ಬಜೆಟ್‌ನಲ್ಲಿ ಬದಲಾವಣೆ ಇಲ್ಲದೆ ಪರಿಷ್ಕರಣೆ!


Team Udayavani, Jun 2, 2020, 6:10 AM IST

budget-badalavane

ಬೆಂಗಳೂರು: ಬಿಬಿಎಂಪಿಯ 2020-21ನೇ ಸಾಲಿನ ಬಜೆಟ್‌ನಲ್ಲಿ ಆರ್ಟಿರಿಯಲ್‌ ಮತ್ತು ಸಬ್‌ ಆರ್ಟಿರಿಯಲ್‌ ರಸ್ತೆಗಳ ಅಭಿವೃದ್ಧಿ ಸೇರಿದಂತೆ “ತುರ್ತು’ ಯೋಜನೆಗಳಿಗಾಗಿ ಅನುದಾನವನ್ನು ಪಾಲಿಕೆಯ ಕೋರಿಕೆ ಮೇರೆಗೆ ಸೋಮವಾರ ನಗರಾಭಿವೃದ್ಧಿ ಇಲಾಖೆ ಪರಿಷ್ಕರಿಸಿದೆ. ಆದರೆ, ಬೆನ್ನಲ್ಲೇ ಈಗಾಗಲೇ ಅನುಮೋದಿಸಿರುವ ಮೊತ್ತದಲ್ಲೇ ಇದನ್ನು ಹೊಂದಾಣಿಕೆ ಮಾಡತಕ್ಕದ್ದು ಎಂಬ ಷರತ್ತು ಕೂಡ ವಿಧಿಸಿದೆ.

ಇದರಿಂದ ಪಾಲಿಕೆ ಇಕ್ಕಟ್ಟಿಗೆ ಸಿಲುಕಿದೆ. ಸುಟ್ಟುಹೋದ  ಬೀದಿದೀಪಗಳ ಬದಲಾವಣೆ ಮತ್ತು ನಿರ್ವಹಣೆ ಹಾಗೂ ದುರಸ್ತಿ (ಪ್ಯಾಕೇಜ್‌), ಬೃಹತ್‌ ನೀರುಗಾಲುವೆ ವಾರ್ಷಿಕ ನಿರ್ವಹಣೆ ಹಾಗೂ ಆರ್ಟಿರಿಯಲ್‌ ಮತ್ತು ಸಬ್‌ ಆರ್ಟಿರಿಯಲ್‌ ರಸ್ತೆಗಳನ್ನು ಎಂಟು ವಲಯಗಳಲ್ಲಿ ರಸ್ತೆ ಮೂಲಸೌಕರ್ಯ ಯೋಜನೆಗಳಿಂದ  ಅಭಿವೃದ್ಧಿಗೊಳಿಸುವ ಸಂಬಂಧ ಸರ್ಕಾರ ಈ ಮೊದಲು ಅನುಮೋದಿಸಿದ್ದ ಮೊತ್ತ 50 ಕೋಟಿ ರೂ. ಆದರೆ, ಈಗ ಪಾಲಿಕೆ ಪ್ರಸ್ತಾವನೆ ಹಿನ್ನೆಲೆಯಲ್ಲಿ ಅದನ್ನು 229 ಕೋಟಿ ರೂ.ಗಳಿಗೆ ಪರಿಷ್ಕರಿಸಿದೆ.

