ಚಿನ್ನ-ಬೆಳ್ಳಿ ಕಾರ್ಮಿಕರಿಗೂ ಪರಿಹಾರಕ್ಕೆ ಶರವಣ ಆಗ್ರಹ
Team Udayavani, May 7, 2020, 1:53 PM IST
ಸಾಂದರ್ಭಿಕ ಚಿತ್ರ
ಬೆಂಗಳೂರು: ರಾಜ್ಯದ ಜನರ ಪರಿಸ್ಥಿತಿಗೆ ಮಿಡಿದ ಸರ್ಕಾರ, ವಿಶೇಷ ಪ್ಯಾಕೇಜ್ ಘೋಷಿಸಿರುವುದು ಸ್ವಾಗತಾರ್ಹ. ಆದರೆ, ಚಿನ್ನ-ಬೆಳ್ಳಿ ಕಾರ್ಮಿಕರನ್ನು ಕಡೆಗಣಿಸಿರುವುದು ಬೇಸರದ ಸಂಗತಿ ಎಂದು ವಿಪ ಸದಸ್ಯ ಹಾಗೂ ಜ್ಯುವೆಲರಿ ಅಸೋಸಿಯೇಷನ್ ಅಧ್ಯಕ್ಷ ಟಿ.ಎ. ಶರವಣ ಬೇಸರ ವ್ಯಕ್ತಪಡಿಸಿದ್ದಾರೆ.
ಸವಿತಾ ಸಮಾಜ, ರೈತರು, ಆಟೋ ಚಾಲಕರಿಗೆ ಸರ್ಕಾರ ಘೋಷಿಸಿರುವ 1,610 ಕೋಟಿ ರೂ. ಪ್ಯಾಕೇಜ್ ಘೋಷಿಸಿದೆ. ಇದರಿಂದ ಆ ಸಮುದಾಯಗಳಿಗೆ ಅನುಕೂಲ ಆಗಲಿದೆ. ತೀವ್ರ ಸಂಕಷ್ಟದಲ್ಲಿ ರುವ ಚಿನ್ನ-ಬೆಳ್ಳಿ ಕೆಲಸ ಮಾಡುವ ಕಾರ್ಮಿಕರಿಗೂ ಪರಿಹಾರ ಘೋಷಿಸ ಬೇಕಿತ್ತು. ಆದರೆ, ಈ ನಿಟ್ಟಿನಲ್ಲಿ ಸರ್ಕಾರ ಯೋಚಿಸದಿರುವುದು ಅಸಮಾಧಾನ ಉಂಟು ಮಾಡಿದೆ. ರಾಜ್ಯದಲ್ಲಿ ಚಿನ್ನ-ಬೆಳ್ಳಿ ಕೆಲಸ ಮಾಡುವ ಸುಮಾರು ಐದು ಲಕ್ಷ ಕಾರ್ಮಿಕರಿದ್ದಾರೆ. ಪ್ರತಿ ಶುಭ ಸಮಾರಂಭಗಳಿಗೆ ಆಭರಣ ತಯಾರಿಸುವ ಕಾರ್ಮಿಕರು, ಸಿಲುಕಿದ್ದಾರೆ. ಅವರಿಗೆ ಪರಿಹಾರ ಘೋಷಿಸ ಬೇಕು ಎಂದು ಶರವಣ ಒತ್ತಾಯಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್ ಆತ್ಮಹತ್ಯೆ
Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ
Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ
CN Ashwath Narayan: ಕಾಂಗ್ರೆಸ್ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ
Bengaluru: ಅತಿಕ್ರಮಿಸಿ ಏರ್ಪೋರ್ಟ್ನಲ್ಲಿ ವಿಡಿಯೋ: ಯುಟ್ಯೂಬರ್ ಬಂಧನ
MUST WATCH
ಹೊಸ ಸೇರ್ಪಡೆ
Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮನೆ ರತ್ನಾಕರ್
BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ
Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!
Bidar; ಬಿರುಗಾಳಿ ಸಹಿತ ಭಾರಿ ಮಳೆ :ಸಿಡಿಲು ಬಡಿದು ರೈತ ಸಾವು
Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್