ರವಿಸುಬ್ರಹ್ಮಣ್ಯರಿಗೆ ಯಾರಿಂದ ಸವಾಲು?


Team Udayavani, Mar 10, 2023, 5:55 AM IST

ರವಿಸುಬ್ರಹ್ಮಣ್ಯರಿಗೆ ಯಾರಿಂದ ಸವಾಲು?

ಬೆಂಗಳೂರು: ಮೌಲ್ಯಾಧಾರಿತ ರಾಜಕಾರಣಿ ಎಂದೇ ಹೆಸರಾದ ಮಾಜಿ ಸಿಎಂ ದಿ| ರಾಮಕೃಷ್ಣ ಹೆಗಡೆ ಅವರಿಗೆ ರಾಜಕೀಯ ಮರುಜೀವ ಕೊಟ್ಟ ಬಸವನಗುಡಿ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಕಳೆದ ಮೂರು ಅವಧಿಯಿಂದ ಹ್ಯಾಟ್ರಿಕ್‌ ಸಾಧನೆ ಮಾಡಿದೆ. 2008ರಲ್ಲಿ ಈ ಕ್ಷೇತ್ರದ ಜನಪ್ರಿಯ ಶಾಸಕ ಎಂದೇ ಹೆಸರಾದ ಕಾಂಗ್ರೆಸ್‌ನ ಕೆ.ಚಂದ್ರಶೇಖರ್‌ ಅವರನ್ನು ಭಾರೀ ಅಂತರದಿಂದ ಸೋಲಿಸಿ ಬಿಜೆಪಿಯಿಂದ ಆಯ್ಕೆಗೊಂಡ ರವಿಸುಬ್ರಹ್ಮಣ್ಯ ಮೂರು ಬಾರಿಯಿಂದಲೂ ಗೆಲುವು ಸಾಧಿಸುತ್ತಲೇ ಇದ್ದಾರೆ. ರಾಮಕೃಷ್ಣ ಹೆಗಡೆಯವರನ್ನು ಬಿಟ್ಟರೆ ಎರಡು ಅವಧಿಗೆ ಯಾರೂ ಗೆದ್ದಿಲ್ಲ ಎಂಬ ಮಾತನ್ನು ಸುಳ್ಳಾಗಿಸಿರುವ ರವಿಸುಬ್ರಹ್ಮಣ್ಯ ಅವರ ನಾಲ್ಕನೇ ಅವಧಿಯ ಭವಿಷ್ಯವೇನು? ಎಂಬುದು ಸದ್ಯದ ಪ್ರಶ್ನೆ.

ಬ್ರಾಹ್ಮಣ ಹಾಗೂ ಒಕ್ಕಲಿಗ ಸಮುದಾಯದ ಮತಗಳೇ ಹೆಚ್ಚಿನ ಸಂಖ್ಯೆಯಲ್ಲಿ ಇರುವುದರಿಂದ ಮೂರು ರಾಜಕೀಯ ಪಕ್ಷಗಳು ಈ ಎರಡು ಜಾತಿಯ ಅಭ್ಯರ್ಥಿಗಳನ್ನೇ ಹೆಚ್ಚಿನ ಸಂದರ್ಭದಲ್ಲಿ ಕಣಕ್ಕಿಳಿಸಿವೆ. ಈ ಬಾರಿ ಕಾಂಗ್ರೆಸ್‌ನಿಂದಲೂ ಬ್ರಾಹ್ಮಣ ಸಮುದಾಯದ ವ್ಯಕ್ತಿಯನ್ನೇ ಕಣಕ್ಕಿಳಿಸುವ ಬಗ್ಗೆ ಚರ್ಚೆ ನಡೆಯುತ್ತಿದೆ. ವಿದ್ಯಾವಂತರು ಈ ಕ್ಷೇತ್ರದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಇರುವುದರಿಂದ ಸಿದ್ಧಾಂತ ಮತ್ತು ವ್ಯಕ್ತಿತ್ವವೇ ಗೆಲುವಿನಲ್ಲಿ ಪ್ರಧಾನ ಪಾತ್ರ ವಹಿಸುತ್ತಿದೆ. ರಾಜಧಾನಿ ಬೆಂಗಳೂರಿನ ಅತ್ಯಂತ ಶಾಂತ ಕ್ಷೇತ್ರಗಳಲ್ಲಿ ಬಸವನ ಗುಡಿಯೂ ಒಂದಾಗಿದೆ.