ಈ ಪೈಕಿ ಆರ್ಟಿರಿಯಲ್‌ ಮತ್ತು ಸಬ್‌ ಆರ್ಟಿರಿಯಲ್‌ ರಸ್ತೆಗಳ ಅಭಿವೃದ್ಧಿ ಮೊತ್ತವೇ 142 ಕೋಟಿ ರೂ. ಇದೆ. ಬೆನ್ನಲ್ಲೇ ಇದನ್ನು ಆಯವ್ಯಯದ ಒಟ್ಟಾರೆ ಅನುಮೋದಿತ ಹಾಗೂ ಎಸೊ ಮೊತ್ತದಲ್ಲಿ ಯಾವುದೇ ಬದಲಾವಣೆ ಇಲ್ಲದಂತೆ  ಹೊಂದಾಣಿಕೆ ಮಾಡಿಕೊಳ್ಳುವಂತೆ ನಗರಾಭಿವೃದ್ಧಿ ಇಲಾಖೆಯು ಬಿಬಿಎಂಪಿ ಆಯುಕ್ತರಿಗೆ ಸೂಚಿಸಿದೆ. ಇದು ಪಾಲಿಕೆಯನ್ನು ಗೊಂದಲಕ್ಕೀಡು ಮಾಡಿದೆ. ಯಾಕೆಂದರೆ, ಈ ಅನುದಾನದ ಹೊಂದಾಣಿಕೆಗಾಗಿ ಈಗಿರುವ ಯಾವುದಾದರೂ  ಯೋಜನೆಗಳಿಗೆ ಕತ್ತರಿ ಹಾಕುವುದು ಅನಿವಾರ್ಯವಾಗಿದ್ದು, ಯಾವುದೇ ಅನುದಾನಕ್ಕೆ ಕತ್ತರಿ ಹಾಕಿದರೂ ಅಪಸ್ವರಗಳು ಕೇಳಿಬರಲಿವೆ.

ತೃಪ್ತಿಪಡಿಸುವ ಕಸರತ್ತು?: ಮೂಲಗಳ ಪ್ರಕಾರ ಆರ್ಟಿರಿಯಲ್‌ ಮತ್ತು ಸಬ್‌ ಆರ್ಟಿರಿಯಲ್‌ ರಸ್ತೆ ನಿರ್ವಹಣೆಯನ್ನು ವಲಯ ಕಚೇರಿಗಳಿಂದ ಮಾಡುತ್ತಿದ್ದರೂ, ಬೃಹತ್‌ ಕಾಮಗಾರಿ ಸ್ಥಾಯಿ ಸಮಿತಿ ಅಧ್ಯಕ್ಷರನ್ನು ತೃಪ್ತಿಪಡಿಸಲು  ಮೂಲಸೌಕರ್ಯ ವಿಭಾಗಕ್ಕೆ 142 ಕೋಟಿ ರೂ. ಹೆಚ್ಚುವರಿ ಅನುದಾನ ಕೋರಲಾಗಿದೆ. ಈಗ ಒಟ್ಟಾರೆ ಅನುಮೋದಿತ ಮೊತ್ತದಲ್ಲೇ ಹೊಂದಾಣಿಕೆ ಮಾಡಬೇಕಾಗಿರುವುದರಿಂದ ಇತರೆ ಸ್ಥಾಯಿ ಸಮಿತಿ ಅಧ್ಯಕ್ಷರು ಮತ್ತು ಸದಸ್ಯರ ಯೋಜನೆಗಳಿಗೆ ಕತ್ತರಿ ಹಾಕುವ ಕಸರತ್ತು ನಡೆದಿದೆ.

ಈ ಮಧ್ಯೆ ಪರಿಷ್ಕೃತ ಮೊತ್ತದ ಕಾಮಗಾರಿಗಳ ಅನುಷ್ಠಾನಕ್ಕಾಗಿ ಪರ್ಯಾಯವಾಗಿ ಸಮಮೊತ್ತದ ಅತಿ ತುರ್ತು ಅಲ್ಲದ ನೂತನ ಯೋಜನೆಗಳನ್ನು ಅನುಮೋದಿತ ವಿವೇಚನಾ  ಅನುದಾನಗಳನ್ನು ಹೊರತುಪಡಿಸಿ, ವಿಶೇಷ ವಾರ್ಡ್‌ ಅಭಿವೃದ್ಧಿಕಾಮಗಾರಿಗಳು, ಮೀಸಲು ನಿಧಿ ತೆರಿಗೆ ಮತ್ತು ಆರ್ಥಿಕ ಸ್ಥಾಯಿ ಸಮಿತಿ ಚಾಲ್ತಿ ಕಾಮಗಾರಿಗಳು ಮತ್ತಿತರ ಶೀರ್ಷಿಕೆಗಳಿಂದ ಕೈಬಿಡುವಂತೆ ನಗರಾಭಿವೃದ್ಧಿ ಇಲಾಖೆ ಸೂಚಿಸಿದೆ. ಆದರೆ, ತುರ್ತು ಅಲ್ಲದ ಕಾಮಗಾರಿಗಳ ಆಯ್ಕೆಯೇ ಕಗ್ಗಂಟಾಗಿದೆ.

