ನಗರದ ಹಲವೆಡೆ ವರ್ಷಧಾರೆ
Team Udayavani, Jun 12, 2020, 6:03 AM IST
ಬೆಂಗಳೂರು: ಬಂಗಾಳಕೊಲ್ಲಿ ಭಾಗದಲ್ಲಿ ವಾಯುಭಾರ ಕುಸಿತ ಹಾಗೂ ಮುಂಗಾರು ಮಳೆ ಚುರುಕುಗೊಂಡ ಹಿನ್ನೆಲೆಯಲ್ಲಿ ನಗರದಲ್ಲಿ ಗುರುವಾರ ಧಾರಾಕಾರ ಮಳೆ ಸುರಿಯಿತು. ಒಂದು ಗಂಟೆಗೂ ಹೆಚ್ಚು ಕಾಲ ಸುರಿದ ಮಳೆಗೆ ನಗರದ ವಿವಿಧೆಡೆ ಹತ್ತಕ್ಕೂ ಹೆಚ್ಚು ಮರಗಳು ಧರೆಗುರುಳಿವೆ. ಜಯನಗರ 4ನೇ ಬ್ಲಾಕ್, ಸಂಜಯನಗರ, ಬಸವೇಶ್ವರನಗರದ ಶಂಕರ ಮಠ ವೃತ್ತ, ಮಲ್ಲೇಶ್ವರ 15ನೇ ಕ್ರಾಸ್ ಸೇರಿದಂತೆ ಎಂಟು ಕಡೆ ಮರ ಮತ್ತು ಮರ ಕೊಂಬೆ ಬಿದ್ದಿವೆ. ಆದರೆ, ಯಾವುದೇ ಅನಾಹುತ ಸಂಭವಿಸಿಲ್ಲ ಎಂದು ಪಾಲಿಕೆ ಸಿಬ್ಬಂದಿ ತಿಳಿಸಿದ್ದಾರೆ. ಎ
ಎಲ್ಲೆಲ್ಲಿ ಎಷ್ಟು ಮಳೆ?: ಹೆಮ್ಮಿಗೆಪುರ ಹಾಗೂ ವಿದ್ಯಾಪೀಠದಲ್ಲಿ 24ಮಿ.ಮೀ., ಜಕ್ಕೂರು 22 ಮಿ.ಮೀ., ಎಚ್ಎಂಟಿ ವಾರ್ಡ್, ನಾಯಂಡನಹಳ್ಳಿ, ಆರ್. ಆರ್.ನಗರದಲ್ಲಿ 22 ಮಿ.ಮೀ., ಚೊಕ್ಕ ಸಂದ್ರದಲ್ಲಿ 33 ಮಿ.ಮೀ., ಯಲಹಂಕ ದಲ್ಲಿ 30 ಮಿ.ಮೀ., ಕೆಂಗೇರಿ 29, ಅಟ್ಟೂರು ಹಾಗೂ ವಿದ್ಯಾರಣ್ಯಪುರದಲ್ಲಿ 28.5 ಮಿ.ಮೀ., ಕೋಣನಕುಂಟೆ 28 ಮಿ. ಮೀ., ಚೌಡೇಶ್ವರಿ ವಾರ್ಡ್ನಲ್ಲಿ 24.50 ಮಿ.ಮೀ., ಶೆಟ್ಟಿಹಳ್ಳಿ 21 ಮಿ.ಮೀ, ಕುಮಾರಸ್ವಾಮಿ ಲೇಔಟ್ ಹಾಗೂ ಬಸವನ ಗುಡಿ 20 ಮಿ.ಮೀ ಮಳೆಯಾಗಿದೆ.
ಇನ್ನೂ 3 ದಿನ ಮಳೆ: ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದಾಗಿ ನಗರದಲ್ಲಿ ಮುಂದಿನ ಮೂರು ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್ ಸುಲಿಗೆ; ಮೂವರ ಬಂಧನ
Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ
Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್ ಬಾತ್ಮೀದಾರ ಸೆರೆ
Arrested: ಸುಲಿಗೆ ಸೇರಿ 42 ಕೇಸ್ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ
Arrested: 17 ಕೇಸ್ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್ ಬಂಧನ
MUST WATCH
ಹೊಸ ಸೇರ್ಪಡೆ
ಭಾರತದಲ್ಲಿ ರಿಲೀಸ್ಗೂ ಮುನ್ನ ʼಮಂಕಿ ಮ್ಯಾನ್ʼ ಹೆಚ್ ಡಿ ಕಾಪಿ ಲೀಕ್: ವಿಳಂಬ ಯಾಕೆ?
Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ
West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ
Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ
Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