ಚೇತರಿಕೆ ಹಾದಿಯಲಿ ಕುಕ್ಕುಟೋದ್ಯಮ
ಪ್ರತಿದಿನ ಸುಮಾರು 6-5 ಲಕ್ಷ ಕೆ.ಜಿ. ಕೋಳಿಮಾಂಸ ಮಾರಾಟ
Team Udayavani, May 7, 2020, 1:48 PM IST
ಸಾಂದರ್ಭಿಕ ಚಿತ್ರ
ಬೆಂಗಳೂರು: ಕೋವಿಡ್ ಭೀತಿಯಿಂದ ಸಂಕಷ್ಟಕ್ಕೆ ಸಿಲುಕಿದ ರಾಜ್ಯ ಕುಕ್ಕುಟೋದ್ಯಮ ಈಗ ನಿಧಾನವಾಗಿ ಚೇತರಿಸಿಕೊಳ್ಳುತ್ತಿದೆ. ಹಕ್ಕಿಜ್ವರ ಸೇರಿದಂತೆ ಅನೇಕ ಕಾರಣಗಳಿಂದಾಗಿ ಮೈಸೂರು ಸೇರಿದಂತೆ ರಾಜ್ಯದ ನಾನಾ ಭಾಗಗಳಲ್ಲಿ ಕೋಳಿಗಳನ್ನು ನಾಶ ಮಾಡಲಾಗಿತ್ತು. ಇದರಿಂದ ಚಿಕನ್ ಕೊಳ್ಳುವವರೂ ಕಡಿಮೆಯಾಗಿದ್ದರು. ಈಗ ಕುಕ್ಕುಟೋದ್ಯಮ ಚೇತರಿಸಿಕೊಳ್ಳುತ್ತಿದೆ. ಕೋವಿಡ್ ಹೊಡೆತದ ಬಳಿಕ ಇದೀಗ ಪ್ರತಿದಿನ ಸುಮಾರು 6-5 ಲಕ್ಷ ಕೆ.ಜಿ. ಕೋಳಿಮಾಂಸ ಮಾರಾಟವಾಗುತ್ತಿದೆ ಎಂದು ಕರ್ನಾಟಕ ಸಹಕಾರಿ ಕುಕ್ಕುಟ ಮಹಾಮಂಡಳಿಯ ಹಿರಿಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಚೇತರಿಸಿಕೊಳ್ಳಲು 45 ದಿನಗಳು ಬೇಕು: ಕೋವಿಡ್ ಕೋಳಿ ಮಾಂಸದಿಂದ ಹರಡುತ್ತಿದೆ ಎಂಬ ವದಂತಿಗಳು ಕುಕ್ಕುಟೋದ್ಯಮಕ್ಕೆ ಆರ್ಥಿಕ ಹೊಡೆತಕ್ಕೆ ಕಾರಣವಾಗಿತ್ತು. ಆ ಹಿನ್ನೆಲೆಯಲ್ಲಿಯೇ ಕೋಳಿ ಸಾಕಾಣಿಕೆ ದಾರರು ಮತ್ತು ಉದ್ಯಮಿಗಳು ಆರ್ಥಿಕ ಸಂಕಷ್ಟಕ್ಕೆ ಸಿಲುಕಿದರು. ಈಗ ಸರ್ಕಾರ ಕೂಡ ಕೋಳಿ ಮಾಂಸ ಮಾರಾಟಕ್ಕೂ ಅವಕಾಶ ನೀಡಿದ್ದು, ಸುಮಾರು 45 ದಿನಗಳಲ್ಲಿ ಉದ್ಯಮ ಚೇತರಿಕೆ ಕಾಣಲಿದೆ ಎಂದು ಸಹಕಾರಿ ಕುಕ್ಕುಟ ಮಹಾಮಂಡಳಿಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಹೇಳಿಕೊಳ್ಳುವಷ್ಟು ವ್ಯಾಪಾರವಿಲ್ಲ: ಬೆಂಗಳೂರಿನಲ್ಲಿಯೇ ಹೋಟೆಲ್ ಮತ್ತು ರೆಸ್ಟೋರೆಂಟ್ ಸೇರಿದಂತೆ ಪ್ರತಿ ನಿತ್ಯ 4 ಲಕ್ಷ ಕೆ.ಜಿ.ಮಾಂಸ ಮಾರಾಟವಾಗುತ್ತಿತ್ತು. ಕೋವಿಡ್ ಹಿನ್ನೆಲೆ ಹೋಟೆಲ್ ಸೇರಿದಂತೆ ಸಾರಿಗೆ ಸಂಪರ್ಕವೂ ಬಂದ್ ಆದ ಪರಿಣಾಮ ಉದ್ಯಮ ಕುಸಿದಿತ್ತು ಎನ್ನುತ್ತಾರೆ ಕುಕ್ಕುಟ ಮಹಾಮಂಡಳಿ ಅಧ್ಯಕ್ಷ ಡಿ.ಕೆ.ಕಾಂತರಾಜು. ಕೊರೊನಾ ರಾಜ್ಯ ಬರುವ ಮುನ್ನ ಪ್ರತಿ ದಿನ ಸುಮಾರು 8-10 ಲಕ್ಷ ಕೋಳಿ ಮರಿಗಳ ಉತ್ಪಾದನೆ ಆಗುತ್ತಿತ್ತು. ಆದರೆ ಈಗ ಕೇವಲ 3-4 ಲಕ್ಷ ಕೋಳಿ ಮರಿಗಳ ಉತ್ಪಾದನೆ ಮಾಡಲಾಗುತ್ತಿದೆ ಎಂದರು.
ಹಳ್ಳಿಗಳಲ್ಲಿ ಹೆಚ್ಚು ಮಾರಾಟ
ಕೋವಿಡ್ ಹಿನ್ನೆಲೆ ಜನರು ಹಳ್ಳಿಗಳ ಕಡೆಗೆ ಮುಖ ಮಾಡಿದ್ದು, ಆ ಹಿನ್ನೆಲೆಯಲ್ಲಿ ಹಳ್ಳಿಗಳಲ್ಲಿಯೇ ಶೇ.30 ರಷ್ಟು ಕೋಳಿ ಖರೀದಿ ನಡೆಯುತ್ತಿದೆ. ಕೆಲವು ಕಡೆಗಳಲ್ಲಿ ಪ್ರತಿ.ಕೆ.ಜಿ ಕೋಳಿ ಮಾಂಸ 150 ರಿಂದ 190 ರೂ.ವರೆಗೂ ಮಾರಾಟವಾಗುತ್ತಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್ ಆತ್ಮಹತ್ಯೆ
Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ
Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ
CN Ashwath Narayan: ಕಾಂಗ್ರೆಸ್ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ
Bengaluru: ಅತಿಕ್ರಮಿಸಿ ಏರ್ಪೋರ್ಟ್ನಲ್ಲಿ ವಿಡಿಯೋ: ಯುಟ್ಯೂಬರ್ ಬಂಧನ
MUST WATCH
ಹೊಸ ಸೇರ್ಪಡೆ
Kanakagiri ದೇಗುಲಕ್ಕೆ ಬಂದಿದ್ದ ಕರಡಿ ಸೆರೆ ಹಿಡಿಯುವಾಗ ದಾಳಿ: ವೃದ್ಧ ಸಾವು
Mysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್ಗೆ ಹಲ್ಲೆ
Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮನೆ ರತ್ನಾಕರ್
BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ
Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!