ಪ್ರಕಾಶಕರ ಸಮ್ಮೇಳನಾಧ್ಯಕ್ಷರಾಗಿ ಟಿ.ಎಸ್. ಛಾಯಾಪತಿ ಆಯ್ಕೆ: ನಂದೀಶ್ ಹಂಚೆ
Team Udayavani, Feb 17, 2022, 5:27 PM IST
ಬೆಂಗಳೂರು: ಮಾರ್ಚ್ ತಿಂಗಳಿನಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರ ಪ್ರಕಾಶಕರ ಸಮ್ಮೇಳನವನ್ನು ಮೈಸೂರಿನಲ್ಲಿ ಆಯೋಜಿಸಲು ಉದ್ದೇಶಿಸಲಾಗಿದ್ದು, ಎರಡನೇ ಬಾರಿಗೆ ಆಯೋಜಿಸಲಾಗುತ್ತಿರುವ ಈ ಪ್ರಕಾಶಕರ ಸಮ್ಮೇಳನಕ್ಕೆ ತಳುಕಿನ ವೆಂಕಣ್ಣಯ್ಯ ಗ್ರಂಥಮಾಲೆಯ ಟಿ.ಎಸ್. ಛಾಯಾಪತಿ ಅವರನ್ನು ಸಮ್ಮೇಳನಾಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಗಿದೆ ಎಂದು ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷ ಡಾ. ಎಂ.ಎನ್. ನಂದೀಶ್ ಹಂಚೆ ಹೇಳಿದ್ದಾರೆ.
ಮಾರ್ಚ್ ಎರಡನೇ ವಾರದಲ್ಲಿ ಈ ಪ್ರಕಾಶಕರ ಸಮ್ಮೇಳನವನ್ನು ಆಯೋಜಿಸಲಾಗುವುದು. ಇದೇ ಸಂದರ್ಭದಲ್ಲಿ ಮೈಸೂರಿನಲ್ಲಿಯೇ ಆರು ದಿನಗಳ ಕಾಲ ರಿಯಾಯಿತಿ ಕನ್ನಡ ಪುಸ್ತಕ ಮಾರಾಟ ಮೇಳವನ್ನು ಸಹ ಆಯೋಜಿಸಲಾಗುವುದು ಎಂದು ಅವರು ತಿಳಿಸಿದರು.
ಟಿ.ಎಸ್. ಛಾಯಾಪತಿ ಅವರ ಪರಿಚಯ
ಟಿ.ಎಸ್. ಛಾಯಾಪತಿ ಅವರು ಕನ್ನಡ ಪುಸ್ತಕ ಲೋಕ ಕಂಡ ಅಪರೂಪದ ಪ್ರಕಾಶಕ ರಲ್ಲಿ ಒಬ್ಬರು.
ಕನ್ನಡದ ಸುಪ್ರಸಿದ್ಧ ಸಾಹಿತಿ ತ.ಸು. ಶಾಮರಾಯರ ಪುತ್ರರಾದ ಛಾಯಾಪತಿ ಅವರು ಹುಟ್ಟಿದ್ದು 1944 ರಲ್ಲಿ, ಮೈಸೂರು ಇವರ ತವರೂರು, ಸಹಜವಾಗಿಯೇ ಸಾಹಿತ್ಯದಲ್ಲಿ ಆಸಕ್ತಿ ಬೆಳೆಸಿಕೊಂಡವರು.
