ಶಂಕಿತರ “ಬಂಧನ’ವೇ ಹೋಟೆಲ್‌ಗ‌ಳಿಗೆ ವರ!


Team Udayavani, May 11, 2020, 4:42 PM IST

ಶಂಕಿತರ “ಬಂಧನ’ವೇ ಹೋಟೆಲ್‌ಗ‌ಳಿಗೆ ವರ!

ಸಾಂದರ್ಭಿಕ ಚಿತ್ರ

ಬೆಂಗಳೂರು: ನಗರಕ್ಕೆ ಬಂದಿಳಿಯಲಿರುವ ಅನಿವಾಸಿ ಕನ್ನಡಿಗರ ಪಾಲಿಗೆ ಚಲನ-ವಲನ ನಿರ್ಬಂಧಿಸುವ “ಕ್ವಾರಂಟೈನ್‌’ ಶಿಕ್ಷೆಯಾದರೆ, ಅವರನ್ನು ಸ್ವಾಗತಿಸಲು ಸಿದ್ಧಗೊಂಡ ಸ್ಟಾರ್‌ ಹೋಟೆಲ್‌ ಗಳಿಗೆ ಅದೇ ಕ್ವಾರಂಟೈನ್‌ ವರವಾಗಿದೆ!

ಸದ್ಯ ನಗರದಲ್ಲಿ ಕೋವಿಡ್ ಸೋಂಕಿತರ ಪ್ರಾಥಮಿಕ, ದ್ವಿತೀಯ ಸಂಪರ್ಕಿತರನ್ನು ನಗರದ ಹೋಟೆಲ್‌ಗ‌ಳಲ್ಲಿ ಕ್ವಾರಂಟೈನ್‌ ಮಾಡಲಾಗುತ್ತಿದ್ದು, ಸುದೀರ್ಘ‌ ಲಾಕ್‌ಡೌನ್‌ನಿಂದ ತತ್ತರಿಸಿದ್ದ ಹೋಟೆಲ್‌ಗ‌ಳಿಗೆ ತಕ್ಕಮಟ್ಟಿಗೆ ಆದಾಯ ಹರಿದುಬರುತ್ತಿದೆ. ಸಾಮಾನ್ಯವಾಗಿ ತಾರಾ ಹೋಟೆಲ್‌ಗ‌ಳಲ್ಲಿ ದಿನಕ್ಕೆ 3-4 ಸಾವಿರ ರೂ. ಬಾಡಿಗೆ ಇರುತ್ತದೆ. ಆದರೆ, ಒಂದೂವರೆ ತಿಂಗಳಿಂದ ಗ್ರಾಹಕರಿಲ್ಲದೆ ಐಷಾರಾಮಿ ಹೋಟೆಲ್‌ಗ‌ಳು ಕಂಗಾಲಾಗಿದ್ದವು. ಈಗ ನಿತ್ಯ 1,200 ರೂ. ದರದಲ್ಲಿ “ಕ್ವಾರಂಟೈನ್‌ ಅತಿಥಿ’ಗಳು ಆಗಮಿಸುತ್ತಿದ್ದಾರೆ. ಅಂದಾಜು 7 ಸಾವಿರಕ್ಕೂ ಹೆಚ್ಚು ಜನ ಬೆಂಗಳೂರು ಹಾಗೂ ಬೆಂಗಳೂರು ಹೊರವಲಯದ ಫೈವ್‌ಸ್ಟಾರ್‌, ತ್ರಿಸ್ಟಾರ್‌ ಸೇರಿದಂತೆ ಅವರ ಆರ್ಥಿಕ ಅನುಕೂಲಕ್ಕೆ ಅನುಗುಣವಾಗಿ ಹೋಟೆಲ್‌ಗ‌ಳನ್ನು ಆಯ್ಕೆ
ಮಾಡಿಕೊಳ್ಳಲು ಸರ್ಕಾರ ಅನುಮತಿ ನೀಡಿದೆ. ಇದರಿಂದ ಕೆಲವು (ವಸತಿ ವ್ಯವಸ್ಥೆ ಇರುವ) ಹೋಟೆಲ್‌, ಲಾಡ್ಜ್ಗಳ ಮಾಲಿಕರಿಗೆ ಮರು ಭೂಮಿಯಲ್ಲಿ ಒಯಾಸಿಸ್‌ ಕಂಡಂತಾಗಿದೆ.

