ನಗರದಲ್ಲಿ ಅಬ್ಬರಿಸಿದ ವರ್ಷಧಾರೆ
Team Udayavani, Jun 26, 2020, 6:07 AM IST
ಬೆಂಗಳೂರು: ನಗರದಲ್ಲಿ ಗುರುವಾರ ಸುರಿದ ಧಾರಾಕಾರ ಮಳೆಗೆ ಐದಕ್ಕೂ ಹೆಚ್ಚು ಮರಗಳು ಧರೆಗುರುಳಿವೆ. ಕೆಂಗೇರಿಯ ಬಿಡಿಎ ಕಾಂಪ್ಲೆಕ್ಸ್ ಮುಂಭಾಗದ ವೃಷಭಾವತಿ ನದಿ ಹರಿದು ಹೋಗುವ ಭಾಗದಲ್ಲಿನ ರಾಜಕಾಲುವೆ ಕುಸಿದು, ಜನಜೀವನ ಅಸ್ತವ್ಯಸ್ತಗೊಂಡಿತು. ಕೆಂಗೇರಿ ಬಳಿ ವೃಷಭಾವತಿ ರಾಜಕಾಲುವೆಯಲ್ಲಿ ಭಾರೀ ಪ್ರಮಾಣದಲ್ಲಿ ನೀರು ಹರಿದ ಪರಿಣಾಮ ರಸ್ತೆಯಲ್ಲಿ ನೀರು ಹರಿದು ವಾಹನ ಸವಾರರು ಪರ ದಾಡುವಂತಾಯಿತು.
ವ್ಯಾಲಿಯಲ್ಲಿ ನೀರಿನ ಹರಿವಿನ ಪ್ರಮಾಣ ಹೆಚ್ಚಳವಾದ ಹಿನ್ನೆಲೆಯಲ್ಲಿ ಕೆಂಗೇರಿ ಸಮೀಪ ಕಾಲುವೆಗೆ ಕಟ್ಟಲಾಗಿದ್ದ ತಡೆಗೋಡೆ ಕುಸಿದು ಆತಂಕ ಸೃಷ್ಟಿಯಾಗಿತ್ತು. ರಾಜಕಾಲುವೆ ತುಂಬಿತುಳುಕಿದ್ದರಿಂದ ನೀರು ರಸ್ತೆಗೆ ನುಗ್ಗಿತು. ಎರಡರಿಂದ ಮೂರು ಅಡಿ ನೀರು ನಿಂತು ಈ ಮಾರ್ಗವಾಗಿ ಹೋಗುವ ಸವಾರರು ಆತಂಕದಲ್ಲೇ ಹೋಗುವ ವಾತಾವರಣ ನಿರ್ಮಾಣ ವಾಗಿತ್ತು. ಇದರಿಂದ ಸುತ್ತಲಿನ ಪ್ರದೇಶಗಳಲ್ಲೂ ಸಂಚಾರ ದಟ್ಟಣೆಗೆ ಸಮಸ್ಯೆಯಾಯಿತು.
ಬೆಂಗಳೂರು- ಮೈಸೂರು ರಸ್ತೆಯಲ್ಲಿ ಗಂಟೆಗಟ್ಟಲೆ ವಾಹನಗಳ ಸಂಚಾರ ಸಮಸ್ಯೆ ಎದುರಾಯಿತು. ಮಳೆಯಿಂದ ಅನಾಹುತವಾಗಿರುವ ವೃಷಭಾವತಿ ರಾಜಕಾಲುವೆ ಭಾಗಕ್ಕೆ ಶುಕ್ರವಾರ ಭೇಟಿ ನೀಡಿ ಪರಿಶೀಲಿಸಲಾಗುವುದು ಎಂದು ರಾಜರಾಜೇಶ್ವರಿ ನಗರದ ವಿಶೇಷ ಆಯುಕ್ತ ಅನ್ಬುಕುಮಾರ್ ತಿಳಿಸಿದ್ದಾರೆ. ಈ ಸಂಬಂಧ ಪ್ರತಿಕ್ರಿಯಿಸಿದ ಅವರು, ಮಳೆಯಿಂದ ರಾಜ ಕಾಲುವೆ ಕುಸಿದಿದ್ದು, ಅದೃಷ್ಟವಶಾತ್ ಯಾವುದೇ ಸಾವು- ನೋವು ಸಂಭವಿಸಿಲ್ಲ.
ಮೈಸೂರು ರಸ್ತೆ ಹಾಗೂ ಕೆಂಗೇರಿ ಭಾಗದಲ್ಲಿ ಶುಕ್ರವಾರ ಭೇಟಿ ನೀಡಿ ಪರಿಶೀಲಿಸಲಾಗುವುದು ನಂತರ ಮುಂದಿನ ಕ್ರಮ ತೆಗೆದುಕೊಳ್ಳಲಾಗುವುದು ಸದ್ಯಕ್ಕೆ ತಾತ್ಕಾಲಿಕವಾಗಿ ಬ್ಯಾರಿಕೇಡ್ ಹಾಕಲಾಗಿದೆ ಎಂದು ಹೇಳಿದರು. ಇನ್ನು ಜಯನಗರದ ಏಳನೇ ಬ್ಲಾಕ್, ಚನ್ನಸಂದ್ರ ಹಾಗೂ ವಿದ್ಯಾಪೀಠದ ಬಳಿ ತಲಾ ಒಂದು ಮರ ಧರೆಗುರುಳಿವೆ. ಇದರ ಹೊರತು ಯಾವುದೇ ಅನಾಹುತ ಸಂಭವಿಸಿಲ್ಲ ಎಂದು ಬಿಬಿಎಂಪಿಯ ಸಹಾಯವಾಣಿ ಸಿಬ್ಬಂದಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್ ಆತ್ಮಹತ್ಯೆ
Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ
Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ
CN Ashwath Narayan: ಕಾಂಗ್ರೆಸ್ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ
Bengaluru: ಅತಿಕ್ರಮಿಸಿ ಏರ್ಪೋರ್ಟ್ನಲ್ಲಿ ವಿಡಿಯೋ: ಯುಟ್ಯೂಬರ್ ಬಂಧನ
MUST WATCH
ಹೊಸ ಸೇರ್ಪಡೆ
Mangaluru; ಪೆಟ್ರೋಲ್ ಬದಲು ಡೀಸೆಲ್ ತುಂಬಿಸಿದ ಆರೋಪ: ಕೋರ್ಟ್ಗೆ ಮೊರೆ
RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್
Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ
ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್ ಸಿಟಿ ಅಧಿಕಾರಿ ಶ್ರೀನಿವಾಸ
Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