ವರ್ಷದಿಂದ ವರ್ಷಕ್ಕೆ ಮತಗಳಿಕೆ ಪ್ರಮಾಣ ಹೆಚ್ಚಿಸಿಕೊಳ್ಳುತ್ತಲೇ ಇರುವುದರಿಂದ ರವಿಸುಬ್ರಹ್ಮಣ್ಯ ಅವರಿಗೆ ಟಿಕೆಟ್‌ ಪಡೆದುಕೊಳ್ಳುವುದು ಹೆಚ್ಚಿನ ಸಮಸ್ಯೆ ತಂದೊಡ್ಡಲಾರದು. ಆದರೆ ಕುಟುಂಬ ರಾಜಕಾರಣದ ವಿರುದ್ಧ ರಾಷ್ಟ್ರೀಯ ಮಟ್ಟದಲ್ಲಿ  ಮಾತನಾಡಿ ಮೆಚ್ಚುಗೆ ಪಡೆದ ಸಂಸದ ತೇಜಸ್ವಿ ಸೂರ್ಯ ಅವರಿಗೆ “ರವಿ ಸುಬ್ರಹ್ಮಣ್ಯ ನಿಮ್ಮ ಚಿಕ್ಕಪ್ಪ ಅಲ್ಲವೇ?’ ಎಂದು ಸಂಸದೆ ಸುಪ್ರಿಯಾ ಸುಳೆ ಪ್ರಶ್ನಿಸಿದ ಬಳಿಕ ಇಲ್ಲಿಯೂ ಬದಲಾವಣೆಯ ಪ್ರಶ್ನೆಗಳು ಏಳುತ್ತಿವೆ. ಇದರ ಜತೆಗೆ ಬಿಜೆಪಿಯಲ್ಲೂ ಪ್ರಬಲ ಆಕಾಂಕ್ಷಿಗಳು ಸೃಷ್ಟಿಯಾಗಿದ್ದು, ಅಭ್ಯರ್ಥಿ ಬದಲಾವಣೆ ಬಗ್ಗೆ ವರಿಷ್ಠರ ಮಟ್ಟದಲ್ಲಿ ಒತ್ತಡ ಇದೆ.

ಆಮ್‌ ಆದ್ಮಿ ಪಕ್ಷದಿಂದ ಬಸವನಗುಡಿ ಕ್ಷೇತ್ರದ ಅಭ್ಯರ್ಥಿಯಾಗಲು ಬಯಸಿದ್ದ ನಿವೃತ್ತ ಐಪಿಎಸ್‌ ಅಧಿಕಾರಿ ಭಾಸ್ಕರ್‌ ರಾವ್‌ ಕೆಲವು ದಿನಗಳ ಹಿಂದಷ್ಟೇ ಬಿಜೆಪಿ ಸೇರಿದ್ದಾರೆ. ಯಾವುದೇ ನಿರೀಕ್ಷೆ ಇಲ್ಲದೇ ಬೇಷರತ್ತಾಗಿ ಪಕ್ಷ ಸೇರ್ಪಡೆಗೊಂಡಿರುವುದಾಗಿ ಅವರು ಹೇಳಿಕೆ ನೀಡಿದ್ದರೂ “ಬಸವನಗುಡಿಯ ಮೇಲಿನ ಮಮಕಾರ’ ಅಷ್ಟು ಸುಲಭಕ್ಕೆ ಹೋಗಲು ಸಾಧ್ಯವೇ? ಅದೇ ರೀತಿ ಬಿಜೆಪಿಯ ಒಂದು ವರ್ಗ ದಿ| ಅನಂತ್‌ ಕುಮಾರ್‌ ಅವರ ಪತ್ನಿ ತೇಜಸ್ವಿನಿ ಅನಂತ್‌ ಕುಮಾರ್‌ ಅವರಿಗೆ ಟಿಕೆಟ್‌ ನೀಡುವಂತೆ ವರಿಷ್ಠರ ಮುಂದೆ ಬೇಡಿಕೆ ಇಟ್ಟಿವೆ. ಅವರಿಗೆ ಜಯನಗರದಿಂದ ಸ್ಪರ್ಧೆಗೆ ಅವಕಾಶ ನೀಡುವ ಪ್ರಸ್ತಾವವೂ ಇದೆ.