ಸವಾಲೂ ಕೂಡ: ಈ ರೀತಿ ಹೋಟೆಲ್‌ಗ‌ಳಲ್ಲಿ ಕೋವಿಡ್ ಶಂಕಿತರು ಹಾಗೂ ಕೋವಿಡ್ ಸೋಂಕಿನ ಸಂಪರ್ಕಿತರನ್ನು ಕ್ವಾರಂಟೈನ್‌ ಮಾಡುವುದು ಸವಾಲಿನ ಕೆಲಸವೂ ಹೌದು.
ರೂಮ್‌ಗಳಲ್ಲಿ ಬಳಸಿದ ಬೆಡ್‌ಶೀಟ್‌, ಊಟಕ್ಕೆ ಬಳಸಿದ ವಸ್ತು ಹಾಗೂ ರೂಮ್‌ ಸ್ವಚ್ಛತೆ ಸವಾಲಿನ ಕೆಲಸ. ಅಲ್ಲದೆ, ನಿರ್ದಿಷ್ಟ ಹೋಟೆಲ್‌ಗ‌ಳನ್ನು ಕ್ವಾರಂಟೈನ್‌ಗೆ ಬಳಸಲಾಗಿತ್ತು ಎಂದು ತಿಳಿದು ಬಂದರೆ ಮುಂದಿನ ದಿನಗಳಲ್ಲಿ ಈ ಹೋಟೆಲ್‌ಗೆ ಗ್ರಾಹಕರು ಬರುವ ಸಾಧ್ಯತೆ ತೀರಾ ಕಡಿಮೆ. ಅಲ್ಲದೆ, ಇತ್ತೀಚೆಗೆ ಶಿವಾಜಿನಗರದ ಹೋಟೆಲ್‌ವೊಂದರಲ್ಲಿ ಕ್ವಾರಂಟೈನ್‌ಗೆ ಒಪ್ಪಿಗೆ ನೀಡಿದ್ದ ಹೋಟೆಲ್‌ನಲ್ಲಿದ್ದ ಒಬ್ಬ ಸಹಾಯಕ ಸಿಬ್ಬಂದಿಗೂ ಕೋವಿಡ್ ಸೋಂಕು ತಗುಲಿದ್ದು, ಸಹಜವಾಗಿಯೇ ಆತಂಕ ಹೆಚ್ಚಾಗಿದೆ. ನಗರದ ಹೊರವಲಯಗಳಲ್ಲಿನ ಕೆಲವು ಪಿಜಿಗಳನ್ನು ಅವಶ್ಯಕತೆಗೆ ಅನುಗುಣವಾಗಿ ಪಾಲಿಕೆ ಕೋವಿಡ್ ಸೋಂಕಿತರ ಸಂಪರ್ಕದಲ್ಲಿದ್ದವರನ್ನು ಕ್ವಾರಂಟೈನ್‌ ವ್ಯವಸ್ಥೆಗೆ ಬಳಸಿಕೊಂಡಿದೆ.

ಸಣ್ಣ ಹೋಟೆಲ್‌ಗ‌ಳಿಗೆ ತೀವ್ರ ಆರ್ಥಿಕ ಸಂಕಷ್ಟ: ಲಾಕ್‌ಡೌನ್‌ನಿಂದ ಸಣ್ಣ ಹೋಟೆಲ್‌ಗ‌ಳು ತೀವ್ರ ಆರ್ಥಿಕ ಸಂಕಷ್ಟಕ್ಕೆ ಒಳಗಾಗಿವೆ. ಈ ಸಂಬಂಧ “ಉದಯವಾಣಿ’ಯೊಂದಿಗೆ ಮಾತನಾಡಿದ ರಾಜ್ಯ ಹೋಟಲ್‌ ಉದ್ಯಮಿಗಳ ಒಕ್ಕೂಟದ ಅಧ್ಯಕ್ಷ ಚಂದ್ರಶೇಖರ್‌ ಹೆಬ್ಟಾರ್‌, ನಗರದಲ್ಲಿ ಅಂದಾಜು 5 ಸಾವಿರ ಹಾಗೂ ರಾಜ್ಯದಲ್ಲಿ 30 ಸಾವಿರಕ್ಕೂ ಹೆಚ್ಚು ಹೋಟೆಲ್‌ಗ‌ಳಿವೆ. ಲಾಕ್‌ಡೌನ್‌ನಿಂದ ಈಗಾಗಲೇ ಸಂಕಷ್ಟ ಅನುಭವಿಸಿದ್ದು, ಈಗ ಕಾರ್ಮಿಕರ ಕೊರತೆ ಸೃಷ್ಟಿಯಾಗಿದೆ.

ಹೋಟೆಲ್‌ಗ‌ಳನ್ನು ಕೋವಿಡ್ ಕ್ವಾರಂಟೈನ್‌ ಕೇಂದ್ರಗಳಂತೆ ಬಳಸಿಕೊಳ್ಳಲಾಗುತ್ತಿದೆ. ಹೊರರಾಜ್ಯದಿಂದ ಬರುವವರಿಗೆ ಕ್ವಾರಂಟೈನ್‌ ಕೇಂದ್ರ ವ್ಯವಸ್ಥೆಯೂ ಇದ್ದು, ಅವರಿಗೆ
ಬೇಡವಾದರೆ ಹೋಟೆಲ್‌ಗ‌ಳನ್ನು ಬುಕ್‌ ಮಾಡಿಕೊಳ್ಳಬಹುದಾಗಿದೆ.
ಬಿ.ಎಚ್‌.ಅನಿಲ್‌ಕುಮಾರ್‌, ಬಿಬಿಎಂಪಿ ಆಯುಕ್ತ

– ಹಿತೇಶ್‌ ವೈ

ಟಾಪ್ ನ್ಯೂಸ್

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-bng

Bengaluru: ಸಾಲ ವಸೂಲಿ ಹೆಸರಲ್ಲಿ ಆಟೋ ವಶ, ಧರ್ಮ ನಿಂದನೆ: ಬಂಧನ

6-bng

Bengaluru: ಪೇಂಟರ್‌ ಕೊಂದು ಪೊಲೀಸ್‌ ಠಾಣೆಗೆ ಬಂದು ಸಿಕ್ಕಿಬಿದ್ದ ಸ್ನೇಹಿತರು

5-bng

Bengaluru: ಪ್ರೀತಿಸಿ ಮದುವೆ ಆಗುವುದಾಗಿ ಅಂಗವಿಕಲ ಯುವತಿಗೆ ವಂಚನೆ

4-bng

Bengaluru: 290 ರೌಡಿಶೀಟರ್‌ಮನೆಗಳ ಮೇಲೆ ದಾಳಿ 

3-crime

Bengaluru: ಸ್ನೇಹಿತರಿಂದಲೇ ಸುಪಾರಿ ಕಿಲ್ಲರ್‌ನ ಹತ್ಯೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್‌ ಮುಂದಿದೆ ಅಗ್ನಿ ಪರೀಕ್ಷೆ

ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್‌ ಮುಂದಿದೆ ಅಗ್ನಿ ಪರೀಕ್ಷೆ

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.