ಸಂಭ್ರಮ ಕಾಣದ ಜವಳಿ ಉದ್ಯಮ


Team Udayavani, Jun 16, 2020, 6:12 AM IST

sambrama-javali

ಬೆಂಗಳೂರು: ದೇಶಾದ್ಯಂತ ಲಾಕ್‌ಡೌನ್‌ ತೆರವಾಗಿದೆ. ಆದರೂ ಜವಳಿ ಕ್ಷೇತ್ರದಲ್ಲಿ “ಸಂಭ್ರಮ’ ಇಲ್ಲ! ಜೂನ್‌ 8ರಿಂದ ಲಾಕ್‌ಡೌನ್‌ ಸಂಪೂರ್ಣ ತೆರವಾಗಿದೆ. ಜನಜೀವನ ನಿಧಾನವಾಗಿ ಸಹಜಸ್ಥಿತಿಗೆ ಹೊರಳುತ್ತಿದೆ. ಎಲ್ಲ ಅಂಗಡಿ- ಮುಂಗಟ್ಟುಗಳು ಪುನರಾರಂಭಗೊಂಡಿದ್ದು, ವಾಣಿಜ್ಯ ಚಟುವಟಿಕೆಗಳೂ ಚುರುಕುಗೊಳ್ಳುತ್ತಿವೆ. ಆದರೆ, ಜವಳಿ ಕ್ಷೇತ್ರ ಮಾತ್ರ ಈಗಲೂ ಮಂಕಾಗಿದೆ. ಯಾಕೆಂದರೆ, ಯಾವುದೇ ಸಭೆ-ಸಮಾರಂಭಗಳಿಗೆ ಸರ್ಕಾರ ಇನ್ನೂ ಅನುಮತಿ ನೀಡಿಲ್ಲ.

ಮದುವೆ, ಹಬ್ಬದ ಕಾರ್ಯಕ್ರಮಗಳಿಗೆ ಅವಕಾಶ ಇದ್ದರೂ, ಮನೆಗಳಿಗೆ ಸೀಮಿತವಾಗಿವೆ. ಈ ಮಧ್ಯೆ ಮದುವೆ ಸೀಜನ್‌ ಮುಗಿದು, ಮಳೆಗಾಲ ಬೇರೆ ಕಾಲಿಟ್ಟಿದೆ. ಪರಿಣಾಮ ಯಾವುದೇ ವ್ಯತ್ಯಾಸ ಆಗಿಲ್ಲ. “ಸದ್ಯದ ಪರಿಸ್ಥಿತಿಯಲ್ಲಿ  ಯಾವುದೇ ಸಭೆ, ಸಮಾರಂಭಗಳಿಗೆ ಅವಕಾಶವಿಲ್ಲ. ಮದುವೆ, ಮನೆ ಹಬ್ಬದ ಕಾರ್ಯಕ್ರಮಗಳು ಕೂಡ ನಡೆಯುತ್ತಿಲ್ಲ. ಹೀಗಾಗಿ ಶುಭ ಸಮಾರಂಭಗಳೇ ಇಲ್ಲದಿದ್ದರೆ ಜವಳಿ ವ್ಯಾಪಾರ ಅಷ್ಟಕಷ್ಟೇ.

ಈ ಹಿಂದೆ ಚಿತ್ರದುರ್ಗ, ತುಮಕೂರು,  ದಾವಣಗೆರೆ ಸೇರಿದಂತೆ ಇನ್ನಿತರ ಭಾಗಗಳಿಂದ ವ್ಯಾಪಾರಿಗಳು ಬಟ್ಟೆ ಖರೀದಿಗಾಗಿ ಚಿಕ್ಕಪೇಟೆಗೆ ಬರುತ್ತಿದ್ದರು. ಆದರೆ, ಹಳ್ಳಿ ಮತ್ತು ಪಟ್ಟಣ ಪ್ರದೇಶಗಳಲ್ಲಿ ಶುಭ ಸಮಾರಂಭಗಳು ನಡೆಯುತ್ತಿಲ್ಲ. ಹೀಗಾಗಿ ಆ ವ್ಯಾಪಾರಿಗಳು ಕೂಡ ಇತ್ತ ಬರುತ್ತಿಲ್ಲ. ಲಾಕ್‌ಡೌನ್‌ ತೆರವಿನಿಂದ ಯಾವುದೇ ವ್ಯತ್ಯಾಸ ಕಂಡುಬರುತ್ತಿಲ್ಲ’ ಎಂದು ಜವಳಿ ವ್ಯಾಪಾರಿ ಪ್ರದೀಪ್‌ ಶೇಟ್‌ ಬೇಸರ ವ್ಯಕ್ತಪಡಿಸುತ್ತಾರೆ.

