ನಿಯಮ ಪಾಲನೆಗೆ ಕಣ್ಗಾವಲು


Team Udayavani, Jun 19, 2020, 5:16 AM IST

nima-palane

ಬೆಂಗಳೂರು: ನಗರಕ್ಕೆ ಹೊರರಾಜ್ಯ ಹಾಗೂ ವಿದೇಶದಿಂದ ಬರುವ ಪ್ರಯಾಣಿಕರ ಕಣ್ಗಾವಲು ತಂಡಕ್ಕೆ ಮೇಯರ್‌ ಎಂ. ಗೌತಮ್‌ಕುಮಾರ್‌ ಅವರು ಬಿಬಿಎಂಪಿಯ ಕೇಂದ್ರ ಕಚೇರಿಯ ಆವರಣದಲ್ಲಿ ಗುರುವಾರ ಚಾಲನೆ ನೀಡಿದರು. ಈ  ಕುರಿತು ಸುದ್ದಿಗಾರರ ಜತೆ ಮಾತನಾಡಿ ಬಿಬಿಎಂಪಿ ಆಯುಕ್ತ ಬಿ.ಎಚ್‌.ಅನಿಲ್‌ಕುಮಾರ್‌, ಹೊರ ರಾಜ್ಯ ಹಾಗೂ ವಿದೇಶದಿಂದ ಬರುವವರು ಕ್ವಾರಂಟೈನ್‌ ಅವಧಿಯಲ್ಲಿ ಹೊರಗೆ ಓಡಾಡದಂತೆ ಹಾಗೂ ಕ್ವಾರಂಟೈನ್‌ ನಿಯಮ ಪಾಲನೆ ಮಾಡುತ್ತಿದ್ದಾರೆಯೇ, ಇಲ್ಲವೇ ಎನ್ನುವ ಬಗ್ಗೆ  ಪರಿಶೀಲಿಸಲು ಪ್ರತಿ ವಿಧಾನಸಭಾ ಕ್ಷೇತ್ರವಾರು ಕಣ್ಗಾವಲು ತಂಡ ರಚನೆ ಮಾಡಲಾಗಿದೆ ಎಂದರು.

ಈ ತಂಡವು ಹೋಂಕ್ವಾರಂಟೈನ್‌ ನಲ್ಲಿರುವವರು ನಿಯಮ ಉಲ್ಲಂಘನೆ ಮಾಡಿದರೆ ಮೊದಲ ಬಾರಿ ಎಚ್ಚರಿಕೆ ನೀಡುತ್ತಾರೆ. ಎರಡನೇ  ಬಾರಿಯೂ ನಿಯಮ ಉಲ್ಲಂಘನೆ ಮಾಡಿದರೆ ಸಾಂಸ್ಥಿಕ ಕ್ವಾರಂಟೈನ್‌ ಮಾಡಲಿದ್ದಾರೆ. ಅಲ್ಲದೆ, ಈ ರೀತಿ ನಿಯಮ ಉಲ್ಲಂಘನೆ ಮಾಡುವವರ ಮೇಲೆ ಎಫ್ಐಆರ್‌ ದಾಖಲಿಸಲಾಗುವುದು. ಮಹಾರಾಷ್ಟ್ರ, ತಮಿಳುನಾಡು ಹಾಗೂ ದೆಹಲಿಯಿಂದ ಬರುವವರನ್ನು ಸಾಂಸ್ಥಿಕ ಗೃಹ ಬಂಧನ ಮಾಡಲಾಗುತ್ತಿದೆ.

ಉಳಿದ ರಾಜ್ಯಗಳಿಂದ ಹಾಗೂ ವಿದೇಶದಿಂದ ಬರುವವರ ಮಾಹಿತಿ ಕಲೆಹಾಕಿ, ಅವರ ಕೈಗೆ ಸ್ಟಾಂಪಿಂಗ್‌ ಹಾಕಿ 14 ದಿನಗಳ ಹೋಂ ಕ್ವಾರಂಟೈನ್‌ ಮಾಡಲಿದ್ದೇವೆ. ಇವರು ನಿಯಮ ಉಲ್ಲಂಘನೆ ಮಾಡಿದರೆ ಕಣ್ಗಾವಲು ತಂಡಕ್ಕೆ ಸಂದೇಶ ರವಾನೆಯಾಗಲಿದೆ ಎಂದು ವಿವರಿಸಿದರು. ಈ ವೇಳೆ ಉಪಮೇಯರ್‌ ರಾಮಮೋಹನ್‌ ರಾಜು, ಆರೋಗ್ಯ ಸ್ಥಾಯಿ  ಸಮಿತಿ ಅಧ್ಯಕ್ಷ ಮಂಜುನಾಥ್‌ ರಾಜು.ಜಿ, ಬಿಬಿಎಂಪಿ ವಿಶೇಷ ಆಯುಕ್ತರಾದ ರಂದೀಪ್‌ ಹಾಗೂ ಮಂಜುನಾಥ್‌, ಅಪರ ಪೊಲೀಸ್‌ ಆಯುಕ್ತ ಮರುಗನ್‌ ಇತರರಿದ್ದರು.

