ನಾಲ್ಕು ದಿನದಲ್ಲಿ ಆರು ವಾರ್ಡ್‌ ಕಂಟೈನ್ಮೆಂಟ್‌


Team Udayavani, May 26, 2020, 6:03 AM IST

alku-dina

ಬೆಂಗಳೂರು: ದೇವರ ಜೀವನಹಳ್ಳಿ ವಾರ್ಡ್‌ಗೂ ಸೋಮವಾರ ಕೋವಿಡ್‌ 19 ವೈರಸ್‌ ದಾಳಿಯಿಟ್ಟಿದ್ದು, ಈ ಮೂಲಕ ನಗರದ ಮತ್ತೂಂದು  ಪ್ರದೇಶ ಕಂಟೈನ್ಮೆಂಟ್‌ ವ್ಯಾಪ್ತಿಗೆ ಸೇರ್ಪಡೆಯಾಗಿದೆ. ಈ ಮೂಲಕ ಕಳೆದ ನಾಲ್ಕು ದಿನಗಳಲ್ಲಿ  ಕಂಟೈನ್ಮೆಂಟ್‌ ವಲಯಕ್ಕೆ ಸೇರಿದ ವಾರ್ಡ್‌ಗಳ ಸಂಖ್ಯೆ ಆರಕ್ಕೇರಿದೆ. ಮೇ 22ರಂದು ಲಕ್ಕಸಂದ್ರ, ಥಣಿಸಂದ್ರ ಹಾಗೂ ಅಗರಂ ಮೂರು ವಾರ್ಡ್‌ಗಳಲ್ಲಿ ಸೋಂಕಿ ತರು ಕಂಡುಬಂದು ಕಂಟೇನ್ಮೆಂಟ್‌ ಮಾಡಲಾಗಿತ್ತು. ಮೇ 23 ರಂದು ಪುಟ್ಟೇನಹಳ್ಳಿ, ಮಾರಪ್ಪನಪಾಳ್ಯ ಹಾಗೂ ಸೋಮವಾರ (ಮೇ 25) ಎಸ್‌.ಕೆ.ಗಾರ್ಡನ್‌ ಅನ್ನು ಕಂಟೈನ್ಮೆಂಟ್‌ ವ್ಯಾಪ್ತಿಗೆ ತರಲಾಗಿದೆ. ಇದರೊಂದಿಗೆ ಕಂಟೈನ್ಮೆಂಟ್‌ ವಾರ್ಡ್‌ಗಳ ಸಂಖ್ಯೆ 22ಕ್ಕೆ ಏರಿಕೆಯಾಗಿದೆ.

ನಾಲ್ಕು ಹೊಸ ಸೋಂಕು: ನಗರದಲ್ಲಿ ಸೋಮವಾರ ಹೊಸದಾಗಿ ನಾಲ್ಕು ಕೋವಿಡ್‌ 19 ವೈರಸ್‌ ಸೋಂಕು ಪ್ರಕರಣಗಳು ದೃಢಪಟ್ಟಿದ್ದು, ಒಟ್ಟಾರೆ ಸೋಂಕು ಪ್ರಕರಣಗಳ ಸಂಖ್ಯೆ 274ಕ್ಕೆ ಏರಿಕೆಯಾಗಿದೆ. ಭಾನುವಾರದ ಅಂತ್ಯಕ್ಕೆ ಬೆಂಗಳೂರು ವ್ಯಾಪ್ತಿಯಲ್ಲಿ ಸೋಂಕು ಪ್ರಕರಣಗಳ ಸಂಖ್ಯೆ 270 ತಲುಪಿತ್ತು. ಸೋಮವಾರ ಡಿಜೆ ಹಳ್ಳಿಯಲ್ಲಿ ತೀವ್ರ ಉಸಿರಾಟ ಸಮಸ್ಯೆಯಿಂದ ಬಳಲುತ್ತಿದ್ದ 38 ವರ್ಷದ ಮಹಿಳೆಗೆ ಸೋಂಕು ತಗುಲಿರುವುದು ಪರೀಕ್ಷೆಯಿಂದ ದೃಢಪಟ್ಟಿದೆ.

