ಬಿಡಿಎ ಕಾಯ್ದೆ ತಿದ್ದುಪಡಿಗಾಗಿ ಸುಗ್ರೀವಾಜ್ಞೆ


Team Udayavani, May 15, 2020, 5:37 AM IST

bda-kayde

ಬೆಂಗಳೂರು: ಬಿಡಿಎ ವ್ಯಾಪ್ತಿಯಲ್ಲಿ ಅಕ್ರಮವಾಗಿ ನಿರ್ಮಾಣಗೊಂಡಿರುವ ಮನೆ ನಿರ್ಮಾಣ ಸಕ್ರಮಗೊಳಿಸುವ ಸಲುವಾಗಿ ಬಿಡಿಎ ಕಾಯ್ದೆ ತಿದ್ದುಪಡಿ ಹಾಗೂ ಬಿಲ್ಡರ್‌ಗಳ ನೆರವಿಗಾಗಿ ಕರ್ನಾಟಕ ನಗರ ಮತ್ತು ಗ್ರಾಮಾಂತರ ಯೋಜನೆ  ಕಾಯ್ದೆಗೆ ತಿದ್ದುಪಡಿ ತಂದು ಸುಗ್ರೀವಾಜ್ಞೆ ಮೂಲಕ ಜಾರಿಗೊಳಿಸಲು ರಾಜ್ಯ ಸಚಿವ ಸಂಪುಟ ಒಪ್ಪಿಗೆ ನೀಡಿದೆ. ಆರ್ಥಿಕ ಸಂಕಷ್ಟ ಹಿನ್ನೆಲೆಯಲ್ಲಿ ಬಿಡಿಎ ವ್ಯಾಪ್ತಿಯ ಅಕ್ರಮ ಸಕ್ರಮಕ್ಕೆ ಸರ್ಕಾರ ತೀರ್ಮಾನಿಸಿದ್ದು, ಅದಕ್ಕಾಗಿ ಕಾಯ್ದೆಗೆ  ತಿದ್ದು ಪಡಿ ಅವಶ್ಯಕವಾಗಿತ್ತು.

ಅದೇ ರೀತಿ ಬಿಲ್ಡರ್‌ಗಳು ಪೂರ್ಣ ಪ್ರಮಾಣದಲ್ಲಿ ಮುಗಿಸದ ಲೇಔಟ್‌  ಗಳಲ್ಲಿನ ನಿವೇಶನ ಮಾರಾಟ ಮಾಡಲು ಸಾಧ್ಯವಾಗದೇ ಹಣಕಾಸಿನ ಮುಗ್ಗಟ್ಟು ಎದುರಿಸುತ್ತಿರುವುದಾಗಿ ಮನವಿ ಸಲ್ಲಿಸಿ ದ್ದರಿಂದ  ಕರ್ನಾಟಕ ನಗರ ಮತ್ತು ಗ್ರಾಮಾಂತರ ಯೋಜನೆ ಕಾಯ್ದೆಗೆ ತಿದ್ದುಪಡಿ ತರಲಾಗಿದೆ. ಬಿಡಿಎ ಭೂ ಸ್ವಾಧೀನ ಪಡಿಸಿಕೊಂಡ ಪ್ರದೇಶದಲ್ಲಿ ಅಕ್ರಮವಾಗಿ ನಿರ್ಮಿಸಿಕೊಂಡಿರುವ (12ವರ್ಷಗಳ ಹಿಂದೆ ನಿರ್ಮಿಸಿರುವ ಷರತ್ತು) ವಾಸದ ಮನೆ  ಸಕ್ರಮಗೊಳಿಸಲು ಅವಕಾಶ ಸಿಗಲಿದೆ.  0x30, 30×40, 40×60 ಹಾಗೂ 50×80 ಅಳತೆಯ ನಿವೇಶಗಳಲ್ಲಿ ಕಟ್ಟಿರುವ  ಮನೆಗಳಿಗಷ್ಟೇ ಇದು ಅನ್ವಯ.