“ತಮಿಳುನಾಡು, ಆಂಧ್ರಪ್ರದೇಶ, ತೆಲಂಗಾಣ ವ್ಯಾಪಾರಿ ಗಳು ಹೆಚ್ಚಿನ ಸಂಖ್ಯೆಯಲ್ಲಿ  ಬರುತ್ತಿದ್ದರು. ಆದರೆ ಈಗ ಅವರಿಗೆ ಹೋಮ್‌ ಕ್ವಾರಂಟೈನ್‌ ಭಯವಿದೆ. ಜತೆಗೆ ವ್ಯಾಪಾರಿಗಳೂ ಅಪಾಯವನ್ನು ಮೈಮೇಲೆ ಎಳೆದು ಕೊಂಡು ಇಲ್ಲಿಗೆ ಬರಲು ಇಷ್ಟಪಡುವುದಿಲ್ಲ’ ಎಂದು ಅವರು ತಿಳಿಸಿದರು. ಜವಳಿ ಉದ್ಯಮ  ನಿಂತಿರುವುದೇ ಮಹಿಳೆಯರ ಮೇಲೆ. ಆದರೆ ಕೋವಿಡ್‌ 19 ಭಯದಿಂದ ಮಹಿಳೆಯರು ಮನೆಯಿಂದ ಹೊರಗೆ ಬರುತ್ತಿಲ್ಲ.

ಜವಳಿ ಉದ್ಯಮ ಮಂಕಾಗಲು ಇದೂ ಒಂದು ಕಾರಣ. ಕೋವಿಡ್‌-19 ಪೂರ್ವದ ವ್ಯಾಪಾರಕ್ಕೆ ಹೋಲಿಸಿದರೆ, ಈಗ  ನಿತ್ಯ ಶೇ. 9ರಿಂದ 10ರಷ್ಟು ವ್ಯಾಪಾರ ನಿರೀಕ್ಷಿಸುವುದು ಕೂಡ ಕಷ್ಟವಾಗಿದೆ ಎಂದು ಬೆಂಗಳೂರು ಹೋಲ್‌ಸೇಲ್‌ ಕ್ಲಾತ್‌ ಮರ್ಚೆಂಟ್‌ ಅಸೋಸಿಯೇಷನ್‌ ಅಧ್ಯಕ್ಷ ಪ್ರಕಾಶ್‌ ಪಿರ್ಗಲ್‌ ಹೇಳುತ್ತಾರೆ. ಸರ್ಕಾರ ಜವಳಿ ಅಂಗಡಿಗಳನ್ನು ತೆರೆಯಲು  ಅವಕಾಶ ನೀಡಿದೆ. ಆದರೆ ಗ್ರಾಹಕರು ಬಾರದಿದ್ದರೆ ವ್ಯಾಪಾರ ನಿರೀಕ್ಷೆ ಮಾಡುವುದು ಕಷ್ಟ.

ಹೀಗಾಗಿಯೇ ಕೆಲವರು 12 ಗಂಟೆಗೆ ಬಾಗಿಲು ತೆರೆಯುತ್ತಾರೆ. 5 ಗಂಟೆಗಾಗಲೇ ಬಾಗಿಲು ಹಾಕಲು ಆರಂಭಿಸುತ್ತಾರೆ. ಇನ್ನೂ  ಮುಂದುವರಿದು, ಕೆಲವೆಡೆ ಗ್ರಾಹಕರಿಲ್ಲದೆ ಹಲವು ಅಂಗಡಿಗಳು ಬಾಗಿಲು ಹಾಕಿದ್ದು, ಮಾಲಿಕರು ಅಂಗಡಿಗಳನ್ನೇ ಖಾಲಿ ಮಾಡಿದ್ದಾರೆ.  ಹಾಗಾಗಿ, ಹಲವು ಕಡೆಗಳಲ್ಲಿ “ಅಂಗಡಿ ಬಾಡಿಗೆ ಇದೆ’ ಎಂಬ ನಾಮಫ‌ಲಕಗಳನ್ನು ತೂಗು  ಹಾಕಿದ್ದಾರೆ ಎಂದೂ ಪ್ರಕಾಶ್‌ ಪಿರ್ಗಲ್‌ ಬೇಸರ ವ್ಯಕ್ತಪಡಿಸಿದರು.