ಇನ್ನು ಕಾಂಗ್ರೆಸ್‌ನಿಂದ ವಿಧಾನ ಪರಿಷತ್‌ ಸದಸ್ಯ ಯು.ಬಿ. ವೆಂಕಟೇಶ್‌ ಪ್ರಬಲ ಆಕಾಂಕ್ಷಿಯಾಗಿದ್ದಾರೆ. ಕಳೆದೆರಡು ವರ್ಷದಿಂದ ಅವರು ಕ್ಷೇತ್ರದಲ್ಲಿ ಕೆಲಸ ಮಾಡುತ್ತಿದ್ದು, ಕಾಂಗ್ರೆಸ್‌ ಮತ್ತೆ ತನ್ನ ಅಸ್ತಿತ್ವ ಪ್ರದರ್ಶನ ಮಾಡುವ ಹಂತಕ್ಕೆ ತಲುಪಿದೆ. ಆದರೆ ಡಿ.ಕೆ.ಶಿವಕುಮಾರ್‌ ಆಪ್ತ ಗುಹಾ ದ್ವಾರಕನಾಥ್‌ ಕೂಡಾ ಬಸವನಗುಡಿಯಿಂದಲೇ ಸ್ಪರ್ಧೆ ಬಯಸಿದ್ದಾರೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಆಪ್ತರಾಗಿರುವುದರಿಂದ ಯು.ಬಿ.ವೆಂಕಟೇಶ್‌ಗೆ ಕಾಂಗ್ರೆಸ್‌ನಿಂದ ಬಹುತೇಕ ಟಿಕೆಟ್‌ ಪಕ್ಕಾ ಎಂದು ಹೇಳಲಾಗುತ್ತಿದೆ. ಸರಕಾರ ಬಂದರೆ ಬೇರೆ ರೀತಿಯಲ್ಲಿ ತಮ್ಮ ಸೇವೆ ಬಳಸಿಕೊಳ್ಳಲಾಗುವುದು ಎಂದು ಗುಹಾ ದ್ವಾರಕನಾಥ್‌ ಅವರನ್ನು ಶಿವಕುಮಾರ್‌ ಸಮಾಧಾನಪಡಿಸಿದ್ದಾರೆ ಎಂಬುದು ಸದ್ಯ ಕಾಂಗ್ರೆಸ್‌ ವಲಯದಲ್ಲಿ ಕೇಳಿ ಬರುತ್ತಿರುವ ಮಾತು.

– ರಾಘವೇಂದ್ರ ಭಟ್‌

ಟಾಪ್ ನ್ಯೂಸ್

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Netherlands Trip: ಹೀಗೊಂದು ನಿಶ್ಶಬ್ದ ಪಯಣ!

Netherlands Trip: ಹೀಗೊಂದು ನಿಶ್ಶಬ್ದ ಪಯಣ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

1-wqe-qweq

Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

ಗ್ಯಾರಂಟಿಗಳಿಂದ ಜನ ಭ್ರಷ್ಟರಾಗುತ್ತಾರೆ ಎನ್ನಲಾಗದು: ಹೈಕೋರ್ಟ್‌ ತೀರ್ಪು

ಗ್ಯಾರಂಟಿಗಳಿಂದ ಜನ ಭ್ರಷ್ಟರಾಗುತ್ತಾರೆ ಎನ್ನಲಾಗದು: ಹೈಕೋರ್ಟ್‌ ತೀರ್ಪು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ

Aditya on kangaroo movie

Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.