ಇದನ್ನೂ ಓದಿ:ಜಿಲ್ಲಾ ಮಟ್ಟದ ಕಡತ ಯಜ್ಞಕ್ಕೆ ಮುಂದಾದ ಸುನೀಲ್ ಕುಮಾರ್
ತಳುಕಿನ ವೆಂಕಣ್ಣಯ್ಯ ಗ್ರಂಥಮಾಲೆ ಹೆಸರಿನಲ್ಲಿ 1950ರಲ್ಲಿ ಪ್ರಕಾಶನ ಸಂಸ್ಥೆ ಆರಂಭಿಸಿದರು. ಇದರ ಮೂಲಕ ಸಾವಿರಕ್ಕೂ ಹೆಚ್ಚು ಪುಸ್ತಕಗಳನ್ನು ಪ್ರಕಟಿಸಿರುವ ಛಾಯಾಪತಿ ಅವರು ಸ್ವತಃ ಲೇಖಕರು, 23ಕ್ಕೂ ಹೆಚ್ಚು ಕೃತಿಗಳನ್ನು ರಚಿಸಿ ಪುಸ್ತಕಲೋಕಕ್ಕೆ ತಮ್ಮದೇ ಆದ ಕೊಡುಗೆ ಕೊಟ್ಟಿದ್ದಾರೆ.
ತಮ್ಮ ಪ್ರಕಾಶನ ಸಂಸ್ಥೆಯ ಮೂಲಕ ಕನ್ನಡದ ಅನೇಕ ದಿಗ್ಗಜ ಸಾಹಿತಿಗಳ ಪುಸ್ತಕಗಳನ್ನು ಪ್ರಕಟಿಸಿರುವ ಅವರು ನಾಡಿನ ಉದ್ದಗಲಕ್ಕೂ ಎಲ್ಲ ಪ್ರಕಾರದ ಸಾಹಿತಿಗಳಿಂದ ಮುಕ್ತ ಪ್ರಶಂಸೆಗೆ ಪಾತ್ರರಾದವರು.
ಇವರ ಪ್ರಕಾಶನ ಸಂಸ್ಥೆಗೆ 1999 ರಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರದಿಂದ ಅತ್ಯುತ್ತಮ ಪ್ರಕಾಶನ ಪ್ರಶಸ್ತಿ ಲಭಿಸಿತು. ಕನ್ನಡ ಸಾಹಿತ್ಯ ಪರಿಷತ್ತಿನಿಂದಲೂ ಅತ್ಯುತ್ತಮ ಪ್ರಕಾಶನ ಪ್ರಶಸ್ತಿ ಇವರಿಗೆ ಲಭಿಸಿದೆ. ಇದಲ್ಲದೆ ಅಸಂಖ್ಯಾತ ಪ್ರಶಸ್ತಿ-ಪುರಸ್ಕಾರಗಳನ್ನು ಪಡೆದಿರುವ ಛಾಯಾಪತಿ ನಿಗರ್ವಿ, ಸರಳ ಮತ್ತು ಸಜ್ಜನ ವ್ಯಕ್ತಿ ಎಂದು ಹೆಸರಾಗಿದ್ದಾರೆ.
ಕನ್ನಡ ಪುಸ್ತಕ ಪ್ರಾಧಿಕಾರ ಪ್ರಕಾಶನ ಕ್ಷೇತ್ರಕ್ಕೆ ಇವರು ಸಲ್ಲಿಸಿರುವ ಅನನ್ಯ ಸೇವೆಗಾಗಿ ಇವರನ್ನು ಮೈಸೂರಿನಲ್ಲಿ ಆಯೋಜಿಸಿರುವ ಎರಡನೇ ಪ್ರಕಾಶಕರ ಸಮ್ಮೇಳನದ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ ವ್ಯಂಗ್ಯ
Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ
Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್
Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ
ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು
MUST WATCH
ಹೊಸ ಸೇರ್ಪಡೆ
ಇದು ಮನರಂಜನೆಯ ಲೋಕ: ಮನಸ್ಸನ್ನು ಹಗುರಾಗಿಸುವ ಒಂದು ಪರ್ಯಾಯ ಮಾರ್ಗ
Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್ ನಲ್ಲಿ ಪತ್ತೆ!
W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ
Muddebihal: ಹೆಂಡತಿಗೆ ಚೂರಿ ಇರಿದು ಪರಾರಿಯಾದ ಗಂಡ
ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್ ಘೋಷಣೆ ಬರೆದ ವಿದ್ಯಾರ್ಥಿ ಪಾಸ್: ಪ್ರಾಧ್ಯಾಪಕ ಅಮಾನತು!