ಎಲ್ಲಾ ಯೋಜನೆಗಳಿಗೆ ನೆಹರೂ, ಗಾಂಧಿ ಹೆಸರನ್ನೇ ಇಡೋಕಾಗುತ್ತಾ?: ಸಚಿವ ಅಶೋಕ್ ತಿರುಗೇಟು
ಯಲಹಂಕ ಮೇಲ್ಸೇತುವೆಗೆ ಸಾವರ್ಕರ್ ಹೆಸರು ನಾಮಕರಣ ವಿಚಾರ
Team Udayavani, May 28, 2020, 9:08 PM IST
ಬೆಂಗಳೂರು: ನಗರದಲ್ಲಿರುವ ಯಲಹಂಕ ಮೇಲ್ಸೇತುವೆಗೆ ಸ್ವಾತಂತ್ರ್ಯ ಯೋಧ ವೀರ ಸಾವರ್ಕರ್ ಹೆಸರು ಇಡುವುದಕ್ಕೆ ನಮಗೆ ಸಂತಸವಿದೆ ಎಂದು ಕಂದಾಯ ಸಚಿವ ಆರ್. ಅಶೋಕ್ ಅವರು ಹೇಳಿದ್ದಾರೆ.
ಎಲ್ಲಾ ಯೋಜನೆಗಳಿಗೆ ನೆಹರು, ಗಾಂಧಿ ಇಟ್ಟಿದ್ದಾರೆ ಬೇರೆಯವರ ಹೆಸರು ಇಟ್ಟರೆ ಕಾಂಗ್ರೆಸ್ ನಾಯಕರಿಗೆ ಆಗೋದಿಲ್ಲ. ಸಾವರ್ಕರ್ ಸ್ವಾತಂತ್ರ್ಯ ಹೋರಾಟಗಾರರು 25 ವರ್ಷ ಸೆರೆವಾಸ ಅನುಭವಿಸಿದವರು, ಅಂತಹ ಹೋರಾಟಗಾರನ ಬಗ್ಗೆ ವಿರೋಧ ಸರಿಯಲ್ಲ.
ಯಲಹಂಕ ಮೆಲ್ಸೇತುವೆಗೆ ಸ್ವಾತಂತ್ರ್ಯ ಸೇನಾನಿ ದಾಮೋದರ್ ಸಾವರ್ಕರ್ ಹೆಸರನ್ನು ಇರಿಸುವುದಕ್ಕೆ ವಿರೋಧ ವ್ಯಕ್ತಪಡಿಸುತ್ತಿರುವ ಕಾಂಗ್ರೆಸ್ ನಾಯಕರನ್ನು ಸಚಿವ ಆರ್ ಅಶೋಕ್ ಅವರು ತರಾಟೆಗೆ ತೆಗೆದುಕೊಂಡಿದ್ದಾರೆ.
ಇಂದಿರಾ ಸಂತತಿಯನ್ನು ಹೊರತಾಗಿಸಿ ಬೇರೆ ಯಾರೇ ನಾಯಕರ ಹೆಸರುಗಳನ್ನು ಸಾರ್ವಜನಿಕ ಸ್ಥಳಗಳಿಗೆ ಇಟ್ಟರೆ ಇವರಿಗೆಲ್ಲಾ ಹೊಟ್ಟೆಯಲ್ಲಿ ಮೆಣಸಿನಕಾಯಿ ಇಟ್ಟಂತಾಗುತ್ತದೆ ಎಂದು ಕಂದಾಯ ಸಚಿವ ಆರ್. ಅಶೋಕ್ ಅವರು ಕಾಂಗ್ರೆಸ್ ನಾಯಕರನ್ನು ಕಿಚಾಯಿಸಿದ್ದಾರೆ.
ಹಾಗಾದರೆ ಇವರ ಅಧಿಕಾರ ಅವಧಿಯಲ್ಲಿ ಯಾಕೆ ಕೆಂಪೇಗೌಡರ ಹೆಸರು, ಸಂಗೊಳ್ಳಿ ರಾಯಣ್ಣನಂತಹ ವೀರರ ಹೆಸರುಗಳನ್ನು ಯಾಕೆ ಇಡಲಿಲ್ಲ ಎಂದು ಅಶೋಕ್ ಕೈ ನಾಯಕರನ್ನು ಪ್ರಶ್ನಿಸಿದರು.
