ಸುಧೀರ್ ಅಂಗೂರ್ಗೆ ಜಾಮೀನು ನಿರಾಕರಣೆ
Team Udayavani, Apr 29, 2020, 6:53 AM IST
ಸಾಂದರ್ಭಿಕ ಚಿತ್ರ
ಬೆಂಗಳೂರು: ಅಲಯನ್ಸ್ ವಿವಿ ನಿವೃತ್ತ ಕುಲಪತಿ ಅಯ್ಯಪ್ಪ ದೊರೆ ಕೊಲೆ ಪ್ರಕರಣದ ಪ್ರಮುಖ ಆರೋಪಿ ಸುಧೀರ್ ಅಂಗೂರ್ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಸಿಟಿ ಸಿವಿಲ್
ನ್ಯಾಯಾಲಯ ವಜಾಗೊಳಿಸಿದೆ. ಪ್ರಕರಣದ ಪ್ರಮುಖ ಆರೋಪಿಯಾಗಿರುವ ಸುಧೀರ್ ಅಂಗೂರ್ ನ್ಯಾಯಾಂಗ ಬಂಧನಲ್ಲಿದ್ದು ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. ಈ ಜಾಮೀನು ಅರ್ಜಿ ವಿಚಾರಣೆ ನಡೆಸಿರುವ ನ್ಯಾಯಾಲಯ, ಪ್ರಭಾವಿಯಾಗಿರುವ ಆರೋಪಿಯು ವಿಚಾರಣೆ ಹಂತದಲ್ಲಿ ಸಾಕ್ಷ್ಯ ನಾಶಕ್ಕೆ ಯತ್ನಿಸಬಹುದು ಎಂಬ ಪ್ರಾಸಿಕ್ಯೂಷನ್ ಮನವಿಯನ್ನು ಪುರಸ್ಕರಿಸಿ ಜಾಮೀನು ನೀಡಲು ನಿರಾಕರಿಸಿ ಅರ್ಜಿ ವಜಾಗೊಳಿಸಿದೆ.
ಅಲಯನ್ಸ್ ವಿವಿ ಆಡಳಿತ ಮೇಲೆ ಹಿಡಿತ ಸಾಧಿಸಲು ಹಾಗೂ ವಿವಿ ಆಸ್ತಿ ಸಂಬಂಧಿಸಿದಂತೆ ಸಹೋದರ ಮಧುಕರ್ ಅಂಗೂರ್ ಸಲ್ಲಿಸಿದ್ದ ಅರ್ಜಿಗಳಿಗೆ ಸಂಬಂಧಿಸಿದಂತೆ ನ್ಯಾಯಾಲಯ, ಪ್ರಾಧಿಕಾರಗಳಲ್ಲಿ ಹಿನ್ನಡೆಯಾಗುತ್ತಿದ್ದರಿಂದ ಸುಧೀರ್ ಅಂಗೂರ್ ಕುಪಿತಗೊಂಡಿದ್ದರು. ವ್ಯಾಜ್ಯಗಳಲ್ಲಿ ಹೋರಾಡಲು ಮಧುಕರ್ ಅಂಗೂರ್ಗೆ ಅಯ್ಯಪ್ಪ ದೊರೆ ನೆರವಾಗುತ್ತಿದ್ದರು. ಇನ್ನು ತನ್ನಿಂದ ಪಡೆದ ಹಣವನ್ನು ಮರಳಿಸುವಂತೆ ಸುಧೀರ್ ಅಂಗೂರ್ಗೆ ಅಯ್ಯಪ್ಪ ದೊರೆ ಒತ್ತಡ ಹಾಕುತ್ತಿದ್ದರು. ಇದರಿಂದ ಕುಪಿತಗೊಂಡ ಸುಧೀರ್ ಅಂಗೂರ್, ಸುಪಾರಿ ಕೊಟ್ಟು ಅಯ್ಯಪ್ಪ ದೊರೆ
ಅವರನ್ನು ಕೊಲೆ ಮಾಡಿಸಿದ್ದಾರೆ ಎನ್ನುವುದಕ್ಕೆ ಸಾಕಷ್ಟು ಪುರಾವೆಗಳನ್ನು ಪ್ರಾಸಿಕ್ಯೂಷನ್ ಒದಗಿಸಿದೆ ಎಂದು ನ್ಯಾಯಾಲಯ ವಿಚಾರಣೆ ವೇಳೆ ಅಭಿಪ್ರಾಯಪಟ್ಟಿದೆ. 2019ರ
ಅಕ್ಟೋಬರ್ ನಲ್ಲಿ ಆರ್.ಟಿ ನಗರ ಮೈದಾನದಲ್ಲಿ ಅಯ್ಯಪ್ಪ ದೊರೆ ಕೊಲೆ ನಡೆದಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್ ಸುಲಿಗೆ; ಮೂವರ ಬಂಧನ
Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ
Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್ ಬಾತ್ಮೀದಾರ ಸೆರೆ
Arrested: ಸುಲಿಗೆ ಸೇರಿ 42 ಕೇಸ್ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ
Arrested: 17 ಕೇಸ್ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್ ಬಂಧನ
MUST WATCH
ಹೊಸ ಸೇರ್ಪಡೆ
Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ
ಭಾರತದಲ್ಲಿ ರಿಲೀಸ್ಗೂ ಮುನ್ನ ʼಮಂಕಿ ಮ್ಯಾನ್ʼ ಹೆಚ್ ಡಿ ಕಾಪಿ ಲೀಕ್: ವಿಳಂಬ ಯಾಕೆ?
Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ
West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ
Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