ಪತಿಯನ್ನೇ ಅಪಹರಿಸಲು ಸುಪಾರಿ


Team Udayavani, Jun 13, 2020, 5:22 AM IST

uttara vibhaga

ಬೆಂಗಳೂರು: ಎರಡನೇ ಮದುವೆಯಾದ ಎಂಬ ಕಾರಣಕ್ಕೆ ತನ್ನ ಪತಿಯನ್ನೇ ಅಪಹರಿಸಲು ಸುಪಾರಿ ಕೊಟ್ಟಿದ್ದ ಮೊದಲ ಪತ್ನಿ ಪ್ರಕರಣದ ಭೇದಿಸಿರುವ ಉತ್ತರ ವಿಭಾಗದ ಪೊಲೀಸರು ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ. ಹೆಸರುಘಟ್ಟದ ಅಭಿಷೇಕ್‌ (26), ನಾಗಸಂದ್ರದ ಭರತ್‌ (25), ಜೆ.ಪಿ.ನಗರದ ಪ್ರಕಾಶ್‌ (22) ಹಾಗೂ ಬ್ಯಾಡರಹಳ್ಳಿಯ ಚೆಲುವಮೂರ್ತಿ (22) ಬಂಧಿತರು. ಆರೋಪಿಗಳಿಂದ ಕೃತ್ಯಕ್ಕೆ ಬಳಸಿದ್ದ ಕಾರು ವಶಕ್ಕೆ ಪಡೆಯಲಾಗಿದ್ದು, ಇತರೆ  ನಾಲ್ವರು ಆರೋಪಿಗಳಿಗಾಗಿ ಹುಡುಕಾಟ ನಡೆಯುತ್ತಿದೆ.

ಜೂ.7ರಂದು ಆರೋಪಿಗಳು ಶಾಹೀದ್‌ ಶೇಖ್‌ ಎಂಬುವರನ್ನು ಅಪಹರಿಸಿದ್ದರು ಎಂದು ಬಾಗಲಗುಂಟೆ ಪೊಲೀಸರು ಹೇಳಿದರು. ಶಾಹೀದ್‌ ಶೇಖ್‌ ಕಟ್ಟಡ ನಿರ್ಮಾಣದ  ಗುತ್ತಿಗೆದಾರರಾಗಿದ್ದು, ಪತ್ನಿ ರೋಮಾ ಶೇಖ್‌ ಜತೆ ಮಾರತ್ತಹಳ್ಳಿಯಲ್ಲಿ ವಾಸವಾಗಿದ್ದರು. ಮದು ವೆಗೂ ಮೊದಲೇ ಶಾಹೀದ್‌ ಗೆ ರತ್ನಾ ಕಾತುಮ್‌ ಎಂಬಾಕೆ ಜತೆ ಸ್ನೇಹವಿತ್ತು. ಮೊದಲನೇ ಪತ್ನಿ ರೋಮಾ ಕ್ಷುಲ್ಲಕ ವಿಚಾರಕ್ಕೆ ಪತಿ ಶಾಹಿದ್‌  ಜತೆ ಗಲಾಟೆ ಮಾಡುತ್ತಿದ್ದಳು. ಪತಿಯ ವರ್ತನೆಯಿಂದ ಬೇಸತ್ತಿದ್ದ ಶಾಹೀದ್‌ ರತ್ನಾ ಕಾತುಮ್‌ ಜತೆ ಎರಡನೇ ಮದುವೆಯಾಗಿದ್ದ.

ಮೊದಲನೇ ಪತ್ನಿಗೆ ಸೇರಿದ ಚಿನ್ನಾಭರಣ ಹಾಗೂ ಬೆಲೆಬಾಳುವ ವಸ್ತುಗಳನ್ನು ಕೊಂಡೊಯ್ದು ಎರಡನೇ   ಪತ್ನಿಗೆ ಕೊಟ್ಟಿದ್ದ. ಅದೇ ವಿಚಾರಕ್ಕೆ ರೋಮಾ ತನ್ನ ಪತ್ನಿ ಶಾಹಿದ್‌ ಮೇಲೆ ಆಕ್ರೋಶಗೊಂಡಿದ್ದಳು. ಹೇಗಾದರೂ ಮಾಡಿ ಪತಿಯನ್ನು ಆಕೆಯಿಂದ ದೂರ ಮಾಡಬೇಕೆಂದು ನಿರ್ಧರಿಸಿದ್ದ ರೋಮಾ ಶೇಖ್‌ ಅಪಹರಣ ಮಾಡಿಸಲು ಸಲ್ಮಾನ್‌ ಎಂಬಾತನಿಗೆ ಸುಪಾರಿ ನೀಡಿದ್ದಳು.