ಸಾವರ್ಕರ್ ಹೆಸರನ್ನು ಇರಿಸುವುದಕ್ಕೆ ಸಂಪೂರ್ಣ ಬೆಂಬಲವಿದೆ. ಹಿಂದೂ ಸಿದ್ಧಾಂತ ಪ್ರತಿಪಾದಕರೆಂಬ ಕಾರಣಕ್ಕೆ ಅವರ ಹೆಸರಿಡುವುದನ್ನು ವಿರೋಧಿಸುವುದು ಸರಿಯಲ್ಲ. ಹಾಗಾದರೆ ಹಿಂದೂ ಆಗಿ ಹುಟ್ಟುವುದೇ ತಪ್ಪಾ? ಎಂದು ಅಶೋಕ್ ಅವರು ಪ್ರಶ್ನಿಸಿದ್ದಾರೆ. ಕಾಂಗ್ರೆಸ್ ನವರ ಗೊಡ್ಡು ಬೆದರಿಕೆಗೆ ನಾವು ಹೆದರೋದಿಲ್ಲ, ಸಾವರ್ಕರ್ ಹೆಸರನ್ನು ಇಟ್ಟೇ ಇಡ್ತೇವೆ ಎಂದು ಅಶೋಕ್ ಖಚಿತ ಧ್ವನಿಯಲ್ಲಿ ನುಡಿದಿದ್ದಾರೆ.
ಹೊಟೇಲ್ ಪ್ರಾರಂಭದ ವಿಚಾರ
ಸಂಪನ್ಮೂಲ ಕ್ರೋಡೀಕರಣ ಮಾಡಬೇಕಾದ ಅನಿವಾರ್ಯ ಸ್ಥಿತಿ ಎದುರಾಗಿದೆ. ಹಾಗೆಂದು ಕೋವಿಡ್ ಬಗ್ಗೆ ನಿರ್ಲ್ಯಕ್ಷ್ಯ ವಹಿಸುವುದಿಲ್ಲ. ಈ ಕುರಿತಾಗಿ ಜೂನ್ 1ರ ನಂತರ ಕೇಂದ್ರದ ನಿರ್ದೇಶನವನ್ನು ನೋಡಿಕೊಂಡು ಮುಂದಿನ ನಿರ್ಧಾರವನ್ನು ತೆಗೆದುಕೊಳ್ಳಲಾಗುವುದು ಎಂದು ಸಚಿವ ಅಶೋಕ್ ಅವರು ಹೇಳಿದರು.
ರಾಜ್ಯದಲ್ಲಿ ಹೊಟೇಲ್ ವ್ಯವಹಾರವನ್ನು ಪ್ರಾರಂಭಿಸಲು ನಮ್ಮ ಸರ್ಕಾರ ಮುಕ್ತ ಮನಸ್ಸನ್ನು ಹೊಂದಿದೆ. ಆದರೆ ಸದ್ಯದ ಪರಿಸ್ಥಿತಿಯಲ್ಲಿ ಬಾರ್ ಮತ್ತು ರೆಸ್ಟೋರೆಂಟ್ ತೆರೆಯಲು ಅವಕಾಶ ನೀಡುವುದಿಲ್ಲ ಎಂದೂ ಸಚಿವ ಅಶೋಕ್ ಅವರು ನುಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Patanjali Ads case:ಖುದ್ದು ಹಾಜರಾಗಿ- ಬಾಬಾ ರಾಮ್ ದೇವ್, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್
Vande Bharat: 1.5 ವರ್ಷದಲ್ಲಿ ವಂದೇ ಭಾರತ್ಗೆ 50 ಬಾರಿ ಕಲ್ಲೆಸೆತ
Lok Sabha Elections: 10 ಲಕ್ಷ ಮೀರಿ ವಹಿವಾಟು ಮೇಲೆ ಐಟಿ ಕಣ್ಣು
Wenlockನಲ್ಲಿ ಮೂಲಸೌಕರ್ಯ ಕೊರತೆ; ಜಿಲ್ಲಾ ಉಸ್ತುವಾರಿ ಸಚಿವರ ವಿರುದ್ಧ ಪೊಲೀಸ್ಗೆ ದೂರು
Crime: ನಿಶ್ಚಿತಾರ್ಥವಾಗಿದ್ದ ಸೊಸೆಯನ್ನೇ ಹತ್ಯೆಗೈದ ಮಾವ