ಈ ಮಹಿಳೆಯ ಸೋಂಕಿನ ಮೂಲವನ್ನು ಆರೋಗ್ಯಾಧಿಕಾರಿಗಳು ಪತ್ತೆ ಮಾಡುತ್ತಿದ್ದಾರೆ. ಲಂಡನ್‌ನಿಂದ ಬೆಂಗಳೂರಿಗೆ ಆಗಮಿಸಿದ್ದ 25 ವರ್ಷದ ಯುವಕನಲ್ಲಿ ಸೋಂಕು ಪತ್ತೆಯಾಗಿದೆ. ಎರಡು ವಾರಗಳ ಹಿಂದೆ  ಬೆಂಗಳೂರಿಗೆ ಆಗಮಿಸಿದ್ದ 323 ಮಂದಿ ಪ್ರಯಾಣಿಕರನ್ನು ನಗರದ ಹೋಟೆಲ್‌ ನಲ್ಲಿ ಕ್ವಾರಂಟೈನ್‌ ಮಾಡಲಾಗಿತ್ತು. ಈ ಎಲ್ಲಾ ಪ್ರಯಾಣಿಕರಿಗೂ ಎರಡನೇ (12ನೇ ದಿನಕ್ಕೆ) ಬಾರಿ ಸೋಂಕು ಪರೀಕ್ಷೆ ನಡೆಸಲಾಗಿತ್ತು.

ಈ ವೇಳೆ ಬೆಂಗಳೂರು  ನಿವಾಸಿಯಾ ಗದಿದ್ದ ಈ ಯುವಕನಲ್ಲಿ ಸೋಂಕು ದೃಢಪಟ್ಟಿದೆ. ಸದ್ಯ ಯುವಕನನ್ನು ಕೋವಿಡ್‌ 19 ಚಿಕಿತ್ಸಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಒಟ್ಟಾರೆ ಲಂಡನ್‌ನಿಂದ ಒಂದೇ ವಿಮಾನದಲ್ಲಿ ಬಂದ 323 ಪ್ರಯಾಣಿಕರಲ್ಲಿ ಮೂರು ಮಂದಿಯಲ್ಲಿ ಸೋಂಕು  ದೃಢಪಟ್ಟಂತಾಗಿದೆ. ಮೇ 22 ರಂದು ಲಕ್ಕ ಸಂದ್ರದಲ್ಲಿ ಸೋಂಕು ದೃಢಪಟ್ಟಿದ್ದ 36 ವರ್ಷದ ಮಹಿಳೆಯ ( ರೋಗಿ – 1,659) ಪ್ರಾಥಮಿಕ ಸಂಪರ್ಕ ಹೊಂದಿದ್ದ 48 ವರ್ಷದ ಪುರುಷನಿಗೂ ಸೋಂಕು ತಗುಲಿದೆ.  ಇನ್ನು ಈ ಮಹಿಳೆಯ ಸೋಂಕಿನ ಹಿನ್ನೆಲೆ ಪತ್ತೆಯಾಗಿರಲಿಲ್ಲ.

ಅಷ್ಟರಲ್ಲೆ ಅವರ ಸಂಪರ್ಕದಿಂದ ಮತ್ತೂಬ್ಬರಿಗೆ ಸೋಂಕು ಹರಡಿದ್ದು, ಲಕ್ಕಸಂದ್ರದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ. ಮತ್ತೂಂದು ಪ್ರಕರಣದಲ್ಲಿ ಜೆ.ಪಿ. ನಗರದಲ್ಲಿ  ತಮಿಳುನಾಡಿನಲ್ಲಿ ಬೈಪಾಸ್‌ ಸರ್ಜರಿಗೊಳಗಾಗಿ ಬಂದು ಸೋಂಕಿತನಾಗಿದ್ದ ( ರೋಗಿ -1,930) ವ್ಯಕ್ತಿಯಿಂದ ಆತನ 27 ವರ್ಷದ ಮಗನಿಗೂ ಸೋಂಕು ತಗುಲಿದೆ. ಭಾನುವಾರವಷ್ಟೇ ಪತ್ನಿ ಹಾಗೂ ಮಗಳಿಗೂ ಸೋಂಕು ತಗುಲಿತ್ತು. ಈ ಮೂಲಕ ಕುಟುಂಬದ ನಾಲ್ಕು ಮಂದಿ ಸೋಂಕಿತರಾಗಿದ್ದಾರೆ.

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.