ಪತಿಯನ್ನು ಅಪಹರಿಸಿ ಪ್ರಕರಣವನ್ನು ರತ್ನಾಳ ತಲೆಗೆ ಕಟ್ಟುವ ಉದ್ದೇಶ ಹೊಂದಿದ್ದರು. ಶಾಹಿದ್‌ ತನ್ನ ಸ್ನೇಹಿತನ ಜತೆ ಜೂ. 7 ರಂದು ಎಂಇಐ ಬಡಾವಣೆಯಲ್ಲಿ ತರಕಾರಿ ತರಲು ಹೋಗಿದ್ದರು. ಈ  ವೇಳೆ ಕಾರಿನಲ್ಲಿ ಬಂದಿದ್ದ ಆರೋಪಿಗಳು, ಶಾಹಿದ್‌ನನ್ನು ಅಪಹರಿಸಿ ಮಾರಕಾಸOಉ ಗಳಿಂದ ಹಲ್ಲೆ ನಡೆಸಿದ್ದರು. ರೋಮಾ ಸೂಚನೆಯಂತೆ 2ನೇ ಪತ್ನಿ ರತ್ನಾಳಿಗೆ ಕರೆ ಮಾಡಿ, 2 ಲಕ್ಷ ಹಣಕ್ಕೆ ಬೇಡಿಕೆ ಇಟ್ಟಿದ್ದರು.

ರತ್ನಾ ಕೊಟ್ಟ ದೂರಿನ  ಮೇರೆಗೆ ಕಾರ್ಯಾ ಚರಣೆಗಿಳಿದ ಪೊಲೀಸರು ಆರೋಪಿಗಳ ಮೊಬೈಲ್‌ ಟವರ್‌ಆಧಾರದ ಮೇಲೆ ಪತ್ತೆ ಹಚ್ಚಿದ್ದಾರೆ. ತನಿಖೆ ವೇಳೆ ಆರೋಪಿಗಳು ಹಾಸನದ ಸಾರಾಪುರದಲ್ಲಿರುವ ಸುಳಿವು ಸಿಕ್ಕಿತ್ತು. ಮಾಹಿತಿ ಆಧರಿಸಿ ಸಾರಾಪುರ ತೋಟದ  ಮನೆ  ಯೊಂದರಲ್ಲಿ ಅಕ್ರಮ ಬಂಧನದಲಿಟ್ಟಿದ್ದ ಶಾಹೀದ್ನನ್ನು ರಕ್ಷಿಸಿ, ಆರೋಪಿಗಳನ್ನು ಬಂಧಿಸಲಾಗಿದೆ. ಸುಪಾರಿ ಕೊಟ್ಟಿದ್ದ ರೋಮಾ ಬಂಧನಕ್ಕೂ ಕ್ರಮಕೈಗೊಳ್ಳಲಾಗಿದೆ ಎಂದು ಪೊಲೀಸರು ಹೇಳಿದರು.

ಟಾಪ್ ನ್ಯೂಸ್

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

11-

Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-bng

Bengaluru: ಸಾಲ ವಸೂಲಿ ಹೆಸರಲ್ಲಿ ಆಟೋ ವಶ, ಧರ್ಮ ನಿಂದನೆ: ಬಂಧನ

6-bng

Bengaluru: ಪೇಂಟರ್‌ ಕೊಂದು ಪೊಲೀಸ್‌ ಠಾಣೆಗೆ ಬಂದು ಸಿಕ್ಕಿಬಿದ್ದ ಸ್ನೇಹಿತರು

5-bng

Bengaluru: ಪ್ರೀತಿಸಿ ಮದುವೆ ಆಗುವುದಾಗಿ ಅಂಗವಿಕಲ ಯುವತಿಗೆ ವಂಚನೆ

4-bng

Bengaluru: 290 ರೌಡಿಶೀಟರ್‌ಮನೆಗಳ ಮೇಲೆ ದಾಳಿ 

3-crime

Bengaluru: ಸ್ನೇಹಿತರಿಂದಲೇ ಸುಪಾರಿ ಕಿಲ್ಲರ್‌ನ ಹತ್ಯೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

13-good-friday

ಶುಭ ಶುಕ್ರವಾರ: ಸಾಮಾಜಿಕ ನ್ಯಾಯದ ಪ್ರತೀಕ ಯೇಸು ಕ್ರಿಸ್ತ

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

12-kejriwal

Delhi CM Arvind Kejriwalಗೆ ಮತ್ತೆ 4 ದಿನ ಇ.ಡಿ. ಕಸ್ಟಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.