ಟಾಪ್ ನ್ಯೂಸ್

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

Olympic Games Paris 2024; ಬೆಳಗಿತು ಪ್ಯಾರಿಸ್‌ ಒಲಿಂಪಿಕ್‌ ಜ್ಯೋತಿ

Olympic Games Paris 2024; ಬೆಳಗಿತು ಪ್ಯಾರಿಸ್‌ ಒಲಿಂಪಿಕ್‌ ಜ್ಯೋತಿ

UPSC Exam: 30ಕ್ಕಿಂತ ಅಧಿಕ ಕನ್ನಡಿಗರ ಆಯ್ಕೆ

UPSC Exam: 30ಕ್ಕಿಂತ ಅಧಿಕ ಕನ್ನಡಿಗರ ಆಯ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Fraud: ಮದುವೆ ಆಗದೇ ದೈಹಿಕ ಸಂಪರ್ಕ ಬೆಳೆಸಿ ಮಹಿಳಾ ಟೆಕಿಗೆ ವಂಚನೆ

Fraud: ಮದುವೆ ಆಗದೇ ದೈಹಿಕ ಸಂಪರ್ಕ ಬೆಳೆಸಿ ಮಹಿಳಾ ಟೆಕಿಗೆ ವಂಚನೆ

Bengaluru: ಸೆ*ಕ್ಸ್‌ ವಿಡಿಯೋ ಮಾದರಿ ಲೈಂಗಿಕ ಕ್ರಿಯೆಗೆ ಒತ್ತಾಯ

Bengaluru: ಸೆ*ಕ್ಸ್‌ ವಿಡಿಯೋ ಮಾದರಿ ಲೈಂಗಿಕ ಕ್ರಿಯೆಗೆ ಒತ್ತಾಯ

15

ವೃದ್ಧಾಶ್ರಮ ಸ್ವಚ್ಛತೆ ಬಂದು ಮಾಲೀಕರ ಮನೆಗೇ ಕನ್ನ

Bengaluru: ಶಾರ್ಟ್‌ ಸರ್ಕ್ಯೂಟ್‌ನಿಂದ ಬೆಂಕಿ; ನಾಲ್ಕು ವರ್ಷದ ಮಗು ಆಹುತಿ

Bengaluru: ಶಾರ್ಟ್‌ ಸರ್ಕ್ಯೂಟ್‌ನಿಂದ ಬೆಂಕಿ; ನಾಲ್ಕು ವರ್ಷದ ಮಗು ಆಹುತಿ

Fraud: ಫ್ಲ್ಯಾಟ್‌ ಖರೀದಿ ಹೆಸರಲ್ಲಿ ಖಾಸಗಿ ಫೈನಾನ್ಸ್‌ ಕಂಪನಿಗೆ 60.8 ಲಕ್ಷ ವಂಚನೆ

Fraud: ಫ್ಲ್ಯಾಟ್‌ ಖರೀದಿ ಹೆಸರಲ್ಲಿ ಖಾಸಗಿ ಫೈನಾನ್ಸ್‌ ಕಂಪನಿಗೆ 60.8 ಲಕ್ಷ ವಂಚನೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.