ಖಾಲಿ ನಿವೇಶನಕ್ಕೆ ಅನ್ವಯವಾಗದು ಎಂದು ಕಾನೂನು ಮತ್ತು ಸಂಸದೀಯ  ವ್ಯವಹಾರಗಳ ಸಚಿವ ಜೆ.ಸಿ.ಮಾಧುಸ್ವಾಮಿ ತಿಳಿಸಿದ್ದಾರೆ, 20×30 ಅಳತೆಯ ನಿವೇಶನಕ್ಕೆ ಮಾರ್ಗಸೂಚಿ ದರದ ಶೇ.10, 30×40 ನಿವೇಶನಕ್ಕೆ ಮಾರ್ಗಸೂಚಿ ದರದ ಶೇ.20, 40×60 ಹಾಗೂ 50×80 ಅಳತೆಯ ನಿವೇಶನಕ್ಕೆ ಮಾರ್ಗಸೂಚಿ  ದರದ ಶೇ.40 ರಷ್ಟು ಶುಲ್ಕ ಪಡೆದು ಸಕ್ರಮಗೊಳಿಸಲಾಗುವುದು. ನಗರದಲ್ಲಿ ಒಟ್ಟು 75 ಸಾವಿರ ನಿವೇಶನ  ಗಳಲ್ಲಿ ಅಕ್ರಮ ಮನೆ ನಿರ್ಮಾಣವಾಗಿದೆ ಎಂಬ ಅಂದಾಜು ಇದ್ದು ಸಕ್ರಮಗೊಳಿಸುವು  ದರಿಂದ ಸುಮಾರು 25 ಸಾವಿರ ಕೋಟಿ. ವರೆಗೆ ಸಂಗ್ರಹದ ಗುರಿ ಹೊಂದಲಾಗಿದೆ. ಇದಕ್ಕೆ ಸಂಬಂಧಿಸಿದಂತೆ ನ್ಯಾಯಾಲಯಗಳಲ್ಲಿ ಇರುವ ಪ್ರಕರಣವನ್ನೂ ಇತ್ಯರ್ಥಗೊಳಿಸ  ಬೇಕಾಗಿದೆ ಎಂದು ಹೇಳಿದರು.

ಲೇಔಟ್‌ಗಳಲ್ಲಿ ಅನುಮತಿ: ಖಾಸಗಿ ಲೇ ಔಟ್‌ನಲ್ಲಿ ಶೇ. 40ರಷ್ಟು ಭಾಗದಲ್ಲಿ ಮನೆ ಅಥವಾ ನಿವೇಶನ ಸಕಲ ಮೂಲಸೌಕರ್ಯ  ದೊಂದಿಗೆ ಪೂರ್ಣಗೊಳಿಸಿದ್ದರೆ ಅಲ್ಲಿ ಮಾತ್ರ ಮಾರಾಟಕ್ಕೆ ಆನುಮತಿ, ಎರಡನೇ ಹಂತದಲ್ಲಿ ಶೇ.30  ಹಾಗೂ ಮೂರನೇ ಹಂತದಲ್ಲಿ ಉಳಿದ ಕಡೆ ಮಾರಾಟಕ್ಕೆ ಅನುಮತಿ ನೀಡಲು ಕಾಯ್ದೆಗೆ ತಿದ್ದುಪಡಿ ತರಲಾಗಿದೆ. ಆದರೆ, ಒಟ್ಟಾರೆ ಲೇ ಔಟ್‌ನ ವ್ಯಾಪ್ತಿಗೆ ಇದು ಅನ್ವಯ ಆಗದು. ಕೇವಲ ಅಭಿವೃದಿಟಛಿ ಸೌಕರ್ಯಗಳೊಂದಿಗೆ  ಪೂರ್ಣಗೊಳಿಸಿದ ಭಾಗಕ್ಕೆ ಮಾತ್ರ ಎಂದು ಹೇಳಿದರು.

ಬಿಡಿಎ ಕಾಯ್ದೆ 38 ಸಿ ಈಗಾಗಲೇ ಇದ್ದು, ತಿದ್ದುಪಡಿಯಲ್ಲಿ 38-ಡಿ ಮಾಡಲಾಗಿದೆ. ಇದರಿಂದಾಗಿ ಅಕ್ರಮ ಕಟ್ಟಡಗಳ ಸಕ್ರಮಕ್ಕೆ ಅವಕಾಶ ಕಲ್ಪಿಸಿದಂತಾಗಿದೆ.
-ಜೆ.ಸಿ. ಮಾದುಸ್ವಾಮಿ, ಕಾನೂನು ಮತ್ತು ಸಂಸದೀಯ ವ್ಯವಹಾರ ಸಚಿವ

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

11-srrest

Bengaluru: ಅತಿಕ್ರಮಿಸಿ ಏರ್‌ಪೋರ್ಟ್‌ನಲ್ಲಿ ವಿಡಿಯೋ: ಯುಟ್ಯೂಬರ್‌ ಬಂಧನ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.