17 ಕಾರ್ಯಪಡೆ: ಬೆಂಗಳೂರು ಹಾಗೂ ಬೆಂಗಳೂರು ಗ್ರಾಮಾಂತರ ಪ್ರದೇಶದಲ್ಲಿ ಸೋಂಕು ತಡೆ ಹಾಗೂ ಸಾಂಕ್ರಾಮಿಕ ರೋಗ ನಿಯಂತ್ರಣಕ್ಕೆ ಸರ್ಕಾರವು ವಿವಿಧ ಇಲಾಖೆಯ ಹಿರಿಯ ಹಾಗೂ ಕಿರಿಯ ಅಧಿಕಾರಗಳನ್ನು ಒಳಗೊಂಡ 17  ಕಾರ್ಯಪಡೆಗಳನ್ನು ರಚನೆ ಮಾಡಲಾಗಿದೆ. ಈ ತಂಡಗಳಲ್ಲಿ ಗೃಹ ಬಂಧನ ವೀಕ್ಷಣೆ ಜವಾಬ್ದಾರಿಯನ್ನು ಪಶು  ಪಾಲನೆ ಮತ್ತು ಮೀನುಗಾರಿಕೆ ಇಲಾಖೆಯ ಕಾರ್ಯದರ್ಶಿ ಮಣಿವಣ್ಣನ್‌ ಅವರಿಗೆ ನೀಡಲಾಗಿದ್ದು, ಬಿಬಿಎಂಪಿ ಆಯುಕ್ತರನ್ನೇ  ಮುಖ್ಯಸ್ಥರನ್ನಾಗಿ ನೇಮಿಸಲಾಗಿದೆ.

ಟಾಪ್ ನ್ಯೂಸ್

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

11-srrest

Bengaluru: ಅತಿಕ್ರಮಿಸಿ ಏರ್‌ಪೋರ್ಟ್‌ನಲ್ಲಿ ವಿಡಿಯೋ: ಯುಟ್ಯೂಬರ್‌ ಬಂಧನ

10-bengaluru’

Bengaluru: ಮಕ್ಕಳ ಅಶ್ಲೀಲ ಫೋಟೋ, ವಿಡಿಯೋ ವೀಕ್ಷಿಸುತ್ತಿದ್ದ ಸೆಕ್ಯೂರಿಟಿ ಗಾರ್ಡ್‌ ಸೆರೆ

9-bng

Jai Shri Ram ಎಂದು ಕೂಗಿದ್ದಕ್ಕೆ ಅನ್ಯಕೋಮಿನ ಯುವಕರಿಂದ ಹಲ್ಲೆ

ಗ್ಯಾರಂಟಿ ಯೋಜನೆಗಳ ಟೀಕೆಗೆ ತಾಯಂದಿರೇ ಉತ್ತರ ನೀಡುತ್ತಾರೆ: ಡಿಕೆ ಶಿವಕುಮಾರ್

ಗ್ಯಾರಂಟಿ ಯೋಜನೆಗಳ ಟೀಕೆಗೆ ತಾಯಂದಿರೇ ಉತ್ತರ ನೀಡುತ್ತಾರೆ: ಡಿಕೆ ಶಿವಕುಮಾರ್

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

30

CET Exam: ಮೊದಲ ದಿನ ಸುಸೂತ್ರವಾಗಿ ನಡೆದ ಸಿಇಟಿ

1-wqeqwe

Maharashtra; ರತ್ನಾಗಿರಿ- ಸಿಂಧುದುರ್ಗದಲ್ಲಿ ರಾಣೆ vs ಠಾಕ್ರೆ ಕಾದಾಟ

1-HM

Mathura ನನ್ನನ್ನು ಗೋಪಿಕೆಯೆಂದು ಭಾವಿಸುವೆ: ಬಿಜೆಪಿ ಅಭ್ಯರ್ಥಿ ಹೇಮಾ

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.