಡೌನ್ ಹಿನ್ನೆಲೆಯಲ್ಲಿ ಸಂಚಾರ ಅತ್ಯಂತ ವಿರಳವಾಗಿತ್ತು. ಹಾಗಾಗಿ, ಇದರ ಬಿಸಿ ಜನರಿಗೆ ಅಷ್ಟಾಗಿ ತಟ್ಟಲಿಲ್ಲ. ಮೆಜೆಸ್ಟಿಕ್, ರೇಸ್ಕೋರ್ಸ್ ರಸ್ತೆ, ವಿಧಾನಸೌಧ ಸುತ್ತ, ಎಂ.ಜಿ. ರಸ್ತೆ ಸೇರಿದಂತೆ ಕೆಲವೆಡೆ ಸಾಧಾರಣ ಮಳೆಯಾಗಿದೆ. ರಾಜಾಜಿನಗರ, ಮಲ್ಲೇಶ್ವರ, ಡಬಲ್ ರಸ್ತೆ, ಹೆಬ್ಟಾಳ, ಜಯನಗರದಲ್ಲಿ ರಾತ್ರಿ 10ರ ನಂತರ ತುಂತುರು ಮಳೆ ಶುರುವಾ ಯಿತು. ಮಳೆ ಅನಾಹುತ ಗಳಿಗೆ ಸಂಬಂಧಿಸಿದಂತೆ ಯಾವುದೇ ದೂರುಗಳು ಬಂದಿಲ್ಲ ಎಂದು ಬಿಬಿಎಂಪಿ ನಿಯಂತ್ರಣ ಕೊಠಡಿ ಸಿಬ್ಬಂದಿ ಸ್ಪಷ್ಟಪಡಿಸಿದ್ದಾರೆ.
ಬಂಗಾಳಕೊಲ್ಲಿಯಲ್ಲಿ ಚಂಡ ಮಾರುತ ಉಂಟಾಗಿರುವುದರಿಂದ ಕರಾವಳಿ ಮತ್ತು ಮಲೆನಾಡು ಹಾಗೂ ದಕ್ಷಿಣ ಒಳನಾಡಿನ ಆಯ್ದ ಭಾಗಗಳಲ್ಲಿ ಮಳೆಯಾಗುತ್ತಿದೆ. ಮುಂದಿನ ಎರಡು ದಿನ ಮಳೆ ಮುಂದುವರಿಯಲಿದ್ದು, ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನಲ್ಲಿ ಇದರ ಪ್ರಭಾವ ತುಂಬಾ ಕಡಿಮೆ ಇರಲಿದೆ ಎಂದು ಹವಾಮಾನ ಇಲಾಖೆ ಬೆಂಗಳೂರು ಪ್ರಾದೇಶಿಕ ಕಚೇರಿ ನಿರ್ದೇಶಕ ಸಿ.ಎಸ್.ಪಾಟೀಲ್ ಮಾಹಿತಿ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CN Ashwath Narayan: ಕಾಂಗ್ರೆಸ್ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ
Bengaluru: ಅತಿಕ್ರಮಿಸಿ ಏರ್ಪೋರ್ಟ್ನಲ್ಲಿ ವಿಡಿಯೋ: ಯುಟ್ಯೂಬರ್ ಬಂಧನ
Bengaluru: ಮಕ್ಕಳ ಅಶ್ಲೀಲ ಫೋಟೋ, ವಿಡಿಯೋ ವೀಕ್ಷಿಸುತ್ತಿದ್ದ ಸೆಕ್ಯೂರಿಟಿ ಗಾರ್ಡ್ ಸೆರೆ
Jai Shri Ram ಎಂದು ಕೂಗಿದ್ದಕ್ಕೆ ಅನ್ಯಕೋಮಿನ ಯುವಕರಿಂದ ಹಲ್ಲೆ
ಗ್ಯಾರಂಟಿ ಯೋಜನೆಗಳ ಟೀಕೆಗೆ ತಾಯಂದಿರೇ ಉತ್ತರ ನೀಡುತ್ತಾರೆ: ಡಿಕೆ ಶಿವಕುಮಾರ್
MUST WATCH
ಹೊಸ ಸೇರ್ಪಡೆ
Gujarat Lok Sabha Constituency: ಗುಜರಾತ್ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?
Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯಿತಿ ಸಿದ್ದೇಶ್ವರ
Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