ವ್ಯಾಪಾರಸ್ಥರು ಕೈಕಟ್ಟಿ ಕೂರುವ ಸ್ಥಿತಿ: ಬೆಂಗಳೂರಿನಲ್ಲಿ ಸುಮಾರು 3 ಸಾವಿರಕ್ಕೂ ಅಧಿಕ ಹೋಲ್‌ ಸೇಲ್‌ ಬಟ್ಟೆ ಅಂಗಡಿಗಳಿವೆ. ಸರ್ಕಾರ ಲಾಕ್‌ ಡೌನ್‌ನಲ್ಲಿ ಕೆಲ ಮಾರ್ಪಾಡುಗಳನ್ನು ಮಾಡಿ ಬಟ್ಟೆ ಅಂಗಡಿಗಳನ್ನು ತೆರೆಯಲು ಅವಕಾಶ ಕಲ್ಪಿಸಿದೆ. ಹೀಗಾಗಿಯೇ ಜವಳಿ ಅಂಗಡಿಗಳ ಮಾಲೀಕರು ತಮ್ಮ ಅಂಗಡಿ ಮಳಿಗೆಗಳನ್ನು ತೆರೆದಿದ್ದಾರೆ. ಆದರೆ, ಅಂಗಡಿಗೆ ಬರಲು ಗ್ರಾಹಕರು ಭಯ ಪಡುತ್ತಿದ್ದಾರೆ.

ಲಾಕ್‌ಡೌನ್‌ ಮೊದಲು ಚಿಕ್ಕಪೇಟೆಯಲ್ಲಿ ಒಂದು ದಿನಕ್ಕೆ ಕೋಟ್ಯಂತರ  ರೂ. ಹೋಲ್‌ಸೇಲ್‌ ರೂಪದಲ್ಲಿ ಜವಳಿ ವ್ಯಾಪಾರ ನಡೆಯುತ್ತಿತ್ತು. ಆಂಧ್ರಪ್ರದೇಶ, ತೆಲಂಗಾಣ, ತಮಿಳುನಾಡು, ಕೇರಳ ಮತ್ತು ಗೋವಾದಿಂದ ವಿವಿಧ ರೀತಿಯ ಬಟ್ಟೆಗಳ ಖರೀದಿಗೆ ಚಿಕ್ಕಪೇಟೆಗೆ ಬರುತ್ತಿದ್ದರು. ಆದರೆ, ಆ  ಸನ್ನಿವೇಶ ಈಗ ಮಾಯವಾಗಿದು,ª ಬಟ್ಟೆ ವ್ಯಾಪಾರವಿಲ್ಲದೆ ಹಲವು ವ್ಯಾಪಾರಿಗಳನ್ನ ಕೈ ಕಟ್ಟಿ ಕೂರುವಂತೆ ಮಾಡಿದೆ.

ಕೋವಿಡ್‌ 19 ಆತಂಕ ಹೆಚ್ಚುತ್ತಲೇ ಇದೆ. ಯಾವ ಪ್ರದೇಶಗಳು ಯಾವಾಗ ಸೀಲ್‌ಡೌನ್‌ ಆಗುತ್ತವೆಯೋ ಎಂದು ಹೇಳುವುದು ಕಷ್ಟ. ಆ ಹಿನ್ನೆಲೆಯಲ್ಲಿ ಗ್ರಾಹಕರು ಮನೆಯಿಂದ ಹೊರಬರಲು ಹೆದರುತ್ತಾರೆ. ಹೀಗೆ ಪರಿಸ್ಥಿತಿ ಮುಂದುವರಿದರೆ ಜವಳಿ ಉದ್ಯಮ ಮತ್ತಷ್ಟು ತೊಂದರೆಯಲ್ಲಿ ಸಿಲುಕುವ ಸಾಧ್ಯತೆ ಇದೆ. 
-ಪ್ರಕಾಶ್‌ ಪಿರ್ಗಲ್‌ , ಬೆಂಗಳೂರು ಹೋಲ್‌ ಸೇಲ್‌ ಕ್ಲಾತ್‌ ಮರ್ಚೆಂಟ್‌ ಅಸೋಸಿಯೇಷನ್‌ ಅಧ್ಯಕ್ಷ

* ದೇವೇಶ ಸೂರಗುಪ್ಪ

ಟಾಪ್ ನ್ಯೂಸ್

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

17-voting

Vote: ಮತದಾನದ ಮಹತ್ವ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

17-voting

Vote: ಮತದಾನದ ಮಹತ್ವ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.